AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಬೋಲ್ಡ್​ ಅವತಾರ ತಾಳಿದ ರಚಿತಾ ರಾಮ್​; ಪಡ್ಡೆ ಹುಡುಗರ ಮನಸ್ಸು ಕದ್ದ ರಚ್ಚು

ರಚಿತಾ ರಾಮ್​ ಅವರು ಅಜಯ್​ ರಾವ್​ ಜತೆಗೆ ‘ಲವ್​ ಯೂ ರಚ್ಚು’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಆರಂಭದಲ್ಲಿಯೇ ಸಾಕಷ್ಟು ಸುದ್ದಿ ಮಾಡಿತ್ತು. ಫೈಟರ್​ ವಿವೇಕ್​ ಅವರು ಶೂಟಿಂಗ್​ ವೇಳೆ ಹೈ ವೋಲ್ಟೇಜ್​ ತಂತಿ ಸ್ಪರ್ಷಿಸಿ ಮೃತಪಟ್ಟಿದ್ದರು.

ಮತ್ತೆ ಬೋಲ್ಡ್​ ಅವತಾರ ತಾಳಿದ ರಚಿತಾ ರಾಮ್​; ಪಡ್ಡೆ ಹುಡುಗರ ಮನಸ್ಸು ಕದ್ದ ರಚ್ಚು
ರಚಿತಾ ರಾಮ್​-ಅಜಯ್​ ರಾವ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Nov 08, 2021 | 8:53 PM

Share

ನಟಿ ರಚಿತಾ ರಾಮ್​ ಸ್ಯಾಂಡಲ್​ವುಡ್​ನಲ್ಲಿ ಬಹುಬೇಡಿಕೆಯ ನಟಿಯಲ್ಲಿ ಒಬ್ಬರು. ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ಪಕ್ಕದ ಮನೆ ಹುಡುಗಿ ಪಾತ್ರದ ಜತೆಗೆ ಸಾಕಷ್ಟು ಪ್ರಯೋಗಾತ್ಮಕ ಪಾತ್ರಗಳನ್ನೂ ಅವರು ನಿರ್ವಹಿಸುತ್ತಿದ್ದಾರೆ. ಈಗ ರಚಿತಾ ರಾಮ್​ ಅವರು ಹಾಟ್​ ಅವತಾರ ತಾಳಿದ್ದಾರೆ. ಶೂಟಿಂಗ್​ ಸಂದರ್ಭದಲ್ಲಿಯೇ ಸಾಕಷ್ಟು ವಿವಾದ ಸೃಷ್ಟಿಸಿದ್ದ ‘ಲವ್​ ಯೂ ರಚ್ಚು’ ಸಿನಿಮಾಗಾಗಿ ರಚಿತಾ ಬೋಲ್ಡ್​ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ. ಅವರ ಹಾಟ್​ ಅವತಾರ ನೋಡಿ ಫ್ಯಾನ್ಸ್​ ಫಿದಾ ಆಗಿದ್ದಾರೆ. ಅಜಯ್​ ರಾವ್​ ಜತೆ ತುಂಬಾನೇ ಇಂಟಿಮೇಟ್​ ಆಗಿ ಅವರ ಕಾಂಬಿನೇಷನ್​ ಮೂಡಿ ಬಂದಿದೆ. ಈ ಫೋಟೋ ಸಿನಿಮಾಗೆ ಒಳ್ಳೆಯ ಮೈಲೇಜ್​ ನೀಡುವ ಸಾಧ್ಯತೆ ಇದೆ.

ರಚಿತಾ ರಾಮ್​ ಅವರು ಅಜಯ್​ ರಾವ್​ ಜತೆಗೆ ‘ಲವ್​ ಯೂ ರಚ್ಚು’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಆರಂಭದಲ್ಲಿಯೇ ಸಾಕಷ್ಟು ಸುದ್ದಿ ಮಾಡಿತ್ತು. ಫೈಟರ್​ ವಿವೇಕ್​ ಅವರು ಶೂಟಿಂಗ್​ ವೇಳೆ ಹೈ ವೋಲ್ಟೇಜ್​ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದರು. ಈ ಪ್ರಕರಣದಿಂದ ಸಿನಿಮಾ ತಂಡದ ಕೆಲವರು ಅರೆಸ್ಟ್​ ಕೂಡ ಆಗಿದ್ದರು. ಈ ಘಟನೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಈಗ ಸಿನಿಮಾ ಪೋಸ್ಟರ್​ ಮೂಲಕ ಸದ್ದು ಮಾಡುತ್ತಿದೆ.

ಮಂಗಳವಾರ (ನವೆಂಬರ್​ 9) ಸಿನಿಮಾದ ವಿಡಿಯೋ ಸಾಂಗ್​ ರಿಲೀಸ್​ ಆಗುತ್ತಿದೆ. ಅದಕ್ಕೂ ಮೊದಲೇ ಚಿತ್ರತಂಡ ಪೋಸ್ಟರ್​ ರಿಲೀಸ್​ ಮಾಡುವ ಮೂಲಕ ಕುತೂಹಲ ಹುಟ್ಟು ಹಾಕುವ ಕೆಲಸ ಮಾಡಿದೆ ಚಿತ್ರತಂಡ. ಈ ಪೋಸ್ಟರ್​ ನೋಡಿ ಪಡ್ಡೆ ಹುಡುಗರು ಫುಲ್​ ಖುಷ್​ ಆಗಿದ್ದಾರೆ. ಇನ್ನು, ವಿಡಿಯೋ ಸಾಂಗ್​ ಹೇಗಿರಬಹುದು ಎನ್ನುವ ಕುತೂಹಲವೂ ಮೂಡಿದೆ.

ಇತ್ತೀಚೆಗೆ ರಚಿತಾ ರಾಮ್​ ಪುನೀತ್​ ಅಂತಿಮ ದರ್ಶನದ ವೇಳೆ ಕಾಣಿಸಿಕೊಂಡಿದ್ದರು. ‘ಪುನೀತ್​ ಜೊತೆ ನಟಿಸಲು ನಾನು ಪುಣ್ಯ ಮಾಡಿದ್ದೆ. ಅದು ನಮ್ಮ ತಾಯಯ ಆಸೆ ಆಗಿತ್ತು. ಅದಕ್ಕಾಗಿ ದೇವರಿಗೆ ನಾನು ಧನ್ಯವಾದ ಹೇಳಬೇಕು. ಗುರುಕಿರಣ್​ ಅವರ ಬರ್ತ್​ಡೇ ಪಾರ್ಟಿಯಲ್ಲಿ ಪುನೀತ್​ ಸಿಕ್ಕಿದ್ದರು. ರಾತ್ರಿ ಅವರು ಪಾರ್ಟಿ ಮುಗಿಸಿ ಹೊರಟಾಗ ಹುಷಾರು ಅಂತ ಹೇಳಿದ್ದೆ. ನನಗೆ ಮಾತನಾಡಲು ಸಾಧ್ಯವಾಗುತ್ತಿಲ್ಲ. ತುಂಬ ಸಂಕಟ ಆಗುತ್ತಿದೆ. ಕೈ ನಡುಗುತ್ತಿದೆ’ ಎಂದು ರಚಿತಾ ಕಣ್ಣೀರು ಸುರಿಸಿದ್ದರು.

ಇದನ್ನೂ ಓದಿ: ‘ತುಂಬ ಸಂಕಟ ಆಗ್ತಿದೆ, ಕೈ ನಡುಗುತ್ತಿದೆ’; ಪುನೀತ್​ ಬಗ್ಗೆ ಮಾತಾಡುತ್ತ ಮೌನ ತಾಳಿದ ರಚಿತಾ ರಾಮ್​

Published On - 8:38 pm, Mon, 8 November 21

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!