AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈಟರ್​ ವಿವೇಕ್​ ಸಾವಿಗೆ ರಚಿತಾ ರಾಮ್ ಶ್ರದ್ಧಾಂಜಲಿ; ಓಂ ಶಾಂತಿ ಎನ್ನುವ ಬದಲು ಸಹಾಯ ಮಾಡಿ ಎಂದ ಜನರು

Fighter Vivek Death: ಘಟನೆ ನಡೆದು ಒಂದು ದಿನ ಕಳೆದ ಬಳಿಕ ರಚಿತಾ ರಾಮ್​ ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ವಿವೇಕ್​ಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಆದರೆ ಇಷ್ಟು ಮಾತ್ರದಿಂದ ಜನರು ಸಮಾಧಾನ ಆಗಿಲ್ಲ.

ಫೈಟರ್​ ವಿವೇಕ್​ ಸಾವಿಗೆ ರಚಿತಾ ರಾಮ್ ಶ್ರದ್ಧಾಂಜಲಿ; ಓಂ ಶಾಂತಿ ಎನ್ನುವ ಬದಲು ಸಹಾಯ ಮಾಡಿ ಎಂದ ಜನರು
ರಚಿತಾ ರಾಮ್​, ಮೃತ ಫೈಟರ್​ ವಿವೇಕ್​
TV9 Web
| Edited By: |

Updated on: Aug 10, 2021 | 1:44 PM

Share

ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದ ಕಾರಣ ಸಿನಿಮಾ ಚಿತ್ರೀಕರಣದ ವೇಳೆ ಸಾವು-ನೋವು ಸಂಭವಿಸುವಂತಹ ಘಟನೆ ಸ್ಯಾಂಡಲ್​ವುಡ್​ನಲ್ಲಿ ಆಗಾಗ ನಡೆಯುತ್ತಲೇ ಇದೆ. ಆದರೂ ಕೂಡ ಸಿನಿಮಾ ಮಂದಿ ಎಚ್ಚರಿಕೆ ವಹಿಸುತ್ತಲೇ ಇಲ್ಲ. ಸೋಮವಾರ (ಆ.9) ‘ಲವ್​ ಯೂ ರಚ್ಚು’ (Love You Racchu) ಸಿನಿಮಾ ಶೂಟಿಂಗ್ ವೇಳೆ ವಿದ್ಯುತ್​ ಸ್ಪರ್ಶದಿಂದ ಫೈಟರ್​ ವಿವೇಕ್​ ಸಾವನ್ನಪ್ಪಿರುವುದು ನೋವಿನ ಸಂಗತಿ. ಈ ಸಿನಿಮಾಗೆ ಅಜಯ್​ ರಾವ್​ (Ajay Rao) ಮತ್ತು ರಚಿತಾ ರಾಮ್​ (Rachita Ram) ನಾಯಕ-ನಾಯಕಿ. ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿರುವ ರಚಿತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ. ವಿವೇಕ್​ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

ಘಟನೆ ನಡೆದು ಒಂದು ದಿನ ಕಳೆದ ಬಳಿಕ ರಚಿತಾ ರಾಮ್​ ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ವಿವೇಕ್​ಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ‘ವಿದ್ಯುತ್​ ಅವಘಡದಿಂದ ಸಾವನ್ನಪಿದ ಫೈಟರ್​ ವಿವೇಕ್​ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ’ ಎಂದು ರಚಿತಾ ಪೋಸ್ಟ್​ ಮಾಡಿದ್ದಾರೆ. ಆದರೆ ಇಷ್ಟು ಮಾತ್ರದಿಂದ ಜನರು ಸಮಾಧಾನ ಆಗಿಲ್ಲ. ಮೃತ ವಿವೇಕ್​ ಕುಟುಂಬಕ್ಕೆ ಮತ್ತು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ರಂಜಿತ್​ ಅವರಿಗೆ ಹಣದ ಸಹಾಯ ಮಾಡಿ ಎಂದು ಜನರು ಒತ್ತಾಯಿಸಿದ್ದಾರೆ.

‘ವಿವೇಕ್​ ಕುಟುಂಬಕ್ಕೆ ಸಹಾಯ ಮಾಡಿ. ಅವರ ತಮ್ಮನ ವಿದ್ಯಾಭ್ಯಾಸಕ್ಕೆ ನೆರವಾಗಿ. ಬರೀ ಬಾಯಲ್ಲಿ ಹೇಳೋದಲ್ಲ ಮೇಡಂ. ನಿಮ್ಮ ಕೈಯಲ್ಲಿ ಆದಷ್ಟು ಹಣವನ್ನು ಅವರಿಗೆ ನೀಡಿ’ ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ. ಈ ಕಮೆಂಟ್​ಗಳಿಗೆ ರಚಿತಾ ಸದ್ಯ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Rachita Ram

(ರಚಿತಾ ರಾಮ್​ ಪೋಸ್ಟ್​ಗಳಿಗೆ ಜನರ ಕಮೆಂಟ್​)

ಇದಕ್ಕೂ ಮುನ್ನ ಅವರು ತಮ್ಮ ಫೋಟೋವೊಂದನ್ನು ಅಪ್​ಲೋಡ್​ ಮಾಡಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ​ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದರು. ‘ನಿಮ್ಮ ಸಿನಿಮಾದಲ್ಲಿ ಕ್ರೇನ್​ ದುರಂತದಿಂದ ಒಬ್ಬ ವ್ಯಕ್ತಿ ಸತ್ತಿದ್ದಾನೆ. ಅದರ ಬಗ್ಗೆ ನೀವು ಯಾವುದೇ ಪೋಸ್ಟ್​ ಮಾಡಿಲ್ಲ. ನಿಮ್ಮಿಂದ ಇದನ್ನು ನಿರೀಕ್ಷಿಸಿರಲಿಲ್ಲ. ಗೌರವ ಕಳೆದುಹೋಯ್ತು’ ಎಂಬ ಕಮೆಂಟ್​ಗಳು ಬಂದ ಬಳಿಕವೇ ರಚಿತಾ ಅವರು ವಿವೇಕ್​ಗೆ ಶ್ರದ್ಧಾಂಜಲಿ ಸಲ್ಲಿಸಿ ಪೋಸ್ಟ್ ಮಾಡಿದರು.

ಇದನ್ನೂ ಓದಿ:

‘ಅಜಯ್​ ರಾವ್​ ಅಲ್ಲೇ ಇದ್ರೂ ಸಹಾಯಕ್ಕೆ ಬರಲಿಲ್ಲ’: ಗಾಯಾಳು ರಂಜಿತ್​ ಆರೋಪ; ಅಜಯ್​ ಪ್ರತಿಕ್ರಿಯೆ ಏನು?

ಫೈಟರ್​​ ಸಾವು ಪ್ರಕರಣ: ನಿರ್ಮಾಪಕ ಗುರು ದೇಶಪಾಂಡೆ ಪರಾರಿ; ಐವರ ವಿರುದ್ಧ ಎಫ್​ಐಆರ್​

(Rachita Ram instagram post about fighter Vivek death during Love You Racchu shooting)

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ