AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಚಿತಾ ರಾಮ್ ಅಸಿಸ್ಟೆಂಟ್ ಬಳಸುತ್ತಿದ್ದ ಕಾರು ಜಪ್ತಿ ಮಾಡಿದ ಪೊಲೀಸರು; ಕಾರಣ ಏನು?

ನಿಯಮ ಉಲ್ಲಂಘಿಸಿ ವೈಟ್​ ಬೋರ್ಡ್​ ಕಾರು ಬಳಸಲಾಗುತ್ತಿತ್ತು. ಖ್ಯಾತ ನಟಿ ರಚಿತಾ ರಾಮ್ ಅವರ ಅಸಿಸ್ಟೆಂಟ್ ಬಳಸುತ್ತಿದ್ದ ಇನ್ನೋವಾ ಕಾರನ್ನು ಸಂಚಾರ ಪೊಲೀಸರು ಜಪ್ತಿ ಮಾಡಿದ್ದಾರೆ. ಹೊಸ ಸಿನಿಮಾದ ಚಿತ್ರೀಕರಣದ ಸ್ಥಳದಿಂದ ಕಾರು ಜಪ್ತಿ ಮಾಡಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ರಚಿತಾ ರಾಮ್ ಅಸಿಸ್ಟೆಂಟ್ ಬಳಸುತ್ತಿದ್ದ ಕಾರು ಜಪ್ತಿ ಮಾಡಿದ ಪೊಲೀಸರು; ಕಾರಣ ಏನು?
ರಚಿತಾ ರಾಮ್ ಸಹಾಯಕನ ಕಾರು ಜಪ್ತಿ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Oct 09, 2024 | 6:24 PM

Share

ನಟ ದುನಿಯಾ ವಿಜಯ್​, ನಟಿ ರಚಿತಾ ರಾಮ್ ಅಭಿನಯಿಸುತ್ತಿರುವ ಹೊಸ ಸಿನಿಮಾದ ತಂಡಕ್ಕೆ ಆರ್​ಟಿಓ ಶಾಕ್​ ನೀಡಿದ್ದಾರೆ. ತುಮಕೂರಿನಲ್ಲಿ ಈ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಶೂಟಿಂಗ್​ಗೆ ಕಲಾವಿದರನ್ನು ಕರೆತರಲು ವೈಟ್​ ಬೋರ್ಡ್​ ವಾಹನ ಬಳಕೆ ಮಾಡಿದ್ದರಿಂದ ಕ್ರಮ ಕೈಗೊಳ್ಳಲಾಗಿದೆ. ಚಿತ್ರತಂಡದಿಂದ ನಿಯಮ ಉಲ್ಲಂಘನೆ ಆಗಿದೆ ಎಂಬ ಆರೋಪ ಎದುರಾಗಿದೆ. ವಾಣಿಜ್ಯ ಉದ್ದೇಶಕ್ಕಾಗಿ ಸಾರಿಗೆಯೇತರ ವಾಹನ ಬಳಕೆ ಮಾಡಲಾಗುತ್ತಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ದೂರು ಬಂದಿದ್ದರಿಂದ ತುಮಕೂರು ಸಂಚಾರ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ವಾಣಿಜ್ಯ ಉದ್ದೇಶಕ್ಕೆ ಬಳಸುವ ಎಲ್ಲೋ ಬೋರ್ಡ್ ಬದಲು ವೈಟ್ ಬೋರ್ಡ್ ಕಾರು ಬಳಕೆ ಮಾಡಲಾಗಿದೆ. ನಟ, ನಟಿಯರು, ಸಿಬ್ಬಂದಿಯನ್ನು ಚಿತ್ರೀಕರಣಕ್ಕೆ ಕರೆದುಕೊಂಡು ಬರಲು ಮತ್ತು ವಾಪಸ್​ ಕಳಿಸಲು ವೈಟ್ ಬೋರ್ಡ್ ಕಾರುಗಳ ಬಳಕೆ ಆಗಿದೆ. ಈ ಕಾರಣದಿಂದ ತುಮಕೂರು ಸಂಚಾರ ಪೊಲೀಸರು ಇನ್ನೋವಾ ಕಾರನ್ನು ಜಪ್ತಿ ಮಾಡಿದ್ದಾರೆ. ತುಮಕೂರಿನ ಕೈದಾಳದ ಶೂಟಿಂಗ್ ಸ್ಥಳದ ಬಳಿಯಿಂದ ಇನ್ನೋವಾ ಕಾರು ಜಫ್ತಿ ಮಾಡಲಾಗಿದೆ.

ಇದನ್ನೂ ಓದಿ: ಜೈಲಿನಲ್ಲಿರುವ ದರ್ಶನ್​ಗಾಗಿ 2 ಬ್ಯಾಗ್ ಹಿಡಿದು ಬಂದ ರಚಿತಾ ರಾಮ್​

ಆರ್​ಟಿಓ ಇನ್​ಸ್ಪೆಕ್ಟರ್ ಷರೀಫ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಕರ್ನಾಟಕ ಟೂರಿಸ್ಟ್ ಡ್ರೈವರ್ಸ್ ಅಸೋಸಿಯೆಷನ್ ನೀಡಿದ್ದ ದೂರನ್ನ ಆಧರಿಸಿ ತುಮಕೂರು ಆರ್​ಟಿಓ ಕಾರ್ಯಾಚರಣೆ ಮಾಡಿದರು. ನಟಿ ರಚಿತಾ ರಾಮ್ ಅಸಿಸ್ಟೆಂಟ್ ಬಳಸುತ್ತಿದ್ದ ಕೆಎ 04 ಎಂಎಸ್ 7938 ಸಂಖ್ಯೆಯ ಇನ್ನೋವಾ ಕಾರು ಜಪ್ತಿ ಆಗಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಿಂದ ಬಂದಿದ್ದ ಈ ಕಾರು ಮಂಜೇಶ್ ಎಂಬುವವರಿಗೆ ಸೇರಿದ್ದಾಗಿದೆ.

ಇದನ್ನೂ ಓದಿ: ‘ನನ್ನ ಇಡೀ ಫ್ಯಾಮಿಲಿ ಮೇಲೆ ದರ್ಶನ್ ಋಣ ಇದೆ’: ಜೈಲಿನ ಎದುರು ರಚಿತಾ ಭಾವುಕ ಮಾತು

ಸಂಚಾರ ಪೊಲೀಸರು ಜಪ್ತಿ ಮಾಡಿರುವ ಕಾರಿನಲ್ಲಿ ಚಲನಚಿತ್ರ ವಾಹನ ಚಾಲಕರ ಸಂಘದ ಬಿಲ್ ಪತ್ತೆಯಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಇನ್ನೋವಾ ಕಾರು ಓಡಾಡುತ್ತಿತ್ತು. ಇಂದು (ಅಕ್ಟೋಬರ್​ 9) ಖಚಿತ ಮಾಹಿತಿಯ ಮೇರೆಗೆ ಸಂಚಾರ ಪೊಲೀಸರು ಕಾರ್ಯಾಚರಣೆ ನಡೆಸಿ ಕಾರನ್ನ ಜಪ್ತಿ ಮಾಡಿದ್ದಾರೆ. ಬಳಿಕ ಮುಂದಿನ ಕ್ರಮ ಜರುಗಿಸಲು ಆರ್​ಟಿಓ ಮುಂದಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Mahesha E
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

Read More