AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲ್ಟಿಪ್ಲೆಕ್ಸ್​ನಲ್ಲಿ ಮತ್ತೆ 99 ರೂ.ಆಫರ್; ಯಾವಾಗಿನಿಂದ, ಯಾವ ಸಿನಿಮಾಗಳಿಗೆ? ಇಲ್ಲಿದೆ ವಿವರ

ಕಳೆದ ವರ್ಷ ಪಿವಿಆರ್​ ಹಾಗೂ ಐನಾಕ್ಸ್​ ಮಲ್ಟಿಪ್ಲೆಕ್ಸ್​ನಲ್ಲಿ 100 ರೂಪಾಯಿ ಟಿಕೆಟ್ ದರ ನಿಗದಿ ಮಾಡಲಾಯಿತು. ಈ ವೇಳೆ ಬಹುತೇಕ ಶೋಗಳು ಹೌಸ್​ಫುಲ್ ಪ್ರದರ್ಶನ ಕಂಡವು. ಈ ತಂತ್ರವನ್ನು ಮಲ್ಟಿಪ್ಲೆಕ್ಸ್​ಗಳು ಮುಂದುವರಿಸಿಕೊಂಡು ಹೋಗುತ್ತಿವೆ.

ಮಲ್ಟಿಪ್ಲೆಕ್ಸ್​ನಲ್ಲಿ ಮತ್ತೆ 99 ರೂ.ಆಫರ್; ಯಾವಾಗಿನಿಂದ, ಯಾವ ಸಿನಿಮಾಗಳಿಗೆ? ಇಲ್ಲಿದೆ ವಿವರ
ಪಿವಿಆರ್​-ಐನಾಕ್ಸ್
ರಾಜೇಶ್ ದುಗ್ಗುಮನೆ
|

Updated on: May 18, 2023 | 7:03 AM

Share

ಸಿಂಗಲ್​ ಸ್ಕ್ರೀನ್ ಥಿಯೇಟರ್​ಗಳಿಗೆ ಹೋಲಿಕೆ ಮಾಡಿದರೆ ಮಲ್ಟಿಪ್ಲೆಕ್ಸ್​​ನಲ್ಲಿ (Multiplex) ಸಿನಿಮಾ ಟಿಕೆಟ್ ದರ ಹೆಚ್ಚಿರುತ್ತದೆ. ಈ ದೂರು ಮೊದಲಿನಿಂದಲೂ ಕೇಳಿ ಬರುತ್ತಲೇ ಇದೆ. ಈಗ ಪಿವಿಆರ್ (PVR)  ಹಾಗೂ ಐನಾಕ್ಸ್ ಕಡೆಯಿಂದ ಬಂಪರ್ ಆಫರ್ ಸಿಗುತ್ತಿದೆ. ಕೆಲ ಕನ್ನಡದ ಸಿನಿಮಾಗಳಿಗೆ 99 ರೂಪಾಯಿ ಟಿಕೆಟ್ ದರ ನಿಗದಿ ಮಾಡಲಾಗಿದೆ. ಮೇ 19ರಿಂದ 25ರವರೆಗೆ ಈ ಆಫರ್ ಲಭ್ಯವಿದೆ. ಆದರೆ, ಕೆಲವು ಷರತ್ತುಗಳನ್ನು ಹಾಕಲಾಗಿದೆ.

ಕಳೆದ ವರ್ಷ ಪಿವಿಆರ್​ ಹಾಗೂ ಐನಾಕ್ಸ್​ ಮಲ್ಟಿಪ್ಲೆಕ್ಸ್​ನಲ್ಲಿ 100 ರೂಪಾಯಿ ಟಿಕೆಟ್ ದರ ನಿಗದಿ ಮಾಡಲಾಯಿತು. ಈ ವೇಳೆ ಬಹುತೇಕ ಶೋಗಳು ಹೌಸ್​ಫುಲ್ ಪ್ರದರ್ಶನ ಕಂಡವು. ಈ ತಂತ್ರವನ್ನು ಮಲ್ಟಿಪ್ಲೆಕ್ಸ್​ಗಳು ಮುಂದುವರಿಸಿಕೊಂಡು ಹೋಗುತ್ತಿವೆ. ಈಗ ಕೇವಲ 99 ರೂಪಾಯಿಗೆ ಕನ್ನಡ ಸಿನಿಮಾಗಳನ್ನು ನೋಡುವ ಅವಕಾಶ ನೀಡಿದೆ. ಆದರೆ, ಎಲ್ಲಾ ಕನ್ನಡ ಸಿನಿಮಾಗಳನ್ನೂ ನೋಡಲು ಇಲ್ಲಿ ಅವಕಾಶ ಇಲ್ಲ.

ಮಲ್ಟಿಪ್ಲೆಕ್ಸ್​​ನಲ್ಲಿ ರೀ-ರಿಲೀಸ್ ಆಗುತ್ತಿರುವ ಪುನೀತ್​ ರಾಜ್​ಕುಮಾರ್ ನಟನೆಯ ‘ರಾಜಕುಮಾರ’, ಯಶ್​ ನಟನೆಯ ‘ಕೆಜಿಎಫ್-1’, ‘ಮಫ್ತಿ’, ‘ಮಾಸ್ಟರ್ ಪೀಸ್’, ‘ಗಂಧದಗುಡಿ’, ‘ಗರುಡ ಗಮನ ವೃಷಭ ವಾಹನ’ ಸಿನಿಮಾಗಳನ್ನು 99 ರೂಪಾಯಿಗೆ ನೋಡುವ ಅವಕಾಶ ಇದೆ.

ಫ್ಯಾಮಿಲಿ ಎಂಟರ್​​ಟೇನರ್ ಎನಿಸಿಕೊಂಡಿರುವ ‘ರಾಜಕುಮಾರ’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈಗ ಪುನೀತ್ ನಮ್ಮೊಂದಿಗಿಲ್ಲ. ಹೀಗಾಗಿ, ಈ ಸಿನಿಮಾನ ಥಿಯೇಟರ್​ನಲ್ಲಿ ನೋಡಿದರೆ ಪ್ರೇಕ್ಷಕರು ಭಾವುಕರಾಗೋದು ಪಕ್ಕಾ. ಇನ್ನು ಮಾಸ್ ಪ್ರಿಯರಿಗೋಸ್ಕರ ‘ಕೆಜಿಎಫ್ 1’, ‘ಮಾಸ್ಟರ್ ಪೀಸ್​’ ಸಿನಿಮಾ ಬರ್ತಿದೆ. ಶಿವಣ್ಣ ಹಾಗೂ ಶ್ರೀಮುರಳಿ ಕಾಂಬಿನೇಷನ್​ ‘ಮಫ್ತಿ’ ಕೂಡ ರಿಲೀಸ್​ ಆಗುತ್ತಿದೆ. ರಾಜ್ ಬಿ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಗರುಡ ಗಮನ ವೃಷಭ ವಾಹನ ಬಿಡುಗಡೆಯಾಗಲಿವೆ. ಈ ಮೂಲಕ ಒಂದು ವಾರಗಳ ಕಾಲ ಪಿವಿಆರ್ ಹಾಗೂ ಐನಾಕ್ಸ್ ಕನ್ನಡದ ಬ್ಲಾಕ್ ಬಸ್ಟರ್ಸ್ ಚಿತ್ರಗಳನ್ನು ಪ್ರೇಕ್ಷಕರಿಗೆ ಸಂಭ್ರಮಿಸುವ ಅವಕಾಶ ಸಿಕ್ಕಿದೆ.

ಈಗಾಗಲೇ ‘ಬುಕ್ ಮೈ ಶೋ’ ಆ್ಯಪ್​​ನಲ್ಲಿ ಬುಕಿಂಗ್​ಗೆ ಅವಕಾಶ ನೀಡಲಾಗಿದೆ. ಜಿಎಸ್​ಟಿ ಸೇರಿ ಟಿಕೆಟ್ ದರ 112 ರೂಪಾಯಿ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಇದನ್ನೂ ಓದಿ:

Follow Us
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​