AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲ್ಟಿಪ್ಲೆಕ್ಸ್​ನಲ್ಲಿ ಮತ್ತೆ 99 ರೂ.ಆಫರ್; ಯಾವಾಗಿನಿಂದ, ಯಾವ ಸಿನಿಮಾಗಳಿಗೆ? ಇಲ್ಲಿದೆ ವಿವರ

ಕಳೆದ ವರ್ಷ ಪಿವಿಆರ್​ ಹಾಗೂ ಐನಾಕ್ಸ್​ ಮಲ್ಟಿಪ್ಲೆಕ್ಸ್​ನಲ್ಲಿ 100 ರೂಪಾಯಿ ಟಿಕೆಟ್ ದರ ನಿಗದಿ ಮಾಡಲಾಯಿತು. ಈ ವೇಳೆ ಬಹುತೇಕ ಶೋಗಳು ಹೌಸ್​ಫುಲ್ ಪ್ರದರ್ಶನ ಕಂಡವು. ಈ ತಂತ್ರವನ್ನು ಮಲ್ಟಿಪ್ಲೆಕ್ಸ್​ಗಳು ಮುಂದುವರಿಸಿಕೊಂಡು ಹೋಗುತ್ತಿವೆ.

ಮಲ್ಟಿಪ್ಲೆಕ್ಸ್​ನಲ್ಲಿ ಮತ್ತೆ 99 ರೂ.ಆಫರ್; ಯಾವಾಗಿನಿಂದ, ಯಾವ ಸಿನಿಮಾಗಳಿಗೆ? ಇಲ್ಲಿದೆ ವಿವರ
ಪಿವಿಆರ್​-ಐನಾಕ್ಸ್
ರಾಜೇಶ್ ದುಗ್ಗುಮನೆ
|

Updated on: May 18, 2023 | 7:03 AM

Share

ಸಿಂಗಲ್​ ಸ್ಕ್ರೀನ್ ಥಿಯೇಟರ್​ಗಳಿಗೆ ಹೋಲಿಕೆ ಮಾಡಿದರೆ ಮಲ್ಟಿಪ್ಲೆಕ್ಸ್​​ನಲ್ಲಿ (Multiplex) ಸಿನಿಮಾ ಟಿಕೆಟ್ ದರ ಹೆಚ್ಚಿರುತ್ತದೆ. ಈ ದೂರು ಮೊದಲಿನಿಂದಲೂ ಕೇಳಿ ಬರುತ್ತಲೇ ಇದೆ. ಈಗ ಪಿವಿಆರ್ (PVR)  ಹಾಗೂ ಐನಾಕ್ಸ್ ಕಡೆಯಿಂದ ಬಂಪರ್ ಆಫರ್ ಸಿಗುತ್ತಿದೆ. ಕೆಲ ಕನ್ನಡದ ಸಿನಿಮಾಗಳಿಗೆ 99 ರೂಪಾಯಿ ಟಿಕೆಟ್ ದರ ನಿಗದಿ ಮಾಡಲಾಗಿದೆ. ಮೇ 19ರಿಂದ 25ರವರೆಗೆ ಈ ಆಫರ್ ಲಭ್ಯವಿದೆ. ಆದರೆ, ಕೆಲವು ಷರತ್ತುಗಳನ್ನು ಹಾಕಲಾಗಿದೆ.

ಕಳೆದ ವರ್ಷ ಪಿವಿಆರ್​ ಹಾಗೂ ಐನಾಕ್ಸ್​ ಮಲ್ಟಿಪ್ಲೆಕ್ಸ್​ನಲ್ಲಿ 100 ರೂಪಾಯಿ ಟಿಕೆಟ್ ದರ ನಿಗದಿ ಮಾಡಲಾಯಿತು. ಈ ವೇಳೆ ಬಹುತೇಕ ಶೋಗಳು ಹೌಸ್​ಫುಲ್ ಪ್ರದರ್ಶನ ಕಂಡವು. ಈ ತಂತ್ರವನ್ನು ಮಲ್ಟಿಪ್ಲೆಕ್ಸ್​ಗಳು ಮುಂದುವರಿಸಿಕೊಂಡು ಹೋಗುತ್ತಿವೆ. ಈಗ ಕೇವಲ 99 ರೂಪಾಯಿಗೆ ಕನ್ನಡ ಸಿನಿಮಾಗಳನ್ನು ನೋಡುವ ಅವಕಾಶ ನೀಡಿದೆ. ಆದರೆ, ಎಲ್ಲಾ ಕನ್ನಡ ಸಿನಿಮಾಗಳನ್ನೂ ನೋಡಲು ಇಲ್ಲಿ ಅವಕಾಶ ಇಲ್ಲ.

ಮಲ್ಟಿಪ್ಲೆಕ್ಸ್​​ನಲ್ಲಿ ರೀ-ರಿಲೀಸ್ ಆಗುತ್ತಿರುವ ಪುನೀತ್​ ರಾಜ್​ಕುಮಾರ್ ನಟನೆಯ ‘ರಾಜಕುಮಾರ’, ಯಶ್​ ನಟನೆಯ ‘ಕೆಜಿಎಫ್-1’, ‘ಮಫ್ತಿ’, ‘ಮಾಸ್ಟರ್ ಪೀಸ್’, ‘ಗಂಧದಗುಡಿ’, ‘ಗರುಡ ಗಮನ ವೃಷಭ ವಾಹನ’ ಸಿನಿಮಾಗಳನ್ನು 99 ರೂಪಾಯಿಗೆ ನೋಡುವ ಅವಕಾಶ ಇದೆ.

ಫ್ಯಾಮಿಲಿ ಎಂಟರ್​​ಟೇನರ್ ಎನಿಸಿಕೊಂಡಿರುವ ‘ರಾಜಕುಮಾರ’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈಗ ಪುನೀತ್ ನಮ್ಮೊಂದಿಗಿಲ್ಲ. ಹೀಗಾಗಿ, ಈ ಸಿನಿಮಾನ ಥಿಯೇಟರ್​ನಲ್ಲಿ ನೋಡಿದರೆ ಪ್ರೇಕ್ಷಕರು ಭಾವುಕರಾಗೋದು ಪಕ್ಕಾ. ಇನ್ನು ಮಾಸ್ ಪ್ರಿಯರಿಗೋಸ್ಕರ ‘ಕೆಜಿಎಫ್ 1’, ‘ಮಾಸ್ಟರ್ ಪೀಸ್​’ ಸಿನಿಮಾ ಬರ್ತಿದೆ. ಶಿವಣ್ಣ ಹಾಗೂ ಶ್ರೀಮುರಳಿ ಕಾಂಬಿನೇಷನ್​ ‘ಮಫ್ತಿ’ ಕೂಡ ರಿಲೀಸ್​ ಆಗುತ್ತಿದೆ. ರಾಜ್ ಬಿ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಗರುಡ ಗಮನ ವೃಷಭ ವಾಹನ ಬಿಡುಗಡೆಯಾಗಲಿವೆ. ಈ ಮೂಲಕ ಒಂದು ವಾರಗಳ ಕಾಲ ಪಿವಿಆರ್ ಹಾಗೂ ಐನಾಕ್ಸ್ ಕನ್ನಡದ ಬ್ಲಾಕ್ ಬಸ್ಟರ್ಸ್ ಚಿತ್ರಗಳನ್ನು ಪ್ರೇಕ್ಷಕರಿಗೆ ಸಂಭ್ರಮಿಸುವ ಅವಕಾಶ ಸಿಕ್ಕಿದೆ.

ಈಗಾಗಲೇ ‘ಬುಕ್ ಮೈ ಶೋ’ ಆ್ಯಪ್​​ನಲ್ಲಿ ಬುಕಿಂಗ್​ಗೆ ಅವಕಾಶ ನೀಡಲಾಗಿದೆ. ಜಿಎಸ್​ಟಿ ಸೇರಿ ಟಿಕೆಟ್ ದರ 112 ರೂಪಾಯಿ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಇದನ್ನೂ ಓದಿ:

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ