ಮಲ್ಟಿಪ್ಲೆಕ್ಸ್​ನಲ್ಲಿ ಮತ್ತೆ 99 ರೂ.ಆಫರ್; ಯಾವಾಗಿನಿಂದ, ಯಾವ ಸಿನಿಮಾಗಳಿಗೆ? ಇಲ್ಲಿದೆ ವಿವರ

ಕಳೆದ ವರ್ಷ ಪಿವಿಆರ್​ ಹಾಗೂ ಐನಾಕ್ಸ್​ ಮಲ್ಟಿಪ್ಲೆಕ್ಸ್​ನಲ್ಲಿ 100 ರೂಪಾಯಿ ಟಿಕೆಟ್ ದರ ನಿಗದಿ ಮಾಡಲಾಯಿತು. ಈ ವೇಳೆ ಬಹುತೇಕ ಶೋಗಳು ಹೌಸ್​ಫುಲ್ ಪ್ರದರ್ಶನ ಕಂಡವು. ಈ ತಂತ್ರವನ್ನು ಮಲ್ಟಿಪ್ಲೆಕ್ಸ್​ಗಳು ಮುಂದುವರಿಸಿಕೊಂಡು ಹೋಗುತ್ತಿವೆ.

ಮಲ್ಟಿಪ್ಲೆಕ್ಸ್​ನಲ್ಲಿ ಮತ್ತೆ 99 ರೂ.ಆಫರ್; ಯಾವಾಗಿನಿಂದ, ಯಾವ ಸಿನಿಮಾಗಳಿಗೆ? ಇಲ್ಲಿದೆ ವಿವರ
ಪಿವಿಆರ್​-ಐನಾಕ್ಸ್
Follow us
|

Updated on: May 18, 2023 | 7:03 AM

ಸಿಂಗಲ್​ ಸ್ಕ್ರೀನ್ ಥಿಯೇಟರ್​ಗಳಿಗೆ ಹೋಲಿಕೆ ಮಾಡಿದರೆ ಮಲ್ಟಿಪ್ಲೆಕ್ಸ್​​ನಲ್ಲಿ (Multiplex) ಸಿನಿಮಾ ಟಿಕೆಟ್ ದರ ಹೆಚ್ಚಿರುತ್ತದೆ. ಈ ದೂರು ಮೊದಲಿನಿಂದಲೂ ಕೇಳಿ ಬರುತ್ತಲೇ ಇದೆ. ಈಗ ಪಿವಿಆರ್ (PVR)  ಹಾಗೂ ಐನಾಕ್ಸ್ ಕಡೆಯಿಂದ ಬಂಪರ್ ಆಫರ್ ಸಿಗುತ್ತಿದೆ. ಕೆಲ ಕನ್ನಡದ ಸಿನಿಮಾಗಳಿಗೆ 99 ರೂಪಾಯಿ ಟಿಕೆಟ್ ದರ ನಿಗದಿ ಮಾಡಲಾಗಿದೆ. ಮೇ 19ರಿಂದ 25ರವರೆಗೆ ಈ ಆಫರ್ ಲಭ್ಯವಿದೆ. ಆದರೆ, ಕೆಲವು ಷರತ್ತುಗಳನ್ನು ಹಾಕಲಾಗಿದೆ.

ಕಳೆದ ವರ್ಷ ಪಿವಿಆರ್​ ಹಾಗೂ ಐನಾಕ್ಸ್​ ಮಲ್ಟಿಪ್ಲೆಕ್ಸ್​ನಲ್ಲಿ 100 ರೂಪಾಯಿ ಟಿಕೆಟ್ ದರ ನಿಗದಿ ಮಾಡಲಾಯಿತು. ಈ ವೇಳೆ ಬಹುತೇಕ ಶೋಗಳು ಹೌಸ್​ಫುಲ್ ಪ್ರದರ್ಶನ ಕಂಡವು. ಈ ತಂತ್ರವನ್ನು ಮಲ್ಟಿಪ್ಲೆಕ್ಸ್​ಗಳು ಮುಂದುವರಿಸಿಕೊಂಡು ಹೋಗುತ್ತಿವೆ. ಈಗ ಕೇವಲ 99 ರೂಪಾಯಿಗೆ ಕನ್ನಡ ಸಿನಿಮಾಗಳನ್ನು ನೋಡುವ ಅವಕಾಶ ನೀಡಿದೆ. ಆದರೆ, ಎಲ್ಲಾ ಕನ್ನಡ ಸಿನಿಮಾಗಳನ್ನೂ ನೋಡಲು ಇಲ್ಲಿ ಅವಕಾಶ ಇಲ್ಲ.

ಮಲ್ಟಿಪ್ಲೆಕ್ಸ್​​ನಲ್ಲಿ ರೀ-ರಿಲೀಸ್ ಆಗುತ್ತಿರುವ ಪುನೀತ್​ ರಾಜ್​ಕುಮಾರ್ ನಟನೆಯ ‘ರಾಜಕುಮಾರ’, ಯಶ್​ ನಟನೆಯ ‘ಕೆಜಿಎಫ್-1’, ‘ಮಫ್ತಿ’, ‘ಮಾಸ್ಟರ್ ಪೀಸ್’, ‘ಗಂಧದಗುಡಿ’, ‘ಗರುಡ ಗಮನ ವೃಷಭ ವಾಹನ’ ಸಿನಿಮಾಗಳನ್ನು 99 ರೂಪಾಯಿಗೆ ನೋಡುವ ಅವಕಾಶ ಇದೆ.

ಫ್ಯಾಮಿಲಿ ಎಂಟರ್​​ಟೇನರ್ ಎನಿಸಿಕೊಂಡಿರುವ ‘ರಾಜಕುಮಾರ’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈಗ ಪುನೀತ್ ನಮ್ಮೊಂದಿಗಿಲ್ಲ. ಹೀಗಾಗಿ, ಈ ಸಿನಿಮಾನ ಥಿಯೇಟರ್​ನಲ್ಲಿ ನೋಡಿದರೆ ಪ್ರೇಕ್ಷಕರು ಭಾವುಕರಾಗೋದು ಪಕ್ಕಾ. ಇನ್ನು ಮಾಸ್ ಪ್ರಿಯರಿಗೋಸ್ಕರ ‘ಕೆಜಿಎಫ್ 1’, ‘ಮಾಸ್ಟರ್ ಪೀಸ್​’ ಸಿನಿಮಾ ಬರ್ತಿದೆ. ಶಿವಣ್ಣ ಹಾಗೂ ಶ್ರೀಮುರಳಿ ಕಾಂಬಿನೇಷನ್​ ‘ಮಫ್ತಿ’ ಕೂಡ ರಿಲೀಸ್​ ಆಗುತ್ತಿದೆ. ರಾಜ್ ಬಿ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಗರುಡ ಗಮನ ವೃಷಭ ವಾಹನ ಬಿಡುಗಡೆಯಾಗಲಿವೆ. ಈ ಮೂಲಕ ಒಂದು ವಾರಗಳ ಕಾಲ ಪಿವಿಆರ್ ಹಾಗೂ ಐನಾಕ್ಸ್ ಕನ್ನಡದ ಬ್ಲಾಕ್ ಬಸ್ಟರ್ಸ್ ಚಿತ್ರಗಳನ್ನು ಪ್ರೇಕ್ಷಕರಿಗೆ ಸಂಭ್ರಮಿಸುವ ಅವಕಾಶ ಸಿಕ್ಕಿದೆ.

ಈಗಾಗಲೇ ‘ಬುಕ್ ಮೈ ಶೋ’ ಆ್ಯಪ್​​ನಲ್ಲಿ ಬುಕಿಂಗ್​ಗೆ ಅವಕಾಶ ನೀಡಲಾಗಿದೆ. ಜಿಎಸ್​ಟಿ ಸೇರಿ ಟಿಕೆಟ್ ದರ 112 ರೂಪಾಯಿ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಇದನ್ನೂ ಓದಿ:

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ