AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡವರೆಲ್ಲ ಜಾಣರಲ್ಲ: ಕಮಲ್ ಹಾಸನ್​ ಹೇಳಿಕೆಗೆ ರಚಿತಾ ರಾಮ್ ತಿರುಗೇಟು

ಕಾಲಿವುಡ್ ನಟ ಕಮಲ್ ಹಾಸನ್ ಅವರು ಕನ್ನಡ ಭಾಷೆ ಬಗ್ಗೆ ನೀಡಿದ ಆಕ್ಷೇಪಾರ್ಹ ಹೇಳಿಕೆಯಿಂದ ವಿವಾದ ಸೃಷ್ಟಿ ಆಗಿದೆ. ತಮಿಳಿನಿಂದಲೇ ಕನ್ನಡ ಹುಟ್ಟಿದ್ದು ಎಂದಿರುವ ಅವರ ಹೇಳಿಕೆಯನ್ನು ಕರುನಾಡಿನ ಜನರು ಖಂಡಿಸುತ್ತಿದ್ದಾರೆ. ಹಲವು ಸೆಲೆಬ್ರಿಟಿಗಳು ಈ ಬಗ್ಗೆ ಮಾತನಾಡಿದ್ದಾರೆ. ನಟಿ ರಚಿತಾ ರಾಮ್ ಕೂಡ ತಮ್ಮ ಅನಿಸಿಕೆ ತಿಳಿಸಿದ್ದಾರೆ.

ದೊಡ್ಡವರೆಲ್ಲ ಜಾಣರಲ್ಲ: ಕಮಲ್ ಹಾಸನ್​ ಹೇಳಿಕೆಗೆ ರಚಿತಾ ರಾಮ್ ತಿರುಗೇಟು
Kamal Haasan, Rachita Ram
ಮದನ್​ ಕುಮಾರ್​
|

Updated on: May 30, 2025 | 4:39 PM

Share

ನಟ ಕಮಲ್ ಹಾಸನ್ (Kamal Haasan) ಅವರು ‘ಥಗ್ ಲೈಫ್’ ಸಿನಿಮಾದ ಪ್ರಚಾರದ ವೇಳೆ ಅನಗತ್ಯವಾಗಿ ಭಾಷೆಯ ವಿಷಯ ಮಾತನಾಡಿದರು. ‘ತಮಿಳಿನಿಂದ ಕನ್ನಡ (Kannada) ಹುಟ್ಟಿದ್ದು’ ಎಂದು ಕಮಲ್ ಹಾಸನ್ ಹೇಳಿದ್ದನ್ನು ಅನೇಕ ಸೆಲೆಬ್ರಿಟಿಗಳು ವಿರೋಧಿಸಿದ್ದಾರೆ. ಹಂಸಲೇಖ, ಸಾಧುಕೋಕಿಲ, ಸಾ.ರಾ. ಗೋವಿಂದು, ಜಯಮಾಲಾ, ಸುಮಲತಾ ಅಂಬರೀಷ್ ಮುಂತಾದ ಸೆಲೆಬ್ರಿಟಿಗಳು ಈ ಕುರಿತು ಮಾತನಾಡಿದ್ದಾರೆ. ಈಗ ನಟಿ ರಚಿತಾ ರಾಮ್ ಕೂಡ ಸೋಶಿಯಲ್ ಮೀಡಿಯಾ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ‘ಎಲ್ಲಾದರೂ ಇರು ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು..’ ಹಾಡಿನ ಮೂಲಕ ರಚಿತಾ ರಾಮ್ (Rachita Ram) ಅವರು ಮಾತು ಆರಂಭಿಸಿದ್ದಾರೆ.

‘ನಾನು ಯಾಕೆ ಈ ಹಾಡು ಹೇಳುತ್ತಿದ್ದೇನೆ ಎಂಬುದು ನಿಮ್ಮೆಲ್ಲರಿಗೂ ಗೊತ್ತಾಗಿದೆ. ಕನ್ನಡ, ಕರ್ನಾಟಕ ಅಂತ ಬಂದರೆ ಪ್ರತಿಯೊಬ್ಬ ಕನ್ನಡಿಗನಿಗೂ ಇದು ಒಂದು ಎಮೋಷನ್. ನಮ್ಮ ಕನ್ನಡ ಭಾಷೆಯ ಬಗ್ಗೆ ಯಾರಾದರೂ ಟೀಕೆ ಮಾಡುತ್ತಿದ್ದಾರೆ ಎಂದರೆ ನಾವು ಸುಮ್ಮನೆ ಕೂರೋಕೆ ಆಗಲ್ಲ. ನಾವು ಕನ್ನಡದವರು ಎಷ್ಟು ವಿಶಾಲ ಹೃದಯದವರು ಎಂದರೆ ಎಲ್ಲ ಭಾಷೆಯ ಸಿನಿಮಾ ನೋಡುತ್ತೇವೆ, ಪ್ರತಿ ಭಾಷೆಯ ಸಿನಿಮಾ ಹಾಡುಗಳನ್ನು ಕೇಳುತ್ತೇವೆ. ಕಲಾವಿದರಿಗೆ ಬೆಂಬಲ ಕೊಡುತ್ತೇವೆ. ಆದರೆ ನಮ್ಮ ಭಾಷೆ ಬಗ್ಗೆ ಯಾರಾದರೂ ಮಾತನಾಡುತ್ತಿದ್ದಾರೆ ಎಂದಾಗ ನಾವು ಯಾಕೆ ಧ್ವನಿ ಎತ್ತಬಾರದು’ ಎಂದಿದ್ದಾರೆ ರಚಿತಾ ರಾಮ್.

ಇದನ್ನೂ ಓದಿ
Image
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿಕೆ, ನಟ ಜಗ್ಗೇಶ್​ರಿಂದ ಪಾಠ
Image
ರಾಜ್ಯಸಭೆಗೆ ಕಮಲ್ ಹಾಸನ್; ಮೇಲ್ಮನೆ ಪ್ರವೇಶಕ್ಕೆ ನಾಮ ನಿರ್ದೇಶನ
Image
ಕಮಲ್ ಹಾಸನ್ ವಿವಾದ: ಕನ್ನಡಿಗರ ಕೆರಳಿಸಿದ ನಟನ​ ಚಿತ್ರಕ್ಕೆ ಸಂಕಷ್ಟ
Image
ಸೋನು ನಿಗಮ್ ಬೆನ್ನಲ್ಲೇ ಕಮಲ್ ಹಾಸನ್ ವಿವಾದ: ಕೆರಳಿ ಕೆಂಡವಾದ ಕನ್ನಡಿಗರು

‘ನಾವು ಯಾವ ಭಾಷೆ ಬಗ್ಗೆಯೂ ಕೆಟ್ಟದಾಗಿ ಮಾತನಾಡುತ್ತಿಲ್ಲ. ಎಲ್ಲ ಭಾಷೆಯನ್ನೂ ನಾವು ಗೌರವಿಸುತ್ತೇವೆ. ಕನ್ನಡದ ಬಗ್ಗೆ ಯಾರೂದರೂ ಕೆಟ್ಟದಾಗಿ ಮಾತನಾಡಿದರೆ ನಾವು ಎದ್ದು ನಿಲ್ಲಬೇಕು. ದೊಡ್ಡವರೆಲ್ಲ ಜಾಣರಲ್ಲ, ಚಿಕ್ಕವರೆಲ್ಲ ಕೋಣರಲ್ಲ ಎಂಬ ಕನ್ನಡದ ಹಾಡು ಕೂಡ ನನಗೆ ನೆನಪಿಗೆ ಬರುತ್ತಿದೆ. ಚಿಕ್ಕವರು ತಪ್ಪು ಮಾಡಿದರೆ ಕ್ಷಮೆ ಕೇಳುವ ತನಕ ಬಿಡಲ್ಲ. ಆದರೆ ದೊಡ್ಡವರು ತಪ್ಪು ಮಾಡಿದರೆ? ತಪ್ಪು ಮಾಡಿದ ಬಳಿಕ ಕ್ಷಮೆ ಕೇಳುವುದರಲ್ಲಿ ಏನು ತಪ್ಪಿದೆ?’ ಎಂದು ರಚಿತಾ ರಾಮ್ ಪ್ರಶ್ನಿಸಿದ್ದಾರೆ.

View this post on Instagram

A post shared by R R (@rachita_instaofficial)

‘ಕನ್ನಡವನ್ನು ಸರಿಯಾಗಿ ಮಾತನಾಡದೇ ಇರುವವರಿಗೆ ಹೀಗಲ್ಲ ಹಾಗೆ ಅಂತ ನಾವು ತಿಳಿಸಿ ಹೇಳುತ್ತೇವೆ. ಇನ್ನು, ಕನ್ನಡ ಭಾಷೆಯ ಬಗ್ಗೆಯೇ ತಪ್ಪಾಗಿ ಮಾತನಾಡುವವರಿಗೆ ಏನಂತ ಹೇಳೋಣ? ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಿಸುತ್ತೇವೆ. ಈಗ ಪ್ರತಿಯೊಬ್ಬ ಕನ್ನಡಿಗರು ನಮ್ಮ ಭಾಷೆ ಮೇಲೆ ಇರುವ ಪ್ರೀತಿ, ಗೌರವವನ್ನು ತಿಳಿಸೋಣ’ ಎಂದು ರಚಿತಾ ರಾಮ್ ಹೇಳಿದ್ದಾರೆ.

ಇದನ್ನೂ ಓದಿ: ‘ತಮಿಳಿಗೆ ಲಿಪಿ ನೀಡಿದ್ದು ಕನ್ನಡ’: ಕಮಲ್ ಹಾಸನ್​ಗೆ ಹಂಸಲೇಖ ಖಡಕ್ ತಿರುಗೇಟು

ಕರ್ನಾಟಕದಾದ್ಯಂತ ಕಮಲ್ ಹಾಸನ್ ಮಾತಿಗೆ ವಿರೋಧ ವ್ಯಕ್ತವಾಗುತ್ತಿದೆ. ಹಾಗಿದ್ದರೂ ಕೂಡ ಅವರು ಕ್ಷಮೆ ಕೇಳಿಲ್ಲ. ಜೂನ್ 5ರಂದು ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾ ಬಿಡುಗಡೆ ಆಗಲಿದೆ. ಕ್ಷಮೆ ಕೇಳದಿದ್ದರೆ ಆ ಸಿನಿಮಾದ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂದು ಕನ್ನಡಪರ ಸಂಘಟನೆಗಳು ಪಟ್ಟು ಹಿಡಿದಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ