AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಚಿತಾ ರಾಮ್ ಅಸಿಸ್ಟೆಂಟ್ ಬಳಸುತ್ತಿದ್ದ ಕಾರು ಜಪ್ತಿ ಮಾಡಿದ ಪೊಲೀಸರು; ಕಾರಣ ಏನು?

ನಿಯಮ ಉಲ್ಲಂಘಿಸಿ ವೈಟ್​ ಬೋರ್ಡ್​ ಕಾರು ಬಳಸಲಾಗುತ್ತಿತ್ತು. ಖ್ಯಾತ ನಟಿ ರಚಿತಾ ರಾಮ್ ಅವರ ಅಸಿಸ್ಟೆಂಟ್ ಬಳಸುತ್ತಿದ್ದ ಇನ್ನೋವಾ ಕಾರನ್ನು ಸಂಚಾರ ಪೊಲೀಸರು ಜಪ್ತಿ ಮಾಡಿದ್ದಾರೆ. ಹೊಸ ಸಿನಿಮಾದ ಚಿತ್ರೀಕರಣದ ಸ್ಥಳದಿಂದ ಕಾರು ಜಪ್ತಿ ಮಾಡಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ರಚಿತಾ ರಾಮ್ ಅಸಿಸ್ಟೆಂಟ್ ಬಳಸುತ್ತಿದ್ದ ಕಾರು ಜಪ್ತಿ ಮಾಡಿದ ಪೊಲೀಸರು; ಕಾರಣ ಏನು?
ರಚಿತಾ ರಾಮ್ ಸಹಾಯಕನ ಕಾರು ಜಪ್ತಿ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Oct 09, 2024 | 6:24 PM

Share

ನಟ ದುನಿಯಾ ವಿಜಯ್​, ನಟಿ ರಚಿತಾ ರಾಮ್ ಅಭಿನಯಿಸುತ್ತಿರುವ ಹೊಸ ಸಿನಿಮಾದ ತಂಡಕ್ಕೆ ಆರ್​ಟಿಓ ಶಾಕ್​ ನೀಡಿದ್ದಾರೆ. ತುಮಕೂರಿನಲ್ಲಿ ಈ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಶೂಟಿಂಗ್​ಗೆ ಕಲಾವಿದರನ್ನು ಕರೆತರಲು ವೈಟ್​ ಬೋರ್ಡ್​ ವಾಹನ ಬಳಕೆ ಮಾಡಿದ್ದರಿಂದ ಕ್ರಮ ಕೈಗೊಳ್ಳಲಾಗಿದೆ. ಚಿತ್ರತಂಡದಿಂದ ನಿಯಮ ಉಲ್ಲಂಘನೆ ಆಗಿದೆ ಎಂಬ ಆರೋಪ ಎದುರಾಗಿದೆ. ವಾಣಿಜ್ಯ ಉದ್ದೇಶಕ್ಕಾಗಿ ಸಾರಿಗೆಯೇತರ ವಾಹನ ಬಳಕೆ ಮಾಡಲಾಗುತ್ತಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ದೂರು ಬಂದಿದ್ದರಿಂದ ತುಮಕೂರು ಸಂಚಾರ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ವಾಣಿಜ್ಯ ಉದ್ದೇಶಕ್ಕೆ ಬಳಸುವ ಎಲ್ಲೋ ಬೋರ್ಡ್ ಬದಲು ವೈಟ್ ಬೋರ್ಡ್ ಕಾರು ಬಳಕೆ ಮಾಡಲಾಗಿದೆ. ನಟ, ನಟಿಯರು, ಸಿಬ್ಬಂದಿಯನ್ನು ಚಿತ್ರೀಕರಣಕ್ಕೆ ಕರೆದುಕೊಂಡು ಬರಲು ಮತ್ತು ವಾಪಸ್​ ಕಳಿಸಲು ವೈಟ್ ಬೋರ್ಡ್ ಕಾರುಗಳ ಬಳಕೆ ಆಗಿದೆ. ಈ ಕಾರಣದಿಂದ ತುಮಕೂರು ಸಂಚಾರ ಪೊಲೀಸರು ಇನ್ನೋವಾ ಕಾರನ್ನು ಜಪ್ತಿ ಮಾಡಿದ್ದಾರೆ. ತುಮಕೂರಿನ ಕೈದಾಳದ ಶೂಟಿಂಗ್ ಸ್ಥಳದ ಬಳಿಯಿಂದ ಇನ್ನೋವಾ ಕಾರು ಜಫ್ತಿ ಮಾಡಲಾಗಿದೆ.

ಇದನ್ನೂ ಓದಿ: ಜೈಲಿನಲ್ಲಿರುವ ದರ್ಶನ್​ಗಾಗಿ 2 ಬ್ಯಾಗ್ ಹಿಡಿದು ಬಂದ ರಚಿತಾ ರಾಮ್​

ಆರ್​ಟಿಓ ಇನ್​ಸ್ಪೆಕ್ಟರ್ ಷರೀಫ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಕರ್ನಾಟಕ ಟೂರಿಸ್ಟ್ ಡ್ರೈವರ್ಸ್ ಅಸೋಸಿಯೆಷನ್ ನೀಡಿದ್ದ ದೂರನ್ನ ಆಧರಿಸಿ ತುಮಕೂರು ಆರ್​ಟಿಓ ಕಾರ್ಯಾಚರಣೆ ಮಾಡಿದರು. ನಟಿ ರಚಿತಾ ರಾಮ್ ಅಸಿಸ್ಟೆಂಟ್ ಬಳಸುತ್ತಿದ್ದ ಕೆಎ 04 ಎಂಎಸ್ 7938 ಸಂಖ್ಯೆಯ ಇನ್ನೋವಾ ಕಾರು ಜಪ್ತಿ ಆಗಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಿಂದ ಬಂದಿದ್ದ ಈ ಕಾರು ಮಂಜೇಶ್ ಎಂಬುವವರಿಗೆ ಸೇರಿದ್ದಾಗಿದೆ.

ಇದನ್ನೂ ಓದಿ: ‘ನನ್ನ ಇಡೀ ಫ್ಯಾಮಿಲಿ ಮೇಲೆ ದರ್ಶನ್ ಋಣ ಇದೆ’: ಜೈಲಿನ ಎದುರು ರಚಿತಾ ಭಾವುಕ ಮಾತು

ಸಂಚಾರ ಪೊಲೀಸರು ಜಪ್ತಿ ಮಾಡಿರುವ ಕಾರಿನಲ್ಲಿ ಚಲನಚಿತ್ರ ವಾಹನ ಚಾಲಕರ ಸಂಘದ ಬಿಲ್ ಪತ್ತೆಯಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಇನ್ನೋವಾ ಕಾರು ಓಡಾಡುತ್ತಿತ್ತು. ಇಂದು (ಅಕ್ಟೋಬರ್​ 9) ಖಚಿತ ಮಾಹಿತಿಯ ಮೇರೆಗೆ ಸಂಚಾರ ಪೊಲೀಸರು ಕಾರ್ಯಾಚರಣೆ ನಡೆಸಿ ಕಾರನ್ನ ಜಪ್ತಿ ಮಾಡಿದ್ದಾರೆ. ಬಳಿಕ ಮುಂದಿನ ಕ್ರಮ ಜರುಗಿಸಲು ಆರ್​ಟಿಓ ಮುಂದಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ