AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneetha Namana: ‘​ನಾನು ಮನೆ ಖರೀದಿಗಾಗಿ ಇಟ್ಟುಕೊಂಡ ಹಣದಲ್ಲಿ ಈ ಸಹಾಯ ಮಾಡ್ತೀನಿ’: ವಿಶಾಲ್

Puneeth Rajkumar: ತಾವು ಮನೆ ಕಟ್ಟುವ ಸಲುವಾಗಿ ಕೂಡಿಟ್ಟಿರುವ ಹಣದಲ್ಲಿ ಈ​ ಸಮಾಜಸೇವೆಯನ್ನು ಮಾಡುವುದಾಗಿ ವಿಶಾಲ್​ ತಿಳಿಸಿದ್ದಾರೆ. ಅದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಪುನೀತ್​ ರಾಜ್​ಕುಮಾರ್​ ಕುಟುಂಬಸ್ಥರಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ.

Puneetha Namana: ‘​ನಾನು ಮನೆ ಖರೀದಿಗಾಗಿ ಇಟ್ಟುಕೊಂಡ ಹಣದಲ್ಲಿ ಈ ಸಹಾಯ ಮಾಡ್ತೀನಿ’: ವಿಶಾಲ್
ವಿಶಾಲ್​, ಪುನೀತ್​ ರಾಜ್​ಕುಮಾರ್​
TV9 Web
| Edited By: |

Updated on: Nov 16, 2021 | 6:33 PM

Share

ಅಗಲಿದ ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಡೆಯಿಂದ ‘ಪುನೀತ ನಮನ’ (Puneetha Namana) ಕಾರ್ಯಕ್ರಮ ಮಾಡಲಾಗಿದೆ. ಮಂಗಳವಾರ (ನ.16) ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ತಮಿಳು ನಟ ವಿಶಾಲ್​ (Actor Vishal) ಅವರು ಆಗಮಿಸಿದ್ದಾರೆ. ವೇದಿಕೆ ಮೇಲೆ ಪುನೀತ್​ ಬಗ್ಗೆ ಮಾತನಾಡಿದ ವಿಶಾಲ್​ ಅವರು ಅಪ್ಪು ಬಗ್ಗೆ ಭಾವುಕ ನುಡಿಗಳನ್ನು ಹಂಚಿಕೊಂಡರು. ಪುನೀತ್​ ಅವರ ಸಾವಿರಾರು ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡುತ್ತಿದ್ದರು. ಆ ಮಕ್ಕಳಿಗೆ ಇನ್ಮುಂದೆ ತಾವು ಸಹಾಯ ಮಾಡುವುದಾಗಿ ವಿಶಾಲ್​ ಈ ಹಿಂದೆಯೇ ಘೋಷಣೆ ಮಾಡಿದ್ದರು. ಇಂದಿನ ಕಾರ್ಯಕ್ರಮದಲ್ಲೂ ಆ ಮಾತನ್ನು ವಿಶಾಲ್​ ಪುನಃ ಹೇಳಿದ್ದಾರೆ. ತಾವು ಮನೆ ಕಟ್ಟುವ ಸಲುವಾಗಿ ಕೂಡಿಟ್ಟಿರುವ ಹಣದಲ್ಲಿ ಈ ಸಮಾಜಸೇವೆಯನ್ನು ಮಾಡುವುದಾಗಿ ವಿಶಾಲ್​ ತಿಳಿಸಿದ್ದಾರೆ. ಅದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಪುನೀತ್​ ಕುಟುಂಬಸ್ಥರಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ.

ಈ ಕಾರ್ಯಕ್ರಮಕ್ಕಾಗಿ ಇಡೀ ದಕ್ಷಿಣ ಭಾರತ ಚಿತ್ರರಂಗ ಒಂದೆಡೆ ಸೇರಿದೆ. ಕಾರ್ಯಕ್ರಮ ಆರಂಭ ಆಗುವುದಕ್ಕೂ ಮುನ್ನ ಮಾಧ್ಯಮಗಳ ಜೊತೆ ವಿಶಾಲ್​ ಮಾತನಾಡಿದ್ದರು. ‘ನನ್ನ ಸ್ನೇಹಿತ ಪುನೀತ್​ ಒಳ್ಳೆಯ ನಟ, ವ್ಯಕ್ತಿ ಆಗಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಸಹೋದರನಾಗಿ ಪುನೀತ್​ಗೆ ಪ್ರಾಮಿಸ್​ ಮಾಡುತ್ತಿದ್ದೇನೆ. ನಾನು ಹೇಳಿದ ಮಾತನ್ನು ನಡೆಸಿಕೊಡುತ್ತೇನೆ. ಬದುಕಿದ್ದಾಗ ನೀವು ಮಾಡಿದ ಸಮಾಜಸೇವೆಯನ್ನು ಎಲ್ಲಿಯೂ ಹೇಳಿಕೊಂಡಿಲ್ಲ. ನೀವು ಮೃತಪಟ್ಟ ನಂತರ ನಿಮ್ಮ ಕಾರ್ಯಗಳ ಬಗ್ಗೆ ಇಡೀ ದೇಶಕ್ಕೆ ತಿಳಿಯಿತು. ನೀವು ಮಾಡುತ್ತಿದ್ದ ಕಾರ್ಯವನ್ನು ನಾನು ಮುಂದುವರಿಸುತ್ತೇನೆ’ ಎಂದು ವಿಶಾಲ್​ ಹೇಳಿದರು.

‘ಪುನೀತ ನಮನ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ, ಸಿದ್ದರಾಮಯ್ಯ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಭಾಗಿ ಆಗಿದ್ದಾರೆ. ಡಾ. ರಾಜ್​ಕುಮಾರ್​ ಕುಟುಂಬದ ಎಲ್ಲರೂ ಹಾಜರಿದ್ದು, ಅಪ್ಪುಗೆ ಪುಷ್ಪ ನಮನ ಸಲ್ಲಿಸಿದ್ದಾರೆ. ಕೇವಲ ಸೆಲೆಬ್ರಿಟಿಗಳು ಮತ್ತು ಗಣ್ಯರಿಗೆ ಈ ಕಾರ್ಯಕ್ರಮಕ್ಕೆ ಪ್ರವೇಶ ನೀಡಲಾಗಿದೆ. ಅಭಿಮಾನಿಗಳಿಗೆ ಅವಕಾಶ ನೀಡಲಾಗಿಲ್ಲ.

‘ಪುನೀತ್​ ನಮ್ಮೆಲ್ಲರಿಗೂ ಆತ್ಮೀಯ. ಅವನನ್ನು ನಾನು ಬಾಲ್ಯದಿಂದ ಬಲ್ಲೆ. ಬಾಲ್ಯದಲ್ಲಿಯೇ ಪ್ರತಿಭೆಯ ಚಿಲುಮೆ ಹೊಂದಿದ ವ್ಯಕ್ತಿ. ಬಾಲ ನಟನಾಗಿ ರಾಷ್ಟ್ರ ಪ್ರಶಸ್ತಿ ಗಳಿಸಿದ ಕರ್ನಾಟಕದ ಏಕೈಕ ಬಾಲಕ ಪುನೀತ್​. ಸಣ್ಣ ವಯಸ್ಸಿನಲ್ಲೇ ಆತ ಅದ್ಭುತವಾಗಿ ನಟಿಸುತ್ತಿದ್ದ. ಅಷ್ಟು ಸಣ್ಣ ವಯಸ್ಸಿನಲ್ಲಿ ಹಾಗೆ ನಟಿಸೋದು ಸುಲಭವಲ್ಲ’ ಎಂದಿದ್ದಾರೆ ಬಸವರಾಜ ಬೊಮ್ಮಾಯಿ.

ಇದನ್ನೂ ಓದಿ:

‘ಆರು ಕೋಟಿ ಜನರ ಪರವಾಗಿ ಪುನೀತ್​ಗೆ ಅಂದು ಮುತ್ತು ಕೊಟ್ಟಿದ್ದೆ’: ಸಿಎಂ ಬೊಮ್ಮಾಯಿ ಭಾವುಕ ನುಡಿ

ಬಸ್​ ನಿಲ್ದಾಣದಲ್ಲಿ ಪುನೀತ್​ ಫೋಟೋಗೆ ಮುತ್ತಿಟ್ಟು ಕಂಬನಿ ಸುರಿಸಿದ ಅಜ್ಜಿ; ವಿಡಿಯೋ ವೈರಲ್​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ