AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಣ್ಣ ಜೊತೆ ಹೊಸ ಸಿನಿಮಾ ಘೋಷಿಸಿದ ಆರ್ ಚಂದ್ರು; ಮೂಡಿತು ಕುತೂಹಲ

2010ರಲ್ಲಿ ಶಿವರಾಜ್​ಕುಮಾರ್ ನಟನೆಯ ‘ಮೈಲಾರಿ’ ಸಿನಿಮಾ ರಿಲೀಸ್ ಆಯಿತು. ಆರ್​ ಚಂದ್ರು ಅವರು ಈ ಸಿನಿಮಾ ನಿರ್ದೇಶನ ಮಾಡಿದ್ದರು. ಈ ಸಿನಿಮಾದ ಮುಹೂರ್ತ ನಡೆದು ಇಂದಿಗೆ 14 ವರ್ಷಗಳು ಕಳೆದಿವೆ. ಈ ಬಗ್ಗೆ ಆರ್ ಚಂದ್ರು ಅವರು ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡಿದ್ದಾರೆ.

ಶಿವಣ್ಣ ಜೊತೆ ಹೊಸ ಸಿನಿಮಾ ಘೋಷಿಸಿದ ಆರ್ ಚಂದ್ರು; ಮೂಡಿತು ಕುತೂಹಲ
ಚಂದ್ರು-ಶಿವಣ್ಣ
ರಾಜೇಶ್ ದುಗ್ಗುಮನೆ
|

Updated on: Apr 01, 2024 | 10:44 AM

Share

ಆರ್​ ಚಂದ್ರು (R Chandru) ಅವರು ಇತ್ತೀಚೆಗೆ ‘ಆರ್​ಸಿ ಸ್ಟುಡಿಯೋ’ ಆರಂಭಿಸಿ ಬ್ಯಾಕ್ ಟು ಬ್ಯಾಕ್ ಐದು ಸಿನಿಮಾಗಳನ್ನು ಘೋಷಣೆ ಮಾಡಿದ್ದರು. ಈ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು. ಈಗ ಈ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ಆರನೇ ಸಿನಿಮಾ ಅನೌನ್ಸ್ ಆಗಿದೆ. ಈಗ ಅವರು ಶಿವರಾಜ್​ಕುಮಾರ್ ಜೊತೆ ಕೈ ಜೋಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

2010ರಲ್ಲಿ ಶಿವರಾಜ್​ಕುಮಾರ್ ನಟನೆಯ ‘ಮೈಲಾರಿ’ ಸಿನಿಮಾ ರಿಲೀಸ್ ಆಯಿತು. ಆರ್​ ಚಂದ್ರು ಅವರು ಈ ಸಿನಿಮಾ ನಿರ್ದೇಶನ ಮಾಡಿದ್ದರು. ಈ ಸಿನಿಮಾದ ಮುಹೂರ್ತ ನಡೆದು ಇಂದಿಗೆ (ಏಪ್ರಿಲ್ 1) 14 ವರ್ಷಗಳು ಕಳೆದಿವೆ. ಈ ಬಗ್ಗೆ ಆರ್ ಚಂದ್ರು ಅವರು ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡಿದ್ದಾರೆ. ಜೊತೆಗೆ ಅವರ ಜೊತೆ ಹೊಸ ಸಿನಿಮಾ ಘೋಷಿಸಿದ್ದಾರೆ.

‘ಕನ್ನಡದ ಸೂಪರ್ ಹಿಟ್ ಚಿತ್ರ ಮೈಲಾರಿ ಮುಹೂರ್ತಕ್ಕೆ 14 ವರ್ಷಗಳು ತುಂಬಿವೆ. ಈ ಶುಭ ಸಂದರ್ಭದಲ್ಲಿ ಕರುನಾಡ ಚಕ್ರವರ್ತಿ ಡಾ. ಶಿವರಾಜ್​ಕುಮಾರ್ ಅವರ ಜೊತೆ ಹೊಸ ಚಿತ್ರ ಆರಂಭಿಸುತ್ತಿರುವುದು ಮತ್ತಷ್ಟು ಖುಷಿ ತಂದಿದೆ. ತಮ್ಮೆಲ್ಲರ ಆಶೀರ್ವಾದ ಇರಲಿ. ಧನ್ಯವಾದಗಳು, ಆರ್ ಸಿ ಸ್ಟುಡಿಯೋಸ್’ ಎಂದು ಅವರು ಬರೆದುಕೊಂಡಿದ್ದಾರೆ. ಈ ಚಿತ್ರವನ್ನು ಚಂದ್ರು ಕೇವಲ ನಿರ್ಮಾಣ ಮಾಡುತ್ತಿದ್ದಾರೋ ಅಥವಾ ನಿರ್ದೇಶನ ಕೂಡ ಅವರೇ ಮಾಡುತ್ತಾರೋ ಎನ್ನುವ ಕುತೂಹಲ ಮೂಡಿದೆ.

ಇದನ್ನೂ ಓದಿ: ‘ಕಬ್ಜ 2’ ಬರಲ್ಲ ಎಂದು ಟ್ರೋಲ್ ಮಾಡಿದವರಿಗೆ ಸರಿಯಾಗಿ ಉತ್ತರ ಕೊಟ್ಟ ಆರ್​. ಚಂದ್ರು

ಆರ್ ಚಂದ್ರು ಅವರು ಈ ಮೊದಲು ‘ಕಬ್ಜ’ ಸಿನಿಮಾ ಮಾಡಿದ್ದರು. ಉಪೇಂದ್ರ ನಟನೆಯ ಈ ಚಿತ್ರದಲ್ಲಿ ಶಿವರಾಜ್​ಕುಮಾರ್ ಹಾಗೂ ಸುದೀಪ್ ಅತಿಥಿ ಪಾತ್ರ ಮಾಡಿದ್ದರು. ಈಗಾಗಲೇ ಸುದೀಪ್ ಜೊತೆ ಚಂದ್ರು ಸಿನಿಮಾ ಘೋಷಣೆ ಮಾಡಿದ್ದರು. ಈಗ ಅವರು ಶಿವಣ್ಣ ಜೊತೆ ಸಿನಿಮಾ ಮಾಡುತ್ತಿರುವ ಬಗ್ಗೆ ತಿಳಿಸಿದ್ದಾರೆ. ಶಿವರಾಜ್​ಕುಮಾರ್ ಅವರು ಸದ್ಯ ಎಲೆಕ್ಷನ್ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಗೀತಾ ಶಿವರಾಜ್​ಕುಮಾರ್ ಅವರು ಶಿವಮೊಗ್ಗ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದು, ಅವರ ಪರವಾಗಿ ಶಿವಣ್ಣ ಪ್ರಚಾರ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ