AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಕ್ಲು ಶಿವ ಕೊಲೆ ಕೇಸ್​ನ ಎ1 ಆರೋಪಿ ಜೊತೆ ರಚಿತಾ ರಾಮ್; ಏನಿದರ ಅಸಲಿಯತ್ತು?

ರಚಿತಾ ರಾಮ್ ಅವರ ಹೆಸರಿನಲ್ಲಿ ಇತ್ತೀಚೆಗೆ ಹಲವು ವಿವಾದಗಳು ಹುಟ್ಟಿಕೊಂಡಿವೆ. ಬಿಕ್ಲು ಶಿವ ಕೊಲೆ ಪ್ರಕರಣದ ಎ1 ಆರೋಪಿ ಜಗದೀಶ್ ಜೊತೆ ಅವರ ಫೋಟೋ ವೈರಲ್ ಆಗಿದೆ. ಆದರೆ, ಈ ಫೋಟೋ ರವಿಚಂದ್ರನ್ ನಿರ್ಮಿಸಿದ್ದ "ರವಿ ಬೋಪಣ್ಣ" ಚಿತ್ರದ ಸಂದರ್ಭದಲ್ಲಿದೆ ಎಂದು ರಚಿತಾ ಅವರ ಆಪ್ತ ಮೂಲಗಳು ಸ್ಪಷ್ಟಪಡಿಸಿವೆ.

ಬಿಕ್ಲು ಶಿವ ಕೊಲೆ ಕೇಸ್​ನ ಎ1 ಆರೋಪಿ ಜೊತೆ ರಚಿತಾ ರಾಮ್; ಏನಿದರ ಅಸಲಿಯತ್ತು?
ರಚಿತಾ-ಜಗ್ಗಿ
ರಾಜೇಶ್ ದುಗ್ಗುಮನೆ
|

Updated on:Jul 22, 2025 | 9:48 AM

Share

ನಟಿ ರಚಿತಾ ರಾಮ್ ಅವರು ಸದಾ ವಿವಾದಗಳಿಂದ ದೂರ ಇರಲು ಬಯಸುವವರು. ಆದರೆ, ಅವರನ್ನೇ ವಿವಾದ ಹುಡುಕಿ ಬರುತ್ತಿದೆ. ಈ ವಿಚಾರದಲ್ಲಿ ಅವರಿಗೆ ಸಾಕಷ್ಟು ಬೇಸರ ಇದೆ. ಈ ಮೊದಲು ರಾಜಕಾರಣಿ ಜೊತೆ ಅವರ ಹೆಸರು ತಳುಕು ಹಾಕಿ ಅಪಪ್ರಚಾರ ಮಾಡಲಾಗಿತ್ತು. ಇದನ್ನು ರಚಿತಾ (Rachita Ram) ಖಂಡಿಸಿದ್ದರು. ಆ ಬಳಿಕ ‘ಸಂಜು ವೆಡ್ಸ್ ಗೀತಾ 2’ ಪ್ರಚಾರಕ್ಕೆ ಅವರು ಬರುತ್ತಿಲ್ಲ ಎಂಬ ಆರೋಪ ಬಂತು. ಇದಕ್ಕೂ ಅವರು ಖಡಕ್ ಉತ್ತರ ಕೊಟ್ಟರು. ಈಗ ಬಿಕ್ಲು ಶಿವ ಕೊಲೆ ಕೇಸ್​ನ ಎ1 ಆರೋಪಿ ಜಗ್ಗಿ ಜೊತೆ  ರಚಿತಾ ಇರೋ  ಪೋಟೋ ವೈರಲ್ ಆಗಿದೆ. ಇದಕ್ಕೆ ರಚಿತಾ ಆಪ್ತ ಮೂಲಗಳಿಂದ ಸ್ಪಷ್ಟನೆ ಸಿಕ್ಕಿದೆ.

ಏನಿದು ವಿವಾದ?

ಇತ್ತೀಚೆಗೆ ಬಿಕ್ಲು ಶಿವನ ಕೊಲೆ ನಡೆದಿದೆ. ಈ ಪ್ರಕರಣದಲ್ಲಿ ಜಗದೀಶ್ ಎ1 ಆರೋಪಿ ಆಗಿದ್ದಾನೆ. ಈತನ ಜೊತೆ ರಚಿತಾ ರಾಮ್ ಇರೋ ಫೋಟೋ ವೈರಲ್ ಆಗಿದೆ.  ರಚಿತಾಗೆ ಜಗದೀಶ್ ಸೀರೆ ಹಾಗೂ ಒಡವೆ ಗಿಫ್ಟ್ ಕೊಟ್ಟಿದ್ದಾನೆ ಎನ್ನುವ ಆರೋಪ ಇದೆ. ಈ ವಿಚಾರದಲ್ಲಿ ಅಸಲಿಗೆ ನಡೆದಿದ್ದು ಏನು ಎಂಬುದರ ಸ್ಪಷ್ಟ ಮಾಹಿತಿ ಸಿಕ್ಕಿದೆ.

ಸಿನಿಮಾ ಮ್ಯಾಟರ್

ರವಿಚಂದ್ರನ್, ರಾಧಿಕಾ ಕುಮಾರಸ್ವಾಮಿ, ಮೊದಲಾದವರು ನಟಿಸಿರೋ ‘ರವಿ ಬೋಪಣ್ಣ’ ಸಿನಿಮಾ 2022ರಲ್ಲಿ ರಿಲೀಸ್ ಆಯಿತು. ಈ ಚಿತ್ರಕ್ಕೆ ಜಗದೀಶ್ ಸಹ ನಿರ್ಮಾಪಕನಾಗಿದ್ದ. ಈ ಚಿತ್ರದಲ್ಲಿ ರಚಿತಾ ರಾಮ್ ಅತಿಥಿ ಪಾತ್ರ ಮಾಡಿದ್ದರು. ಆದರೆ, ಅವರು ಸಂಭಾವನೆ ಪಡೆದಿರಲಿಲ್ಲ. ಹೀಗಾಗಿ ರವಿಚಂದ್ರನ್ ಅವರ ಪತ್ನಿ ಸೆಲೆಕ್ಟ್ ಮಾಡಿದ್ದ ಸೀರೆಯನ್ನು ರಚಿತಾಗೆ ನೀಡಲಾಯಿತು.

ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್: ಬಗೆದಷ್ಟು ಬಯಲಾಗ್ತಿವೆ ಸ್ಫೋಟಕ ಮಾಹಿತಿ, ಆರೋಪಿಗೆ ನಟ-ನಟಿಯರ ಜತೆಗೂ ನಂಟು

ರವಿಚಂದ್ರನ್ ಕೊಟ್ಟ ಉಡುಗೊರೆ ಇದಾಗಿದ್ದು, ಅದನ್ನು ರಚಿತಾ ಪ್ರೀತಿಯಿಂದ ಪಡೆದಿದ್ದರು. ಆತ ಕೂಡ ನಿರ್ಮಾಪಕನಾಗಿದ್ದರಿಂದ ಫೋಟೋದಲ್ಲಿ ಜೊತೆಗಿದ್ದ ಅಷ್ಟೇ ಹೊರತು ಇದು ಜಗ್ಗಿ ಕೊಟ್ಟಿರೋ ಉಡುಗೊರೆ ಅಲ್ಲ. ಇದನ್ನು ತಪ್ಪಾಗಿ ಬಿಂಬಿಸಲಾಗುತ್ತಿದೆ ಎಂದು ರಚಿತಾ ಆಪ್ತ ಮೂಲಗಳು ಹೇಳಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:00 am, Tue, 22 July 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು