AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabzaa: ನಾರ್ತ್​ ಅಮೆರಿಕದಲ್ಲಿ ಕನ್ನಡದ ‘ಕಬ್ಜ’ ಚಿತ್ರಕ್ಕೆ ಭಾರಿ ಡಿಮ್ಯಾಂಡ್​; ರಿಲೀಸ್​ಗೆ ಭರ್ಜರಿ ತಯಾರಿ

R Chandru | Upendra: ‘ಕಬ್ಜ’ ಸಿನಿಮಾಗೆ ಈಗ ಕೊನೇ ಹಂತದ ಕೆಲಸಗಳು ನಡೆಯುತ್ತಿವೆ. ಆರ್​. ಚಂದ್ರು ನಿರ್ದೇಶನ ಮಾಡಿರುವ ಈ ಚಿತ್ರದ ಪ್ರೀ-ರಿಲೀಸ್​ ಬಿಸ್ನೆಸ್​ ಚೆನ್ನಾಗಿ ಆಗುತ್ತಿದೆ.

Kabzaa: ನಾರ್ತ್​ ಅಮೆರಿಕದಲ್ಲಿ ಕನ್ನಡದ ‘ಕಬ್ಜ’ ಚಿತ್ರಕ್ಕೆ ಭಾರಿ ಡಿಮ್ಯಾಂಡ್​; ರಿಲೀಸ್​ಗೆ ಭರ್ಜರಿ ತಯಾರಿ
ಉಪೇಂದ್ರ
ಮದನ್​ ಕುಮಾರ್​
|

Updated on:Feb 10, 2023 | 4:36 PM

Share

ಕನ್ನಡದ ಸಿನಿಮಾಗಳಿಗೆ (Sandalwood Movies) ಜಾಗತಿಕ ಮಟ್ಟದಲ್ಲಿ ಬೇಡಿಕೆ ಬಂದಿದೆ. ‘ಕೆಜಿಎಫ್​: ಚಾಪ್ಟರ್​ 2’, ‘ಕಾಂತಾರ’ ಸಿನಿಮಾಗಳು ಅಬ್ಬರಿಸಿದ ಬಳಿಕ ಕ್ರೇಜ್​ ಇನ್ನೂ ಜೋರಾಯಿತು. ಚಂದನವನದಿಂದ ಮುಂಬರುವ ಸಿನಿಮಾಗಳ ಬಗ್ಗೆ ವಿದೇಶದಲ್ಲಿನ ಪ್ರೇಕ್ಷಕರಿಗೂ ನಿರೀಕ್ಷೆ ಇದೆ. ಆ ಪೈಕಿ ಆರ್​. ಚಂದ್ರು (R Chandru) ನಿರ್ದೇಶನದ ‘ಕಬ್ಜ’ ಚಿತ್ರವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲು ವಿದೇಶದ ಪ್ರೇಕ್ಷಕರು ಸಜ್ಜಾಗಿದ್ದಾರೆ. ನಾರ್ತ್​ ಅಮೆರಿಕದಲ್ಲಿ ಈ ಸಿನಿಮಾ ಭಾರಿ ಓಪನಿಂಗ್​ ಪಡೆಯುವ ಸಾಧ್ಯತೆ ದಟ್ಟವಾಗಿದೆ. ಅಲ್ಲಿನ ದೊಡ್ಡ ಸಂಸ್ಥೆಗಳು ‘ಕಬ್ಜ’ (Kabzaa Movie) ವಿತರಣಾ ಹಕ್ಕುಗಳನ್ನು ಪಡೆಯುಲು ಮುಂದೆ ಬಂದಿವೆ. ‘ಪ್ರೈಂ ಶೋ ಎಂಟರ್​ಟೇನ್ಮೆಂಟ್​’ ಸಂಸ್ಥೆಯು ಈ ಚಿತ್ರದ ಹಕ್ಕುಗಳನ್ನು ಪಡೆದುಕೊಂಡಿದ್ದು, 450ಕ್ಕೂ ಹೆಚ್ಚು ಥಿಯೇಟರ್​ಗಳಲ್ಲಿ ಬಿಡುಗಡೆ ಮಾಡಲಿದೆ.

ಉಪೇಂದ್ರ ಮತ್ತು ಸುದೀಪ್​ ಅವರು ‘ಕಬ್ಜ’ ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡಿದ್ದಾರೆ. ನಾಯಕಿಯಾಗಿ ಶ್ರೀಯಾ ಶರಣ್​ ನಟಿಸಿದ್ದಾರೆ. ಅದ್ದೂರಿ ಮೇಕಿಂಗ್​ ಕಾರಣದಿಂದ ಈ ಚಿತ್ರ ಗಮನ ಸೆಳೆಯುತ್ತಿದೆ. ಟೀಸರ್​ ಬಿಡುಗಡೆ ಆದಾಗಿನಿಂದಲೂ ಈ ಸಿನಿಮಾ ಇನ್ನಿಲ್ಲದಷ್ಟು ಹೈಪ್​ ಸೃಷ್ಟಿ ಮಾಡಿದೆ. ಇತ್ತೀಚೆಗೆ ಬಂದ ಟೈಟಲ್​ ಟ್ರ್ಯಾಕ್​ ಕೂಡ ದೂಳೆಬ್ಬಿಸಿದೆ. ಅದರಿಂದ ‘ಕಬ್ಜ’ ಕ್ರೇಜ್​ ಇನ್ನೂ ಜೋರಾಗಿದೆ.

ಇದನ್ನೂ ಓದಿ: Kabzaa Tittle Song: ರಿಲೀಸ್ ಆಯ್ತು ‘ಕಬ್ಜ’ ಟೈಟಲ್ ಸಾಂಗ್​; ರವಿ ಬಸ್ರೂರ್ ಕಮಾಲ್

ಇದನ್ನೂ ಓದಿ
Image
‘ಈ ಹಬ್ಬಕ್ಕೆ ಉಪ್ಪಿ ಇರಲೇಬೇಕು, ಅವ್ರು ಪೂಜೆ ಮಾಡಿದ್ರೆ ಮಾತ್ರ ನಮಗೆ ಸಂತೋಷ’: ಪ್ರಿಯಾಂಕಾ ಉಪೇಂದ್ರ
Image
ಉಪೇಂದ್ರ ನಿರ್ದೇಶನದ ‘ಯುಐ’ ಚಿತ್ರದ ಸೆಟ್​​ಗೆ ಶಿವರಾಜ್​ಕುಮಾರ್​-ಗೀತಾ ಭೇಟಿ
Image
Upendra: ‘ಯುಐ’ ಚಿತ್ರಕ್ಕೆ ಶೂಟಿಂಗ್​ ಶುರು; ಸೆಟ್​ನಲ್ಲಿ ಡೈರೆಕ್ಟರ್​ ಕ್ಯಾಪ್​ ಧರಿಸಿ ನಿಂತ ಉಪೇಂದ್ರ
Image
Kabza Movie: 7 ಭಾಷೆಗಳಲ್ಲಿ ಧೂಳೆಬ್ಬಿಸಲಿದೆ ಉಪೇಂದ್ರ ನಟನೆಯ ‘ಕಬ್ಜ’ ಸಿನಿಮಾ; ಭರದಿಂದ ಸಾಗುತ್ತಿದೆ ಡಬ್ಬಿಂಗ್​ ಕೆಲಸ

‘ಕಬ್ಜ’ ಕೇವಲ ಕನ್ನಡದ ಸಿನಿಮಾ ಅಲ್ಲ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಬಿಡುಗಡೆ ಆಗುತ್ತಿದೆ. ತೆಲುಗು, ತಮಿಳು, ಮಲಯಾಳ, ಹಿಂದಿ ಮುಂತಾದ ಭಾಷೆಗಳಿಗೆ ಡಬ್​ ಆಗಿ ತೆರೆಕಾಣುತ್ತಿದೆ. ಅದ್ದೂರಿ ಬಜೆಟ್​ನಲ್ಲಿ ಆರ್​. ಚಂದ್ರು ಅವರೇ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರಕ್ಕೀಗ ಕೊನೇ ಹಂತದ ಕೆಲಸಗಳು ನಡೆಯುತ್ತಿವೆ. ಪ್ರೀ-ರಿಲೀಸ್​ ಬಿಸ್ನೆಸ್​ ಚೆನ್ನಾಗಿ ಆಗುತ್ತಿದೆ.

ಇದನ್ನೂ ಓದಿ: ಪುನೀತ್ ರಾಜ್​ಕುಮಾರ್ ಹುಟ್ಟುಹಬ್ಬದ ದಿನವೇ ಉಪೇಂದ್ರ-ಸುದೀಪ್​ ನಟನೆಯ ‘ಕಬ್ಜ’ ಸಿನಿಮಾ ರಿಲೀಸ್

ಮಾರ್ಚ್​ 17 ಎಂದರೆ ಕನ್ನಡ ಸಿನಿಪ್ರಿಯರ ಪಾಲಿಗೆ ಸಖತ್​ ವಿಶೇಷ. ಅಂದು ‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ ಜನ್ಮದಿನ. ಆ ಶುಭ ದಿನದಂದು ‘ಕಬ್ಜ’ ಸಿನಿಮಾ ಕೂಡ ಬಿಡುಗಡೆ ಆಗಲಿರುವುದು ವಿಶೇಷ. ಈ ಚಿತ್ರದ ಶೂಟಿಂಗ್​ ಸಂದರ್ಭದಲ್ಲಿ ಪುನೀತ್​ ರಾಜ್​ಕುಮಾರ್​ ಅವರು ಬೆನ್ನು ತಟ್ಟಿದ್ದರು. ಆ ಕಾರಣದಿಂದ ಅವರಿಗೆ ನಮನ ಸಲ್ಲಿಸುವ ರೀತಿಯಲ್ಲಿ ಅವರ ಜನ್ಮದಿನದ ಪ್ರಯುಕ್ತ ‘ಕಬ್ಜ’ ಬಿಡುಗಡೆ ಆಗಲಿದೆ.

ಇದನ್ನೂ ಓದಿ: ‘ಒಟಿಟಿಯವರು ಕಣ್ಮುಚ್ಚಿಕೊಂಡು ಕಬ್ಜ ಹಕ್ಕು ಖರೀದಿಸಿಲ್ಲ; ಟೀಕಾಕಾರರಿಗೆ ಚಂದ್ರು ಉತ್ತರ

‘ಕಬ್ಜ’ ಚಿತ್ರದ ಹಿಂದಿ ವರ್ಷನ್​ಗೆ ಸಾಕಷ್ಟು ಬೇಡಿಕೆ ಇದೆ. ಹಿಂದಿ ಮಾರುಕಟ್ಟೆಯಲ್ಲಿ ಈ ಚಿತ್ರವನ್ನು ವಿತರಣೆ ಮಾಡಲು ಖ್ಯಾತ ನಿರ್ಮಾಪಕ/ವಿತರಕ ಆನಂದ್​ ಪಂಡಿತ್​ ಸಜ್ಜಾಗಿದ್ದಾರೆ. ರೆಟ್ರೋ ಕಾಲದ ಭೂಗತ ಲೋಕದ ಕಥೆಯನ್ನು ಈ ಸಿನಿಮಾ ಹೊಂದಿರಲಿದೆ. ತೆರೆಹಿಂದೆ ಘಟಾನುಘಟಿ ತಂತ್ರಜ್ಞರು ಕೆಲಸ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:36 pm, Fri, 10 February 23

ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ