‘ರಕ್ಷಿತ್ ಸಿನಿಮಾ ಮಾಡಲು ನಿರ್ಮಾಪಕರಿದ್ದಾರೆ, ಅವರಿಗೆ ಸದ್ಯಕ್ಕಂತೂ ನನ್ನ ಅನಿವಾರ್ಯತೆ ಇಲ್ಲ’; ಪುಷ್ಕರ್

Pushkar mallikarjunaiah: ಪುಷ್ಕರ್ ಮಲ್ಲಿಕಾರ್ಜುನಯ್ಯ ಅವರು ಈ ಮೊದಲು ಬ್ಯಾಕ್ ಟು ಬ್ಯಾಕ್ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ಇತ್ತೀಚೆಗೆ ಅವರು ಸಿನಿಮಾ ಮಾಡುವುದರಲ್ಲಿ ಸ್ವಲ್ಪ ತಾಳ್ಮೆ ತೆಗೆದುಕೊಳ್ಳುತ್ತಿದ್ದಾರೆ. ಅವರು ರಕ್ಷಿತ್ ಶೆಟ್ಟಿ ಜೊತೆ ಸಿನಿಮಾ ಮಾಡೋ ವಿಚಾರದ ಕುರಿತು ಮಾತನಾಡಿದ್ದಾರೆ.

‘ರಕ್ಷಿತ್ ಸಿನಿಮಾ ಮಾಡಲು ನಿರ್ಮಾಪಕರಿದ್ದಾರೆ, ಅವರಿಗೆ ಸದ್ಯಕ್ಕಂತೂ ನನ್ನ ಅನಿವಾರ್ಯತೆ ಇಲ್ಲ’; ಪುಷ್ಕರ್
ಪುಷ್ಕರ್-ರಕ್ಷಿತ್
Follow us
|

Updated on:Mar 12, 2024 | 12:34 PM

ನಟ ರಕ್ಷಿತ್ ಶೆಟ್ಟಿ (Rakshit Shetty) ಹಾಗೂ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ‘ಕಿರಿಕ್ ಪಾರ್ಟಿ’ ಅಂಥ ಸೂಪರ್ ಹಿಟ್ ಚಿತ್ರಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ‘ಅವನೇ ಶ್ರೀಮನ್ನಾರಾಯಣ’ ಚಿತ್ರದಲ್ಲಿ ಇಬ್ಬರ ಮಧ್ಯೆ ಕೆಲವು ವಿಚಾರಕ್ಕೆ ಮನಸ್ತಾಪ ಬಂತು ಎನ್ನಲಾಗಿದೆ. ಈಗ ಇಬ್ಬರೂ ಬೇರೆ ಆಗಿದ್ದಾರೆ. ಸದ್ಯಕ್ಕಂತೂ ಇವರು ಒಟ್ಟಾಗಿ ಸಿನಿಮಾ ಮಾಡುವ ಆಲೋಚನೆ ಇಲ್ಲ. ‘ಅವತಾರ ಪುರುಷ 2’ ಸಿನಿಮಾ ರಿಲೀಸ್​ಗೆ ಕಾಯುತ್ತಿರುವ ಪುಷ್ಕರ್ ಅವರು ಟಿವಿ ಕನ್ನಡ ಡಿಜಿಟಲ್ ಜೊತೆ ಮಾತನಾಡಿದ್ದಾರೆ. ಈ ವೇಳೆ ರಕ್ಷಿತ್ ಶೆಟ್ಟಿ ಜೊತೆಗಿನ ಫ್ರೆಂಡ್​ಶಿಪ್ ಬಗ್ಗೆ, ಮುಂದಿನ ದಿನಗಳಲ್ಲಿ ಸಿನಿಮಾ ಮಾಡುವ ಬಗ್ಗೆ ಅವರು ಮಾತನಾಡಿದ್ದಾರೆ.

‘ನನ್ನ ಹಾಗೂ ರಕ್ಷಿತ್ ಶೆಟ್ಟಿ ಮಧ್ಯೆ ಯಾವುದೇ ಹೇಟ್​ ರಿಲೇಶನ್​ಶಿಪ್​ ಇಲ್ಲ. ಇಬ್ಬರೂ ಗೌರವಯುತವಾಗಿ ನಮ್ಮದೇ ಸ್ಪೇಸ್​ನಲ್ಲಿ ಇದ್ದೇವೆ. ರಕ್ಷಿತ್ ಶೆಟ್ಟಿ ಅವರಿಗೆ ಈಗ 10-20 ನಿರ್ಮಾಪಕರು ರೆಡಿ ಇದ್ದಾರೆ. ನಾನು ಹಣ ಹಾಕ್ತೀನಿ ಡೇಟ್ ಕೊಡಿ ಎಂದು ಅವರು ಕೇಳುತ್ತಾ ಇರುತ್ತಾರೆ. ಹೀಗಾಗಿ, ತಕ್ಷಣಕ್ಕಂತೂ ಅವರಿಗೆ ಪುಷ್ಕರ್ ಜೊತೆ ಸಿನಿಮಾ ಮಾಡಬೇಕು ಎನ್ನುವ ಅನಿವಾರ್ಯತೆ ಇಲ್ಲ’ ಎಂದಿದ್ದಾರೆ ಪುಷ್ಕರ್. ಇದನ್ನೂ ಓದಿ: ‘ಕಿರಿಕ್​ ಪಾರ್ಟಿ’, ‘ಗೋಧಿಬಣ್ಣ..’ ರೀತಿ ‘ಅವತಾರ ಪುರುಷ 2’ ಬಿಡುಗಡೆ ಪ್ಲ್ಯಾನ್​: ಪುಷ್ಕರ್​

‘ನಾನು ಒಂದೊಳ್ಳೆಯ ಕಥೆ ತೆಗೆದುಕೊಂಡು ಬಂದು, ನನ್ನ ಪ್ರೊಡಕ್ಷನ್​ನಿಂದ ಅವರಿಗೆ ಹೇಳಿ ಅದು ರಕ್ಷಿತ್​ಗೆ ಇಷ್ಟವಾದರೆ ಬನ್ನಿ ಸಿನಿಮಾ ಮಾಡೋಣ ಎಂದರೆ ಅದು ವಿನ್ ವಿನ್ ಸಿಚ್ಯುವೇಷನ್ ಆಗುತ್ತದೆ. ಆದರೆ, ಅಂಥ ಕಥೆಯನ್ನು ಅವರಿಗೆ ಹೇಳಬೇಕು ಎನ್ನುವ ಪರಿಸ್ಥಿತಿ ನನಗೂ ಬಂದಿಲ್ಲ. ಬಹುಶಃ ಮುಂದಿನ ದಿನಗಳಲ್ಲಿ ಅಂಥ ಸಮಯ ಬಂದರೆ ಇಬ್ಬರೂ ಒಂದಾಗಬಹುದು’ ಎಂದಿದ್ದಾರೆ ಪುಷ್ಕರ್.

ಪುಷ್ಕರ್ ಮಲ್ಲಿಕಾರ್ಜುನಯ್ಯ ಅವರು ಈ ಮೊದಲು ಬ್ಯಾಕ್ ಟು ಬ್ಯಾಕ್ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ಇತ್ತೀಚೆಗೆ ಅವರು ಸಿನಿಮಾ ಮಾಡುವುದರಲ್ಲಿ ಸ್ವಲ್ಪ ತಾಳ್ಮೆ ತೆಗೆದುಕೊಳ್ಳುತ್ತಿದ್ದಾರೆ. ‘ಅವತಾರ ಪುರುಷ’ ರಿಲೀಸ್ ಆಗಿ ಎರಡು ವರ್ಷಗಳ ಬಳಿಕ ‘ಅವತಾರ ಪುರುಷ 2’ ಸಿನಿಮಾನ ಪ್ರೇಕ್ಷಕರ ಎದುರು ಇಡುತ್ತಿದ್ದಾರೆ. ಸಿಂಪಲ್ ಸುನಿ ನಿರ್ದೇಶನದ ಈ ಚಿತ್ರದಲ್ಲಿ ಶರಣ್, ಆಶಿಕಾ ರಂಗನಾಥ್ ಮೊದಲಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:33 pm, Tue, 12 March 24

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ