AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಿವಣ್ಣ ಮತ್ತು ನಾನು ಮುಖ ನೋಡಿಕೊಂಡ್ರೆ ನಾಚಿಕೆ ಆಗತ್ತೆ​’: ನೋವಿನಲ್ಲಿ ಕಣ್ಣೀರು ಹಾಕಿದ ರಾಘಣ್ಣ

Puneeth Rajkumar: ‘ಪುನೀತ ನಮನ’ ಕಾರ್ಯಕ್ರಮದಲ್ಲಿ ರಾಘವೇಂದ್ರ ರಾಜ್​ಕುಮಾರ್​ ಅವರು ಕಣ್ಣೀರು ಹಾಕಿದ್ದಾರೆ. ತಮ್ಮನನ್ನು ಕಳೆದುಕೊಂಡ ನೋವಿನಲ್ಲಿ ಅವರು ಭಾವುಕವಾಗಿ ಮಾತನಾಡಿದ್ದಾರೆ.

‘ಶಿವಣ್ಣ ಮತ್ತು ನಾನು ಮುಖ ನೋಡಿಕೊಂಡ್ರೆ ನಾಚಿಕೆ ಆಗತ್ತೆ​’: ನೋವಿನಲ್ಲಿ ಕಣ್ಣೀರು ಹಾಕಿದ ರಾಘಣ್ಣ
ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​
TV9 Web
| Edited By: |

Updated on: Nov 16, 2021 | 7:43 PM

Share

ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಕಳೆದುಕೊಂಡಿದ್ದು ಅವರ ಕುಟುಂಬಕ್ಕೆ ತೀವ್ರ ನೋವಾಗಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಂಗಳವಾರ (ನ.16) ನಡೆದ ‘ಪುನೀತ ನಮನ’ (Puneetha Namana) ಕಾರ್ಯಕ್ರಮದಲ್ಲಿ ರಾಘವೇಂದ್ರ ರಾಜ್​ಕುಮಾರ್​ (Raghavendra Rajkumar) ಅವರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ‘ಅಪ್ಪು ನಿಧನರಾದ ಬಳಿಕ ನಾನು ಮೊದಲು ಶಿವಣ್ಣನ ಮುಖ ನೋಡಿದಾಗ ನಾಚಿಕೆ ಆಯ್ತು. ನಾವು ಇವನನ್ನು ಕಳಿಸಿಕೊಡಬೇಕಾ ಎಂಬ ಪ್ರಶ್ನೆ ಮೂಡಿತು. ಕನ್ನಡಿ ನೋಡಿದಾಗ ಮುಖ ನೋಡಿಕೊಳ್ಳೋಕೆ ನಾಚಿಕೆ ಆಗುತ್ತೆ. ಅವನ ಕೈಯಿಂದ ಪೇಸ್​ ಮೇಕರ್​ ಹಾಕಿಸಿಕೊಂಡು, ಅವನನ್ನು ಕಳಿಸಿ ನೀನು ಬದುಕಬೇಕಾ ಅಂತ ಪ್ರಶ್ನೆ ಮೂಡುತ್ತೆ. ಬದುಕೋಕೆ ನಾಚಿಕೆ ಆಗತ್ತೆ. ನನ್ನ ಆಯಸ್ಸು ನಿನಗೆ ಕೊಡುತ್ತೇನೆ ಅಂತ ನಾನು ಅವನಿಗೆ ಹೇಳಿದ್ದೆ. ಆದರೆ ಅವನು ತನ್ನ ಆಯಸ್ಸು ನನಗೆ ಕೊಟ್ಟು ಹೋದ’ ಎಂದು ರಾಘವೇಂದ್ರ ರಾಜ್​ಕುಮಾರ್​ ಅವರು ಹೇಳಿದರು.

‘ನೀವೆಲ್ಲರೂ ಸೇರಿ ನನಗೊಂದು ಸಹಾಯ ಮಾಡಿ. ನನ್ನನ್ನು ಕಳಿಸಿಕೊಟ್ಟು ಅವನನ್ನು ವಾಪಸ್​ ಕರೆಸಿಕೊಳ್ಳಿ ಪ್ಲೀಸ್. ಪುನೀತ್​ ಅವರನ್ನು ಹೂತ್ತಿಲ್ಲ, ಬಿತ್ತಿದ್ದೇವೆ. ಪುನೀತ್​ ರೀತಿ ಇರುವ ನೂರಾರು ಜನ ಹುಟ್ಟಿ ಬರುತ್ತಾರೆ. ಹುಟ್ಟುವಾಗ ನನ್ನ ತಮ್ಮನಾಗಿ ಬಂದ. ವಾಪಸ್​ ಹೋಗುವಾಗ ತಂದೆಯಾಗಿ ಹೋದ. ಹೇಗೆ ಬದುಕಬೇಕು ಎಂಬುದನ್ನು ನನಗೂ ಮತ್ತು ಶಿವಣ್ಣನಿಗೂ ತಿಳಿಸಿಕೊಟ್ಟು ಹೋದ. ದಯವಿಟ್ಟು ಬಂದುಬಿಡು ಕಂದಾ. ಇಷ್ಟು ದಿನ ಈ ನೋವನ್ನು ತಡೆದುಕೊಂಡಿದ್ದೆ. ನಿನ್ನ ಜಾಗಕ್ಕೆ ನಾನು ಬರುತ್ತೇನೆ’ ಎಂದು ರಾಘಣ್ಣ ಕಂಬನಿ ಸುರಿಸಿದರು.

‘20 ದಿನ ಈ ನೋವನ್ನು ತಡೆದುಕೊಂಡಿದ್ದೆ. ನಾನು ಅತ್ತರೆ ಪುನೀತ್​ ಪತ್ನಿ ಮತ್ತು ಮಕ್ಕಳು ನೊಂದುಕೊಳ್ಳುತ್ತಾರೆ ಅಂತ ಸುಮ್ಮನಿದ್ದೆ. ಆದರೆ ಇಂದು ತಡೆದುಕೊಳ್ಳೋಕೆ ಆಗಲಿಲ್ಲ. ಅತ್ತು ಹಗುರಾಗುತ್ತೇನೆ. ಈ ನೋವು ಮರೆಯುವ ಶಕ್ತಿ ಕೊಡು ಅಂತ ದೇವರಲ್ಲಿ ಕೇಳಲ್ಲ. ಈ ನೋವಿನ ಜೊತೆಗೆ ಬದುಕುವ ಶಕ್ತಿ ಕೊಡು ಅಂತ ಕೇಳುತ್ತೇನೆ. ಅವನು ನನ್ನ ಎದೆಯೊಳಗೆ ಇದ್ದಾನೆ’ ಎಂದಿದ್ದಾರೆ ರಾಘವೇಂದ್ರ ರಾಜ್​ಕುಮಾರ್​.

ಬಳಿಕ ಮಾತನಾಡಿದ ಶಿವರಾಜ್​ಕುಮಾರ್​ ಕೂಡ ಕಣ್ಣೀರು ಸುರಿಸಿದರು. ಪುನೀತ್​ಗಾಗಿ ಹಾಡು ಹೇಳಿ ಗಾನ ನಮನ ಸಲ್ಲಿಸಿಸರು. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್​ ಮುಂತಾದ ರಾಜಕೀಯ ಗಣ್ಯರು ಆಗಮಿಸಿದ್ದರು. ಕನ್ನಡ ಚಿತ್ರರಂಗದ ಬಹುತೇಕ ಎಲ್ಲ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ತಮಿಳು ನಟರಾದ ವಿಶಾಲ್​, ಶರತ್​ ಕುಮಾರ್​ ಮುಂತಾದವರು ಪುನೀತ್​ಗೆ ನುಡಿ ನಮನ ಸಲ್ಲಿಸಿದರು.

ಇದನ್ನೂ ಓದಿ:

‘ಆರು ಕೋಟಿ ಜನರ ಪರವಾಗಿ ಪುನೀತ್​ಗೆ ಅಂದು ಮುತ್ತು ಕೊಟ್ಟಿದ್ದೆ’: ಸಿಎಂ ಬೊಮ್ಮಾಯಿ ಭಾವುಕ ನುಡಿ

Puneetha Namana: ‘​ನಾನು ಮನೆ ಖರೀದಿಗಾಗಿ ಇಟ್ಟುಕೊಂಡ ಹಣದಲ್ಲಿ ಈ ಸಹಾಯ ಮಾಡ್ತೀನಿ’: ವಿಶಾಲ್

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ