ರಚಿತಾ ರಾಮ್​ ಬಗ್ಗೆ ಕೆಟ್ಟ ಕಮೆಂಟ್​: ಫೈಟರ್​ ವಿವೇಕ್​ ಸಾವಿನ ಕುರಿತು ಮೌನ ಮುರಿದ ‘ಡಿಂಪಲ್​ ಕ್ವೀನ್​’

| Updated By: ಮದನ್​ ಕುಮಾರ್​

Updated on: Aug 15, 2021 | 7:37 AM

‘ಸತ್ಯವನ್ನು ಒಂದೇ ಒಂದು ಸಲ ಪುನರ್​ ಪರಿಶೀಲಿಸಿದ್ರೆ ನನ್ನ ಬಗ್ಗೆ ಕೆಟ್ಟ ಕಮೆಂಟ್​ಗಳನ್ನು ಬರೆಯುವ, ನನ್ನ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುವ ಪ್ರಮೇಯ ಒದಗಿಬರುತ್ತಿರಲಿಲ್ಲ ಎನಿಸುತ್ತೆ’ ಎಂದು ರಚಿತಾ ರಾಮ್​ ಹೇಳಿದ್ದಾರೆ.

ರಚಿತಾ ರಾಮ್​ ಬಗ್ಗೆ ಕೆಟ್ಟ ಕಮೆಂಟ್​: ಫೈಟರ್​ ವಿವೇಕ್​ ಸಾವಿನ ಕುರಿತು ಮೌನ ಮುರಿದ ‘ಡಿಂಪಲ್​ ಕ್ವೀನ್​’
ರಚಿತಾ ರಾಮ್​, ಫೈಟರ್​ ವಿವೇಕ್​
Follow us on

ಅಜಯ್​ ರಾವ್​ ಮತ್ತು ರಚಿತಾ ರಾಮ್​ (Rachita Ram) ಮುಖ್ಯಭೂಮಿಕೆ ನಿಭಾಯಿಸುತ್ತಿದ್ದ ‘ಲವ್​ ಯೂ ರಚ್ಚು’ ಸಿನಿಮಾ ಶೂಟಿಂಗ್​ ವೇಳೆ ನಡೆಯಬಾರದ ಘಟನೆ ನಡೆದುಹೋಯ್ತು. ಕ್ರೇನ್​ಗೆ ವಿದ್ಯುತ್​ ತಂತಿ ತಗುಲಿ ಫೈಟರ್​ ವಿವೇಕ್​ (Fighter Vivek) ಸಾವನ್ನಪ್ಪಿದ್ದು ನಿಜಕ್ಕೂ ನೋವಿನ ಸಂಗತಿ. ಆ ದುರ್ಘಟನೆ ನಡೆದಾಗ ನಟಿ ರಚಿತಾ ರಾಮ್​ ಅವರು ಶೂಟಿಂಗ್​ ಸೆಟ್​ನಲ್ಲಿ ಇದ್ದರೋ ಇಲ್ಲವೋ ಎಂಬ ಬಗ್ಗೆ ಹಲವರಿಗೆ ಅನುಮಾನ ಇದೆ. ಆ ವಿಚಾರವನ್ನೇ ಇಟ್ಟುಕೊಂಡು ರಚಿತಾರನ್ನು ಟ್ರೋಲ್ ಮಾಡಲಾಗುತ್ತಿದೆ. ವಿವೇಕ್​ ಸಾವಿನ ಬಗ್ಗೆ ರಚಿತಾ ಮಾತನಾಡಿಲ್ಲ ಎಂದು ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ರಚಿತಾ ರಾಮ್​ ಅವರು ಮೊದಲ ಬಾರಿಗೆ ಮೌನ ಮುರಿದಿದ್ದಾರೆ.

ಫೈಟರ್​ ವಿವೇಕ್ ಸಾವಿನ ಕುರಿತು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ರಚಿತಾ ರಾಮ್​ ಒಂದು ದೀರ್ಘವಾದ ಪೋಸ್ಟ್​ ಮಾಡಿದ್ದಾರೆ. ‘ಎಲ್ಲರಿಗೂ ನಮಸ್ಕಾರ. ನೀವೆಲ್ಲರೂ ಕ್ಷೇಮವಾಗಿದ್ದೀರಿ ಅಂತ ನಂಬಿದ್ದೇನೆ. ದಯವಿಟ್ಟು ಎಲ್ಲರೂ ಹುಷಾರಾಗಿರಿ ಅಂತ ನಾನು ರಿಕ್ವೆಸ್ಟ್​ ಮಾಡ್ತೀನಿ. ಲವ್​ ಯೂ ರಚ್ಚು ಸಿನಿಮಾ ಸೆಟ್​ನಲ್ಲಿ ಒಂದು ನಡೆಯಬಾರದ ಘಟನೆ ನಡೆದಾಗಿನಿಂದ ಆ ಆಘಾತ ನನ್ನನ್ನು ಸೈಲೆಂಟ್​ ಆಗಿರುವಂತೆ ಮಾಡಿತ್ತು. ನನ್ನ ಮೌನ ಕೆಲವರಿಗೆ ತಪ್ಪಾಗಿ ಅರ್ಥವಾಗಿದೆ. ತಪ್ಪಾಗಿ ಬಳಕೆ ಆಗ್ತಾ ಇದೆ. ಇದು ನನಗೆ ನಿಜಕ್ಕೂ ನೋವು ಕೊಟ್ಟಿದೆ’ ಎಂದು ರಚಿತಾ ರಾಮ್​ ಬರೆದುಕೊಂಡಿದ್ದಾರೆ.

‘ದುರ್ಘಟನೆ ನಡೆದಾಗ ನಾನು ಸೆಟ್​ನಲ್ಲಿ ಇರಲಿಲ್ಲ. ಅದಂತೂ ಸತ್ಯ. ಆಗಸ್ಟ್​ 2ನೇ ತಾರೀಕಿನಿಂದ ನಾನು ಶಬರಿ ಸಿನಿಮಾ ಶೂಟಿಂಗ್​ಗೋಸ್ಕರ ಮೈಸೂರಿನಲ್ಲಿದೆ. ಸತ್ಯವನ್ನು ಒಂದೇ ಒಂದು ಸಲ ಪುನರ್​ ಪರಿಶೀಲಿಸಿದ್ರೆ ನನ್ನ ಬಗ್ಗೆ ಕೆಟ್ಟ ಕಮೆಂಟ್​ಗಳನ್ನು ಬರೆಯುವ, ನನ್ನ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುವ ಪ್ರಮೇಯ ಒದಗಿಬರುತ್ತಿರಲಿಲ್ಲ ಎನಿಸುತ್ತೆ’ ಎಂದು ರಚಿತಾ ಹೇಳಿದ್ದಾರೆ.

‘ಆ ಜಾಗದಲ್ಲಿ ನಾನು ಇರಲಿ, ಇಲ್ಲದಿರಲಿ. ನಮ್ಮ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದ ಸಹೋದ್ಯೋಗಿಯೊಬ್ಬರು ದುರ್ಘಟನೆಗೆ ಬಲಿಯಾಗಿದ್ದಾರೆ ಎನ್ನುವ ನೋವು ನನ್ನನ್ನು ಕಾಡ್ತಿದೆ. ಆ ಕುಟುಂಬಕ್ಕೆ ಆಗಿರುವ ನಷ್ಟಕ್ಕೆ ನನ್ನ ವಿಷಾದವಿದೆ. ಈ ದುಃಖವನ್ನು ಭರಿಸುವ ಶಕ್ತಿ ಆ ಕುಟುಂಬಕ್ಕೆ ಭಗವಂತ ನೀಡಲಿ ಅಂತ ನಾನು ಬೇಡಿಕೊಳ್ತೀನಿ. ನನ್ನ ಬೆಳೆಸಿರುವ ಜನರು ನನ್ನ ಮಾತುಗಳನ್ನು, ನನ್ನನ್ನು ನಂಬುತ್ತಾರೆ ಅಂತ ನಂಬಿದ್ದೇನೆ. ಆರೋಪಗಳು ಏನೇ ಇದ್ರೂ, ಸರಿ-ತಪ್ಪುಗಳ ಲೆಕ್ಕ ಆ ಭಗವಂತನ ಬಳಿ ಇರುತ್ತೆ ಅಂತಾನೂ ನಂಬಿದ್ದೇನೆ’ ಎಂದು ರಚಿತಾ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ:

‘ವಿವೇಕ್​ ಮೂಗಲ್ಲಿ ರಕ್ತ ಬಂದಾಗ ನಮಗೆ ಗಾಬರಿ ಆಯ್ತು; ಅಜಯ್​ ರಾವ್​ ಅಲ್ಲೇ ಇದ್ದರು’: ರಂಜಿತ್​ ನೇರ ಮಾತು

‘ಲವ್​ ಯೂ ರಚ್ಚು’ ಫೈಟರ್​ ವಿವೇಕ್​ ಸಾವಿಗೆ ಅಸಲಿ ಕಾರಣ ಏನು? ಪ್ರತ್ಯಕ್ಷದರ್ಶಿ ರಂಜಿತ್​ ತೆರೆದಿಟ್ಟ ಸತ್ಯ