AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

R Chandru: ‘ಕಬ್ಜ’ ಪ್ರಚಾರಕ್ಕೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಆರ್​. ಚಂದ್ರು ಪ್ಲ್ಯಾನ್​; ಜೋರಾಗಿದೆ ತಯಾರಿ

Kabzaa Movie | Upendra: ದೇಶದ ಪ್ರಮುಖ ನಗರಗಳಲ್ಲಿ ‘ಕಬ್ಜ’ ಚಿತ್ರದ ಒಂದೊಂದು ಸಾಂಗ್​ ರಿಲೀಸ್​ ಮಾಡಲು ಆರ್​. ಚಂದ್ರು ಸಿದ್ಧತೆ​ ಮಾಡಿಕೊಂಡಿದ್ದಾರೆ. ಟ್ರೇಲರ್​ ಬಿಡುಗಡೆಗೂ ದೊಡ್ಡ ಪ್ಲ್ಯಾನ್​ ಸಿದ್ಧವಾಗುತ್ತಿದೆ.

R Chandru: ‘ಕಬ್ಜ’ ಪ್ರಚಾರಕ್ಕೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಆರ್​. ಚಂದ್ರು ಪ್ಲ್ಯಾನ್​; ಜೋರಾಗಿದೆ ತಯಾರಿ
ಆರ್. ಚಂದ್ರು, ಉಪೇಂದ್ರ
ಮದನ್​ ಕುಮಾರ್​
|

Updated on: Jan 31, 2023 | 9:16 PM

Share

ಖ್ಯಾತ ನಿರ್ದೇಶಕ ಆರ್​. ಚಂದ್ರು (R Chandru) ಅವರು ಆ್ಯಕ್ಷನ್​-ಕಟ್​ ಹೇಳಿರುವ ‘ಕಬ್ಜ’ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಚಿತ್ರದಲ್ಲಿ ಉಪೇಂದ್ರ (Upendra) ಮತ್ತು ಕಿಚ್ಚ ಸುದೀಪ್​ ಅವರು ಅಭಿನಯಿಸಿದ್ದಾರೆ. ನಾಯಕಿಯಾಗಿ ಶ್ರೀಯಾ ಶರಣ್​ ಬಣ್ಣ ಹಚ್ಚಿದ್ದಾರೆ. ಮಾರ್ಚ್​ 17ರಂದು ಪುನೀತ್​ ರಾಜ್​ಕುಮಾರ್​ ಅವರ ಜನ್ಮದಿನದ ಪ್ರಯುಕ್ತ ‘ಕಬ್ಜ’ ಚಿತ್ರ (Kabzaa Movie) ಬಿಡುಗಡೆ ಆಗಲಿದೆ ಎಂಬುದು ವಿಶೇಷ. ಈಗಾಗಲೇ ರಿಲೀಸ್​ ಆಗಿರುವ ಟೀಸರ್​ ಧೂಳೆಬ್ಬಿಸಿದೆ. ಈಗ ಚಿತ್ರದ ಮೊದಲ ಸಾಂಗ್​ ಬಿಡುಗಡೆ ಮಾಡಲು ಸಕಲ ತಯಾರಿ ನಡೆದಿದೆ. ಫೆಬ್ರವರಿ 4ರಂದು ಹೈದರಾಬಾದ್​ನಲ್ಲಿ ‘ಕಬ್ಜ’ ಚಿತ್ರದ ಮೊದಲ ಲಿರಿಕಲ್​ ಸಾಂಗ್​ ಅನಾವರಣ ಆಗಲಿದೆ. ಆ ಕುರಿತು ಮಾಹಿತಿ ನೀಡಲು ಆರ್​. ಚಂದ್ರು ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಪುನೀತ್​ ಜನ್ಮದಿನದಂದು ‘ಕಬ್ಜ’ ರಿಲೀಸ್​:

‘ಕಬ್ಜ’ ಚಿತ್ರವನ್ನು ಪುನೀತ್​ ರಾಜ್​ಕುಮಾರ್​ ಅವರ ಹುಟ್ಟುಹಬ್ಬದ ಪ್ರಯುಕ್ತ (ಮಾ.17) ರಿಲೀಸ್​ ಮಾಡಲು ಆರ್​. ಚಂದ್ರು ತೀರ್ಮಾನಿಸಿದ್ದಾರೆ. ಈ ನಿರ್ಧಾರಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ. ‘ಪುನೀತ್​ ರಾಜ್​ಕುಮಾರ್​ ಅವರು ಅಭಿಮಾನಿಗಳ ಪಾಲಿನ ದೇವರು. ಅನೇಕ ಬಾರಿ ಅವರು ನನ್ನನ್ನು ಹುರಿದುಂಬಿಸಿದ್ದರು. ಹುಷಾರಾಗಿ ಸಿನಿಮಾ ಮಾಡು ಅಂತ ಮಾರ್ಗದರ್ಶನ ನೀಡುತ್ತಿದ್ದರು. ಹಾಗಾಗಿ ಅವರ ಬರ್ತ್​ಡೇ ದಿನವೇ ಕಬ್ಜ ಬಿಡುಗಡೆ ಮಾಡುತ್ತಿದ್ದೇವೆ’ ಎಂದು ಆರ್. ಚಂದ್ರು ಹೇಳಿದ್ದಾರೆ.

ಇದನ್ನೂ ಓದಿ: Kabzaa: ಫೆ.4ಕ್ಕೆ ಅಬ್ಬರಿಸಲಿದೆ ‘ಕಬ್ಜ’ ಮೊದಲ ಹಾಡು; ಉಪ್ಪಿ ಚಿತ್ರದ ಅದ್ದೂರಿ ಇವೆಂಟ್​ಗೆ ಹೈದರಾಬಾದ್​ ಸಜ್ಜು

ಇದನ್ನೂ ಓದಿ
Image
Kabzaa: ಟ್ವಿಟರ್​ ಟ್ರೆಂಡಿಂಗ್​ನಲ್ಲಿ ‘ಪಠಾಣ್​’ ಚಿತ್ರವನ್ನೇ ಮೀರಿಸಿದ ‘ಕಬ್ಜ’: ಉಪ್ಪಿ-ಆರ್​. ಚಂದ್ರು ಕಮಾಲ್​
Image
ಪುನೀತ್ ರಾಜ್​ಕುಮಾರ್ ಹುಟ್ಟುಹಬ್ಬದ ದಿನವೇ ಉಪೇಂದ್ರ-ಸುದೀಪ್​ ನಟನೆಯ ‘ಕಬ್ಜ’ ಸಿನಿಮಾ ರಿಲೀಸ್
Image
Kabzaa: ‘ಕಬ್ಜ’ ಚಿತ್ರದ ಹಿಂದಿ ವಿತರಣೆ ಹಕ್ಕು ಸೇಲ್​; ಉಪ್ಪಿ ಸಿನಿಮಾಗೆ ಬಾಲಿವುಡ್​ನಲ್ಲಿ ಭರ್ಜರಿ ಡಿಮ್ಯಾಂಡ್​
Image
‘ಕೆಜಿಎಫ್’ ತರ ‘ಕಬ್ಜ’ ಇದೆ ಅನ್ನೋದೇ ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಎಂದ ಉಪೇಂದ್ರ

‘ಇದು ಒಂದು ಟೀಮ್​ ಮಾಡಿದ ಸಿನಿಮಾ’:

ಆರ್​. ಚಂದ್ರು ಅವರು ‘ಕಬ್ಜ’ ಘೋಷಣೆ ಮಾಡಿದ್ದು 3 ವರ್ಷಗಳ ಹಿಂದೆ. ಆದರೆ ಆ ಬಳಿಕ ಕೊರೊನಾ ಹಾವಳಿ ಶುರುವಾಯಿತು. ಹಲವಾರು ಅಡೆತಡೆಗಳು ಬಂದವು. ಅದನ್ನೆಲ್ಲ ಎದುರಿಸಿ, ಹತ್ತಾರು ಬಗೆಯಲ್ಲಿ ಸೆಟ್​ ಹಾಕಿ ಚಿತ್ರೀಕರಣ ಮಾಡಲಾಯಿತು. ಇದೆಲ್ಲ ಸಾಧ್ಯವಾಗಿದ್ದು ಒಂದು ಟೀಮ್​ ವರ್ಕ್​ ಕಾರಣದಿಂದ ಎಂದು ಆರ್​. ಚಂದ್ರು ಹೇಳಿದ್ದಾರೆ. ‘ಎಲ್ಲರಿಂದಾಗಿ ಇದು ಪ್ಯಾನ್​ ಇಂಡಿಯಾ ಸಿನಿಮಾ ಆಗಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Kabzaa: ಟ್ವಿಟರ್​ ಟ್ರೆಂಡಿಂಗ್​ನಲ್ಲಿ ‘ಪಠಾಣ್​’ ಚಿತ್ರವನ್ನೇ ಮೀರಿಸಿದ ‘ಕಬ್ಜ’: ಉಪ್ಪಿ-ಆರ್​. ಚಂದ್ರು ಕಮಾಲ್​

‘ನಾನೂ ಕೂಡ ಫಸ್ಟ್​ ರ‍್ಯಾಂಕ್ ಬರಬೇಕು’:

‘ಕನ್ನಡದಲ್ಲಿ ಈಗಾಗಲೇ ಬಂದಿರುವ ಪ್ಯಾನ್​ ಇಂಡಿಯಾ ಸಿನಿಮಾಗಳು ಒಂದು ಹೆದ್ದಾರಿ ನಿರ್ಮಿಸಿವೆ. ಅದರಲ್ಲಿ ನಾವು ಸಾಗಬೇಕು. ಆಗಲೇ ಆ ಹೈವೇ ನಿರ್ಮಿಸಿದವರಿಗೆ ಗೌರವ ಸಿಕ್ಕಂತೆ ಆಗುತ್ತದೆ. ಯಾರಾದರೂ ಫಸ್ಟ್​ ರ‍್ಯಾಂಕ್ ಬಂದರೆ ನಾನೂ ಕೂಡ ರ‍್ಯಾಂಕ್ ಬರಬೇಕು ಅಂತ ಓದುತ್ತೇನೆ. ಸುಮ್ಮನೆ ಫಸ್ಟ್​ ರ‍್ಯಾಂಕ್ ಬರಬೇಕು ಅಂತ ಕನಸು ಕಾಣಲ್ಲ. ನನ್ನ ಜೊತೆ ಇಡೀ ತಂಡ ಕಷ್ಟಪಟ್ಟಿದೆ’ ಎಂದಿದ್ದಾರೆ ಆರ್​. ಚಂದ್ರು.

ಇದನ್ನೂ ಓದಿ: Kabzaa: ‘ಕಬ್ಜ’ ಚಿತ್ರದ ಹಿಂದಿ ವಿತರಣೆ ಹಕ್ಕು ಸೇಲ್​; ಉಪ್ಪಿ ಸಿನಿಮಾಗೆ ಬಾಲಿವುಡ್​ನಲ್ಲಿ ಭರ್ಜರಿ ಡಿಮ್ಯಾಂಡ್​

ಪ್ಯಾನ್​ ಇಂಡಿಯಾ ಮಟ್ಟದಲ್ಲೇ ಹಾಡುಗಳು ರಿಲೀಸ್​:

ಇದು ಪ್ಯಾನ್​ ಇಂಡಿಯಾ ಸಿನಿಮಾ ಆದ್ದರಿಂದ ದೇಶದ ಹಲವು ನಗರಗಳಲ್ಲಿ ಒಂದೊಂದು ಸಾಂಗ್​ ರಿಲೀಸ್​ ಮಾಡಬೇಕು ಎಂದು ಆರ್​. ಚಂದ್ರು ಪ್ಲ್ಯಾನ್​ ಮಾಡಿಕೊಂಡಿದ್ದಾರೆ. ದೊಡ್ಡ ಮಟ್ಟದಲ್ಲಿ ಟ್ರೇಲರ್​ ಬಿಡುಗಡೆ ಮಾಡಲು ಅವರು ತಯಾರಿ ನಡೆಸುತ್ತಿದ್ದಾರೆ. ‘ಕನ್ನಡ ಚಿತ್ರರಂಗದಲ್ಲಿ ಈಗ ಪಾಸಿಟಿವ್​ ವಾತಾವರಣ ಇದೆ. ಒಂದು ಸಿನಿಮಾದ ಗೆಲುವಿಗೆ ಎಲ್ಲರೂ ಹಾರೈಸುತ್ತಿದ್ದಾರೆ’ ಎಂದು ಚಂದ್ರು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ