AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಣ್ಣ ಜೊತೆ ಹೊಸ ಸಿನಿಮಾ ಘೋಷಿಸಿದ ಆರ್ ಚಂದ್ರು; ಮೂಡಿತು ಕುತೂಹಲ

2010ರಲ್ಲಿ ಶಿವರಾಜ್​ಕುಮಾರ್ ನಟನೆಯ ‘ಮೈಲಾರಿ’ ಸಿನಿಮಾ ರಿಲೀಸ್ ಆಯಿತು. ಆರ್​ ಚಂದ್ರು ಅವರು ಈ ಸಿನಿಮಾ ನಿರ್ದೇಶನ ಮಾಡಿದ್ದರು. ಈ ಸಿನಿಮಾದ ಮುಹೂರ್ತ ನಡೆದು ಇಂದಿಗೆ 14 ವರ್ಷಗಳು ಕಳೆದಿವೆ. ಈ ಬಗ್ಗೆ ಆರ್ ಚಂದ್ರು ಅವರು ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡಿದ್ದಾರೆ.

ಶಿವಣ್ಣ ಜೊತೆ ಹೊಸ ಸಿನಿಮಾ ಘೋಷಿಸಿದ ಆರ್ ಚಂದ್ರು; ಮೂಡಿತು ಕುತೂಹಲ
ಚಂದ್ರು-ಶಿವಣ್ಣ
ರಾಜೇಶ್ ದುಗ್ಗುಮನೆ
|

Updated on: Apr 01, 2024 | 10:44 AM

Share

ಆರ್​ ಚಂದ್ರು (R Chandru) ಅವರು ಇತ್ತೀಚೆಗೆ ‘ಆರ್​ಸಿ ಸ್ಟುಡಿಯೋ’ ಆರಂಭಿಸಿ ಬ್ಯಾಕ್ ಟು ಬ್ಯಾಕ್ ಐದು ಸಿನಿಮಾಗಳನ್ನು ಘೋಷಣೆ ಮಾಡಿದ್ದರು. ಈ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು. ಈಗ ಈ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ಆರನೇ ಸಿನಿಮಾ ಅನೌನ್ಸ್ ಆಗಿದೆ. ಈಗ ಅವರು ಶಿವರಾಜ್​ಕುಮಾರ್ ಜೊತೆ ಕೈ ಜೋಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

2010ರಲ್ಲಿ ಶಿವರಾಜ್​ಕುಮಾರ್ ನಟನೆಯ ‘ಮೈಲಾರಿ’ ಸಿನಿಮಾ ರಿಲೀಸ್ ಆಯಿತು. ಆರ್​ ಚಂದ್ರು ಅವರು ಈ ಸಿನಿಮಾ ನಿರ್ದೇಶನ ಮಾಡಿದ್ದರು. ಈ ಸಿನಿಮಾದ ಮುಹೂರ್ತ ನಡೆದು ಇಂದಿಗೆ (ಏಪ್ರಿಲ್ 1) 14 ವರ್ಷಗಳು ಕಳೆದಿವೆ. ಈ ಬಗ್ಗೆ ಆರ್ ಚಂದ್ರು ಅವರು ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡಿದ್ದಾರೆ. ಜೊತೆಗೆ ಅವರ ಜೊತೆ ಹೊಸ ಸಿನಿಮಾ ಘೋಷಿಸಿದ್ದಾರೆ.

‘ಕನ್ನಡದ ಸೂಪರ್ ಹಿಟ್ ಚಿತ್ರ ಮೈಲಾರಿ ಮುಹೂರ್ತಕ್ಕೆ 14 ವರ್ಷಗಳು ತುಂಬಿವೆ. ಈ ಶುಭ ಸಂದರ್ಭದಲ್ಲಿ ಕರುನಾಡ ಚಕ್ರವರ್ತಿ ಡಾ. ಶಿವರಾಜ್​ಕುಮಾರ್ ಅವರ ಜೊತೆ ಹೊಸ ಚಿತ್ರ ಆರಂಭಿಸುತ್ತಿರುವುದು ಮತ್ತಷ್ಟು ಖುಷಿ ತಂದಿದೆ. ತಮ್ಮೆಲ್ಲರ ಆಶೀರ್ವಾದ ಇರಲಿ. ಧನ್ಯವಾದಗಳು, ಆರ್ ಸಿ ಸ್ಟುಡಿಯೋಸ್’ ಎಂದು ಅವರು ಬರೆದುಕೊಂಡಿದ್ದಾರೆ. ಈ ಚಿತ್ರವನ್ನು ಚಂದ್ರು ಕೇವಲ ನಿರ್ಮಾಣ ಮಾಡುತ್ತಿದ್ದಾರೋ ಅಥವಾ ನಿರ್ದೇಶನ ಕೂಡ ಅವರೇ ಮಾಡುತ್ತಾರೋ ಎನ್ನುವ ಕುತೂಹಲ ಮೂಡಿದೆ.

ಇದನ್ನೂ ಓದಿ: ‘ಕಬ್ಜ 2’ ಬರಲ್ಲ ಎಂದು ಟ್ರೋಲ್ ಮಾಡಿದವರಿಗೆ ಸರಿಯಾಗಿ ಉತ್ತರ ಕೊಟ್ಟ ಆರ್​. ಚಂದ್ರು

ಆರ್ ಚಂದ್ರು ಅವರು ಈ ಮೊದಲು ‘ಕಬ್ಜ’ ಸಿನಿಮಾ ಮಾಡಿದ್ದರು. ಉಪೇಂದ್ರ ನಟನೆಯ ಈ ಚಿತ್ರದಲ್ಲಿ ಶಿವರಾಜ್​ಕುಮಾರ್ ಹಾಗೂ ಸುದೀಪ್ ಅತಿಥಿ ಪಾತ್ರ ಮಾಡಿದ್ದರು. ಈಗಾಗಲೇ ಸುದೀಪ್ ಜೊತೆ ಚಂದ್ರು ಸಿನಿಮಾ ಘೋಷಣೆ ಮಾಡಿದ್ದರು. ಈಗ ಅವರು ಶಿವಣ್ಣ ಜೊತೆ ಸಿನಿಮಾ ಮಾಡುತ್ತಿರುವ ಬಗ್ಗೆ ತಿಳಿಸಿದ್ದಾರೆ. ಶಿವರಾಜ್​ಕುಮಾರ್ ಅವರು ಸದ್ಯ ಎಲೆಕ್ಷನ್ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಗೀತಾ ಶಿವರಾಜ್​ಕುಮಾರ್ ಅವರು ಶಿವಮೊಗ್ಗ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದು, ಅವರ ಪರವಾಗಿ ಶಿವಣ್ಣ ಪ್ರಚಾರ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್