AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಯಶ್​ ಬಗ್ಗೆ ಒಂದೇ ಪದದಲ್ಲಿ ವಿವರಿಸಿದ ರಶ್ಮಿಕಾ ಮಂದಣ್ಣ; ಅಭಿಮಾನಿಗಳು ಖುಷ್​

ಸೋಶಿಯಲ್​ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಅವರು ಸಕ್ರಿಯರಾಗಿದ್ದಾರೆ. ಆಗಾಗ ಅವರು ಅಭಿಮಾನಿಗಳ ಜೊತೆ ಪ್ರಶ್ನೋತ್ತರ ನಡೆಸುತ್ತಾರೆ.

Rashmika Mandanna: ಯಶ್​ ಬಗ್ಗೆ ಒಂದೇ ಪದದಲ್ಲಿ ವಿವರಿಸಿದ ರಶ್ಮಿಕಾ ಮಂದಣ್ಣ; ಅಭಿಮಾನಿಗಳು ಖುಷ್​
ರಶ್ಮಿಕಾ ಮಂದಣ್ಣ, ಯಶ್
ಮದನ್​ ಕುಮಾರ್​
|

Updated on: May 17, 2023 | 2:07 PM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ವೃತ್ತಿಜೀವನ ಆರಂಭಿಸಿದ್ದು ಕನ್ನಡ ಚಿತ್ರರಂಗದಿಂದ. ಆದರೆ ಅವರು ಈಗ ಕನ್ನಡ ಚಿತ್ರರಂಗದಿಂದಲೇ (Sandalwood) ದೂರ ಉಳಿದುಕೊಂಡಿದ್ದಾರೆ. ಈ ನಡುವೆ ಅವರು ಅಭಿಮಾನಿಗಳ ಜೊತೆ ಟ್ವಿಟರ್​ನಲ್ಲಿ ಪ್ರಶ್ನೋತ್ತರ ನಡೆಸಿದ್ದಾರೆ. ಆಗ ಅವರಿಗೆ ಯಶ್ (Yash)​ ಬಗ್ಗೆ ಪ್ರಶ್ನೆ ಎದುರಾಗಿದೆ. ಒಂದೇ ಪದದಲ್ಲಿ ಯಶ್​ ಬಗ್ಗೆ ಹೇಳಿ ಎಂದು ನೆಟ್ಟಿಗರೊಬ್ಬರು ಮನವಿ ಮಾಡಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿರುವ ರಶ್ಮಿಕಾ ಮಂದಣ್ಣ ಅವರು ‘ಸೂಪರ್​ ಸ್ಟಾರ್​’ ಎಂದು ಉತ್ತರ ನೀಡಿದ್ದಾರೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದ್ದು, ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಅವರು ಸಕ್ರಿಯರಾಗಿದ್ದಾರೆ. ಆಗಾಗ ಅವರು ಅಭಿಮಾನಿಗಳ ಜೊತೆ ಪ್ರಶ್ನೋತ್ತರ ನಡೆಸುತ್ತಾರೆ. ಆ ಮೂಲಕ ಅವರು ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರುತ್ತಾರೆ.

ಕನ್ನಡದಲ್ಲಿ ಗಣೇಶ್​, ಪುನೀತ್ ರಾಜ್​ಕುಮಾರ್​, ರಕ್ಷಿತ್​ ಶೆಟ್ಟಿ, ಧ್ರುವ ಸರ್ಜಾ ಮುಂತಾದವರ ಜೊತೆ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಆದರೆ ಯಶ್​ ಜೊತೆ ನಟಿಸುವ ಅವಕಾಶ ಅವರಿಗೆ ಸಿಕ್ಕಿಲ್ಲ. ಸದ್ಯಕ್ಕಂತೂ ರಶ್ಮಿಕಾ ಅವರು ಪರಭಾಷೆ ಪ್ರಾಜೆಕ್ಟ್​ಗಳಲ್ಲೇ ಹೆಚ್ಚು ಬ್ಯುಸಿ ಆಗಿದ್ದಾರೆ. ಇತ್ತ, ಯಶ್​ ಅವರು ‘ಕೆಜಿಎಫ್​: ಚಾಪ್ಟರ್​ 2’ ಬಳಿಕ ಯಾವುದೇ ಹೊಸ ಪ್ರಾಜೆಕ್ಟ್​ ಅನೌನ್ಸ್​ ಮಾಡಿಲ್ಲ. ಆದಷ್ಟು ಬೇಗ ಅವರು ಹೊಸ ಸಿನಿಮಾ ಬಗ್ಗೆ ಮಾಹಿತಿ ನೀಡಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ಇದನ್ನೂ ಓದಿ: Rashmika Mandanna: ನಾನ್​-ವೆಜ್​ ತಿನ್ನಲ್ಲ ಅಂತ ಸುಳ್ಳು ಹೇಳಿದ್ರಾ ರಶ್ಮಿಕಾ ಮಂದಣ್ಣ? ತರಾಟೆಗೆ ತೆಗೆದುಕೊಂಡ ನೆಟ್ಟಿಗರು

ಇದನ್ನೂ ಓದಿ
Image
Radhika Pandit: ಯಶ್​​ಗಿಂತ ರಾಧಿಕಾ ಪಂಡಿತ್ ಎಷ್ಟು ವರ್ಷ ದೊಡ್ಡವರು? ಇಲ್ಲಿದೆ ಮಾಹಿತಿ
Image
Yash Birthday: ಬರ್ತ್​ಡೇಗೂ ಮೊದಲು ಅಭಿಮಾನಿಗಳ ಭೇಟಿ ಮಾಡಿದ ಯಶ್; ಇದಕ್ಕಿದೆ ಕಾರಣ
Image
Yash Birthday: ‘ಕ್ಷಮಿಸಿ, ಹುಟ್ಟುಹಬ್ಬಕ್ಕೆ ನಿಮ್ಮ ಜತೆ ಇರಲು ಆಗುತ್ತಿಲ್ಲ’: ಅಭಿಮಾನಿಗಳಿಗೆ ಯಶ್​ ಪತ್ರ
Image
Yash: ನಟ ಯಶ್​ ಅವರನ್ನು ಭೇಟಿ ಮಾಡಿದ ಭಾರತೀಯ ಕ್ರಿಕೆಟಿಗರಾದ ಹಾರ್ದಿಕ್​, ಕೃನಾಲ್ ಪಾಂಡ್ಯ

ರಶ್ಮಿಕಾ ಮಂದಣ್ಣ ಟಾಲಿವುಡ್​ನಲ್ಲಿ ಫೇಮಸ್ ಆದ ಬಳಿಕ ಹಿಂದಿ ಚಿತ್ರರಂಗಕ್ಕೆ ಕಾಲಿಟ್ಟರು. ಅವರು ಈಗಾಗಲೇ ಸಿದ್ದಾರ್ಥ್ ಮಲ್ಹೋತ್ರಾ ಹಾಗೂ ಅಮಿತಾಭ್ ಬಚ್ಚನ್ ಜೊತೆ ತೆರೆ ಹಂಚಿಕೊಂಡಿದ್ದಾರೆ. ರಣಬೀರ್ ಕಪೂರ್ ಜೊತೆ ಅವರು ‘ಅನಿಮಲ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ವಿಕ್ಕಿ ಕೌಶಲ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಛತ್ರಪತಿ ಶಿವಾಜಿ ಸೊಸೆಯ ಪಾತ್ರದಲ್ಲಿ ರಶ್ಮಿಕಾ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಇದರ ಜೊತೆ ಮತ್ತೊಂದು ಸಿನಿಮಾ ಮಾತುಕತೆಯಲ್ಲಿ ರಶ್ಮಿಕಾ ಬ್ಯುಸಿ ಇದ್ದಾರೆ ಎಂದು ವರದಿ ಆಗಿದೆ.

ಇದನ್ನೂ ಓದಿ: Rashmika Mandanna: ರಶ್ಮಿಕಾ ಬಳಿ ಸೆಲ್ಫಿ ಕೇಳಿದ ಅಭಿಮಾನಿಯನ್ನು ಎಳೆದೊಯ್ದ ಬಾಡಿಗಾರ್ಡ್​; ನಟಿಯ ರಿಯಾಕ್ಷನ್ ಹೇಗಿತ್ತು?

ರಶ್ಮಿಕಾ ಮಂದಣ್ಣ ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಅವರು ‘ರೇನ್​ ಬೋ’ ಸಿನಿಮಾದ ಮೊದಲ ಹಂತದ ಶೂಟಿಂಗ್​ ಮುಗಿಸಿದ್ದಾರೆ. ಸಿನಿಮಾ ಕೆಲಸಗಳನ್ನು ಮುಗಿಸುವಲ್ಲಿ ಕೊಡಗಿನ ಬೆಡಗಿ ರಶ್ಮಿಕಾ ಅವರು ಸಖತ್​ ಫಾಸ್ಟ್​ ಆಗಿದ್ದಾರೆ. ಒಂದೆಡೆ ‘ಪುಷ್ಪ 2’ ಸಿನಿಮಾದ ಶೂಟಿಂಗ್​ ಹಾಗೂ ಇನ್ನೊಂದೆಡೆ ‘ರೇನ್​ ಬೋ’ ಚಿತ್ರದ ಕೆಲಸಗಳಲ್ಲಿ ಅವರು ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ: ‘ಶ್ರೀವಲ್ಲಿ ಪಾತ್ರವನ್ನು ರಶ್ಮಿಕಾಗಿಂತ ನಾನೇ ಉತ್ತಮವಾಗಿ ಮಾಡುತ್ತಿದ್ದೆ’; ಕೊಂಕು ತೆಗೆದ ತಮಿಳು ನಟಿ

‘ರೇನ್​ ಬೋ’ ಚಿತ್ರದ ಮೊದಲ ಹಂತದ ಶೂಟಿಂಗ್​ ಮುಗಿಯಿತು ಎಂಬುದನ್ನು ತಿಳಿಸಲು ರಶ್ಮಿಕಾ ಮಂದಣ್ಣ ಅವರು ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿದ್ದರು. ನಟ ದೇವ್​ ಮೋಹನ್​ ಜೊತೆಗಿನ ಸೆಲ್ಫಿಯನ್ನು ಅವರು ಶೇರ್​ ಮಾಡಿಕೊಂಡಿದ್ದರು. ರಶ್ಮಿಕಾ ಮಂದಣ್ಣ ಅವರ ವೃತ್ತಿಜೀವನಕ್ಕೆ ಇಡೀ ಕುಟುಂಬದ ಬೆಂಬಲ ಇದೆ. ‘ರೇನ್​ ಬೋ’ ಶೂಟಿಂಗ್​ ನೋಡಲು ರಶ್ಮಿಕಾ ಸಹೋದರಿ ಕೂಡ ಬಂದಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ