AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara Movie: ‘ಕಾಂತಾರ’​ ಚಿತ್ರದ ಗೆಲುವಿಗೆ ಅಭಿನಂದನೆ ಸಲ್ಲಿಸಿದ ಟಾಲಿವುಡ್​ ಸ್ಟಾರ್​ ನಟ ಅಲ್ಲು ಅರ್ಜುನ್​

Allu Arjun | Kantara Movie: ‘ಕಾಂತಾರ’ ಚಿತ್ರತಂಡಕ್ಕೆ ಅಲ್ಲು ಅರ್ಜುನ್​ ಅಭಿನಂದನೆ ತಿಳಿಸಿದ್ದಾರೆ. ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

Kantara Movie: ‘ಕಾಂತಾರ’​ ಚಿತ್ರದ ಗೆಲುವಿಗೆ ಅಭಿನಂದನೆ ಸಲ್ಲಿಸಿದ ಟಾಲಿವುಡ್​ ಸ್ಟಾರ್​ ನಟ ಅಲ್ಲು ಅರ್ಜುನ್​
‘ಕಾಂತಾರ’ ಪೋಸ್ಟರ್​, ಅಲ್ಲು ಅರ್ಜುನ್
Follow us
TV9 Web
| Updated By: ಮದನ್​ ಕುಮಾರ್​

Updated on:Dec 20, 2022 | 4:23 PM

ಸೂಪರ್​ ಹಿಟ್​ ‘ಕಾಂತಾರ’ ಸಿನಿಮಾ (Kantara Movie) ಬಗ್ಗೆ ಅನೇಕ ಸ್ಟಾರ್​ ಕಲಾವಿದರು ಈಗಾಗಲೇ ಮಾತನಾಡಿದ್ದಾರೆ. ರಜನಿಕಾಂತ್​, ಅನುಷ್ಕಾ ಶೆಟ್ಟಿ, ಪ್ರಭಾಸ್​, ವಿವೇಕ್​ ಅಗ್ನಿಹೋತ್ರಿ, ಕಂಗನಾ ರಣಾವತ್​, ಹೃತಿಕ್​ ರೋಷನ್​ ಸೇರಿದಂತೆ ಅನೇಕರು ಮೆಚ್ಚಿಕೊಂಡಿದ್ದಾರೆ. ಈಗ ಟಾಲಿವುಡ್​ ನಟ ಅಲ್ಲು ಅರ್ಜುನ್​ (Allu Arjun) ಕೂಡ ‘ಕಾಂತಾರ’ ಸಿನಿಮಾದ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ತೆಲುಗು ಚಿತ್ರವೊಂದರ ಪ್ರಚಾರದ ವೇಳೆ ವೇದಿಕೆಯಲ್ಲಿ ಮಾತನಾಡಿದ ಅವರು ‘ಕಾಂತಾರ’ ಚಿತ್ರತಂಡಕ್ಕೆ ಅಭಿನಂದನೆ ತಿಳಿಸಿದ್ದಾರೆ. ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ರಿಷಬ್​ ಶೆಟ್ಟಿ (Rishab Shetty) ಅವರ ಕೆಲಸದ ಬಗ್ಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಮೆಚ್ಚುಗೆ ಕೇಳಿಬಂದಿದೆ. ಅವರ ಮುಂದಿನ ಸಿನಿಮಾ ಬಗ್ಗೆ ತಿಳಿದುಕೊಳ್ಳಲು ಫ್ಯಾನ್ಸ್​ ಕಾದಿದ್ದಾರೆ.

ದಕ್ಷಿಣ ಭಾರತದ ಸಿನಿಮಾಗಳು ಸಖತ್​ ಸೌಂಡು ಮಾಡುತ್ತಿವೆ. ಕೆಜಿಎಫ್​: ಚಾಪ್ಟರ್​ 2, ಪುಷ್ಪ, ಕಾಂತಾರ ಮುಂತಾದ ಚಿತ್ರಗಳು ಬಾಲಿವುಡ್​ ಮಾರುಕಟ್ಟೆಯಲ್ಲೂ ಗೆದ್ದು ಬೀಗಿವೆ. ಇಡೀ ಸೌತ್​ ಸಿನಿಮಾ ಇಂಡಸ್ಟ್ರಿ ಬಗ್ಗೆ ಎಲ್ಲರಲ್ಲೂ ಭರವಸೆ ಮೂಡಿದೆ. ಈ ಸಂದರ್ಭದಲ್ಲಿ ಬೇರೆ ಬೇರೆ ಭಾಷೆಯ ಚಿತ್ರರಂಗಗಳ ನಡುವಿನ ಗಡಿಗಳು ಮಾಯವಾಗುತ್ತಿವೆ. ಒಬ್ಬರು ಇನ್ನೊಬ್ಬರ ಗೆಲುವನ್ನು ಶ್ಲಾಘಿಸುವಂತಹ ವಾತಾವರಣ ನಿರ್ಮಾಣ ಆಗಿದೆ. ಅದಕ್ಕೆ ಲೇಟೆಸ್ಟ್ ಉದಾಹರಣೆ ಎಂಬಂತೆ ಅಲ್ಲು ಅರ್ಜುನ್​ ಅವರು ‘ಕಾಂತಾರ’ ಚಿತ್ರಕ್ಕೆ ಅಭಿನಂದನೆ ತಿಳಿಸಿದ್ದಾರೆ.

ಇದನ್ನೂ ಓದಿ
Image
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Image
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

ಇದನ್ನೂ ಓದಿ: Kantara Remuneration: 400 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ‘ಕಾಂತಾರ’ ಚಿತ್ರದಿಂದ ರಿಷಬ್ ಶೆಟ್ಟಿಗೆ ಸಿಕ್ಕಿದ್ದೆಷ್ಟು?

2022ರ ವರ್ಷ ಕನ್ನಡ ಚಿತ್ರರಂಗದ ಪಾಲಿಗೆ ವಿಶೇಷವಾಗಿದೆ. ಈ ವರ್ಷ ಕನ್ನಡದ ಹಲವು ಸಿನಿಮಾಗಳು ಪ್ರೇಕ್ಷಕರ ಮೆ ಚ್ಚುಗೆ ಪಡೆದುಕೊಂಡಿವೆ. ಅದರಲ್ಲೂ ಯಶ್​ ನಟನೆಯ ‘ಕೆಜಿಎಫ್​: ಚಾಪ್ಟರ್​ 2’ ಹಾಗೂ ರಿಷಬ್​ ಶೆಟ್ಟಿ ನಟನೆಯ ‘ಕಾಂತಾರ’ ಸಿನಿಮಾಗಳು ಮಾಡಿದ ಮೋಡಿಗೆ ಸಾಟಿಯೇ ಇಲ್ಲ. ಇಡೀ ವಿಶ್ವವೇ ಕರುನಾಡಿನ ಕಡೆಗೆ ತಿರುಗಿ ನೋಡುವಂತಹ ಸಾಧನೆಯನ್ನು ಈ ಚಿತ್ರಗಳು ಮಾಡಿವೆ.

ಇದನ್ನೂ ಓದಿ: Lionel Messi: ‘ಕಾಂತಾರ’ ರೀತಿ ಕಾಣಿಸಿದ ಮೆಸ್ಸಿ-ಮರಡೋನಾ; ವಿಶ್ವ ಮಟ್ಟದಲ್ಲಿ ಕನ್ನಡ ಸಿನಿಮಾ ಕ್ರೇಜ್​

ಈ ಎರಡೂ ಸಿನಿಮಾಗಳು ಮೂಡಿಬಂದಿದ್ದು ‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ನಿಂದ ಎಂಬುದು ವಿಶೇಷ. ಗೂಗಲ್​ ಹುಡುಕಾಟದಲ್ಲಿಯೂ ‘ಕಾಂತಾರ’ ಮತ್ತು ‘ಕೆಜಿಎಫ್​ 2’ ಸಿನಿಮಾಗಳು ಸದ್ದು ಮಾಡಿವೆ. 2022ರಲ್ಲಿ ಜನರು ಅತಿ ಹೆಚ್ಚು ಸರ್ಜ್​ ಮಾಡಿದ ಭಾರತದ ಟಾಪ್ 5 ಸಿನಿಮಾಗಳಲ್ಲಿ ಈ ಎರಡು ಚಿತ್ರಗಳು ಸ್ಥಾನ ಪಡೆದುಕೊಂಡಿವೆ.

ನಿರೀಕ್ಷೆ ಮೂಡಿಸಿದ ‘ಪುಷ್ಪ 2’:

2021ರಲ್ಲಿ ‘ಪುಷ್ಪ’ ಸಿನಿಮಾ ತೆರೆಕಂಡಿತು. ಅಲ್ಲು ಅರ್ಜುನ್​, ರಶ್ಮಿಕಾ ಮಂದಣ್ಣ ಮುಖ್ಯ ಭೂಮಿಕೆ ನಿಭಾಯಿಸಿದ್ದ ಆ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬ್ಲಾಕ್​ ಬಸ್ಟರ್​ ಹಿಟ್​ ಆಯಿತು. ಈಗ ಆ ಚಿತ್ರಕ್ಕೆ ಸೀಕ್ವೆಲ್​ ಸಿದ್ಧವಾಗುತ್ತಿದೆ. ‘ಪುಷ್ಪ 2’ ಸಿನಿಮಾ ಮೇಲೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸುಕುಮಾರ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:41 pm, Tue, 20 December 22

ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ