Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲ್ಟಿಪ್ಲೆಕ್ಸ್​ನಲ್ಲಿ ಮತ್ತೆ 99 ರೂ.ಆಫರ್; ಯಾವಾಗಿನಿಂದ, ಯಾವ ಸಿನಿಮಾಗಳಿಗೆ? ಇಲ್ಲಿದೆ ವಿವರ

ಕಳೆದ ವರ್ಷ ಪಿವಿಆರ್​ ಹಾಗೂ ಐನಾಕ್ಸ್​ ಮಲ್ಟಿಪ್ಲೆಕ್ಸ್​ನಲ್ಲಿ 100 ರೂಪಾಯಿ ಟಿಕೆಟ್ ದರ ನಿಗದಿ ಮಾಡಲಾಯಿತು. ಈ ವೇಳೆ ಬಹುತೇಕ ಶೋಗಳು ಹೌಸ್​ಫುಲ್ ಪ್ರದರ್ಶನ ಕಂಡವು. ಈ ತಂತ್ರವನ್ನು ಮಲ್ಟಿಪ್ಲೆಕ್ಸ್​ಗಳು ಮುಂದುವರಿಸಿಕೊಂಡು ಹೋಗುತ್ತಿವೆ.

ಮಲ್ಟಿಪ್ಲೆಕ್ಸ್​ನಲ್ಲಿ ಮತ್ತೆ 99 ರೂ.ಆಫರ್; ಯಾವಾಗಿನಿಂದ, ಯಾವ ಸಿನಿಮಾಗಳಿಗೆ? ಇಲ್ಲಿದೆ ವಿವರ
ಪಿವಿಆರ್​-ಐನಾಕ್ಸ್
Follow us
ರಾಜೇಶ್ ದುಗ್ಗುಮನೆ
|

Updated on: May 18, 2023 | 7:03 AM

ಸಿಂಗಲ್​ ಸ್ಕ್ರೀನ್ ಥಿಯೇಟರ್​ಗಳಿಗೆ ಹೋಲಿಕೆ ಮಾಡಿದರೆ ಮಲ್ಟಿಪ್ಲೆಕ್ಸ್​​ನಲ್ಲಿ (Multiplex) ಸಿನಿಮಾ ಟಿಕೆಟ್ ದರ ಹೆಚ್ಚಿರುತ್ತದೆ. ಈ ದೂರು ಮೊದಲಿನಿಂದಲೂ ಕೇಳಿ ಬರುತ್ತಲೇ ಇದೆ. ಈಗ ಪಿವಿಆರ್ (PVR)  ಹಾಗೂ ಐನಾಕ್ಸ್ ಕಡೆಯಿಂದ ಬಂಪರ್ ಆಫರ್ ಸಿಗುತ್ತಿದೆ. ಕೆಲ ಕನ್ನಡದ ಸಿನಿಮಾಗಳಿಗೆ 99 ರೂಪಾಯಿ ಟಿಕೆಟ್ ದರ ನಿಗದಿ ಮಾಡಲಾಗಿದೆ. ಮೇ 19ರಿಂದ 25ರವರೆಗೆ ಈ ಆಫರ್ ಲಭ್ಯವಿದೆ. ಆದರೆ, ಕೆಲವು ಷರತ್ತುಗಳನ್ನು ಹಾಕಲಾಗಿದೆ.

ಕಳೆದ ವರ್ಷ ಪಿವಿಆರ್​ ಹಾಗೂ ಐನಾಕ್ಸ್​ ಮಲ್ಟಿಪ್ಲೆಕ್ಸ್​ನಲ್ಲಿ 100 ರೂಪಾಯಿ ಟಿಕೆಟ್ ದರ ನಿಗದಿ ಮಾಡಲಾಯಿತು. ಈ ವೇಳೆ ಬಹುತೇಕ ಶೋಗಳು ಹೌಸ್​ಫುಲ್ ಪ್ರದರ್ಶನ ಕಂಡವು. ಈ ತಂತ್ರವನ್ನು ಮಲ್ಟಿಪ್ಲೆಕ್ಸ್​ಗಳು ಮುಂದುವರಿಸಿಕೊಂಡು ಹೋಗುತ್ತಿವೆ. ಈಗ ಕೇವಲ 99 ರೂಪಾಯಿಗೆ ಕನ್ನಡ ಸಿನಿಮಾಗಳನ್ನು ನೋಡುವ ಅವಕಾಶ ನೀಡಿದೆ. ಆದರೆ, ಎಲ್ಲಾ ಕನ್ನಡ ಸಿನಿಮಾಗಳನ್ನೂ ನೋಡಲು ಇಲ್ಲಿ ಅವಕಾಶ ಇಲ್ಲ.

ಮಲ್ಟಿಪ್ಲೆಕ್ಸ್​​ನಲ್ಲಿ ರೀ-ರಿಲೀಸ್ ಆಗುತ್ತಿರುವ ಪುನೀತ್​ ರಾಜ್​ಕುಮಾರ್ ನಟನೆಯ ‘ರಾಜಕುಮಾರ’, ಯಶ್​ ನಟನೆಯ ‘ಕೆಜಿಎಫ್-1’, ‘ಮಫ್ತಿ’, ‘ಮಾಸ್ಟರ್ ಪೀಸ್’, ‘ಗಂಧದಗುಡಿ’, ‘ಗರುಡ ಗಮನ ವೃಷಭ ವಾಹನ’ ಸಿನಿಮಾಗಳನ್ನು 99 ರೂಪಾಯಿಗೆ ನೋಡುವ ಅವಕಾಶ ಇದೆ.

ಫ್ಯಾಮಿಲಿ ಎಂಟರ್​​ಟೇನರ್ ಎನಿಸಿಕೊಂಡಿರುವ ‘ರಾಜಕುಮಾರ’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈಗ ಪುನೀತ್ ನಮ್ಮೊಂದಿಗಿಲ್ಲ. ಹೀಗಾಗಿ, ಈ ಸಿನಿಮಾನ ಥಿಯೇಟರ್​ನಲ್ಲಿ ನೋಡಿದರೆ ಪ್ರೇಕ್ಷಕರು ಭಾವುಕರಾಗೋದು ಪಕ್ಕಾ. ಇನ್ನು ಮಾಸ್ ಪ್ರಿಯರಿಗೋಸ್ಕರ ‘ಕೆಜಿಎಫ್ 1’, ‘ಮಾಸ್ಟರ್ ಪೀಸ್​’ ಸಿನಿಮಾ ಬರ್ತಿದೆ. ಶಿವಣ್ಣ ಹಾಗೂ ಶ್ರೀಮುರಳಿ ಕಾಂಬಿನೇಷನ್​ ‘ಮಫ್ತಿ’ ಕೂಡ ರಿಲೀಸ್​ ಆಗುತ್ತಿದೆ. ರಾಜ್ ಬಿ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಗರುಡ ಗಮನ ವೃಷಭ ವಾಹನ ಬಿಡುಗಡೆಯಾಗಲಿವೆ. ಈ ಮೂಲಕ ಒಂದು ವಾರಗಳ ಕಾಲ ಪಿವಿಆರ್ ಹಾಗೂ ಐನಾಕ್ಸ್ ಕನ್ನಡದ ಬ್ಲಾಕ್ ಬಸ್ಟರ್ಸ್ ಚಿತ್ರಗಳನ್ನು ಪ್ರೇಕ್ಷಕರಿಗೆ ಸಂಭ್ರಮಿಸುವ ಅವಕಾಶ ಸಿಕ್ಕಿದೆ.

ಈಗಾಗಲೇ ‘ಬುಕ್ ಮೈ ಶೋ’ ಆ್ಯಪ್​​ನಲ್ಲಿ ಬುಕಿಂಗ್​ಗೆ ಅವಕಾಶ ನೀಡಲಾಗಿದೆ. ಜಿಎಸ್​ಟಿ ಸೇರಿ ಟಿಕೆಟ್ ದರ 112 ರೂಪಾಯಿ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಇದನ್ನೂ ಓದಿ:

Daily Horoscope: ಸಿಂಹ ರಾಶಿಯವರಿಗೆ ಇಂದು ಧನಯೋಗ ಮತ್ತು ಆರ್ಥಿಕ ಪ್ರಗತಿ
Daily Horoscope: ಸಿಂಹ ರಾಶಿಯವರಿಗೆ ಇಂದು ಧನಯೋಗ ಮತ್ತು ಆರ್ಥಿಕ ಪ್ರಗತಿ
ಫ್ರೀಡ್​​ಮ್ಯಾನ್ ಪೋಡ್​ಕ್ಯಾಸ್ಟ್​​​: ಆಡಳಿತ ಸುಧಾರಣೆ ಬಗ್ಗೆ ಮೋದಿ ಮಾತು
ಫ್ರೀಡ್​​ಮ್ಯಾನ್ ಪೋಡ್​ಕ್ಯಾಸ್ಟ್​​​: ಆಡಳಿತ ಸುಧಾರಣೆ ಬಗ್ಗೆ ಮೋದಿ ಮಾತು
ಹೊಸ ನಟರು ಬಂದರೂ ಪುನೀತ್ ಫ್ಯಾನ್ಸ್ ನಿಯತ್ತು ಬದಲಾಗಲ್ಲ: ರಮ್ಯಾ ಮೆಚ್ಚುಗೆ
ಹೊಸ ನಟರು ಬಂದರೂ ಪುನೀತ್ ಫ್ಯಾನ್ಸ್ ನಿಯತ್ತು ಬದಲಾಗಲ್ಲ: ರಮ್ಯಾ ಮೆಚ್ಚುಗೆ
ಹಾಸನ: ಸತತ ನಾಲ್ಕು ಗಂಟೆಗಳ ಬಳಿಕ ಕಾಡಾನೆ ಸೆರೆ
ಹಾಸನ: ಸತತ ನಾಲ್ಕು ಗಂಟೆಗಳ ಬಳಿಕ ಕಾಡಾನೆ ಸೆರೆ
ಅಂಬಿ ಮೊಮ್ಮಗನ ನಾಮಕರಣ: ವಿಶೇಷ ಗಿಫ್ಟ್ ನೀಡಿದ ಕಿಚ್ಚ ಸುದೀಪ್
ಅಂಬಿ ಮೊಮ್ಮಗನ ನಾಮಕರಣ: ವಿಶೇಷ ಗಿಫ್ಟ್ ನೀಡಿದ ಕಿಚ್ಚ ಸುದೀಪ್
ಮಹಾರಾಷ್ಟ್ರ: ಚಾಲಕನಿಗೆ ಹೃದಯಾಘಾತ, 10 ವಾಹನಗಳಿಗೆ ಡಿಕ್ಕಿ ಹೊಡೆದ ಕಾರು
ಮಹಾರಾಷ್ಟ್ರ: ಚಾಲಕನಿಗೆ ಹೃದಯಾಘಾತ, 10 ವಾಹನಗಳಿಗೆ ಡಿಕ್ಕಿ ಹೊಡೆದ ಕಾರು
ಮಲ್ಲಿಕಾರ್ಜುನ ಖರ್ಗೆ ಜತೆ ಡಿಕೆ ಶಿವಕುಮಾರ್ ದಿಢೀರ್ ಪಯಣ!
ಮಲ್ಲಿಕಾರ್ಜುನ ಖರ್ಗೆ ಜತೆ ಡಿಕೆ ಶಿವಕುಮಾರ್ ದಿಢೀರ್ ಪಯಣ!
ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಗಣೇಶ್ ಆಚಾರ್ಯ ಮಾತು
ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಗಣೇಶ್ ಆಚಾರ್ಯ ಮಾತು
ಮಧ್ಯಪ್ರದೇಶದ ಸರ್ಕಾರಿ ಆಸ್ಪತ್ರೆಯ ಹೆರಿಗೆ ವಾರ್ಡ್​ನಲ್ಲಿ ಅಗ್ನಿ ಅವಘಡ
ಮಧ್ಯಪ್ರದೇಶದ ಸರ್ಕಾರಿ ಆಸ್ಪತ್ರೆಯ ಹೆರಿಗೆ ವಾರ್ಡ್​ನಲ್ಲಿ ಅಗ್ನಿ ಅವಘಡ
ಒಂದೇ ಓವರ್​ನಲ್ಲಿ 6 ಸಿಕ್ಸ್​: ಏಕದಿನ ಕ್ರಿಕೆಟ್​ನ ಮೊದಲ ವಿಶ್ವ ದಾಖಲೆ
ಒಂದೇ ಓವರ್​ನಲ್ಲಿ 6 ಸಿಕ್ಸ್​: ಏಕದಿನ ಕ್ರಿಕೆಟ್​ನ ಮೊದಲ ವಿಶ್ವ ದಾಖಲೆ