ಪುನೀತ್​ ನಿವಾಸಕ್ಕೆ ಭೇಟಿ ನೀಡಲಿರುವ ಅಲ್ಲು ಅರ್ಜುನ್​; ಹೇಗಿರಲಿದೆ ಇಂದಿನ ಅವರ ವೇಳಾಪಟ್ಟಿ?

ಅಲ್ಲು ಅರ್ಜುನ್​ ಅವರು ಬೆಂಗಳೂರಿಗೆ ಬಂದು ಪುನೀತ್​ ರಾಜ್​ಕುಮಾರ್​ ಕುಟುಂಬದ ಸದಸ್ಯರನ್ನು ಭೇಟಿ ಮಾಡಲಿದ್ದಾರೆ. ಅಪ್ಪು ಸಮಾಧಿಗೆ ನಮನ ಸಲ್ಲಿಸಲಿದ್ದಾರೆ.

ಪುನೀತ್​ ನಿವಾಸಕ್ಕೆ ಭೇಟಿ ನೀಡಲಿರುವ ಅಲ್ಲು ಅರ್ಜುನ್​; ಹೇಗಿರಲಿದೆ ಇಂದಿನ ಅವರ ವೇಳಾಪಟ್ಟಿ?
Follow us
| Updated By: ಮದನ್​ ಕುಮಾರ್​

Updated on:Feb 03, 2022 | 10:12 AM

ಹೃದಯಾಘಾತದಿಂದ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಕಳೆದುಕೊಂಡಿದ್ದು ತೀವ್ರ ನೋವಿನ ಸಂಗತಿ. ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೇ ಪರಭಾಷೆಯಲ್ಲೂ ಕೂಡ ಅವರು ಸ್ನೇಹಿತರನ್ನು ಸಂಪಾದಿಸಿದ್ದರು. ಪುನೀತ್​ ನಿಧನದ ಬಳಿಕ ಅಕ್ಕಪಕ್ಕದ ರಾಜ್ಯಗಳ ಅನೇಕ ಸೆಲೆಬ್ರಿಟಿಗಳು ಬಂದು ಡಾ. ರಾಜ್​ಕುಮಾರ್​ ಕುಟುಂಬಕ್ಕೆ ಸಾಂತ್ವನವನ್ನು ಹೇಳಿದರು. ಇಂದು (ಫೆ.3) ಟಾಲಿವುಡ್​ನ ಖ್ಯಾತ ನಟ ಅಲ್ಲು ಅರ್ಜುನ್ (Allu Arjun)​ ಅವರು ಪುನೀತ್​ ರಾಜ್​ಕುಮಾರ್​ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಅಪ್ಪು ನಿಧನದಿಂದ ಕಣ್ಣೀರು ಹಾಕುತ್ತಿರುವ ಕುಟುಂಬದ ಸದಸ್ಯರಿಗೆ ಅವರು ಸಾಂತ್ವನ ಹೇಳಲಿದ್ದಾರೆ. ತಾವು ಪುನೀತ್​ ಮನೆಗೆ ಭೇಟಿ ನೀಡುವುದಾಗಿ ಈ ಮೊದಲೇ ಅವರು ತಿಳಿಸಿದ್ದರು. ಅದರಂತೆ ಈಗ ನಡೆದುಕೊಳ್ಳುತ್ತಿದ್ದಾರೆ. ಪುನೀತ್​ ನಿಧನರಾದ ಸಂದರ್ಭದಲ್ಲಿ ಅಲ್ಲು ಅರ್ಜುನ್​ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದರು. ಹೈದರಾಬಾದ್​ನಲ್ಲಿ ನಡೆದ ಸಿನಿಮಾವೊಂದರ ಪ್ರಚಾರ ಕಾರ್ಯದ ವೇಳೆ ಮೌನಾಚರಣೆ ಮಾಡುವ ಮೂಲಕ ಅಪ್ಪು ಆತ್ಮಕ್ಕೆ ಶಾಂತಿ ಕೋರಿದ್ದರು. ಈಗ ಅವರು ಬೆಂಗಳೂರಿಗೆ ಬಂದು ಪುನೀತ್​ ಕುಟುಂಬದ (Puneeth Rajkumar Family) ಸದಸ್ಯರನ್ನು ಭೇಟಿ ಮಾಡಲಿದ್ದಾರೆ.

ಅಲ್ಲು ಅರ್ಜುನ್​ ಅವರು ಇಂದು ಬೆಳಗ್ಗೆ 11 ಗಂಟೆಗೆ ಖಾಸಗಿ ವಿಮಾನದಲ್ಲಿ ಹೈದರಾಬಾದ್​ನಿಂದ ಹೊರಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಎಚ್​ಎಎಲ್​ ತಲುಪಲಿದ್ದಾರೆ. ಬಳಿಕ ಅವರು ನೇರವಾಗಿ ಪುನೀತ್​ ನಿವಾಸಕ್ಕೆ ಬರಲಿದ್ದಾರೆ. ಅಲ್ಲಿ ಅವರನ್ನು ಶಿವರಾಜ್​ಕುಮಾರ್​ ಬರಮಾಡಿಕೊಳ್ಳಲಿದ್ದಾರೆ. ನಂತರ ಅಪ್ಪು ಸಮಾಧಿಗೆ ಭೇಟಿ ನೀಡಿ, ನಮನ ಸಲ್ಲಿಸಲಿದ್ದಾರೆ. ಹಲವು ದಶಕಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಡಾ. ರಾಜ್​ ಕುಟುಂಬದವರಿಗೆ ಎಲ್ಲ ಭಾಷೆಯ ಸೆಲೆಬ್ರಿಟಿಗಳ ನಡುವೆ ಉತ್ತಮ ಬಾಂಧವ್ಯ ಇದೆ. ಪುನೀತ್​ ನಿಧನಕ್ಕೆ ಎಲ್ಲರೂ ಕಂಬನಿ ಮಿಡಿದಿದ್ದಾರೆ.

‘ಪುಷ್ಪ’ ಚಿತ್ರದ ಪ್ರಚಾರದ ಸಮಯದಲ್ಲಿ ಅಲ್ಲು ಅರ್ಜುನ್​ ಅವರು ಬೆಂಗಳೂರಿಗೆ ಆಗಮಿಸಿದ್ದರು. ಆದರೆ ಆ ಸಂದರ್ಭದಲ್ಲಿ ಪುನೀತ್​ ನಿವಾಸಕ್ಕೆ ಭೇಟಿ ನೀಡದಿರಲು ಅವರು ನಿರ್ಧರಿಸಿದ್ದರು. ಅದಕ್ಕೆ ಕಾರಣ ಏನೆಂಬುದನ್ನೂ ಅವರು ವಿವರಿಸಿದ್ದರು. ‘ಪುನೀತ್​ ರಾಜ್​ಕುಮಾರ್​ ಕುಟುಂಬಕ್ಕೆ ನನ್ನ ಸಂತಾಪ ಇದೆ. ‘ಪುಷ್ಪ’ ಸಿನಿಮಾ ಕೆಲಸಗಳಿಂದ ಬೆಂಗಳೂರಿಗೆ ಬರೋಕೆ ಆಗಿರಲಿಲ್ಲ. ಈಗ ‘ಪುಷ್ಪ’ ಸಿನಿಮಾ ಪ್ರಮೋಷನ್​ಗೆ ಬೆಂಗಳೂರಿಗೆ ಬಂದಿದ್ದೇನೆ. ಈ ಸಂದರ್ಭದಲ್ಲಿ ನಾನು ಅಲ್ಲಿಗೆ ಹೋಗೋಕೆ ಇಷ್ಟಪಡುವುದಿಲ್ಲ. ‘ಪುಷ್ಪ’ ರಿಲೀಸ್​ ಆದ ನಂತರ ಮತ್ತೊಮ್ಮೆ ಬೆಂಗಳೂರಿಗೆ ಬರುತ್ತೇನೆ. ಬಂದು ಇಡೀ ಕುಟುಂಬವನ್ನು ಭೇಟಿ ಆಗುತ್ತೇನೆ. ಅದು ನನ್ನ ಕರ್ತವ್ಯ’ ಎಂದು ಅಲ್ಲು ಅರ್ಜುನ್​ ಹೇಳಿದ್ದರು.

‘ಪುಷ್ಪಕ ವಿಮಾನಂ’ ಸಿನಿಮಾದ ಪ್ರಚಾರದ ಸಮಯದಲ್ಲಿ ಪುನೀತ್​ ಬಗ್ಗೆ ಅಲ್ಲು ಅರ್ಜುನ್​ ಮಾತನಾಡಿದ್ದರು. ‘ಪುನೀತ್​ ರಾಜ್​ಕುಮಾರ್​ ಅವರು ನನಗೆ ಬಹಳ ಕಾಲದಿಂದ ಪರಿಚಯ. ನಮ್ಮ ಮನೆಗೆ ಬರುತ್ತಿದ್ದರು. ಎಷ್ಟೋ ಬಾರಿ ಜೊತೆಯಲ್ಲಿ ಕುಳಿತು ಊಟ ಮಾಡಿದ್ದೆವು. ನಮ್ಮಿಬ್ಬರ ನಡುವೆ ಪರಸ್ಪರ ಪ್ರೀತಿ-ವಿಶ್ವಾಸ ಇತ್ತು. ಒಂದು ಡ್ಯಾನ್ಸ್​ ಕಾರ್ಯಕ್ರಮದಲ್ಲಿ ನಾವು ಜಡ್ಜ್​ ಆಗಿದ್ದೆವು. ಯಾವಾಗ ಮಾತನಾಡಿದರೂ ಬೆಂಗಳೂರಿಗೆ ಬನ್ನಿ ಎಂದು ಕರೆಯುತ್ತಿದ್ದರು. ಆದರೆ ಇಂದು ಸಡನ್​ ಆಗಿ ಅವರು ಇಲ್ಲ ಎಂಬುದನ್ನು ನಂಬಲಾಗುತ್ತಿಲ್ಲ’ ಎಂದು ಅಲ್ಲು ಅರ್ಜುನ್​ ಹೇಳಿದ್ದರು.

‘ಮೊದಲ ಬಾರಿಗೆ ಈ ಸುದ್ದಿ ಕೇಳಿದಾಗ ತುಂಬ ಶಾಕ್​ ಆಯಿತು. ಬದುಕು ತೀರಾ ಅನಿಶ್ಚಿತ. ಒಂದು ಕ್ಷಣದಲ್ಲಿ ಏನು ಬೇಕಾದರೂ ಆಗಬಹುದು. ಬದುಕಿನಲ್ಲಿ ಯಾವಾಗಲೂ ಖುಷಿಯಾಗಿರಿ. ಎಂಥ ದೊಡ್ಡ ಸೂಪರ್​ ಸ್ಟಾರ್​ ಆಗಿದ್ದರು ಪುನೀತ್​ ರಾಜ್​ಕುಮಾರ್​. ತುಂಬ ಒಳ್ಳೆಯ ವ್ಯಕ್ತಿ. ಕನ್ನಡ ಚಿತ್ರರಂಗಕ್ಕಾಗಿ ಅವರು ತುಂಬ ಕೊಡುಗೆ ನೀಡಿದ್ದರು. ನಮ್ಮ ದಕ್ಷಿಣ ಭಾರತೀಯ ಚಿತ್ರರಂಗಕ್ಕೆ ಹೆಮ್ಮೆ ಆಗಿದ್ದರು’ ಎಂದಿದ್ದರು ಅಲ್ಲು ಅರ್ಜುನ್.​

ಇದನ್ನೂ ಓದಿ:

‘ಪುಷ್ಪ 2’ ರಿಲೀಸ್​ ಡೇಟ್​ ಬಗ್ಗೆ ಬಿಗ್​ ಅಪ್​ಡೇಟ್​; ಮತ್ತೆ ಆ ಯಶಸ್ವಿ ದಿನಾಂಕದ ಮೇಲೆ ಕಣ್ಣಿಟ್ಟ ಅಲ್ಲು ಅರ್ಜುನ್​?

‘ಅಪ್ಪು ನಮಗೆ ಬಿಟ್ಟು ಹೋದ ಆಸ್ತಿ ಇದು’; ಪುನೀತ್​ ಬಗ್ಗೆ ಸಹೋದರ ರಾಘಣ್ಣ ಭಾವುಕ ಮಾತು

Published On - 9:58 am, Thu, 3 February 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ