AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rachita Ram: ‘ಸಂಜು ವೆಡ್ಸ್​ ಗೀತಾ 2’ ಸಿನಿಮಾಗೆ ರಚಿತಾ ರಾಮ್​ ನಾಯಕಿ? ನಾಗಶೇಖರ್​ ಜೊತೆ ನಡೆದಿದೆ ಮಾತುಕತೆ

Sanju Weds Geetha 2: ನಾಗಶೇಖರ್ ಅವರ ಸಿನಿಮಾಗಳಲ್ಲಿ ನಾಯಕಿಯ ಪಾತ್ರಕ್ಕೆ ಸಖತ್​ ಪ್ರಾಮುಖ್ಯತೆ ಇರುತ್ತದೆ. ‘ಸಂಜು ವೆಡ್ಸ್​ ಗೀತಾ 2’ ಸಿನಿಮಾಗೆ ಪಾತ್ರವರ್ಗದ ಆಯ್ಕೆ ನಡೆಯುತ್ತಿದೆ.

Rachita Ram: ‘ಸಂಜು ವೆಡ್ಸ್​ ಗೀತಾ 2’ ಸಿನಿಮಾಗೆ ರಚಿತಾ ರಾಮ್​ ನಾಯಕಿ? ನಾಗಶೇಖರ್​ ಜೊತೆ ನಡೆದಿದೆ ಮಾತುಕತೆ
ಶ್ರೀನಗರ ಕಿಟ್ಟಿ, ರಚಿತಾ ರಾಮ್​
ಮದನ್​ ಕುಮಾರ್​
|

Updated on: Jul 18, 2023 | 1:28 PM

Share

2011ರಲ್ಲಿ ತೆರೆಕಂಡ ‘ಸಂಜು ವೆಡ್ಸ್​ ಗೀತಾ’ ಸಿನಿಮಾ ಸೂಪರ್ ಹಿಟ್​ ಆಗಿತ್ತು. ಆ ಸಿನಿಮಾದ ಹಾಡುಗಳು ಇಂದಿಗೂ ಕೇಳುಗರ ಫೇವರಿಟ್​ ಲಿಸ್ಟ್​ನಲ್ಲಿವೆ. ನಾಗಶೇಖರ್​ ಅವರು ನಿರ್ದೇಶಿಸಿದ ಆ ಚಿತ್ರದಲ್ಲಿ ರಮ್ಯಾ ಮತ್ತು ಶ್ರೀನಗರ ಕಿಟ್ಟಿ (Srinagara Kitty) ಜೋಡಿಯಾಗಿ ನಟಿಸಿದ್ದರು. ಈಗ ಅದಕ್ಕೆ ಸೀಕ್ವೆಲ್​ ಬರುತ್ತಿದೆ. ಕೆಲವೇ ದಿನಗಳ ಹಿಂದೆ ‘ಸಂಜು ವೆಡ್ಸ್​ ಗೀತಾ 2’ (Sanju Weds Geetha 2) ಸಿನಿಮಾ ಅನೌನ್ಸ್​ ಆಯಿತು. ಈ ಬಾರಿ ಕೂಡ ಶ್ರೀನಗರ ಕಿಟ್ಟಿ ಅವರೇ ಹೀರೋ ಆಗಿ ನಟಿಸಲಿದ್ದಾರೆ ಎಂಬುದು ಪೋಸ್ಟರ್​ ಮೂಲಕ ಖಚಿತವಾಯಿತು. ಆದರೆ ನಾಯಕಿ ಯಾರು ಎಂಬ ಪ್ರಶ್ನೆಗೆ ಇನ್ನೂಉತ್ತರ ಸಿಕ್ಕಿಲ್ಲ. ನಟಿ ರಚಿತಾ ರಾಮ್​ (Rachita Ram) ಅವರ ಜೊತೆ ‘ಸಂಜು ವೆಡ್ಸ್​ ಗೀತಾ 2’ ಚಿತ್ರತಂಡದವರು ಮಾತುಕತೆ ನಡೆಸುತ್ತಿದ್ದಾರೆ ಎಂಬ ಸುದ್ದಿ ಬಹಿರಂಗ ಆಗಿದೆ. ಈ ಕುರಿತು ‘ಸಿನಿಮಾ ಎಕ್ಸ್​ಪ್ರೆಸ್​’ವರದಿ ಮಾಡಿದೆ.

ನಾಗಶೇಖರ್ ಅವರ ಸಿನಿಮಾಗಳಲ್ಲಿ ನಾಯಕಿಯ ಪಾತ್ರಕ್ಕೆ ಸಖತ್​ ಪ್ರಾಮುಖ್ಯತೆ ಇರುತ್ತದೆ. ಹಾಗಾಗಿ ‘ಸಂಜು ವೆಡ್ಸ್​ ಗೀತಾ 2’ ಸಿನಿಮಾದಲ್ಲಿ ಯಾರು ನಾಯಕಿ ಆಗುತ್ತಾರೆ ಎಂಬ ಕೌತುಕ ಅಭಿಮಾನಿಗಳಲ್ಲಿ ಇದೆ. ರಚಿತಾ ರಾಮ್​ ಅವರು ಕನ್ನಡ ಚಿತ್ರರಂಗದ ಬೇಡಿಕೆಯ ನಟಿ. ಅವರ ಜೊತೆ ನಿರ್ದೇಶಕ ನಾಗಶೇಖರ್​ ಅವರು ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಅಂತಿಮ ನಿರ್ಧಾರ ತೆಗೆದುಕೊಳ್ಳುವುದು ಇನ್ನೂ ಬಾಕಿ ಇದೆ.

ಇದನ್ನೂ ಓದಿ: ರಮ್ಯಾ ಮಾಡಿದ ಸಹಾಯ ಸ್ಮರಿಸಿದ ನಾಗಶೇಖರ್, ಹಂಚಿಕೊಂಡರು; ಸಂಜು ವೆಡ್ಸ್ ಗೀತಾ ಸಿನಿಮಾದ ಅಪರೂಪದ ವಿಷಯ

ರಚಿತಾ ರಾಮ್​ ಅವರಿಗೆ ಈ ಸಿನಿಮಾದಲ್ಲಿ ನಟಿಸಲು ಉತ್ಸಾಹ ಇದೆ ಎಂದು ಹೇಳಲಾಗುತ್ತಿದೆ. ಅವರಿಂದ ಅಧಿಕೃತ ಹೇಳಿಕೆ ಇನ್ನಷ್ಟೇ ಹೊರಬೀಳಬೇಕಿದೆ. ನಾಗಶೇಖರ್​ ಅವರೇ ‘ಸಂಜು ವೆಡ್ಸ್​ ಗೀತಾ 2’ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ 2024ರ ದಸರಾ ಹಬ್ಬಕ್ಕೆ ಈ ಚಿತ್ರವನ್ನು ತೆರೆಕಾಣಿಸಬೇಕು ಎಂಬುದು ಪ್ಲ್ಯಾನ್​. ಈ ಚಿತ್ರದ ಬಗ್ಗೆ ಹೆಚ್ಚಿನ ವಿವರ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

ಇದನ್ನೂ ಓದಿ: ಸಂಜು ವೆಡ್ಸ್ ಗೀತಾ 2 ಸಿನಿಮಾ ಘೋಷಣೆ: ಕಿಟ್ಟಿ ಜೊತೆಗೆ ರಮ್ಯಾ ಇರ್ತಾರಾ?

ನಟಿ ರಚಿತಾ ರಾಮ್​ ಅವರ ಕೈಯಲ್ಲಿ ಅನೇಕ ಪ್ರಾಜೆಕ್ಟ್​ಗಳಿವೆ. ‘ಶಬರಿ’, ‘ಮ್ಯಾಟ್ನಿ’, ‘ಲವ್​ ಮಿ ಆರ್​ ಹೇಟ್​ ಮಿ’ ಮುಂತಾದ ಸಿನಿಮಾಗಳಿಗೆ ಅವರು ನಾಯಕಿ ಆಗಿದ್ದಾರೆ. ‘ಅಯೋಗ್ಯ’ ಚಿತ್ರದ ಬಳಿಕ ಸತೀಶ್​ ‘ನೀನಾಸಂ’ ಮತ್ತು ರಚಿತಾ ರಾಮ್​ ಅವರು ‘ಮ್ಯಾಟ್ನಿ’ ಸಿನಿಮಾದಲ್ಲಿ ಜೋಡಿಯಾಗಿ ನಟಿಸುತ್ತಿರುವುದು ವಿಶೇಷ. ಈ ಚಿತ್ರದ ಮೊದಲ ಹಾಡು ಜುಲೈ 21ರಂದು ಬಿಡುಗಡೆ ಆಗಲಿದೆ. ಸಿನಿಮಾ ಮಾತ್ರವಲ್ಲದೇ ಕಿರುತೆರೆಯಲ್ಲೂ ರಚಿತಾ ರಾಮ್​ಗೆ ಬೇಡಿಕೆ ಇದೆ. ‘ಭರ್ಜರಿ ಬ್ಯಾಚುಲರ್​’ ರಿಯಾಲಿಟಿ ಶೋನಲ್ಲಿ ಅವರು ಜಡ್ಜ್​ ಆಗಿ ಭಾಗವಹಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ