AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಬೋಲ್ಡ್​ ಅವತಾರ ತಾಳಿದ ರಚಿತಾ ರಾಮ್​; ಪಡ್ಡೆ ಹುಡುಗರ ಮನಸ್ಸು ಕದ್ದ ರಚ್ಚು

ರಚಿತಾ ರಾಮ್​ ಅವರು ಅಜಯ್​ ರಾವ್​ ಜತೆಗೆ ‘ಲವ್​ ಯೂ ರಚ್ಚು’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಆರಂಭದಲ್ಲಿಯೇ ಸಾಕಷ್ಟು ಸುದ್ದಿ ಮಾಡಿತ್ತು. ಫೈಟರ್​ ವಿವೇಕ್​ ಅವರು ಶೂಟಿಂಗ್​ ವೇಳೆ ಹೈ ವೋಲ್ಟೇಜ್​ ತಂತಿ ಸ್ಪರ್ಷಿಸಿ ಮೃತಪಟ್ಟಿದ್ದರು.

ಮತ್ತೆ ಬೋಲ್ಡ್​ ಅವತಾರ ತಾಳಿದ ರಚಿತಾ ರಾಮ್​; ಪಡ್ಡೆ ಹುಡುಗರ ಮನಸ್ಸು ಕದ್ದ ರಚ್ಚು
ರಚಿತಾ ರಾಮ್​-ಅಜಯ್​ ರಾವ್​
TV9 Web
| Edited By: |

Updated on:Nov 08, 2021 | 8:53 PM

Share

ನಟಿ ರಚಿತಾ ರಾಮ್​ ಸ್ಯಾಂಡಲ್​ವುಡ್​ನಲ್ಲಿ ಬಹುಬೇಡಿಕೆಯ ನಟಿಯಲ್ಲಿ ಒಬ್ಬರು. ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ಪಕ್ಕದ ಮನೆ ಹುಡುಗಿ ಪಾತ್ರದ ಜತೆಗೆ ಸಾಕಷ್ಟು ಪ್ರಯೋಗಾತ್ಮಕ ಪಾತ್ರಗಳನ್ನೂ ಅವರು ನಿರ್ವಹಿಸುತ್ತಿದ್ದಾರೆ. ಈಗ ರಚಿತಾ ರಾಮ್​ ಅವರು ಹಾಟ್​ ಅವತಾರ ತಾಳಿದ್ದಾರೆ. ಶೂಟಿಂಗ್​ ಸಂದರ್ಭದಲ್ಲಿಯೇ ಸಾಕಷ್ಟು ವಿವಾದ ಸೃಷ್ಟಿಸಿದ್ದ ‘ಲವ್​ ಯೂ ರಚ್ಚು’ ಸಿನಿಮಾಗಾಗಿ ರಚಿತಾ ಬೋಲ್ಡ್​ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ. ಅವರ ಹಾಟ್​ ಅವತಾರ ನೋಡಿ ಫ್ಯಾನ್ಸ್​ ಫಿದಾ ಆಗಿದ್ದಾರೆ. ಅಜಯ್​ ರಾವ್​ ಜತೆ ತುಂಬಾನೇ ಇಂಟಿಮೇಟ್​ ಆಗಿ ಅವರ ಕಾಂಬಿನೇಷನ್​ ಮೂಡಿ ಬಂದಿದೆ. ಈ ಫೋಟೋ ಸಿನಿಮಾಗೆ ಒಳ್ಳೆಯ ಮೈಲೇಜ್​ ನೀಡುವ ಸಾಧ್ಯತೆ ಇದೆ.

ರಚಿತಾ ರಾಮ್​ ಅವರು ಅಜಯ್​ ರಾವ್​ ಜತೆಗೆ ‘ಲವ್​ ಯೂ ರಚ್ಚು’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಆರಂಭದಲ್ಲಿಯೇ ಸಾಕಷ್ಟು ಸುದ್ದಿ ಮಾಡಿತ್ತು. ಫೈಟರ್​ ವಿವೇಕ್​ ಅವರು ಶೂಟಿಂಗ್​ ವೇಳೆ ಹೈ ವೋಲ್ಟೇಜ್​ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದರು. ಈ ಪ್ರಕರಣದಿಂದ ಸಿನಿಮಾ ತಂಡದ ಕೆಲವರು ಅರೆಸ್ಟ್​ ಕೂಡ ಆಗಿದ್ದರು. ಈ ಘಟನೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಈಗ ಸಿನಿಮಾ ಪೋಸ್ಟರ್​ ಮೂಲಕ ಸದ್ದು ಮಾಡುತ್ತಿದೆ.

ಮಂಗಳವಾರ (ನವೆಂಬರ್​ 9) ಸಿನಿಮಾದ ವಿಡಿಯೋ ಸಾಂಗ್​ ರಿಲೀಸ್​ ಆಗುತ್ತಿದೆ. ಅದಕ್ಕೂ ಮೊದಲೇ ಚಿತ್ರತಂಡ ಪೋಸ್ಟರ್​ ರಿಲೀಸ್​ ಮಾಡುವ ಮೂಲಕ ಕುತೂಹಲ ಹುಟ್ಟು ಹಾಕುವ ಕೆಲಸ ಮಾಡಿದೆ ಚಿತ್ರತಂಡ. ಈ ಪೋಸ್ಟರ್​ ನೋಡಿ ಪಡ್ಡೆ ಹುಡುಗರು ಫುಲ್​ ಖುಷ್​ ಆಗಿದ್ದಾರೆ. ಇನ್ನು, ವಿಡಿಯೋ ಸಾಂಗ್​ ಹೇಗಿರಬಹುದು ಎನ್ನುವ ಕುತೂಹಲವೂ ಮೂಡಿದೆ.

ಇತ್ತೀಚೆಗೆ ರಚಿತಾ ರಾಮ್​ ಪುನೀತ್​ ಅಂತಿಮ ದರ್ಶನದ ವೇಳೆ ಕಾಣಿಸಿಕೊಂಡಿದ್ದರು. ‘ಪುನೀತ್​ ಜೊತೆ ನಟಿಸಲು ನಾನು ಪುಣ್ಯ ಮಾಡಿದ್ದೆ. ಅದು ನಮ್ಮ ತಾಯಯ ಆಸೆ ಆಗಿತ್ತು. ಅದಕ್ಕಾಗಿ ದೇವರಿಗೆ ನಾನು ಧನ್ಯವಾದ ಹೇಳಬೇಕು. ಗುರುಕಿರಣ್​ ಅವರ ಬರ್ತ್​ಡೇ ಪಾರ್ಟಿಯಲ್ಲಿ ಪುನೀತ್​ ಸಿಕ್ಕಿದ್ದರು. ರಾತ್ರಿ ಅವರು ಪಾರ್ಟಿ ಮುಗಿಸಿ ಹೊರಟಾಗ ಹುಷಾರು ಅಂತ ಹೇಳಿದ್ದೆ. ನನಗೆ ಮಾತನಾಡಲು ಸಾಧ್ಯವಾಗುತ್ತಿಲ್ಲ. ತುಂಬ ಸಂಕಟ ಆಗುತ್ತಿದೆ. ಕೈ ನಡುಗುತ್ತಿದೆ’ ಎಂದು ರಚಿತಾ ಕಣ್ಣೀರು ಸುರಿಸಿದ್ದರು.

ಇದನ್ನೂ ಓದಿ: ‘ತುಂಬ ಸಂಕಟ ಆಗ್ತಿದೆ, ಕೈ ನಡುಗುತ್ತಿದೆ’; ಪುನೀತ್​ ಬಗ್ಗೆ ಮಾತಾಡುತ್ತ ಮೌನ ತಾಳಿದ ರಚಿತಾ ರಾಮ್​

Published On - 8:38 pm, Mon, 8 November 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?