‘ಧರ್ಮಂ’ ಸಿನಿಮಾ ಹಾಡು ನೋಡಿ ‘ತಾಜ್ ಮಹಲ್’ ನೆನಪಿಸಿಕೊಂಡ ಆರ್. ಚಂದ್ರು

ಸಾಯಿ ಶಶಿ, ವರ್ಣಿಕಾ ಶೆಟ್ಟಿ ನಟನೆಯ ‘ಧರ್ಮಂ’ ಸಿನಿಮಾದಿಂದ ಹೊಸ ಹಾಡು ಬಿಡುಗಡೆ ಆಗಿದೆ. ಆರ್. ಚಂದ್ರು ಅವರು ಹಾಡು ಬಿಡುಗಡೆ ಮಾಡಿ ಸಿನಿಮಾ ತಂಡದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಹಾಡು ನೋಡಿದ ಬಳಿಕ ‘ತಾಜ್ ಮಹಲ್’ ಸಿನಿಮಾದ ನೆನಪಾಯಿತು ಎಂದು ಅವರು ಹೇಳಿದ್ದಾರೆ.

‘ಧರ್ಮಂ’ ಸಿನಿಮಾ ಹಾಡು ನೋಡಿ ‘ತಾಜ್ ಮಹಲ್’ ನೆನಪಿಸಿಕೊಂಡ ಆರ್. ಚಂದ್ರು
Sai Shashi

Updated on: Oct 14, 2025 | 10:37 PM

ಸಾಯಿ ಶಶಿ (Sai Shashi) ಅಭಿನಯದ ‘ಧರ್ಮಂ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ನಾಗಮುಖ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ವಿಭಿನ್ನ ಕಥಾ ಹಂದರ ಇದೆ. ಚಿತ್ರತಂಡದ ಪ್ರಯತ್ನವನ್ನು ಆರ್. ಚಂದ್ರು (R. Chandru) ಅವರು ಮೆಚ್ಚಿಕೊಂಡಿದ್ದಾರೆ. ಹಾಡು ಮತ್ತು ಸಿನಿಮಾದ ತುಣುಕುಗಳನ್ನು ನೋಡಿದ ಬಳಿಕ ಆರ್. ಚಂದ್ರು ಅವರು ‘ಧರ್ಮಂ’ (Dhramam Movie) ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ‘ನೀನೇ ತಂದ ಒಲವಾ ಒಡವೆ’ ಹಾಡು ಅಕ್ಟೋಬರ್ 13ರಂದು ಬಿಡುಗಡೆ ಆಗಿದೆ.

ಸಾಯಿ ಶಶಿ ಅವರು ಈ ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ್ದಾರೆ. ವರ್ಣಿಕಾ ಶೆಟ್ಟಿ ಅವರು ನಾಯಕಿ ಆಗಿದ್ದಾರೆ. ‘ಸರೆಗಮ ಕನ್ನಡ’ ಯೂಟ್ಯೂಬ್ ಚಾನೆಲ್ ಮೂಲಕ ‘ಧರ್ಮಂ’ ಸಿನಿಮಾದ ಹಾಡು ಬಿಡುಗಡೆ ಆಗಿದೆ. ಹಲವು ವಿಭಿನ್ನ ಲೋಕೇಶನ್​​ಗಳಲ್ಲಿ ಹಾಡಿನ ಚಿತ್ರೀಕರಣ ಮಾಡಲಾಗಿದೆ. ಮಲೆ ‌ಮಹಾದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಬಳಿಕ ‘ಧರ್ಮಂ’ ಸಿನಿಮಾ ತಂಡದವರು ಈ ಹಾಡನ್ನು ಬಿಡುಗಡೆ ಮಾಡಿದ್ದಾರೆ.

ಸರವಣ ಸುಬ್ರಮಣಿಯಂ ಅವರು ‘ಧರ್ಮಂ’ ಸಿನಿಮಾಗೆ ಸಂಗೀತ ನೀಡಿದ್ದಾರೆ. ಅನುರಾಧಾ ಭಟ್ ಅವರು ಈ ಹಾಡಿಗೆ ಧ್ವನಿ ನೀಡಿದ್ದಾರೆ. ನಾಗಶೆಟ್ಟಿ ಅವರು ಈ ಸಿನಿಮಾಗೆ ಛಾಯಾಗ್ರಹಣ ಮಾಡಿದ್ದಾರೆ. ಸಿನಿಮಾದ ಪೋಸ್ಟರ್​ಗಳು ಗಮನ ಸೆಳೆದಿವೆ. ಆ ಮೂಲಕ ಕೌತುಕ ಮೂಡಿಸಲಾಗಿದೆ.

‘ನೀನೇ ತಂದ ಒಲವಾ ಒಡವೆ’ ಹಾಡು:

‘ಈ ಹಾಡನ್ನು ಬಿಡುಗಡೆ ಮಾಡಿದ್ದು ನನಗೆ ಬಹಳ ಖುಷಿ ಆಯಿತು. ಈ ಹಾಡು ಭರವಸೆ ಮೂಡಿಸುವಂತಿದೆ. ಧರ್ಮಂ ಸಿನಿಮಾವನ್ನು ನವೆಂಬರ್​ ತಿಂಗಳಲ್ಲಿ ಬಿಡುಗಡೆ ಮಾಡಲು ತಯಾರಿ ಮಾಡಿಕೊಂಡಿದ್ದಾರೆ. ಸಾಯಿ ಶಶಿ ಅವರು ತುಂಬಾ ಚೆನ್ನಾಗಿ ನಟಿಸಿದ್ದಾರೆ. ಟೀಸರ್, ಟ್ರೇಲರ್ ಮತ್ತು ಸಾಂಗ್ ನಾನು ನೋಡಿದ್ದೇನೆ. ನಿಮಗೆ ಒಳ್ಳೆಯದಾಗಲಿ’ ಎಂದು ಆರ್. ಚಂದ್ರು ಅವರು ಹಾರೈಸಿದರು.

ಇದನ್ನೂ ಓದಿ: ‘ಯುಐ’ ನೋಡಿ ಉಪೇಂದ್ರ ಆಧುನಿಕ ಬುದ್ಧ ಎಂದ ಆರ್ ಚಂದ್ರು

‘ನಿರ್ಮಾಪಕ ರಾಮಕೃಷ್ಣ ಅವರಿಗೆ ಬಿಡುಗಡೆಗೆ ಚಡಪಡಿಕೆ ಇದೆ. ನಿರ್ದೇಶಕರು ಮೇಕಿಂಗ್ ತುಂಬ ಚೆನ್ನಾಗಿ ಮಾಡಿದ್ದಾರೆ. ಯಾರೇ ಹೊಸಬರು ಬಂದರೂ ನಾನು ಪ್ರೀತಿಯಿಂದ ನೋಡುತ್ತೇನೆ. ತಾತ್ಸಾರದಿಂದ ನೋಡಲ್ಲ. ಯಾಕೆಂದರೆ ಆ ನೋವು ನನಗೆ ಗೊತ್ತಿದೆ. ಧರ್ಮಂ ಸಿನಿಮಾ ನಿಜಕ್ಕೂ ಚೆನ್ನಾಗಿದೆ. ಸಾಯಿ ಅವರು ರೆಟ್ರೋ ರೀತಿ ನಟಿಸಿದ್ದಾರೆ. ತುಂಬ ಶ್ರಮ ಹಾಕಿ ಕೆಲಸ ಮಾಡಿದ್ದಾರೆ’ ಎಂದು ಆರ್. ಚಂದ್ರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us