AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ’ ನಿರ್ದೇಶಕ ಸಿನಿಮಾಗೆ ಕನ್ನಡದ ಈ ಚಿತ್ರಗಳೇ ಸ್ಫೂರ್ತಿ; ನಾಚಿಕೆಬಿಟ್ಟು ಹೇಳಿದ ಸುಕುಮಾರ್

ಸುಕುಮಾರ್ ಅವರು ತಮ್ಮ ಯಶಸ್ವಿ ಚಿತ್ರಗಳಾದ ‘ಪುಷ್ಪ 2’ ಸೇರಿದಂತೆ ಅನೇಕ ಚಿತ್ರಗಳ ಚಿತ್ರಕಥೆ ರಚನೆಗೆ ಕನ್ನಡದ ಖ್ಯಾತ ನಿರ್ದೇಶಕನ ಸಿನಿಮಾಗಳು ಪ್ರಮುಖ ಸ್ಫೂರ್ತಿ ಎಂದು ಬಹಿರಂಗಪಡಿಸಿದ್ದಾರೆ. ಆ ಚಿತ್ರಗಳು ತಮ್ಮ ಮೇಲೆ ಬಲವಾದ ಪ್ರಭಾವ ಬೀರಿವೆ ಎಂದು ಅವರು ಹೇಳಿದ್ದಾರೆ. ಈ ಹೇಳಿಕೆ ಸಿನಿಮಾ ರಂಗದಲ್ಲಿ ಅಚ್ಚರಿ ಮೂಡಿಸಿದೆ.

‘ಪುಷ್ಪ’ ನಿರ್ದೇಶಕ ಸಿನಿಮಾಗೆ ಕನ್ನಡದ ಈ ಚಿತ್ರಗಳೇ ಸ್ಫೂರ್ತಿ; ನಾಚಿಕೆಬಿಟ್ಟು ಹೇಳಿದ ಸುಕುಮಾರ್
ಅಲ್ಲು ಅರ್ಜುನ್-ಸುಕುಮಾರ್
ರಾಜೇಶ್ ದುಗ್ಗುಮನೆ
|

Updated on: May 29, 2025 | 7:58 AM

Share

ಸುಕುಮಾರ್ (Sukumar) ನಿರ್ದೇಶನ ಅನೇಕ ಸಿನಿಮಾಗಳು ಬ್ಲಾಕ್​ಬಸ್ಟರ್ ಆಗಿವೆ. ಅದರಲ್ಲೂ ‘ಪುಷ್ಪ 2’ ಚಿತ್ರ ಮಾಡಿರೋ ದಾಖಲೆಗಳು ಒಂದೆರಡಲ್ಲ. ಸುಕುಮಾರ್ ನಿರ್ದೇಶನ ಚಿತ್ರದ ಚಿತ್ರಕಥೆ ಸಾಕಷ್ಟು ಮೆಚ್ಚುಗೆ ಪಡೆಯುವ ರೀತಿಯಲ್ಲಿ ಇರುತ್ತವೆ. ಇದಕ್ಕೆ ಕಾರಣ ಕನ್ನಡದ ಚಿತ್ರಗಳು ಎಂದು ಸುಕುಮಾರ್ ಅವರು ರಿವೀಲ್ ಮಾಡಿದ್ದಾರೆ. ಈ ವಿಚಾರ ಅನೇಕರಿಗೆ ಅಚ್ಚರಿ ಮೂಡಿಸಿದೆ. ತೆಲುಗು ವೇದಿಕೆ ಮೇಲೆಯೇ ಅವರು ಈ ವಿಚಾರ ಹೇಳಿಕೊಂಡಿದ್ದು ಮತ್ತೊಂದು ವಿಶೇಷ.

ಸಾಮಾನ್ಯವಾಗಿ ಎಲ್ಲಾ ನಿರ್ದೇಶಕರು ಮತ್ತೋರ್ವ ನಿರ್ದೇಶಕನಿಂದ ಸ್ಫೂರ್ತಿ ಪಡೆಯುತ್ತಾರೆ. ಅದೇ ರೀತಿ ಸುಕುಮಾರ್ ಅವರು ಉಪೇಂದ್ರ ಹಾಗೂ ಅವರು ಮಾಡಿರೋ ಸಿನಿಮಾಗಳಿಂದ ಸ್ಫೂರ್ತಿ ಪಡೆದು ಚಿತ್ರಕಥೆ ಬರೆಯುತ್ತಿದ್ದಾರೆ. ಇದನ್ನು ಅವರು ಯಾವುದೇ ಅಂಜಿಕೆ ಇಲ್ಲದೆ ಹೇಳಿದ್ದಾರೆ. ಈ ರಹಸ್ಯವನ್ನು ರಿವೀಲ್ ಮಾಡಿದ್ದು ಸಾಕಷ್ಟು ಜನರಿಗೆ ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ
Image
ಎ,ಓಂ ಚಿತ್ರವನ್ನು ನಾನು ಮಾಡಿದ್ದರೆ ನಿವೃತ್ತಿ ಪಡೆಯುತ್ತಿದ್ದೆ; ಸುಕುಮಾರ್
Image
ಪವನ್ ಕಲ್ಯಾಣ್ ನಟನೆಯ ‘ಒಜಿ’ ಚಿತ್ರಕ್ಕೆ ಸೊಳ್ಳೆ ಕಾಟ; ಶೂಟಿಂಗ್ ಸ್ಥಗಿತ
Image
ಕಮಲ್ ಹೇಳಿಕೆ ವಿರುದ್ಧ ಧ್ವನಿ ಎತ್ತಿದ ಅಹಿಂಸಾ ಚೇತನ್; ಸೆಲೆಬ್ರಿಟಿಗಳ ಮೌನ
Image
ನಟಿ ದೀಪಿಕಾಗೆ ಕ್ಯಾನ್ಸರ್; ಹೊಟ್ಟೆಯಲ್ಲಿದೆ ಟೆನಿಸ್ ಬಾಲ್ ಆಕಾರದ ಗಡ್ಡೆ

ಅರ್ಜುನ್ ಸರ್ಜಾ ನಿರ್ದೇಶನದ ‘ಸೀತಾ ಪಯಣಂ’ ಚಿತ್ರದಲ್ಲಿ ಅವರ ಮಗಳು ಐಶ್ವರ್ಯಾ ಅರ್ಜುನ್ ನಟಿಸುತ್ತಿದ್ದಾರೆ. ಈ ಸಿನಿಮಾದ ಟೀಸರ್ ರಿಲೀಸ್ ಕಾರ್ಯಕ್ರಮಕ್ಕೆ ಸುಕುಮಾರ್ ಹಾಗೂ ಕನ್ನಡದ ನಟ ಉಪೇಂದ್ರ ಅತಿಥಿಯಾಗಿ ಆಗಮಿಸಿದ್ದರು. ತಮ್ಮ ಚಿತ್ರಗಳಿಗೆ ಸ್ಫೂರ್ತಿಯಾಗಿರೋ ಉಪೇಂದ್ರ ಅವರನ್ನು ನೋಡಿ ಸುಕುಮಾರ್ ಸಂತೋಷಗೊಂಡರು ಮತ್ತು ಮನಸ್ಸಿನ ಮಾತನ್ನು ಆಡಿದರು.

‘ಅಷ್ಟು ಮ್ಯಾಡ್ ನಿರ್ದೇಶಕನ ಮತ್ತೋರ್ವನನ್ನು ನೋಡಿಲ್ಲ. ಎ, ಓಂ, ಉಪೇಂದ್ರ ಈ ಮೂರು ಸಿನಿಮಾ ಮಾಡಿದ ಯಾವುದೇ ನಿರ್ದೇಶಕನಾದರೂ ನಿವೃತ್ತಿ ಪಡೆಯುತ್ತಿದ್ದರು. ನಾನಾಗಿದ್ದರೆ ಖಂಡಿತವಾಗಿಯೂ ನಿವೃತ್ತಿ ಪಡೆಯುತ್ತಿದೆ. ಅಂತ ಕಲ್ಟ್ ಸಿನಿಮಾಗಳು ಅವು. ನನ್ನ ಸಿನಿಮಾಗಳ ಚಿತ್ರಕಥೆ ಇಷ್ಟು ಅದ್ಭುತವಾಗಿ ಇರುತ್ತದೆ ಎಂದರೆ ಅದಕ್ಕೆ ಕಾರಣ ಆ ಮೂರು ಕಲ್ಟ್​ ಚಿತ್ರಗಳು. ನಿಮ್ಮಿಂದ ಆ ವಿಚಾರವನ್ನು ಕದ್ದಿದ್ದೇನೆ. ನಿಮ್ಮ ಜೊತೆ ವೇದಿಕೆ ಹಂಚಿಕೊಳ್ಳುವ ಅವಕಾಶ ಸಿಕ್ಕಿದ್ದಕ್ಕೆ ನನಗೆ ಖುಷಿ ಇದೆ’ ಎಂದಿದ್ದಾರೆ. ಅಲ್ಲದೆ, ಯಾವುದೇ ನಾಚಿಕೆ ಇಲ್ಲದೆ ನಿಮ್ಮಿಂದ ವಿಷಯಗಳನ್ನು ಸ್ಫೂರ್ತಿ ಪಡೆಯುತ್ತೇನೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಎ ಹಾಗೂ ಓಂ ಚಿತ್ರವನ್ನು ನಾನು ಮಾಡಿದ್ದರೆ ಈಗಾಗಲೇ ನಿವೃತ್ತಿ ಪಡೆದಿರುತ್ತಿದ್ದೆ’; ‘ಪುಷ್ಪ’ ನಿರ್ದೇಶಕ ಸುಕುಮಾರ್

ಉಪೇಂದ್ರ ಅವರು ‘ಓಂ’, ‘ಉಪೇಂದ್ರ’ ಹಾಗೂ ‘ಎ’ ಚಿತ್ರಗಳನ್ನು ನಿರ್ದೇಶನ ಮಾಡಿ ಫೇಮಸ್ ಆದವರು. ಇದಲ್ಲದೆ, ‘ತರ್ಲೆ ನನ್ಮಗ’, ‘ಶ್​’ ರೀತಿಯ ಚಿತ್ರಗಳನ್ನು ಕೂಡ ಅವರು ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ