AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲ್ಟಿಪ್ಲೆಕ್ಸ್​ನಲ್ಲಿ ಮತ್ತೆ 99 ರೂ.ಆಫರ್; ಯಾವಾಗಿನಿಂದ, ಯಾವ ಸಿನಿಮಾಗಳಿಗೆ? ಇಲ್ಲಿದೆ ವಿವರ

ಕಳೆದ ವರ್ಷ ಪಿವಿಆರ್​ ಹಾಗೂ ಐನಾಕ್ಸ್​ ಮಲ್ಟಿಪ್ಲೆಕ್ಸ್​ನಲ್ಲಿ 100 ರೂಪಾಯಿ ಟಿಕೆಟ್ ದರ ನಿಗದಿ ಮಾಡಲಾಯಿತು. ಈ ವೇಳೆ ಬಹುತೇಕ ಶೋಗಳು ಹೌಸ್​ಫುಲ್ ಪ್ರದರ್ಶನ ಕಂಡವು. ಈ ತಂತ್ರವನ್ನು ಮಲ್ಟಿಪ್ಲೆಕ್ಸ್​ಗಳು ಮುಂದುವರಿಸಿಕೊಂಡು ಹೋಗುತ್ತಿವೆ.

ಮಲ್ಟಿಪ್ಲೆಕ್ಸ್​ನಲ್ಲಿ ಮತ್ತೆ 99 ರೂ.ಆಫರ್; ಯಾವಾಗಿನಿಂದ, ಯಾವ ಸಿನಿಮಾಗಳಿಗೆ? ಇಲ್ಲಿದೆ ವಿವರ
ಪಿವಿಆರ್​-ಐನಾಕ್ಸ್
ರಾಜೇಶ್ ದುಗ್ಗುಮನೆ
|

Updated on: May 18, 2023 | 7:03 AM

Share

ಸಿಂಗಲ್​ ಸ್ಕ್ರೀನ್ ಥಿಯೇಟರ್​ಗಳಿಗೆ ಹೋಲಿಕೆ ಮಾಡಿದರೆ ಮಲ್ಟಿಪ್ಲೆಕ್ಸ್​​ನಲ್ಲಿ (Multiplex) ಸಿನಿಮಾ ಟಿಕೆಟ್ ದರ ಹೆಚ್ಚಿರುತ್ತದೆ. ಈ ದೂರು ಮೊದಲಿನಿಂದಲೂ ಕೇಳಿ ಬರುತ್ತಲೇ ಇದೆ. ಈಗ ಪಿವಿಆರ್ (PVR)  ಹಾಗೂ ಐನಾಕ್ಸ್ ಕಡೆಯಿಂದ ಬಂಪರ್ ಆಫರ್ ಸಿಗುತ್ತಿದೆ. ಕೆಲ ಕನ್ನಡದ ಸಿನಿಮಾಗಳಿಗೆ 99 ರೂಪಾಯಿ ಟಿಕೆಟ್ ದರ ನಿಗದಿ ಮಾಡಲಾಗಿದೆ. ಮೇ 19ರಿಂದ 25ರವರೆಗೆ ಈ ಆಫರ್ ಲಭ್ಯವಿದೆ. ಆದರೆ, ಕೆಲವು ಷರತ್ತುಗಳನ್ನು ಹಾಕಲಾಗಿದೆ.

ಕಳೆದ ವರ್ಷ ಪಿವಿಆರ್​ ಹಾಗೂ ಐನಾಕ್ಸ್​ ಮಲ್ಟಿಪ್ಲೆಕ್ಸ್​ನಲ್ಲಿ 100 ರೂಪಾಯಿ ಟಿಕೆಟ್ ದರ ನಿಗದಿ ಮಾಡಲಾಯಿತು. ಈ ವೇಳೆ ಬಹುತೇಕ ಶೋಗಳು ಹೌಸ್​ಫುಲ್ ಪ್ರದರ್ಶನ ಕಂಡವು. ಈ ತಂತ್ರವನ್ನು ಮಲ್ಟಿಪ್ಲೆಕ್ಸ್​ಗಳು ಮುಂದುವರಿಸಿಕೊಂಡು ಹೋಗುತ್ತಿವೆ. ಈಗ ಕೇವಲ 99 ರೂಪಾಯಿಗೆ ಕನ್ನಡ ಸಿನಿಮಾಗಳನ್ನು ನೋಡುವ ಅವಕಾಶ ನೀಡಿದೆ. ಆದರೆ, ಎಲ್ಲಾ ಕನ್ನಡ ಸಿನಿಮಾಗಳನ್ನೂ ನೋಡಲು ಇಲ್ಲಿ ಅವಕಾಶ ಇಲ್ಲ.

ಮಲ್ಟಿಪ್ಲೆಕ್ಸ್​​ನಲ್ಲಿ ರೀ-ರಿಲೀಸ್ ಆಗುತ್ತಿರುವ ಪುನೀತ್​ ರಾಜ್​ಕುಮಾರ್ ನಟನೆಯ ‘ರಾಜಕುಮಾರ’, ಯಶ್​ ನಟನೆಯ ‘ಕೆಜಿಎಫ್-1’, ‘ಮಫ್ತಿ’, ‘ಮಾಸ್ಟರ್ ಪೀಸ್’, ‘ಗಂಧದಗುಡಿ’, ‘ಗರುಡ ಗಮನ ವೃಷಭ ವಾಹನ’ ಸಿನಿಮಾಗಳನ್ನು 99 ರೂಪಾಯಿಗೆ ನೋಡುವ ಅವಕಾಶ ಇದೆ.

ಫ್ಯಾಮಿಲಿ ಎಂಟರ್​​ಟೇನರ್ ಎನಿಸಿಕೊಂಡಿರುವ ‘ರಾಜಕುಮಾರ’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈಗ ಪುನೀತ್ ನಮ್ಮೊಂದಿಗಿಲ್ಲ. ಹೀಗಾಗಿ, ಈ ಸಿನಿಮಾನ ಥಿಯೇಟರ್​ನಲ್ಲಿ ನೋಡಿದರೆ ಪ್ರೇಕ್ಷಕರು ಭಾವುಕರಾಗೋದು ಪಕ್ಕಾ. ಇನ್ನು ಮಾಸ್ ಪ್ರಿಯರಿಗೋಸ್ಕರ ‘ಕೆಜಿಎಫ್ 1’, ‘ಮಾಸ್ಟರ್ ಪೀಸ್​’ ಸಿನಿಮಾ ಬರ್ತಿದೆ. ಶಿವಣ್ಣ ಹಾಗೂ ಶ್ರೀಮುರಳಿ ಕಾಂಬಿನೇಷನ್​ ‘ಮಫ್ತಿ’ ಕೂಡ ರಿಲೀಸ್​ ಆಗುತ್ತಿದೆ. ರಾಜ್ ಬಿ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಗರುಡ ಗಮನ ವೃಷಭ ವಾಹನ ಬಿಡುಗಡೆಯಾಗಲಿವೆ. ಈ ಮೂಲಕ ಒಂದು ವಾರಗಳ ಕಾಲ ಪಿವಿಆರ್ ಹಾಗೂ ಐನಾಕ್ಸ್ ಕನ್ನಡದ ಬ್ಲಾಕ್ ಬಸ್ಟರ್ಸ್ ಚಿತ್ರಗಳನ್ನು ಪ್ರೇಕ್ಷಕರಿಗೆ ಸಂಭ್ರಮಿಸುವ ಅವಕಾಶ ಸಿಕ್ಕಿದೆ.

ಈಗಾಗಲೇ ‘ಬುಕ್ ಮೈ ಶೋ’ ಆ್ಯಪ್​​ನಲ್ಲಿ ಬುಕಿಂಗ್​ಗೆ ಅವಕಾಶ ನೀಡಲಾಗಿದೆ. ಜಿಎಸ್​ಟಿ ಸೇರಿ ಟಿಕೆಟ್ ದರ 112 ರೂಪಾಯಿ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಇದನ್ನೂ ಓದಿ:

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್