AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡದಿ ಪೊಲೀಸ್​ ಠಾಣೆಯಲ್ಲಿ ವಿಚಾರಣೆ ಎದುರಿಸಿದ ನಟಿ ರಚಿತಾ ರಾಮ್

ಬಿಡದಿ ಪೊಲೀಸ್​​ ಠಾಣೆಗೆ ರಚಿತಾ ರಾಮ್​ ಹಾಜರಾದರು. ಡಿವೈಎಸ್​ಪಿ ಮೋಹನ್ ಕುಮಾರ್ ಅವರು ರಚಿತಾ ಅವರನ್ನು 45 ನಿಮಿಷಗಳ ಕಾಲ ವಿಚಾರಣೆ ನಡೆಸಿದರು.

ಬಿಡದಿ ಪೊಲೀಸ್​ ಠಾಣೆಯಲ್ಲಿ ವಿಚಾರಣೆ ಎದುರಿಸಿದ ನಟಿ ರಚಿತಾ ರಾಮ್
ರಚಿತಾ ರಾಮ್
TV9 Web
| Edited By: |

Updated on: Aug 24, 2021 | 9:28 PM

Share

‘ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್​ ವೇಳೆ ಸಂಭವಿಸಿದ ಅವಘಡದಲ್ಲಿ ಫೈಟರ್​ ವಿವೇಕ್​ ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಮೂವರು ಅರೆಸ್ಟ್​ ಕೂಡ ಆಗಿದ್ದಾರೆ. ಈಗ ಈ ಪ್ರಕರಣಕ್ಕೆ ಸಂಬಂಧಿಸಿ ‘ಲವ್ ಯೂ ರಚ್ಚು’ ಚಿತ್ರದ ನಾಯಕಿ ರಚಿತಾ ರಾಮ್​ ಅವರು ಪೊಲೀಸ್​ ಠಾಣೆಗೆ ಹಾಜರಾಗಿ ಇಂದು ವಿಚಾರಣೆ ಎದುರಿಸಿದ್ದಾರೆ.

ಬಿಡದಿ ಪೊಲೀಸ್​​ ಠಾಣೆಗೆ ರಚಿತಾ ರಾಮ್​ ಹಾಜರಾದರು. ಡಿವೈಎಸ್​ಪಿ ಮೋಹನ್ ಕುಮಾರ್ ಅವರು ರಚಿತಾ ಅವರನ್ನು 45 ನಿಮಿಷಗಳ ಕಾಲ ವಿಚಾರಣೆ ನಡೆಸಿದರು. ಪೊಲೀಸರು ಕೇಳಿದ ಪ್ರಶ್ನೆಗೆ ಅವರು ಉತ್ತರ ನೀಡಿದ್ದಾರೆ. ಪೊಲೀಸರ ವಿಚಾರಣೆ ಬಳಿಕ ನಟಿ ರಚಿತಾ ರಾಮ್​ ಪ್ರತಿಕ್ರಿಯೆ ನೀಡಿದ್ದಾರೆ. ‘ನನಗೆ ವಿಷಯ ಗೊತ್ತಾಗಿರಲಿಲ್ಲ. ಮಾಧ್ಯಮಗಳಿಂದ ಈ ವಿವರ ಗೊತ್ತಾಯ್ತು. ಫೈಟರ್​​ ಮೃತಪಟ್ಟಿರುವುದು ಅಷ್ಟೇ ನನಗೆ ಗೊತ್ತು. ಘಟನೆ ನಡೆದಾಗ ನಾನು ಅಲ್ಲಿ ಇರಲಿಲ್ಲ. ಪ್ರಕರಣದ ತನಿಖೆ ನಡೆಯುತ್ತಿದೆ, ಏನಾಗುತ್ತದೆ ನೋಡೋಣ. ಇದು ಉದ್ದೇಶಪೂರ್ವಕವಾಗಿ ನಡೆದ ಘಟನೆ ಅಲ್ಲ. ಇಂತಹ ದುರಂತ ನಡೆದಿರುವುದಕ್ಕೆ ನನಗೂ ನೋವು ಇದೆ’ ಎಂದಿದ್ದಾರೆ ರಚಿತಾ.

ರಾಮನಗರ ತಾಲೂಕಿನ ಜೋಗನದೊಡ್ಡಿ ಬಳಿ ‘ಲವ್​​ ಯೂ ರಚ್ಚು’ ಚಿತ್ರದ ಶೂಟಿಂಗ್​ ನಡೆಯುತ್ತಿತ್ತು. ಈ ವೇಳೆ ರೋಪ್​ ಎಳೆಯುವಾಗ ಫೈಟರ್​ ವಿವೇಕ್​ ಮೃತಪಟ್ಟಿದ್ದರು.​ ವಿದ್ಯುತ್​ ತಂತಿಗೆ ರೋಪ್ ಸ್ಪರ್ಶಿಸಿದ್ದು ಇದಕ್ಕೆ ಕಾರಣವಾಗಿತ್ತು. ಇದರಲ್ಲಿ ಚಿತ್ರತಂಡದ ನಿರ್ಲಕ್ಷ್ಯ ಎದ್ದು ಕಂಡಿದೆ. ಹೀಗಾಗಿ, ನಿರ್ದೇಶಕ ಶಂಕರಯ್ಯ, ಸಾಹಸ ನಿರ್ದೇಶಕ ವಿನೋದ್ ಕುಮಾರ್, ಕ್ರೇನ್ ಚಾಲಕ ಮಹದೇವ್ ಅವರನ್ನು ಬಂಧಿಸಲಾಗಿತ್ತು. ಆಗಸ್ಟ್​ 10ರಂದು ಇವರನ್ನು ರಾಮನಗರ ಹೆಚ್ಚುವರಿ ಸಿವಿಲ್ ಕೋರ್ಟ್ ಮುಂದೆ ಹಾಜರು ಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶೆ ಅನುಪಮಾ ಲಕ್ಷ್ಮೀ ಅವರು 14 ದಿನ ನ್ಯಾಯಾಂಗ ಬಂಧನ ವಿಧಿಸಿದ್ದರು.

ಇಂದು ಮತ್ತೆ ಈ ಮೂವರನ್ನು ರಾಮನಗರ ಹೆಚ್ಚುವರಿ ಸಿವಿಲ್ ಕೋರ್ಟ್ ಮುಂದೆ ವಿಡಿಯೋ ಕಾಳ್​ ಮೂಲಕ ಹಾಜರು ಪಡಿಸಲಾಯಿತು . ಈ ವೇಳೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹೀಗಾಗಿ, ಇವರು ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ಇರಬೇಕಾಗಿದೆ.

‘ಲವ್​ ಯೂ ರಚ್ಚು’ ಸಿನಿಮಾದಲ್ಲಿ ಅಜಯ್​ ರಾವ್​ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದು, ರಚಿತಾ ರಾಮ್ ಚಿತ್ರದ ನಾಯಕಿ. ಶಂಕರ್​ ರಾಜ್​ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಗುರು ದೇಶಪಾಂಡೆ ಚಿತ್ರದ ನಿರ್ಮಾಪಕರು.

ಇದನ್ನೂ ಓದಿ: ರಚಿತಾ ರಾಮ್​ ಬಗ್ಗೆ ಕೆಟ್ಟ ಕಮೆಂಟ್​: ಫೈಟರ್​ ವಿವೇಕ್​ ಸಾವಿನ ಕುರಿತು ಮೌನ ಮುರಿದ ‘ಡಿಂಪಲ್​ ಕ್ವೀನ್​’

Follow Us
Web contact
Web contact

TV9 Kannada

Read More
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್