AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raana: ಸ್ಯಾಂಡಲ್​ವುಡ್​ಗೆ ‘ರಾಣ’ ಅದ್ದೂರಿ ಎಂಟ್ರಿ, ಟೀಸರ್ ಬಿಡುಗಡೆಗೊಳಿಸಿದ ಉಪೇಂದ್ರ

ಕನ್ನಡದ ಖ್ಯಾತ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ಮಂಜು ‘ರಾಣ’ ಚಿತ್ರದ ಮುಖಾಂತರ ಮತ್ತೆ ಮಿಂಚಲು ತಯಾರಾಗುತ್ತಿದ್ದಾರೆ.

Raana: ಸ್ಯಾಂಡಲ್​ವುಡ್​ಗೆ ‘ರಾಣ’ ಅದ್ದೂರಿ ಎಂಟ್ರಿ, ಟೀಸರ್ ಬಿಡುಗಡೆಗೊಳಿಸಿದ ಉಪೇಂದ್ರ
‘ರಾಣ’ ಚಿತ್ರದ ಪೋಸ್ಟರ್
TV9 Web
| Updated By: shivaprasad.hs|

Updated on:Sep 14, 2021 | 12:40 PM

Share

ಸ್ಯಾಂಡಲ್​ವುಡ್​​ನಲ್ಲಿ ಹೊಸ ಚಿತ್ರಗಳು, ಟೀಸರ್​ಗಳು ಘೋಷಣೆಯಾಗುತ್ತಿದ್ದು, ಎಲ್ಲರ ಗಮನ ಸೆಳೆಯುತ್ತಿವೆ. ಈ ಸಾಲಿಗೆ ಹೊಸ ಸೇರ್ಪಡೆ ‘ರಾಣ’. ಖ್ಯಾತ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ಮಂಜು ‘ರಾಣ’ ಚಿತ್ರದಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ಚಿತ್ರದ ಮೊದಲ ಲುಕ್​ ತಿಳಿಸುವ ಟೀಸರ್ ಬಿಡುಗಡೆಯಾಗಿದ್ದು, ಎಲ್ಲರ ಗಮನ ಸೆಳೆದಿದೆ. ಪೊಗರು ಚಿತ್ರದ ನಂತರ ನಂದ ಕಿಶೋರ್ ರಾಣಾಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ಚಿತ್ರಕ್ಕೆ ಚಂದನ್ ಶೆಟ್ಟಿ ಸಂಗೀತ ನೀಡಲಿದ್ದಾರೆ. ವಿಶೇಷವೆಂದರೆ, ಟೀಸರ್ ಲಾಂಚ್ ಮಾಡಿದ್ದು, ಸ್ಯಾಂಡಲ್​ವುಡ್​ನ ರಿಯಲ್ ಸ್ಟಾರ್ ಉಪೇಂದ್ರ. ಟೀಸರ್​ನಲ್ಲಿ ಲಾಂಗ್ ಹಿಡಿದು ಬಂದಿರುವ ‘ರಾಣ’, ಉಪೇಂದ್ರ ನಿರ್ದೇಶನದ ‘ಓಂ’ ಚಿತ್ರವನ್ನು ನೆನಪಿಸಿದ್ದಾನೆ.

ಚಿತ್ರದ ಟೀಸರ್ ಇಲ್ಲಿದೆ:

‘ರಾಣಾ’ ಚಿತ್ರವನ್ನು ಗುಜ್ಜಲ್ ಪುರುಷೋತ್ತಮ್, ‘ಗುಜ್ಜಲ್ ಟಾಕೀಸ್’ ಬ್ಯಾನರ್​ನಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ವಿಕ್ಟರಿ, ಅಧ್ಯಕ್ಷ, ರನ್ನ, ಮುಕುಂದ ಮುರಾರಿ, ಪೊಗರು ಮೊದಲಾದ ಚಿತ್ರಗಳಿಂದ ಖ್ಯಾತಿ ಗಳಿಸಿರುವ ನಂದ ಕಿಶೋರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ನಾಯಕ ನಟ ಶ್ರೇಯಸ್ ಮಂಜು ಈ ಹಿಂದೆ ‘ಪಡ್ಡೆ ಹುಲಿ’ ಚಿತ್ರದ ಮುಖಾಂತರ ಗಮನ ಸೆಳೆದಿದ್ದರು. ಭರವಸೆಯ ನಟಿ ರೀಷ್ಮಾ ನಾಣಯ್ಯ, ಶ್ರೇಯಸ್​ಗೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಖ್ಯಾತ ಛಾಯಾಗ್ರಾಹಕ ಶೇಖರ್ ಚಂದ್ರ ಛಾಯಾಗ್ರಹಣ ‘ರಾಣ’ ಚಿತ್ರಕ್ಕಿದೆ. ಕೆ.ಎಂ.ಪ್ರಕಾಶ್ ಸಂಕಲನ ಮಾಡುತ್ತಿದ್ದಾರೆ.

ಇದನ್ನೂ ಓದಿ:

10 ದಿನಗಳಲ್ಲಿ 13 ಹಾರರ್ ಫಿಲ್ಮ್ ವೀಕ್ಷಿಸಲು 95,000 ರೂ. ಖರ್ಚು ಮಾಡಲು ಸಿದ್ಧವಿದೆ ಅಮೆರಿಕಾ ಕಂಪನಿ; ಅವಕಾಶ ಯಾರಿಗಿದೆ ಗೊತ್ತಾ?

Met Gala 2021: ಸದಾ ಮೈಮಾಟದಿಂದ ಸೆಳೆಯುತ್ತಿದ್ದ ಸುಂದರಿ ಕಿಮ್​ ಇಂದು ಹೀಗೇಕೆ ಆದ್ರು? ಇದು ಸಿನಿಮಾ ಅಲ್ಲ ರಿಯಲ್​

(Raana new kannada movie first look teaser launched by Upendra starring Sjreyas Manju and Reeshma Nanayya)

Published On - 12:31 pm, Tue, 14 September 21

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ