AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneetha Namana: ‘​ನಾನು ಮನೆ ಖರೀದಿಗಾಗಿ ಇಟ್ಟುಕೊಂಡ ಹಣದಲ್ಲಿ ಈ ಸಹಾಯ ಮಾಡ್ತೀನಿ’: ವಿಶಾಲ್

Puneeth Rajkumar: ತಾವು ಮನೆ ಕಟ್ಟುವ ಸಲುವಾಗಿ ಕೂಡಿಟ್ಟಿರುವ ಹಣದಲ್ಲಿ ಈ​ ಸಮಾಜಸೇವೆಯನ್ನು ಮಾಡುವುದಾಗಿ ವಿಶಾಲ್​ ತಿಳಿಸಿದ್ದಾರೆ. ಅದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಪುನೀತ್​ ರಾಜ್​ಕುಮಾರ್​ ಕುಟುಂಬಸ್ಥರಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ.

Puneetha Namana: ‘​ನಾನು ಮನೆ ಖರೀದಿಗಾಗಿ ಇಟ್ಟುಕೊಂಡ ಹಣದಲ್ಲಿ ಈ ಸಹಾಯ ಮಾಡ್ತೀನಿ’: ವಿಶಾಲ್
ವಿಶಾಲ್​, ಪುನೀತ್​ ರಾಜ್​ಕುಮಾರ್​
TV9 Web
| Edited By: |

Updated on: Nov 16, 2021 | 6:33 PM

Share

ಅಗಲಿದ ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಡೆಯಿಂದ ‘ಪುನೀತ ನಮನ’ (Puneetha Namana) ಕಾರ್ಯಕ್ರಮ ಮಾಡಲಾಗಿದೆ. ಮಂಗಳವಾರ (ನ.16) ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ತಮಿಳು ನಟ ವಿಶಾಲ್​ (Actor Vishal) ಅವರು ಆಗಮಿಸಿದ್ದಾರೆ. ವೇದಿಕೆ ಮೇಲೆ ಪುನೀತ್​ ಬಗ್ಗೆ ಮಾತನಾಡಿದ ವಿಶಾಲ್​ ಅವರು ಅಪ್ಪು ಬಗ್ಗೆ ಭಾವುಕ ನುಡಿಗಳನ್ನು ಹಂಚಿಕೊಂಡರು. ಪುನೀತ್​ ಅವರ ಸಾವಿರಾರು ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡುತ್ತಿದ್ದರು. ಆ ಮಕ್ಕಳಿಗೆ ಇನ್ಮುಂದೆ ತಾವು ಸಹಾಯ ಮಾಡುವುದಾಗಿ ವಿಶಾಲ್​ ಈ ಹಿಂದೆಯೇ ಘೋಷಣೆ ಮಾಡಿದ್ದರು. ಇಂದಿನ ಕಾರ್ಯಕ್ರಮದಲ್ಲೂ ಆ ಮಾತನ್ನು ವಿಶಾಲ್​ ಪುನಃ ಹೇಳಿದ್ದಾರೆ. ತಾವು ಮನೆ ಕಟ್ಟುವ ಸಲುವಾಗಿ ಕೂಡಿಟ್ಟಿರುವ ಹಣದಲ್ಲಿ ಈ ಸಮಾಜಸೇವೆಯನ್ನು ಮಾಡುವುದಾಗಿ ವಿಶಾಲ್​ ತಿಳಿಸಿದ್ದಾರೆ. ಅದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಪುನೀತ್​ ಕುಟುಂಬಸ್ಥರಲ್ಲಿ ಅವರು ಮನವಿ ಮಾಡಿಕೊಂಡಿದ್ದಾರೆ.

ಈ ಕಾರ್ಯಕ್ರಮಕ್ಕಾಗಿ ಇಡೀ ದಕ್ಷಿಣ ಭಾರತ ಚಿತ್ರರಂಗ ಒಂದೆಡೆ ಸೇರಿದೆ. ಕಾರ್ಯಕ್ರಮ ಆರಂಭ ಆಗುವುದಕ್ಕೂ ಮುನ್ನ ಮಾಧ್ಯಮಗಳ ಜೊತೆ ವಿಶಾಲ್​ ಮಾತನಾಡಿದ್ದರು. ‘ನನ್ನ ಸ್ನೇಹಿತ ಪುನೀತ್​ ಒಳ್ಳೆಯ ನಟ, ವ್ಯಕ್ತಿ ಆಗಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಸಹೋದರನಾಗಿ ಪುನೀತ್​ಗೆ ಪ್ರಾಮಿಸ್​ ಮಾಡುತ್ತಿದ್ದೇನೆ. ನಾನು ಹೇಳಿದ ಮಾತನ್ನು ನಡೆಸಿಕೊಡುತ್ತೇನೆ. ಬದುಕಿದ್ದಾಗ ನೀವು ಮಾಡಿದ ಸಮಾಜಸೇವೆಯನ್ನು ಎಲ್ಲಿಯೂ ಹೇಳಿಕೊಂಡಿಲ್ಲ. ನೀವು ಮೃತಪಟ್ಟ ನಂತರ ನಿಮ್ಮ ಕಾರ್ಯಗಳ ಬಗ್ಗೆ ಇಡೀ ದೇಶಕ್ಕೆ ತಿಳಿಯಿತು. ನೀವು ಮಾಡುತ್ತಿದ್ದ ಕಾರ್ಯವನ್ನು ನಾನು ಮುಂದುವರಿಸುತ್ತೇನೆ’ ಎಂದು ವಿಶಾಲ್​ ಹೇಳಿದರು.

‘ಪುನೀತ ನಮನ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ, ಸಿದ್ದರಾಮಯ್ಯ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಭಾಗಿ ಆಗಿದ್ದಾರೆ. ಡಾ. ರಾಜ್​ಕುಮಾರ್​ ಕುಟುಂಬದ ಎಲ್ಲರೂ ಹಾಜರಿದ್ದು, ಅಪ್ಪುಗೆ ಪುಷ್ಪ ನಮನ ಸಲ್ಲಿಸಿದ್ದಾರೆ. ಕೇವಲ ಸೆಲೆಬ್ರಿಟಿಗಳು ಮತ್ತು ಗಣ್ಯರಿಗೆ ಈ ಕಾರ್ಯಕ್ರಮಕ್ಕೆ ಪ್ರವೇಶ ನೀಡಲಾಗಿದೆ. ಅಭಿಮಾನಿಗಳಿಗೆ ಅವಕಾಶ ನೀಡಲಾಗಿಲ್ಲ.

‘ಪುನೀತ್​ ನಮ್ಮೆಲ್ಲರಿಗೂ ಆತ್ಮೀಯ. ಅವನನ್ನು ನಾನು ಬಾಲ್ಯದಿಂದ ಬಲ್ಲೆ. ಬಾಲ್ಯದಲ್ಲಿಯೇ ಪ್ರತಿಭೆಯ ಚಿಲುಮೆ ಹೊಂದಿದ ವ್ಯಕ್ತಿ. ಬಾಲ ನಟನಾಗಿ ರಾಷ್ಟ್ರ ಪ್ರಶಸ್ತಿ ಗಳಿಸಿದ ಕರ್ನಾಟಕದ ಏಕೈಕ ಬಾಲಕ ಪುನೀತ್​. ಸಣ್ಣ ವಯಸ್ಸಿನಲ್ಲೇ ಆತ ಅದ್ಭುತವಾಗಿ ನಟಿಸುತ್ತಿದ್ದ. ಅಷ್ಟು ಸಣ್ಣ ವಯಸ್ಸಿನಲ್ಲಿ ಹಾಗೆ ನಟಿಸೋದು ಸುಲಭವಲ್ಲ’ ಎಂದಿದ್ದಾರೆ ಬಸವರಾಜ ಬೊಮ್ಮಾಯಿ.

ಇದನ್ನೂ ಓದಿ:

‘ಆರು ಕೋಟಿ ಜನರ ಪರವಾಗಿ ಪುನೀತ್​ಗೆ ಅಂದು ಮುತ್ತು ಕೊಟ್ಟಿದ್ದೆ’: ಸಿಎಂ ಬೊಮ್ಮಾಯಿ ಭಾವುಕ ನುಡಿ

ಬಸ್​ ನಿಲ್ದಾಣದಲ್ಲಿ ಪುನೀತ್​ ಫೋಟೋಗೆ ಮುತ್ತಿಟ್ಟು ಕಂಬನಿ ಸುರಿಸಿದ ಅಜ್ಜಿ; ವಿಡಿಯೋ ವೈರಲ್​

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್