AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದರ್ಶನ್ ಅವರನ್ನು ಈ ಸ್ಥಿತಿಯಲ್ಲಿ ನೋಡಲು ಕಷ್ಟ’: ಜೈಲಿನಲ್ಲಿ ಭೇಟಿ ಬಳಿಕ ರಚಿತಾ ರಾಮ್ ಪ್ರತಿಕ್ರಿಯೆ

ರಚಿತಾ ರಾಮ್​ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದೇ ದರ್ಶನ್​ ನಟನೆಯ ‘ಬುಲ್​ಬುಲ್​’ ಸಿನಿಮಾ ಮೂಲಕ. ಅದು ದರ್ಶನ್​ ಹೋಮ್​ ಬ್ಯಾನರ್​ ಸಿನಿಮಾ. ತಮಗೆ ಅವಕಾಶ ಕೊಟ್ಟ ದರ್ಶನ್​ ಈಗ ಈ ಸ್ಥಿತಿಯಲ್ಲಿ ಇರುವುದನ್ನು ನೋಡಿ ರಚಿತಾ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಇಂದು (ಆಗಸ್ಟ್​ 22) ದರ್ಶನ್​ ಅವರನ್ನು ರಚಿತಾ ಮಾತನಾಡಿಸಿದ್ದಾರೆ.

‘ದರ್ಶನ್ ಅವರನ್ನು ಈ ಸ್ಥಿತಿಯಲ್ಲಿ ನೋಡಲು ಕಷ್ಟ’: ಜೈಲಿನಲ್ಲಿ ಭೇಟಿ ಬಳಿಕ ರಚಿತಾ ರಾಮ್ ಪ್ರತಿಕ್ರಿಯೆ
ದರ್ಶನ್​, ರಚಿತಾ ರಾಮ್​
ಮದನ್​ ಕುಮಾರ್​
|

Updated on: Aug 22, 2024 | 5:17 PM

Share

ನಟ ದರ್ಶನ್​ ಜೈಲು ಸೇರಿ ಎರಡು ತಿಂಗಳಿಗೂ ಹೆಚ್ಚು ಸಮಯ ಕಳೆದಿದೆ. ಈಗ ಅವರನ್ನು ನೋಡಲು ರಚಿತಾ ರಾಮ್​ ಬಂದಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್​ ಅವರನ್ನು ರಚಿತಾ ರಾಮ್​ ಭೇಟಿ ಮಾಡಿದ್ದಾರೆ. ಭೇಟಿಯ ನಂತರ ಮಾಧ್ಯಮಗಳ ಜೊತೆ ರಚಿತಾ ಮಾತನಾಡಿದ್ದಾರೆ. ಈ ಮೊದಲು ಸೋಶಿಯಲ್​ ಮೀಡಿಯಾದಲ್ಲಿ ರಚಿತಾ ಅವರು ಈ ಪ್ರಕರಣದ ಬಗ್ಗೆ ಪೋಸ್ಟ್​ ಮಾಡಿದ್ದರು. ಈಗ ನೇರವಾಗಿ ತಮ್ಮ ಮಾತುಗಳನ್ನು ಮಾಧ್ಯಮಗಳ ಎದುರು ಹಂಚಿಕೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​, ಪವಿತ್ರಾ ಗೌಡ ಮುಂತಾದವರು ಪ್ರಮುಖ ಆರೋಪಿಗಳಾಗಿದ್ದಾರೆ. ಜೈಲಿನಲ್ಲಿರುವ ಅವರನ್ನು ಅನೇಕರು ಭೇಟಿ ಮಾಡಿದ್ದಾರೆ.

‘ದರ್ಶನ್​ ಅವರನ್ನು ಈ ಸ್ಥಿತಿಯಲ್ಲಿ ನೋಡೋಕೆ ಕಷ್ಟ ಆಗುತ್ತದೆ. ಅವರನ್ನು ನಾವೆಲ್ಲರೂ ತುಂಬ ಮಿಸ್​ ಮಾಡಿಕೊಳ್ಳುತ್ತಿದ್ದೇವೆ. ಅವರ ಅಭಿಮಾನಿಗಳು, ಅವರು ಕುಟುಂಬದವರು ಎಷ್ಟು ಮಿಸ್​ ಮಾಡಿಕೊಳ್ಳುತ್ತಿದ್ದಾರೋ ನಾನು ಕೂಡ ಅಷ್ಟೇ ಮಿಸ್​ ಮಾಡಿಕೊಳ್ಳುತ್ತಿದ್ದೇನೆ. ನಾನು ಕೂಡ ಅವರ ಫ್ಯಾನ್​. ನಾವೆಲ್ಲ ನಿಮಗಾಗಿ ಕಾಯುತ್ತಿದ್ದೇವೆ, ಪ್ಲೀಸ್​ ಬೇಗ ಬನ್ನಿ ಅಂತ ಹೇಳಿಬಂದಿದ್ದೇನೆ’ ಎಂದಿದ್ದಾರೆ ರಚಿತಾ ರಾಮ್​

‘ನನಗೆ ಕಾನೂನಿನ ಮೇಲೆ ನಂಬಿಕೆ ಇದೆ. ಆದಷ್ಟು ಬೇಗ ಹೊರಗೆ ಬರುತ್ತೇನೆ ಅಂತ ದರ್ಶನ್​ ನನಗೆ ಹೇಳಿದ್ದಾರೆ. ಅವರು ತುಂಬಾ ಆರೋಗ್ಯವಾಗಿದ್ದಾರೆ’ ಎಂದು ರಚಿತಾ ರಾಮ್​ ಅವರು ಹೇಳಿದ್ದಾರೆ. ‘ಬುಲ್​ಬುಲ್​’, ‘ಅಂಬರೀಷ’, ‘ಜಗ್ಗುದಾದ’, ‘ಕ್ರಾಂತಿ’ ಸಿನಿಮಾಗಳಲ್ಲಿ ದರ್ಶನ್​ ಜೊತೆ ರಚಿತಾ ರಾಮ್​ ನಟಿಸಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ರಚಿತಾ ರಾಮ್​ ನಟನೆಯ ‘ಬ್ಯಾಡ್​ ಮ್ಯಾನರ್ಸ್​’ ಹಾಗೂ ಈ ವರ್ಷ ತೆರೆಕಂಡ ‘ಮ್ಯಾಟ್ನಿ’ ಸಿನಿಮಾಗಳ ಪ್ರಚಾರಕ್ಕೆ ದರ್ಶನ್​ ಸಹಾಯ ಮಾಡಿದ್ದರು.

ಇದನ್ನೂ ಓದಿ: ಕೊಲೆ ಕೇಸ್​ನಲ್ಲಿ ದರ್ಶನ್​ಗೆ ಹೆಚ್ಚಿದ ಸಂಕಷ್ಟ; A2ನಿಂದ A1 ಮಾಡಿ ಚಾರ್ಜ್​ಶೀಟ್​ ಸಲ್ಲಿಕೆಗೆ ಸಿದ್ಧತೆ

ಶೀಘ್ರದಲ್ಲೇ ಪೊಲೀಸರು ಚಾರ್ಜ್​ಶೀಟ್​ ಸಲ್ಲಿಕೆ ಮಾಡಲಿದ್ದಾರೆ. ಈ ಪ್ರಕರಣದಲ್ಲಿ ದರ್ಶನ್​ ಎ1 ಆಗುವ ಸಾಧ್ಯತೆ ಇದೆ. ಹಲವಾರು ಬಗೆಯ ಸಾಕ್ಷಿಗಳು ಪೊಲೀಸರಿಗೆ ಸಿಕ್ಕಿವೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಬೆಂಗಳೂರಿಗೆ ಕರೆಸಿಕೊಂಡು ಹತ್ಯೆ ಮಾಡಿದ ಆರೋಪ ದರ್ಶನ್​ ಮೇಲಿದೆ. ಪ್ರಕರಣದ ತನಿಖೆ ಈಗ ಕೊನೇ ಹಂತಕ್ಕೆ ಬಂದಿದೆ. ಈಗಾಗಲೇ ಸಾಧು ಕೋಕಿಲ, ತರುಣ್​ ಸುಧೀರ್​, ವಿನೋದ್​ ಪ್ರಭಾಕರ್​, ವಿನೋದ್​ ರಾಜ್​ ಮುಂತಾದವರು ಜೈಲಿಗೆ ತೆರಳಿ ದರ್ಶನ್​ ಅವರನ್ನು ಭೇಟಿಯಾಗಿ ಬಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್