AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣದ ಆಸೆಗೆ ಮಲ್ಟಿಫ್ಲೆಕ್ಸ್​ಗಳು ಕನ್ನಡ ಸಿನಿಮಾಗಳಿಗೆ ಅನ್ಯಾಯ ಮಾಡುತ್ತಿವೆ: ಆರ್.ಚಂದ್ರು

ಮಲ್ಟಿಫ್ಲೆಕ್ಸ್ ಗಳು ತಾವು ಹಣ ಉಳಿಸಲು ಸಿನಿಮಾಗಳಿಗೆ ಅನ್ಯಾಯ ಮಾಡುತ್ತಿವೆ, ಈ ಬಗ್ಗೆ ಚಿತ್ರರಂಗದಲ್ಲಿ ಚರ್ಚೆಯಾಗಿ ಕ್ರಮ ಕೈಗೊಳ್ಳುವ ಅವಶ್ಯಕತೆ ಇದೆ ಎಂದು ನಿರ್ದೇಶಕ ಆರ್.ಚಂದ್ರು ಹೇಳಿದ್ದಾರೆ.

ಹಣದ ಆಸೆಗೆ ಮಲ್ಟಿಫ್ಲೆಕ್ಸ್​ಗಳು ಕನ್ನಡ ಸಿನಿಮಾಗಳಿಗೆ ಅನ್ಯಾಯ ಮಾಡುತ್ತಿವೆ: ಆರ್.ಚಂದ್ರು
ಆರ್.ಚಂದ್ರು
ಮಂಜುನಾಥ ಸಿ.
|

Updated on:Mar 24, 2023 | 5:24 PM

Share

ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು (Single Screen Teater) ಒಂದೊಂದಾಗಿ ಕಾಣೆಯಾಗುತ್ತಿವೆ. ಕಳೆದ ಕೆಲವು ವರ್ಷಗಳಲ್ಲಿ ಕರ್ನಾಟಕವೊಂದರಲ್ಲೇ ಸುಮಾರು 200 ಕ್ಕೂ ಹೆಚ್ಚು ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು ಬಾಗಿಲು ಹಾಕಿವೆ. ಅದರ ಬೆನ್ನಲ್ಲೆ ಮಲ್ಟಿಫ್ಲೆಕ್ಸ್​ಗಳು (Multiplex) ಒಂದರ ಹಿಂದೊಂದು ತಲೆ ಎತ್ತುತ್ತಿವೆ. ಸಿನಿಮಾ ಬಿಡುಗಡೆ, ಟಿಕೆಟ್ ಬೆಲೆ, ಶೋ ಲೆಕ್ಕಾಚಾರ, ಲಾಭ ಹಂಚಿಕೆ ಇನ್ನಿತರೆ ವಿಷಯಗಳಲ್ಲಿ ಮಲ್ಟಿಫ್ಲೆಕ್ಸ್​ಗಳು ಈಗಾಗಲೇ ಚಿತ್ರರಂಗ, ನಿರ್ಮಾಣ ಸಂಸ್ಥೆಗಳ ಮೇಲೆ ಪ್ರಭಾವ ಬೀರುತ್ತಿದ್ದು, ಇಡೀಯ ಚಿತ್ರರಂಗವನ್ನೇ ತನ್ನ ಕೈಗೊಂಬೆಯನ್ನಾಗಿ ಪರಿವರ್ತಿಸಿಕೊಳ್ಳುವ ಕಾಲ ದೂರವಿಲ್ಲ. ಇತ್ತೀಚೆಗಷ್ಟೆ ಕಬ್ಜ ಸಿನಿಮಾವನ್ನು ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡಿರುವ ಆರ್.ಚಂದ್ರು ಇತ್ತೀಚೆಗಿನ ಸಂದರ್ಶನದಲ್ಲಿ ಮಲ್ಟಿಫ್ಲೆಕ್ಸ್​ಗಳು ಸಿನಿಮಾಗಳಿಗೆ, ಪ್ರೇಕ್ಷಕರಿಗೆ ಮಾಡುತ್ತಿರುವ ಮೋಸದ ಬಗ್ಗೆ ಮಾತನಾಡಿದ್ದು, ಈ ಬಗ್ಗೆ ಹೋರಾಟದ ಅವಶ್ಯಕತೆ ಇದೆ ಎಂದಿದ್ದಾರೆ.

ಕಬ್ಜ ಸಿನಿಮಾವನ್ನು ಆರ್.ಚಂದ್ರು ದೊಡ್ಡ ಬಜೆಟ್​ನಲ್ಲಿ ಅದರಲ್ಲಿಯೂ ತಾಂತ್ರಿಕ ಅಂಶಗಳಿಗೆ ಹೆಚ್ಚು ಪ್ರಾಧಾನ್ಯತೆ ನೀಡಿ ನಿರ್ದೇಶಿಸಿ ನಿರ್ಮಿಸಿದ್ದಾರೆ. ದೃಶ್ಯಗಳು, ಎಡಿಟಿಂಗ್ ಅದಕ್ಕೆ ತಕ್ಕಂತೆ ಸೌಂಡ್ ಎಲ್ಲದರ ಮೇಲೂ ವಿಶೇಷ ಕಾಳಜಿಯನ್ನು ಆರ್.ಚಂದ್ರು ವಹಿಸಿದ್ದಾರೆ. ಆದರೆ ಕೆಲವು ಮಲ್ಟಿಪ್ಲೆಕ್ಸ್​ಗಳಲ್ಲಿ ಕಬ್ಜ ಸಿನಿಮಾಕ್ಕೆ ಸರಿಯಾಗಿ ಸೌಂಡ್ ನೀಡದ ಕಾರಣ ಪ್ರೇಕ್ಷಕರಿಗೆ ಸಿನಿಮಾದ ಅನುಭೂತಿ ಸರಿಯಾಗಿ ಆಗುತ್ತಿಲ್ಲವಂತೆ.

ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ಆರ್.ಚಂದ್ರು, ”ಮಲ್ಟಿಫ್ಲೆಕ್ಸ್​ಗಳಲ್ಲಿ ಸರಿಯಾಗಿ ಸೌಂಡ್ ಕೊಡುತ್ತಿಲ್ಲ ಎಂಬ ದೂರುಗಳು ಬಂದಿವೆ. ಮಲ್ಟಿಫ್ಲೆಕ್ಸ್​ನವರು ಹಣ ಉಳಿಸಲು ಸೌಂಡ್ ಫ್ರಿಕ್ವೆನ್ಸಿ ಕಡಿಮೆ ಮಾಡುತ್ತಾರೆ. 5 ಕೊಡಬೇಕಾಗಿರುವ ಕಡೆ 3.5 ಕೊಡುತ್ತಾರೆ. ಒಮ್ಮೊಮ್ಮೆ ಹಣ ಉಳಿಸಲು ಒಂದೆರಡು ಸ್ಪೀಕರ್​ಗಳನ್ನು ಆಫ್ ಮಾಡಿಬಿಡುತ್ತಾರೆ. ಇದರಿಂದ ಒಂದು ಶೋಗೆ ಅವರಿಗೆ ಐದಾರು ಸಾವಿರ ಉಳಿತಾಯವಾಗುತ್ತದೆ ಇದರಿಂದ ಪ್ರೇಕ್ಷಕರಿಗೆ ಸಿನಿಮಾದ ಫೀಲ್ ಸಂಪೂರ್ಣವಾಗಿ ಸಿಗುವುದಿಲ್ಲ. ಈ ಬಗ್ಗೆ ಮೊದಲಿನಿಂದಲೂ ಆಕ್ಷೇಪ ಇದೆ. ನಾನು ಈ ವಿಷಯವನ್ನು ನಿರ್ಮಾಪಕ ಶ್ರೀಕಾಂತ್ ಹಾಗೂ ಇತರೆ ಕೆಲವರೊಟ್ಟಿಗೆ ಚರ್ಚಿಸಿ ಇದಕ್ಕೆ ಶಾಶ್ವತ ಪರಿಹಾರ ಹುಡುಕುವ ಕೆಲಸ ಮಾಡುತ್ತೇವೆ” ಎಂದಿದ್ದಾರೆ ಚಂದ್ರು.

ಮಲ್ಟಿಫ್ಲೆಕ್ಸ್​ನಲ್ಲಿ ಸರಿಯಾಗಿ ಸೌಂಡ್ ಕೊಡುವುದಿಲ್ಲ ಎಂಬುದು ಬಹಳ ಹಿಂದಿನಿಂದಲೂ ಕೇಳಿ ಬರುತ್ತಿರುವ ದೂರು. ಈ ಹಿಂದೆಯೂ ಕೆಲವು ಮಲ್ಟಿಫ್ಲೆಕ್ಸ್​ಗಳಲ್ಲಿ ಅಭಿಮಾನಿಗಳು ಇದೇ ಕಾರಣಕ್ಕೆ ಜಗಳ ಸಹ ಮಾಡಿದ್ದಿದೆ. ಸೌಂಡ್ ಕಡಿಮೆ ಕೊಡುವುದರಿಂದ ವಿದ್ಯುತ್ ಕಡಿಮೆ ಬಳಕೆ ಆಗಿ ಹಣ ಉಳಿಯುತ್ತದೆ. ಹಲವು ಸ್ಕ್ರೀನ್​ಗಳನ್ನು ಹೊಂದಿರುವ ಮಲ್ಟಿಫ್ಲೆಕ್ಸ್​ಗಳಲ್ಲಿ ದಿನಕ್ಕೆ ಸುಮಾರು 30 ಕ್ಕಿಂತಲೂ ಹೆಚ್ಚು ಶೋಗಳನ್ನು ಪ್ರದರ್ಶಿನಗೊಳ್ಳುತ್ತವೆ. ಸೌಂಡ್ ಕಡಿಮೆ ಮಾಡುವುದರಿಂದ ಅಥವಾ ಒಂದೆರಡು ಸ್ಪೀಕರ್ ಆಫ್ ಮಾಡುವುದರಿಂದ ದಿನವೊಂದಕ್ಕೆ ಸಾವಿರಾರು ರುಪಾಯಿ ಹಣವನ್ನು ಮಲ್ಟಿಫ್ಲೆಕ್ಸ್​ಗಳು ಉಳಿಸುತ್ತವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:51 pm, Fri, 24 March 23

Follow Us
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ