AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಬಾರಿ ಐದು ಸಿನಿಮಾ ಘೋಷಿಸಿದ ಆರ್ ಚಂದ್ರು: ಸಿನಿಮಾಗಳ ಹೆಸರೇನು?

R Chandru: ನಿರ್ದೇಶಕ ಆರ್ ಚಂದ್ರು, ತಮ್ಮದೇ ಆದ ಆರ್​ಸಿ ಸ್ಟುಡಿಯೋ ಪ್ರಾರಂಭ ಮಾಡಿದ್ದು ಒಟ್ಟಿಗೆ ಐದು ಸಿನಿಮಾಗಳನ್ನು ಘೋಷಣೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಟೈಟಲ್ ಬಿಡುಗಡೆ ಮಾಡಿದ್ದಾರೆ.

ಒಂದೇ ಬಾರಿ ಐದು ಸಿನಿಮಾ ಘೋಷಿಸಿದ ಆರ್ ಚಂದ್ರು: ಸಿನಿಮಾಗಳ ಹೆಸರೇನು?
ಆರ್ ಚಂದ್ರು
ಮಂಜುನಾಥ ಸಿ.
| Updated By: ರಾಜೇಶ್ ದುಗ್ಗುಮನೆ|

Updated on:Jan 24, 2024 | 9:31 AM

Share

ಕಬ್ಜ’ (Kabza) ಸಿನಿಮಾ ಮೂಲಕ ನಿರ್ದೇಶಕ ಹಾಗೂ ನಿರ್ಮಾಪಕನಾಗಿಯೂ ದೊಡ್ಡ ಗೆಲುವು ಸಂಪಾದಿಸಿರುವ ಆರ್ ಚಂದ್ರು ಇದೀಗ ದೊಡ್ಡ ಪ್ರಾಜೆಕ್ಟ್​ಗೆ ಕೈ ಹಾಕಿದ್ದಾರೆ. ಎಲ್ಲರೂ ಆಶ್ಚರ್ಯಪಡುವಂತೆ ಒಂದೇ ಬಾರಿ ಬರೋಬ್ಬರಿ ಐದು ಸಿನಿಮಾಗಳನ್ನು ತಮ್ಮ ಸಂಸ್ಥೆಯಿಂದ ಘೋಷಣೆ ಮಾಡಿದ್ದಾರೆ. ಇಂದು ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಿನಿಮಾಗಳಿಗೆ ಚಾಲನೆ ನೀಡಿದ್ದಾರೆ.

ಚಂದ್ರು ಅವರ ಆರ್​ಸಿ ಪ್ರೊಡಕ್ಷನ್ ಸಂಸ್ಥೆಯಿಂದ ಐದು ಸಿನಿಮಾಗಳ ಘೋಷಣೆ ಆಗಿದೆ. ‘ಡಾಗ್’, ‘ಫಾದರ್’, ‘ಪಿಓಕೆ’, ‘ಶ್ರೀ ರಾಮ ಬಾಣಂ’, ‘ಕಬ್ಜ 2’ ಸಿನಿಮಾಗಳನ್ನು ಆರ್ ಚಂದ್ರು ಇಂದು (ಜನವರಿ 23) ಘೋಷಣೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತ್ರವೇ ಅಲ್ಲದೆ ಬಾಲಿವುಡ್ ನಿರ್ಮಾಪಕ ಆನಂದ್ ಪಂಡೀತ್, ರಿಯಲ್ ಸ್ಟಾರ್ ಉಪೇಂದ್ರ, ಡಾರ್ಲಿಂಗ್ ಕೃಷ್ಣ, ಫಿಲಂ ಚೇಂಬರ್ ಅಧ್ಯಕ್ಷ ಎನ್ ಎಂ ಸುರೇಶ್, ಹೆಚ್ ಎಂ ರೇವಣ್ಣ, ನಿರ್ಮಾಪಕ ಜಾಕ್ ಮಂಜು ಅವರುಗಳು ಹಾಜರಿದ್ದು ಚಂದ್ರು ಅವರ ಪ್ರಯತ್ನಕ್ಕೆ ಶುಭಾಶಯ ಕೋರಿದ್ದಾರೆ.

ಇದನ್ನೂ ಓದಿ:Kabzaa 2: ಕಬ್ಜ 2 ಗೆ ಆರ್ ಚಂದ್ರು ಮಗನೇ ಹೀರೋ! ಇದೇನಿದು ಉಪ್ಪಿ ಹೇಳಿದ ಹೊಸ ಸುದ್ದಿ

ಐದು ಸಿನಿಮಾಗಳಲ್ಲಿ ಎಲ್ಲವನ್ನೂ ಆರ್ ಚಂದ್ರ ನಿರ್ದೇಶನ ಮಾಡುತ್ತಿಲ್ಲ. ಕೆಲವು ಹೊಸ ನಿರ್ದೇಶಕರಿಗೆ, ಹೊಸ ನಟರಿಗೆ ತಮ್ಮ ಈ ಸಿನಿಮಾಗಳಲ್ಲಿ ಅವಕಾಶ ನೀಡಲಿದ್ದಾರೆ. ‘ಕಬ್ಜ’ ಸಿನಿಮಾಕ್ಕೆ ಸಹ ನಿರ್ಮಾಪಕ ಆಗಿದ್ದ ಆರ್ ಚಂದ್ರು ಈ ಸಿನಿಮಾಗಳ ಮೂಲಕ ಪೂರ್ಣ ಪ್ರಮಾಣದ ನಿರ್ಮಾಪಕ ಆಗಲಿದ್ದಾರೆ. ‘ಕಬ್ಜ’ ಸಿನಿಮಾಕ್ಕೆ ಮುಂಚೆಯೂ ಅವರು ತಮ್ಮದೇ ನಿರ್ದೇಶನದ ಕೆಲ ಸಿನಿಮಾಗಳಿಗೆ ಸಹ ನಿರ್ಮಾಪಕರಾಗಿ ಜವಾಬ್ದಾರಿ ನಿಭಾಯಿಸಿದ್ದರು.

(ಸುದ್ದಿ ಅಪ್​ಡೇಟ್ ಆಗಲಿದೆ)

Published On - 8:59 pm, Tue, 23 January 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ