AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರು ಕೋಟಿ ಜನರ ಪರವಾಗಿ ಪುನೀತ್​ಗೆ ಅಂದು ಮುತ್ತು ಕೊಟ್ಟಿದ್ದೆ’: ಸಿಎಂ ಬೊಮ್ಮಾಯಿ ಭಾವುಕ ನುಡಿ

Basavaraj Bommai: ಪುನೀತ್​ ರಾಜ್​ಕುಮಾರ್​ ಅವರ ಅಂತಿಮ ದರ್ಶನದ ವೇಳೆ ಅಪ್ಪು ​ಹಣೆಗೆ ಬಸವರಾಜ ಬೊಮ್ಮಾಯಿ ಮುತ್ತಿಟ್ಟಿದ್ದರು. ಆ ಘಟನೆಯನ್ನು ಇಂದಿನ ಕಾರ್ಯಕ್ರಮದ ವೇದಿಕೆಯಲ್ಲಿ ಅವರು ನೆನಪಿಸಿಕೊಂಡಿದ್ದಾರೆ.

‘ಆರು ಕೋಟಿ ಜನರ ಪರವಾಗಿ ಪುನೀತ್​ಗೆ ಅಂದು ಮುತ್ತು ಕೊಟ್ಟಿದ್ದೆ’: ಸಿಎಂ ಬೊಮ್ಮಾಯಿ ಭಾವುಕ ನುಡಿ
ಬಸವರಾಜ ಬೊಮ್ಮಾಯಿ
Follow us
TV9 Web
| Updated By: ಮದನ್​ ಕುಮಾರ್​

Updated on:Nov 16, 2021 | 11:20 PM

ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಚಿತ್ರರಂಗದ ಪರವಾಗಿ ಇಂದು (ನ.16) ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ಪುನೀತ ನಮನ’ (Puneetha Namana) ಕಾರ್ಯಕ್ರಮ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಅಪ್ಪು ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾವುಕ ನುಡಿಗಳನ್ನು ಹಂಚಿಕೊಂಡರು. ಅಂತಿಮ ದರ್ಶನದ ವೇಳೆ ಪುನೀತ್​ ಅವರ ಹಣೆಗೆ ಬಸವರಾಜ ಬೊಮ್ಮಾಯಿ (Basavaraj Bommai) ಮುತ್ತಿಟ್ಟಿದ್ದರು. ಆ ಘಟನೆಯನ್ನು ಇಂದಿನ ಕಾರ್ಯಕ್ರಮದ ವೇದಿಕೆಯಲ್ಲಿ ನೆನಪಿಸಿಕೊಂಡಿದ್ದಾರೆ. ‘ನಾನು ಮುತ್ತು ಕೊಟ್ಟಾಗ ಬಹಳಷ್ಟು ಜನರು ಬೇರೆ ಬೇರೆ ರೀತಿ ವಿಶ್ಲೇಷಣೆ ಮಾಡಿದ್ದಾರೆ. ಅದರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳೋಕೆ ಹೋಗಲ್ಲ. ಅದು ನನ್ನ ಹೃದಯದಿಂದ ಬಂದ ಭಾವನೆ. ಮುತ್ತುರಾಜರ ಮಗನಿಗೆ ಕರ್ನಾಟಕ ರತ್ನವನ್ನು ಕೊಡುವುದು ಎಷ್ಟು ಸಂತೋಷ ಆಗಿದೆಯೋ, ಅದೇ ರೀತಿ ಆರು ಕೋಟಿ ಜನರ ಪರವಾಗಿ ಆ ಮುತ್ತನ್ನು ನಾನು ಕೊಟ್ಟಿದ್ದೆ’ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪುನೀತ್​ ಅಂತಿಮ ನಮನ ಮತ್ತು ಅಂತಿಮ ಸಂಸ್ಕಾರದ ಸಮಯದಲ್ಲಿ ಸಹಕರಿಸಿದ ಅಪಾರ ಸಂಖ್ಯೆಯ ಅಭಿಮಾನಿಗಳಿಗೆ, ಸರ್ಕಾರದ ಅಧಿಕಾರಿಗಳಿಗೆ ಬೊಮ್ಮಾಯಿ ಧನ್ಯವಾದ ತಿಳಿಸಿದ್ದಾರೆ. ಪುನೀತ್​ ರಾಜ್​ಕುಮಾರ್​ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವುದಾಗಿ ಘೋಷಿಸಿದ್ದಾರೆ. ಪುನೀತ್​ ಸಮಾಧಿ ಸ್ಥಳವನ್ನು ಡಾ. ರಾಜ್​ಕುಮಾರ್​ ಮತ್ತು ಪಾರ್ವತಮ್ಮ ರಾಜ್​ಕುಮಾರ್​ ಅವರ ಸ್ಮಾರಕದ ರೀತಿಯೇ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. ಇದು ಅಪ್ಪು ಅಭಿಮಾನಿಗಳಿಗೆ ಖುಷಿ ನೀಡಿದೆ.

‘ಪುನೀತ್​ ನಮ್ಮೆಲ್ಲರಿಗೂ ಆತ್ಮೀಯ. ಅವನನ್ನು ನಾನು ಬಾಲ್ಯದಿಂದ ಬಲ್ಲೆ. ಬಾಲ್ಯದಲ್ಲಿಯೇ ಪ್ರತಿಭೆಯ ಚಿಲುಮೆ ಹೊಂದಿದ ವ್ಯಕ್ತಿ. ಬಾಲ ನಟನಾಗಿ ರಾಷ್ಟ್ರ ಪ್ರಶಸ್ತಿ ಗಳಿಸಿದ ಕರ್ನಾಟಕದ ಏಕೈಕ ಬಾಲಕ ಪುನೀತ್​. ಸಣ್ಣ ವಯಸ್ಸಿನಲ್ಲೇ ಆತ ಅದ್ಭುತವಾಗಿ ನಟಿಸುತ್ತಿದ್ದ. ಅಷ್ಟು ಸಣ್ಣ ವಯಸ್ಸಿನಲ್ಲಿ ಹಾಗೆ ನಟಿಸೋದು ಸುಲಭವಲ್ಲ’ ಎಂದಿದ್ದಾರೆ ಬಸವರಾಜ ಬೊಮ್ಮಾಯಿ.

ಇದನ್ನೂ ಓದಿ:

‘ಪುನೀತ್​ಗೆ ಕೊಟ್ಟ ಮಾತು ಉಳಿಸಿಕೊಳ್ತೀನಿ’; ಪುನೀತ ನಮನ ಕಾರ್ಯಕ್ರಮದಲ್ಲಿ ವಿಶಾಲ್

Ashwini Puneeth: ನಿಂತಿಲ್ಲ ಅಶ್ವಿನಿ, ಶಿವಣ್ಣನ​ ಕಣ್ಣೀರು; ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಅತ್ತ ಪುನೀತ್​ ಕುಟುಂಬ

Published On - 5:25 pm, Tue, 16 November 21

ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್