AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಣ್ಣ ಜೊತೆ ಹೊಸ ಸಿನಿಮಾ ಘೋಷಿಸಿದ ಆರ್ ಚಂದ್ರು; ಮೂಡಿತು ಕುತೂಹಲ

2010ರಲ್ಲಿ ಶಿವರಾಜ್​ಕುಮಾರ್ ನಟನೆಯ ‘ಮೈಲಾರಿ’ ಸಿನಿಮಾ ರಿಲೀಸ್ ಆಯಿತು. ಆರ್​ ಚಂದ್ರು ಅವರು ಈ ಸಿನಿಮಾ ನಿರ್ದೇಶನ ಮಾಡಿದ್ದರು. ಈ ಸಿನಿಮಾದ ಮುಹೂರ್ತ ನಡೆದು ಇಂದಿಗೆ 14 ವರ್ಷಗಳು ಕಳೆದಿವೆ. ಈ ಬಗ್ಗೆ ಆರ್ ಚಂದ್ರು ಅವರು ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡಿದ್ದಾರೆ.

ಶಿವಣ್ಣ ಜೊತೆ ಹೊಸ ಸಿನಿಮಾ ಘೋಷಿಸಿದ ಆರ್ ಚಂದ್ರು; ಮೂಡಿತು ಕುತೂಹಲ
ಚಂದ್ರು-ಶಿವಣ್ಣ
ರಾಜೇಶ್ ದುಗ್ಗುಮನೆ
|

Updated on: Apr 01, 2024 | 10:44 AM

Share

ಆರ್​ ಚಂದ್ರು (R Chandru) ಅವರು ಇತ್ತೀಚೆಗೆ ‘ಆರ್​ಸಿ ಸ್ಟುಡಿಯೋ’ ಆರಂಭಿಸಿ ಬ್ಯಾಕ್ ಟು ಬ್ಯಾಕ್ ಐದು ಸಿನಿಮಾಗಳನ್ನು ಘೋಷಣೆ ಮಾಡಿದ್ದರು. ಈ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು. ಈಗ ಈ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ಆರನೇ ಸಿನಿಮಾ ಅನೌನ್ಸ್ ಆಗಿದೆ. ಈಗ ಅವರು ಶಿವರಾಜ್​ಕುಮಾರ್ ಜೊತೆ ಕೈ ಜೋಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

2010ರಲ್ಲಿ ಶಿವರಾಜ್​ಕುಮಾರ್ ನಟನೆಯ ‘ಮೈಲಾರಿ’ ಸಿನಿಮಾ ರಿಲೀಸ್ ಆಯಿತು. ಆರ್​ ಚಂದ್ರು ಅವರು ಈ ಸಿನಿಮಾ ನಿರ್ದೇಶನ ಮಾಡಿದ್ದರು. ಈ ಸಿನಿಮಾದ ಮುಹೂರ್ತ ನಡೆದು ಇಂದಿಗೆ (ಏಪ್ರಿಲ್ 1) 14 ವರ್ಷಗಳು ಕಳೆದಿವೆ. ಈ ಬಗ್ಗೆ ಆರ್ ಚಂದ್ರು ಅವರು ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡಿದ್ದಾರೆ. ಜೊತೆಗೆ ಅವರ ಜೊತೆ ಹೊಸ ಸಿನಿಮಾ ಘೋಷಿಸಿದ್ದಾರೆ.

‘ಕನ್ನಡದ ಸೂಪರ್ ಹಿಟ್ ಚಿತ್ರ ಮೈಲಾರಿ ಮುಹೂರ್ತಕ್ಕೆ 14 ವರ್ಷಗಳು ತುಂಬಿವೆ. ಈ ಶುಭ ಸಂದರ್ಭದಲ್ಲಿ ಕರುನಾಡ ಚಕ್ರವರ್ತಿ ಡಾ. ಶಿವರಾಜ್​ಕುಮಾರ್ ಅವರ ಜೊತೆ ಹೊಸ ಚಿತ್ರ ಆರಂಭಿಸುತ್ತಿರುವುದು ಮತ್ತಷ್ಟು ಖುಷಿ ತಂದಿದೆ. ತಮ್ಮೆಲ್ಲರ ಆಶೀರ್ವಾದ ಇರಲಿ. ಧನ್ಯವಾದಗಳು, ಆರ್ ಸಿ ಸ್ಟುಡಿಯೋಸ್’ ಎಂದು ಅವರು ಬರೆದುಕೊಂಡಿದ್ದಾರೆ. ಈ ಚಿತ್ರವನ್ನು ಚಂದ್ರು ಕೇವಲ ನಿರ್ಮಾಣ ಮಾಡುತ್ತಿದ್ದಾರೋ ಅಥವಾ ನಿರ್ದೇಶನ ಕೂಡ ಅವರೇ ಮಾಡುತ್ತಾರೋ ಎನ್ನುವ ಕುತೂಹಲ ಮೂಡಿದೆ.

ಇದನ್ನೂ ಓದಿ: ‘ಕಬ್ಜ 2’ ಬರಲ್ಲ ಎಂದು ಟ್ರೋಲ್ ಮಾಡಿದವರಿಗೆ ಸರಿಯಾಗಿ ಉತ್ತರ ಕೊಟ್ಟ ಆರ್​. ಚಂದ್ರು

ಆರ್ ಚಂದ್ರು ಅವರು ಈ ಮೊದಲು ‘ಕಬ್ಜ’ ಸಿನಿಮಾ ಮಾಡಿದ್ದರು. ಉಪೇಂದ್ರ ನಟನೆಯ ಈ ಚಿತ್ರದಲ್ಲಿ ಶಿವರಾಜ್​ಕುಮಾರ್ ಹಾಗೂ ಸುದೀಪ್ ಅತಿಥಿ ಪಾತ್ರ ಮಾಡಿದ್ದರು. ಈಗಾಗಲೇ ಸುದೀಪ್ ಜೊತೆ ಚಂದ್ರು ಸಿನಿಮಾ ಘೋಷಣೆ ಮಾಡಿದ್ದರು. ಈಗ ಅವರು ಶಿವಣ್ಣ ಜೊತೆ ಸಿನಿಮಾ ಮಾಡುತ್ತಿರುವ ಬಗ್ಗೆ ತಿಳಿಸಿದ್ದಾರೆ. ಶಿವರಾಜ್​ಕುಮಾರ್ ಅವರು ಸದ್ಯ ಎಲೆಕ್ಷನ್ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಗೀತಾ ಶಿವರಾಜ್​ಕುಮಾರ್ ಅವರು ಶಿವಮೊಗ್ಗ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದು, ಅವರ ಪರವಾಗಿ ಶಿವಣ್ಣ ಪ್ರಚಾರ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್