AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಏಕ್​ ಲವ್​ ಯಾ’ ಚಿತ್ರ ನೋಡಲು ಕಾದಿದ್ದ ಪ್ರೇಕ್ಷಕರಿಗೆ ಬೇಸರ; ರಿಲೀಸ್​ ದಿನಾಂಕ ಮುಂದೂಡಿಕೆ​

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಜ.21ರಂದು ‘ಏಕ್​ ಲವ್​ ಯಾ’ ತೆರೆಗೆ ಬರಬೇಕಿತ್ತು. ಆದರೆ ದೇಶದಲ್ಲಿ ಒಮಿಕ್ರಾನ್​ ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದ ರಿಲೀಸ್​ ದಿನಾಂಕ ಮುಂದೂಡಲು ಚಿತ್ರತಂಡ ನಿರ್ಧರಿಸಿದೆ.

‘ಏಕ್​ ಲವ್​ ಯಾ’ ಚಿತ್ರ ನೋಡಲು ಕಾದಿದ್ದ ಪ್ರೇಕ್ಷಕರಿಗೆ ಬೇಸರ; ರಿಲೀಸ್​ ದಿನಾಂಕ ಮುಂದೂಡಿಕೆ​
ರಾಣಾ, ರಚಿತಾ ರಾಮ್​, ಜೋಗಿ ಪ್ರೇಮ್​
TV9 Web
| Edited By: |

Updated on: Jan 05, 2022 | 3:46 PM

Share

ಈಗಾಗಲೇ ಎರಡು ಲಾಕ್​ಡೌನ್​ ಕಾರಣದಿಂದ ಅನೇಕ ಉದ್ಯಮಗಳು ನಷ್ಟ ಅನುಭವಿಸಿವೆ. ಈಗ ಕೊವಿಡ್​ ಮೂರನೇ ಅಲೆ ಜೋರಾಗುತ್ತಿದೆ. ಈ ಸಂದರ್ಭದಲ್ಲಿ ಸರ್ಕಾರಗಳು ಕಠಿಣ ನಿಯಮಗಳನ್ನು ಜಾರಿ ಮಾಡುತ್ತಿವೆ. ನೈಟ್​ ಕರ್ಫ್ಯೂ, ವೀಕೆಂಡ್​ ಕರ್ಫ್ಯೂ ಮುಂತಾದ ನಿರ್ಬಂಧಗಳ ಹೇರಿಕೆಯಿಂದ ಚಿತ್ರೋದ್ಯಮದ ವಹಿವಾಟು ಕುಸಿಯಲಿದೆ. ಹಾಗಾಗಿ ಅನೇಕ ಸಿನಿಮಾಗಳು ರಿಲೀಸ್​ ದಿನಾಂಕ ಮುಂದೂಡಿಕೊಳ್ಳುತ್ತಿವೆ. ಜೋಗಿ ಪ್ರೇಮ್​ (Jogi Prem) ನಿರ್ದೇಶನದ ‘ಏಕ್​ ಲವ್​ ಯಾ’ (Ek Love Ya) ಸಿನಿಮಾ ಕೂಡ ಇದೇ ನಿರ್ಧಾರಕ್ಕೆ ಬಂದಿದೆ. ರಾಣಾ (Raana), ರಚಿತಾ ರಾಮ್ (Rachita Ram)​, ಗ್ರೀಷ್ಮಾ ನಾಣಯ್ಯ ಮುಖ್ಯಭೂಮಿಕೆ ನಿಭಾಯಿಸಿರುವ ಈ ಸಿನಿಮಾದ ರಿಲೀಸ್​ ದಿನಾಂಕ ಸಹ ಮುಂದೂಡಿಕೆ ಆಗಿದೆ. ಈ ಚಿತ್ರವನ್ನು ಆದಷ್ಟು ಬೇಗ ನೋಡಬೇಕು ಅಂದುಕೊಂಡಿದ್ದ ಅಭಿಮಾನಿಗಳಿಗೆ ಇದರಿಂದ ಸಹಜವಾಗಿಯೇ ನಿರಾಸೆ ಆಗಿದೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಜ.21ರಂದು ‘ಏಕ್​ ಲವ್​ ಯಾ’ ತೆರೆಗೆ ಬರಬೇಕಿತ್ತು. ಆದರೆ ದೇಶದಲ್ಲಿ ಒಮಿಕ್ರಾನ್​ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಆಕ್ಯುಪೆನ್ಸಿಗೆ ಮಾತ್ರ ಅವಕಾಶ ನೀಡಲಾಗಿದೆ. ಇಂಥ ಪರಿಸ್ಥಿತಿಯಲ್ಲಿ ಸಿನಿಮಾ ರಿಲೀಸ್​ ಮಾಡಿದರೆ ಕಲೆಕ್ಷನ್​ ಮೇಲೆ ಹೊಡೆತ ಬೀಳಲಿದೆ. ಹಾಗಾಗಿ ‘ಏಕ್​ ಲವ್​ ಯಾ’ ಬಿಡುಗಡೆ ದಿನಾಂಕವನ್ನು ಮುಂದೂಡಲು ಚಿತ್ರತಂಡ ನಿರ್ಧರಿಸಿದೆ.

‘ಏಕ್​ ಲವ್​ ಯಾ’ ಚಿತ್ರಕ್ಕೆ ಅರ್ಜುನ್​ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಹಾಡುಗಳು ಸೂಪರ್​ ಹಿಟ್​ ಆಗಿವೆ. ಆದ್ದರಿಂದ ಸಿನಿಮಾದ ಮೇಲೆ ಭಾರಿ ಹೈಪ್​ ಸೃಷ್ಟಿಯಾಗಿದೆ. ಅನೇಕ ಊರುಗಳಿಗೆ ತೆರಳಿ ಚಿತ್ರತಂಡ ಪ್ರಚಾರ ಮಾಡಿದೆ. ಆದರೆ ಏಕಾಏಕಿ ರಿಲೀಸ್​ ಡೇಟ್​ ಮುಂದೂಡಿಕೆ ಮಾಡಿರುವುದರಿಂದ ಇಷ್ಟು ದಿನ ಪ್ರಚಾರ ಮಾಡಿದ್ದು ನೀರಿನಲ್ಲಿ ಹೋಮ ಮಾಡಿದಂತೆ ಆಗಿದೆ. ಇದೇ ರೀತಿ ಅನೇಕ ಚಿತ್ರಗಳಿಗೆ ಸಂಕಷ್ಟ ಎದುರಾಗಿದೆ.

‘ಕೊವಿಡ್‌ ಮಾರ್ಗಸೂಚಿ ಬದಲಾದ ನಂತರ ಏಕ್‌ ಲವ್‌ ಯಾ ಚಿತ್ರದ ಹೊಸ ಬಿಡುಗಡೆ ದಿನಾಂಕವನ್ನು ಘೋಷಿಸಲಾಗುವುದು. ಈ ಸಿನಿಮಾವನ್ನು ವೀಕ್ಷಿಸಲು ಪ್ರೇಕ್ಷಕರು ಕಾತರರಾಗಿದ್ದಾರೆ. ಆದರೆ ಸದ್ಯದ ಸಂದರ್ಭವನ್ನು ಅರಿತು ಬಿಡುಗಡೆಯನ್ನು ಮುಂದೂಡಲಾಗಿದೆ. ಚಿತ್ರದ ಕುರಿತು ಸಾಕಷ್ಟು ಕುತೂಹಲಕರ ಅಂಶಗಳಿದ್ದು, ಸಿನಿಮಾ ಬಿಡುಗಡೆಯ ತನಕ ಅವೆಲ್ಲವನ್ನೂ ಅನಾವರಣಗೊಳಿಸಲಾಗುವುದು’ ಎಂದು ಚಿತ್ರತಂಡ ಮಾಹಿತಿ ನೀಡಿದೆ. ‘ರಕ್ಷಿತಾಸ್​ ಫಿಲ್ಮ್​ ಫ್ಯಾಕ್ಟರಿ’ ಬ್ಯಾನರ್​ನಲ್ಲಿ ಈ ಸಿನಿಮಾ ಸಿದ್ಧವಾಗಿದೆ.

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಅನೇಕ ಸಿನಿಮಾಗಳು ರಿಲೀಸ್​ ಡೇಟ್​ ಮುಂದೂಡಿಕೊಂಡಿವೆ. ಬಹುನಿರೀಕ್ಷಿತ ಸಿನಿಮಾಗಳಾದ ‘ಆರ್​ಆರ್​ಆರ್​’ ಹಾಗೂ ‘ರಾಧೆ ಶ್ಯಾಮ್​’ ಚಿತ್ರಗಳು ಕೂಡ ಬಿಡುಗಡೆ ದಿನಾಂಕವನ್ನು ಪೋಸ್ಟ್​ಪೋನ್​ ಮಾಡಿವೆ. ಒಟ್ಟಾರೆಯಾಗಿ ಕೊವಿಡ್​ ಮೂರನೇ ಅಲೆಯಿಂದಾಗಿ ಚಿತ್ರರಂಗದಲ್ಲಿ ಅನಿಶ್ಚಿತತೆ ಕಾಡಲು ಆರಂಭ ಆಗಿದೆ.

ಇದನ್ನೂ ಓದಿ:

‘ನಾನು ಸಿಗರೇಟ್​ ಸೇದಿದ್ದಕ್ಕೆ ಕಾರಣ ಇದೆ’; ಬೋಲ್ಡ್​ ದೃಶ್ಯಗಳ ಬಗ್ಗೆ ನೇರವಾಗಿ ಮಾತಾಡಿದ ರಚಿತಾ

‘ಊಟ, ತಿಂಡಿ ಇಲ್ಲದೇ ಗಾಂಧಿನಗರದಲ್ಲಿ ಅಲೆದವನು ನಾನು’: ಜೋಗಿ ಪ್ರೇಮ್​ ಫ್ಲ್ಯಾಶ್​ ಬ್ಯಾಕ್​

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು