AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಕ್ಲು ಶಿವ ಕೊಲೆ ಕೇಸ್​ನ ಎ1 ಆರೋಪಿ ಜೊತೆ ರಚಿತಾ ರಾಮ್; ಏನಿದರ ಅಸಲಿಯತ್ತು?

ರಚಿತಾ ರಾಮ್ ಅವರ ಹೆಸರಿನಲ್ಲಿ ಇತ್ತೀಚೆಗೆ ಹಲವು ವಿವಾದಗಳು ಹುಟ್ಟಿಕೊಂಡಿವೆ. ಬಿಕ್ಲು ಶಿವ ಕೊಲೆ ಪ್ರಕರಣದ ಎ1 ಆರೋಪಿ ಜಗದೀಶ್ ಜೊತೆ ಅವರ ಫೋಟೋ ವೈರಲ್ ಆಗಿದೆ. ಆದರೆ, ಈ ಫೋಟೋ ರವಿಚಂದ್ರನ್ ನಿರ್ಮಿಸಿದ್ದ "ರವಿ ಬೋಪಣ್ಣ" ಚಿತ್ರದ ಸಂದರ್ಭದಲ್ಲಿದೆ ಎಂದು ರಚಿತಾ ಅವರ ಆಪ್ತ ಮೂಲಗಳು ಸ್ಪಷ್ಟಪಡಿಸಿವೆ.

ಬಿಕ್ಲು ಶಿವ ಕೊಲೆ ಕೇಸ್​ನ ಎ1 ಆರೋಪಿ ಜೊತೆ ರಚಿತಾ ರಾಮ್; ಏನಿದರ ಅಸಲಿಯತ್ತು?
ರಚಿತಾ-ಜಗ್ಗಿ
ರಾಜೇಶ್ ದುಗ್ಗುಮನೆ
|

Updated on:Jul 22, 2025 | 9:48 AM

Share

ನಟಿ ರಚಿತಾ ರಾಮ್ ಅವರು ಸದಾ ವಿವಾದಗಳಿಂದ ದೂರ ಇರಲು ಬಯಸುವವರು. ಆದರೆ, ಅವರನ್ನೇ ವಿವಾದ ಹುಡುಕಿ ಬರುತ್ತಿದೆ. ಈ ವಿಚಾರದಲ್ಲಿ ಅವರಿಗೆ ಸಾಕಷ್ಟು ಬೇಸರ ಇದೆ. ಈ ಮೊದಲು ರಾಜಕಾರಣಿ ಜೊತೆ ಅವರ ಹೆಸರು ತಳುಕು ಹಾಕಿ ಅಪಪ್ರಚಾರ ಮಾಡಲಾಗಿತ್ತು. ಇದನ್ನು ರಚಿತಾ (Rachita Ram) ಖಂಡಿಸಿದ್ದರು. ಆ ಬಳಿಕ ‘ಸಂಜು ವೆಡ್ಸ್ ಗೀತಾ 2’ ಪ್ರಚಾರಕ್ಕೆ ಅವರು ಬರುತ್ತಿಲ್ಲ ಎಂಬ ಆರೋಪ ಬಂತು. ಇದಕ್ಕೂ ಅವರು ಖಡಕ್ ಉತ್ತರ ಕೊಟ್ಟರು. ಈಗ ಬಿಕ್ಲು ಶಿವ ಕೊಲೆ ಕೇಸ್​ನ ಎ1 ಆರೋಪಿ ಜಗ್ಗಿ ಜೊತೆ  ರಚಿತಾ ಇರೋ  ಪೋಟೋ ವೈರಲ್ ಆಗಿದೆ. ಇದಕ್ಕೆ ರಚಿತಾ ಆಪ್ತ ಮೂಲಗಳಿಂದ ಸ್ಪಷ್ಟನೆ ಸಿಕ್ಕಿದೆ.

ಏನಿದು ವಿವಾದ?

ಇತ್ತೀಚೆಗೆ ಬಿಕ್ಲು ಶಿವನ ಕೊಲೆ ನಡೆದಿದೆ. ಈ ಪ್ರಕರಣದಲ್ಲಿ ಜಗದೀಶ್ ಎ1 ಆರೋಪಿ ಆಗಿದ್ದಾನೆ. ಈತನ ಜೊತೆ ರಚಿತಾ ರಾಮ್ ಇರೋ ಫೋಟೋ ವೈರಲ್ ಆಗಿದೆ.  ರಚಿತಾಗೆ ಜಗದೀಶ್ ಸೀರೆ ಹಾಗೂ ಒಡವೆ ಗಿಫ್ಟ್ ಕೊಟ್ಟಿದ್ದಾನೆ ಎನ್ನುವ ಆರೋಪ ಇದೆ. ಈ ವಿಚಾರದಲ್ಲಿ ಅಸಲಿಗೆ ನಡೆದಿದ್ದು ಏನು ಎಂಬುದರ ಸ್ಪಷ್ಟ ಮಾಹಿತಿ ಸಿಕ್ಕಿದೆ.

ಸಿನಿಮಾ ಮ್ಯಾಟರ್

ರವಿಚಂದ್ರನ್, ರಾಧಿಕಾ ಕುಮಾರಸ್ವಾಮಿ, ಮೊದಲಾದವರು ನಟಿಸಿರೋ ‘ರವಿ ಬೋಪಣ್ಣ’ ಸಿನಿಮಾ 2022ರಲ್ಲಿ ರಿಲೀಸ್ ಆಯಿತು. ಈ ಚಿತ್ರಕ್ಕೆ ಜಗದೀಶ್ ಸಹ ನಿರ್ಮಾಪಕನಾಗಿದ್ದ. ಈ ಚಿತ್ರದಲ್ಲಿ ರಚಿತಾ ರಾಮ್ ಅತಿಥಿ ಪಾತ್ರ ಮಾಡಿದ್ದರು. ಆದರೆ, ಅವರು ಸಂಭಾವನೆ ಪಡೆದಿರಲಿಲ್ಲ. ಹೀಗಾಗಿ ರವಿಚಂದ್ರನ್ ಅವರ ಪತ್ನಿ ಸೆಲೆಕ್ಟ್ ಮಾಡಿದ್ದ ಸೀರೆಯನ್ನು ರಚಿತಾಗೆ ನೀಡಲಾಯಿತು.

ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್: ಬಗೆದಷ್ಟು ಬಯಲಾಗ್ತಿವೆ ಸ್ಫೋಟಕ ಮಾಹಿತಿ, ಆರೋಪಿಗೆ ನಟ-ನಟಿಯರ ಜತೆಗೂ ನಂಟು

ರವಿಚಂದ್ರನ್ ಕೊಟ್ಟ ಉಡುಗೊರೆ ಇದಾಗಿದ್ದು, ಅದನ್ನು ರಚಿತಾ ಪ್ರೀತಿಯಿಂದ ಪಡೆದಿದ್ದರು. ಆತ ಕೂಡ ನಿರ್ಮಾಪಕನಾಗಿದ್ದರಿಂದ ಫೋಟೋದಲ್ಲಿ ಜೊತೆಗಿದ್ದ ಅಷ್ಟೇ ಹೊರತು ಇದು ಜಗ್ಗಿ ಕೊಟ್ಟಿರೋ ಉಡುಗೊರೆ ಅಲ್ಲ. ಇದನ್ನು ತಪ್ಪಾಗಿ ಬಿಂಬಿಸಲಾಗುತ್ತಿದೆ ಎಂದು ರಚಿತಾ ಆಪ್ತ ಮೂಲಗಳು ಹೇಳಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:00 am, Tue, 22 July 25

ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!