AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara Movie: ‘ಕಾಂತಾರ’​ ಚಿತ್ರದ ಗೆಲುವಿಗೆ ಅಭಿನಂದನೆ ಸಲ್ಲಿಸಿದ ಟಾಲಿವುಡ್​ ಸ್ಟಾರ್​ ನಟ ಅಲ್ಲು ಅರ್ಜುನ್​

Allu Arjun | Kantara Movie: ‘ಕಾಂತಾರ’ ಚಿತ್ರತಂಡಕ್ಕೆ ಅಲ್ಲು ಅರ್ಜುನ್​ ಅಭಿನಂದನೆ ತಿಳಿಸಿದ್ದಾರೆ. ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

Kantara Movie: ‘ಕಾಂತಾರ’​ ಚಿತ್ರದ ಗೆಲುವಿಗೆ ಅಭಿನಂದನೆ ಸಲ್ಲಿಸಿದ ಟಾಲಿವುಡ್​ ಸ್ಟಾರ್​ ನಟ ಅಲ್ಲು ಅರ್ಜುನ್​
‘ಕಾಂತಾರ’ ಪೋಸ್ಟರ್​, ಅಲ್ಲು ಅರ್ಜುನ್
TV9 Web
| Edited By: |

Updated on:Dec 20, 2022 | 4:23 PM

Share

ಸೂಪರ್​ ಹಿಟ್​ ‘ಕಾಂತಾರ’ ಸಿನಿಮಾ (Kantara Movie) ಬಗ್ಗೆ ಅನೇಕ ಸ್ಟಾರ್​ ಕಲಾವಿದರು ಈಗಾಗಲೇ ಮಾತನಾಡಿದ್ದಾರೆ. ರಜನಿಕಾಂತ್​, ಅನುಷ್ಕಾ ಶೆಟ್ಟಿ, ಪ್ರಭಾಸ್​, ವಿವೇಕ್​ ಅಗ್ನಿಹೋತ್ರಿ, ಕಂಗನಾ ರಣಾವತ್​, ಹೃತಿಕ್​ ರೋಷನ್​ ಸೇರಿದಂತೆ ಅನೇಕರು ಮೆಚ್ಚಿಕೊಂಡಿದ್ದಾರೆ. ಈಗ ಟಾಲಿವುಡ್​ ನಟ ಅಲ್ಲು ಅರ್ಜುನ್​ (Allu Arjun) ಕೂಡ ‘ಕಾಂತಾರ’ ಸಿನಿಮಾದ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ತೆಲುಗು ಚಿತ್ರವೊಂದರ ಪ್ರಚಾರದ ವೇಳೆ ವೇದಿಕೆಯಲ್ಲಿ ಮಾತನಾಡಿದ ಅವರು ‘ಕಾಂತಾರ’ ಚಿತ್ರತಂಡಕ್ಕೆ ಅಭಿನಂದನೆ ತಿಳಿಸಿದ್ದಾರೆ. ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ರಿಷಬ್​ ಶೆಟ್ಟಿ (Rishab Shetty) ಅವರ ಕೆಲಸದ ಬಗ್ಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಮೆಚ್ಚುಗೆ ಕೇಳಿಬಂದಿದೆ. ಅವರ ಮುಂದಿನ ಸಿನಿಮಾ ಬಗ್ಗೆ ತಿಳಿದುಕೊಳ್ಳಲು ಫ್ಯಾನ್ಸ್​ ಕಾದಿದ್ದಾರೆ.

ದಕ್ಷಿಣ ಭಾರತದ ಸಿನಿಮಾಗಳು ಸಖತ್​ ಸೌಂಡು ಮಾಡುತ್ತಿವೆ. ಕೆಜಿಎಫ್​: ಚಾಪ್ಟರ್​ 2, ಪುಷ್ಪ, ಕಾಂತಾರ ಮುಂತಾದ ಚಿತ್ರಗಳು ಬಾಲಿವುಡ್​ ಮಾರುಕಟ್ಟೆಯಲ್ಲೂ ಗೆದ್ದು ಬೀಗಿವೆ. ಇಡೀ ಸೌತ್​ ಸಿನಿಮಾ ಇಂಡಸ್ಟ್ರಿ ಬಗ್ಗೆ ಎಲ್ಲರಲ್ಲೂ ಭರವಸೆ ಮೂಡಿದೆ. ಈ ಸಂದರ್ಭದಲ್ಲಿ ಬೇರೆ ಬೇರೆ ಭಾಷೆಯ ಚಿತ್ರರಂಗಗಳ ನಡುವಿನ ಗಡಿಗಳು ಮಾಯವಾಗುತ್ತಿವೆ. ಒಬ್ಬರು ಇನ್ನೊಬ್ಬರ ಗೆಲುವನ್ನು ಶ್ಲಾಘಿಸುವಂತಹ ವಾತಾವರಣ ನಿರ್ಮಾಣ ಆಗಿದೆ. ಅದಕ್ಕೆ ಲೇಟೆಸ್ಟ್ ಉದಾಹರಣೆ ಎಂಬಂತೆ ಅಲ್ಲು ಅರ್ಜುನ್​ ಅವರು ‘ಕಾಂತಾರ’ ಚಿತ್ರಕ್ಕೆ ಅಭಿನಂದನೆ ತಿಳಿಸಿದ್ದಾರೆ.

ಇದನ್ನೂ ಓದಿ
Image
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Image
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

ಇದನ್ನೂ ಓದಿ: Kantara Remuneration: 400 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ‘ಕಾಂತಾರ’ ಚಿತ್ರದಿಂದ ರಿಷಬ್ ಶೆಟ್ಟಿಗೆ ಸಿಕ್ಕಿದ್ದೆಷ್ಟು?

2022ರ ವರ್ಷ ಕನ್ನಡ ಚಿತ್ರರಂಗದ ಪಾಲಿಗೆ ವಿಶೇಷವಾಗಿದೆ. ಈ ವರ್ಷ ಕನ್ನಡದ ಹಲವು ಸಿನಿಮಾಗಳು ಪ್ರೇಕ್ಷಕರ ಮೆ ಚ್ಚುಗೆ ಪಡೆದುಕೊಂಡಿವೆ. ಅದರಲ್ಲೂ ಯಶ್​ ನಟನೆಯ ‘ಕೆಜಿಎಫ್​: ಚಾಪ್ಟರ್​ 2’ ಹಾಗೂ ರಿಷಬ್​ ಶೆಟ್ಟಿ ನಟನೆಯ ‘ಕಾಂತಾರ’ ಸಿನಿಮಾಗಳು ಮಾಡಿದ ಮೋಡಿಗೆ ಸಾಟಿಯೇ ಇಲ್ಲ. ಇಡೀ ವಿಶ್ವವೇ ಕರುನಾಡಿನ ಕಡೆಗೆ ತಿರುಗಿ ನೋಡುವಂತಹ ಸಾಧನೆಯನ್ನು ಈ ಚಿತ್ರಗಳು ಮಾಡಿವೆ.

ಇದನ್ನೂ ಓದಿ: Lionel Messi: ‘ಕಾಂತಾರ’ ರೀತಿ ಕಾಣಿಸಿದ ಮೆಸ್ಸಿ-ಮರಡೋನಾ; ವಿಶ್ವ ಮಟ್ಟದಲ್ಲಿ ಕನ್ನಡ ಸಿನಿಮಾ ಕ್ರೇಜ್​

ಈ ಎರಡೂ ಸಿನಿಮಾಗಳು ಮೂಡಿಬಂದಿದ್ದು ‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ನಿಂದ ಎಂಬುದು ವಿಶೇಷ. ಗೂಗಲ್​ ಹುಡುಕಾಟದಲ್ಲಿಯೂ ‘ಕಾಂತಾರ’ ಮತ್ತು ‘ಕೆಜಿಎಫ್​ 2’ ಸಿನಿಮಾಗಳು ಸದ್ದು ಮಾಡಿವೆ. 2022ರಲ್ಲಿ ಜನರು ಅತಿ ಹೆಚ್ಚು ಸರ್ಜ್​ ಮಾಡಿದ ಭಾರತದ ಟಾಪ್ 5 ಸಿನಿಮಾಗಳಲ್ಲಿ ಈ ಎರಡು ಚಿತ್ರಗಳು ಸ್ಥಾನ ಪಡೆದುಕೊಂಡಿವೆ.

ನಿರೀಕ್ಷೆ ಮೂಡಿಸಿದ ‘ಪುಷ್ಪ 2’:

2021ರಲ್ಲಿ ‘ಪುಷ್ಪ’ ಸಿನಿಮಾ ತೆರೆಕಂಡಿತು. ಅಲ್ಲು ಅರ್ಜುನ್​, ರಶ್ಮಿಕಾ ಮಂದಣ್ಣ ಮುಖ್ಯ ಭೂಮಿಕೆ ನಿಭಾಯಿಸಿದ್ದ ಆ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬ್ಲಾಕ್​ ಬಸ್ಟರ್​ ಹಿಟ್​ ಆಯಿತು. ಈಗ ಆ ಚಿತ್ರಕ್ಕೆ ಸೀಕ್ವೆಲ್​ ಸಿದ್ಧವಾಗುತ್ತಿದೆ. ‘ಪುಷ್ಪ 2’ ಸಿನಿಮಾ ಮೇಲೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸುಕುಮಾರ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:41 pm, Tue, 20 December 22

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ