AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಬೋಲ್ಡ್​ ಅವತಾರ ತಾಳಿದ ರಚಿತಾ ರಾಮ್​; ಪಡ್ಡೆ ಹುಡುಗರ ಮನಸ್ಸು ಕದ್ದ ರಚ್ಚು

ರಚಿತಾ ರಾಮ್​ ಅವರು ಅಜಯ್​ ರಾವ್​ ಜತೆಗೆ ‘ಲವ್​ ಯೂ ರಚ್ಚು’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಆರಂಭದಲ್ಲಿಯೇ ಸಾಕಷ್ಟು ಸುದ್ದಿ ಮಾಡಿತ್ತು. ಫೈಟರ್​ ವಿವೇಕ್​ ಅವರು ಶೂಟಿಂಗ್​ ವೇಳೆ ಹೈ ವೋಲ್ಟೇಜ್​ ತಂತಿ ಸ್ಪರ್ಷಿಸಿ ಮೃತಪಟ್ಟಿದ್ದರು.

ಮತ್ತೆ ಬೋಲ್ಡ್​ ಅವತಾರ ತಾಳಿದ ರಚಿತಾ ರಾಮ್​; ಪಡ್ಡೆ ಹುಡುಗರ ಮನಸ್ಸು ಕದ್ದ ರಚ್ಚು
ರಚಿತಾ ರಾಮ್​-ಅಜಯ್​ ರಾವ್​
TV9 Web
| Edited By: |

Updated on:Nov 08, 2021 | 8:53 PM

Share

ನಟಿ ರಚಿತಾ ರಾಮ್​ ಸ್ಯಾಂಡಲ್​ವುಡ್​ನಲ್ಲಿ ಬಹುಬೇಡಿಕೆಯ ನಟಿಯಲ್ಲಿ ಒಬ್ಬರು. ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ಪಕ್ಕದ ಮನೆ ಹುಡುಗಿ ಪಾತ್ರದ ಜತೆಗೆ ಸಾಕಷ್ಟು ಪ್ರಯೋಗಾತ್ಮಕ ಪಾತ್ರಗಳನ್ನೂ ಅವರು ನಿರ್ವಹಿಸುತ್ತಿದ್ದಾರೆ. ಈಗ ರಚಿತಾ ರಾಮ್​ ಅವರು ಹಾಟ್​ ಅವತಾರ ತಾಳಿದ್ದಾರೆ. ಶೂಟಿಂಗ್​ ಸಂದರ್ಭದಲ್ಲಿಯೇ ಸಾಕಷ್ಟು ವಿವಾದ ಸೃಷ್ಟಿಸಿದ್ದ ‘ಲವ್​ ಯೂ ರಚ್ಚು’ ಸಿನಿಮಾಗಾಗಿ ರಚಿತಾ ಬೋಲ್ಡ್​ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ. ಅವರ ಹಾಟ್​ ಅವತಾರ ನೋಡಿ ಫ್ಯಾನ್ಸ್​ ಫಿದಾ ಆಗಿದ್ದಾರೆ. ಅಜಯ್​ ರಾವ್​ ಜತೆ ತುಂಬಾನೇ ಇಂಟಿಮೇಟ್​ ಆಗಿ ಅವರ ಕಾಂಬಿನೇಷನ್​ ಮೂಡಿ ಬಂದಿದೆ. ಈ ಫೋಟೋ ಸಿನಿಮಾಗೆ ಒಳ್ಳೆಯ ಮೈಲೇಜ್​ ನೀಡುವ ಸಾಧ್ಯತೆ ಇದೆ.

ರಚಿತಾ ರಾಮ್​ ಅವರು ಅಜಯ್​ ರಾವ್​ ಜತೆಗೆ ‘ಲವ್​ ಯೂ ರಚ್ಚು’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಆರಂಭದಲ್ಲಿಯೇ ಸಾಕಷ್ಟು ಸುದ್ದಿ ಮಾಡಿತ್ತು. ಫೈಟರ್​ ವಿವೇಕ್​ ಅವರು ಶೂಟಿಂಗ್​ ವೇಳೆ ಹೈ ವೋಲ್ಟೇಜ್​ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದರು. ಈ ಪ್ರಕರಣದಿಂದ ಸಿನಿಮಾ ತಂಡದ ಕೆಲವರು ಅರೆಸ್ಟ್​ ಕೂಡ ಆಗಿದ್ದರು. ಈ ಘಟನೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಈಗ ಸಿನಿಮಾ ಪೋಸ್ಟರ್​ ಮೂಲಕ ಸದ್ದು ಮಾಡುತ್ತಿದೆ.

ಮಂಗಳವಾರ (ನವೆಂಬರ್​ 9) ಸಿನಿಮಾದ ವಿಡಿಯೋ ಸಾಂಗ್​ ರಿಲೀಸ್​ ಆಗುತ್ತಿದೆ. ಅದಕ್ಕೂ ಮೊದಲೇ ಚಿತ್ರತಂಡ ಪೋಸ್ಟರ್​ ರಿಲೀಸ್​ ಮಾಡುವ ಮೂಲಕ ಕುತೂಹಲ ಹುಟ್ಟು ಹಾಕುವ ಕೆಲಸ ಮಾಡಿದೆ ಚಿತ್ರತಂಡ. ಈ ಪೋಸ್ಟರ್​ ನೋಡಿ ಪಡ್ಡೆ ಹುಡುಗರು ಫುಲ್​ ಖುಷ್​ ಆಗಿದ್ದಾರೆ. ಇನ್ನು, ವಿಡಿಯೋ ಸಾಂಗ್​ ಹೇಗಿರಬಹುದು ಎನ್ನುವ ಕುತೂಹಲವೂ ಮೂಡಿದೆ.

ಇತ್ತೀಚೆಗೆ ರಚಿತಾ ರಾಮ್​ ಪುನೀತ್​ ಅಂತಿಮ ದರ್ಶನದ ವೇಳೆ ಕಾಣಿಸಿಕೊಂಡಿದ್ದರು. ‘ಪುನೀತ್​ ಜೊತೆ ನಟಿಸಲು ನಾನು ಪುಣ್ಯ ಮಾಡಿದ್ದೆ. ಅದು ನಮ್ಮ ತಾಯಯ ಆಸೆ ಆಗಿತ್ತು. ಅದಕ್ಕಾಗಿ ದೇವರಿಗೆ ನಾನು ಧನ್ಯವಾದ ಹೇಳಬೇಕು. ಗುರುಕಿರಣ್​ ಅವರ ಬರ್ತ್​ಡೇ ಪಾರ್ಟಿಯಲ್ಲಿ ಪುನೀತ್​ ಸಿಕ್ಕಿದ್ದರು. ರಾತ್ರಿ ಅವರು ಪಾರ್ಟಿ ಮುಗಿಸಿ ಹೊರಟಾಗ ಹುಷಾರು ಅಂತ ಹೇಳಿದ್ದೆ. ನನಗೆ ಮಾತನಾಡಲು ಸಾಧ್ಯವಾಗುತ್ತಿಲ್ಲ. ತುಂಬ ಸಂಕಟ ಆಗುತ್ತಿದೆ. ಕೈ ನಡುಗುತ್ತಿದೆ’ ಎಂದು ರಚಿತಾ ಕಣ್ಣೀರು ಸುರಿಸಿದ್ದರು.

ಇದನ್ನೂ ಓದಿ: ‘ತುಂಬ ಸಂಕಟ ಆಗ್ತಿದೆ, ಕೈ ನಡುಗುತ್ತಿದೆ’; ಪುನೀತ್​ ಬಗ್ಗೆ ಮಾತಾಡುತ್ತ ಮೌನ ತಾಳಿದ ರಚಿತಾ ರಾಮ್​

Published On - 8:38 pm, Mon, 8 November 21

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ