AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಯೋಗ್ಯ 2’ ಸಿನಿಮಾಗೆ ಮುಹೂರ್ತ; ಸತೀಶ್, ರಚಿತಾ ಚಿತ್ರಕ್ಕೆ ಅಶ್ವಿನಿ ಹಾರೈಕೆ

ರಚಿತಾ ರಾಮ್, ಸತೀಶ್ ನೀನಾಸಂ ಮುಖ್ಯ ಭೂಮಿಕೆಯಲ್ಲಿರುವ ‘ಅಯೋಗ್ಯ 2’ ಸಿನಿಮಾಗೆ ಮುಹೂರ್ತ ಮಾಡಲಾಗಿದೆ. ‘ಅಯೋಗ್ಯ’ ಚಿತ್ರದಲ್ಲಿ ಇದ್ದ ಬಹುತೇಕ ಕಲಾವಿದರು ಮತ್ತು ತಂತ್ರಜ್ಞರು ಈಗ ‘ಅಯೋಗ್ಯ 2’ ಸಿನಿಮಾದಲ್ಲೂ ಮುಂದುವರಿಯಲಿದ್ದಾರೆ. ಮಂಡ್ಯದಲ್ಲಿ ಈ ಸಿನಿಮಾಗೆ ಶೂಟಿಂಗ್ ನಡೆಲಿದೆ. ಮಹೇಶ್​ ಕುಮಾರ್​ ನಿರ್ದೇಶನ, ಮುನೇಗೌಡ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ.

‘ಅಯೋಗ್ಯ 2’ ಸಿನಿಮಾಗೆ ಮುಹೂರ್ತ; ಸತೀಶ್, ರಚಿತಾ ಚಿತ್ರಕ್ಕೆ ಅಶ್ವಿನಿ ಹಾರೈಕೆ
‘ಅಯೋಗ್ಯ 2’ ಸಿನಿಮಾ ಮುಹೂರ್ತ
ಮದನ್​ ಕುಮಾರ್​
|

Updated on: Dec 11, 2024 | 4:47 PM

Share

ನಟಿ ರಚಿತಾ ರಾಮ್ ಮತ್ತು ನಟ ಸತೀಶ್ ನೀನಾಸಂ ಅವರು ಮತ್ತೆ ಒಂದಾಗಿದ್ದರೆ. ‘ಅಯೋಗ್ಯ’ ಸಿನಿಮಾದಲ್ಲಿ ಜನರನ್ನು ರಂಜಿಸಿದ್ದ ಅವರು ಈಗ ‘ಅಯೋಗ್ಯ 2’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬಾಕ್ಸ್ ಆಫೀಸ್​ನಲ್ಲಿ ಸೂಪರ್ ಹಿಟ್ ಆದ ‘ಅಯೋಗ್ಯ’ ಸಿನಿಮಾ ಬಿಡುಗಡೆಯಾಗಿ 6 ವರ್ಷ ಕಳೆದಿದೆ. ಈಗ ‘ಅಯೋಗ್ಯ 2’ ಚಿತ್ರ ಸೆಟ್ಟೇರಿದೆ. ಬೆಂಗಳೂರಿನ ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಇಂದು (ಡಿ.11) ಅದ್ದೂರಿಯಾಗಿ ಮುಹೂರ್ತ ಮಾಡಲಾಗಿದೆ. ಆ ಮೂಲಕ ಶೂಟಿಂಗ್​ಗೆ ಚಾಲನೆ ನೀಡಲಾಗಿದೆ.

ನಿರ್ದೇಶಕ ಮಹೇಶ್ ಕುಮಾರ್ ಅವರು ‘ಅಯೋಗ್ಯ 2’ ಸಿನಿಮಾಗೆ ಆ್ಯಕ್ಷನ್​-ಕಟ್ ಹೇಳುತ್ತಿದ್ದಾರೆ. ಮುನೇಗೌಡ ಅವರು ‘ಎಸ್​ವಿಸಿ ಪ್ರೊಡಕ್ಷನ್’ ಮೂಲಕ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಮುಹೂರ್ತ ಕಾರ್ಯಕ್ರಮಕ್ಕೆ ಬಂದು ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡಿ ಚಿತ್ರತಂಡಕ್ಕೆ ವಿಶ್ ಮಾಡಿದರು. ನೆನಪಿರಲಿ ಪ್ರೇಮ್, ಶ್ರೇಯರ್ ಮಂಜು, ಪ್ರಮೋದ್ ಮುಂತಾದವರು ಕೂಡ ಹಾಜರಿದ್ದು ಶುಭ ಕೋರಿದರು.

ಮುಹೂರ್ತದ ಬಳಿಕ ಸುದ್ದಿಗೋಷ್ಠಿ ಮಾಡಲಾಯಿತು. ಈ ವೇಳೆ ನಿರ್ದೇಶಕ ಮಹೇಶ್ ಮಾತನಾಡಿದರು. ‘ಈ ಸಿನಿಮಾ ಕನ್ನಡ ಮಾತ್ರವಲ್ಲದೇ ತಮಿಳು ಹಾಗೂ ತೆಲುಗಿನಲ್ಲೂ ಬರಲಿದೆ. ಮೊದಲ ಭಾಗ ಹಿಟ್ ಆದ್ಮೇಲೆ ಬೇರೆ ಭಾಷೆಗೆ ಡಬ್ ಮಾಡಿದ್ದೆವು. ಈಗ ಕನ್ನಡದ ಜೊತೆ ತಮಿಳು ಮತ್ತು ತೆಲುಗಿನಲ್ಲಿ ರಿಲೀಸ್​ ಮಾಡಲಿದ್ದೇವೆ’ ಎಂದು ಮಹೇಶ್ ಹೇಳಿದ್ದಾರೆ.

ನಿರ್ಮಾಪಕರ ಬಗ್ಗೆ ಸತೀಶ್ ನೀನಾಸಂ ಅವರು ಮೆಚ್ಚುಗೆಯ ಮಾತಾಡಿದರು. ‘ಅಯೋಗ್ಯ2 ಚಿತ್ರಕ್ಕೆ ನಿರ್ಮಾಪಕರ ದೊಡ್ಡ ಪಟ್ಟಿ ಇತ್ತು. ಅದರೆ ಅಂತಿಮವಾಗಿ ಮುನೇಗೌಡ ಅವರು ಫೈನಲ್ ಆಗಿದ್ದಾರೆ. ಅವರು ಉತ್ತಮ ಪ್ರೊಡ್ಯುಸರ್​. ಈ ಸಿನಿಮಾ ಕನ್ನಡ ಚಿತ್ರರಂಗದಲ್ಲಿ ದೊಡ್ಡ ಸಿನಿಮಾ ಆಗಲಿದೆ’ ಎಂದಿದ್ದಾರೆ ಸತೀಶ್​. ಬಳಿಕ ಎಂ. ಮುನೇಗೌಡ ಮಾತನಾಡಿ, ‘ಮಹೇಶ್ ಅಯೋಗ್ಯ 2 ಸಿನಿಮಾ ಮಾಡಬೇಕು ಅಂತ ಹೇಳಿದಾಗ ಹಿಂದೆ-ಮುಂದೆ ಯೋಚಿಸದೇ ಒಪ್ಪಿಕೊಂಡೆ. ರಚಿತಾ ಕೂಡ ಈ ಸಿನಿಮಾ ಮಾಡಿ ಎಂದು ನಮಗೆ ಹೇಳಿದರು. ಹಲವು ಉತ್ತಮ ಕಲಾವಿದರು ಈ ಸಿನಿಮಾದಲ್ಲಿ ಇದ್ದಾರೆ’ ಎಂದರು.

ಇದನ್ನೂ ಓದಿ: ತಿರುಪತಿಯಲ್ಲಿ ದೇವರ ದರ್ಶನ ಪಡೆದು ಪ್ರಸಾದ ಹಂಚಿದ ರಚಿತಾ ರಾಮ್

ಈ ಸಿನಿಮಾ ಮೂಲಕ ನಟಿ ರಚಿತಾ ರಾಮ್ ಅವರಿಗೆ ‘ಲೇಡಿ ಸೂಪರ್​ ಸ್ಟಾರ್​’ ಎಂಬ ಬಿರುದು ನೀಡಲಾಗಿದೆ. ಆದರೆ ‘ನಾನು ಎಂದಿಗೂ ಅಭಿಮಾನಿಗಳ ಪ್ರೀತಿ ಬುಲ್ ಬುಲ್ ಆಗಿರುವೆ’ ಎಂದಿದ್ದಾರೆ ರಚಿತಾ. ‘6 ವರ್ಷಗಳ ಹಿಂದೆ ಇದೇ ಅಯೋಗ್ಯ ಸಿನಿಮಾ ಮುಹೂರ್ತ ಆಗಿತ್ತು. ಈಗ ಅಯೋಗ್ಯ 2 ಸೆಟ್ಟೇರುತ್ತಿದೆ. ತುಂಬಾ ಖುಷಿ ಆಗುತ್ತಿದೆ. ಅಶ್ವಿನಿ ಮೇಡಂ ಆಶೀರ್ವಾದವಿದೆ’ ಎಂದು ರಚಿತಾ ರಾಮ್ ಹೇಳಿದರು.

ರಚಿತಾ ರಾಮ್, ನೀನಾಸಂ ಸತೀಶ್ ಜೊತೆ ಸುಂದರ್ ರಾಜ್, ಶಿವರಾಜ್ ಕೆ.ಆರ್. ಪೇಟೆ, ತಬಲ ನಾಣಿ, ಮಂಜು ಪಾವಗಡ ಅವರು ‘ಅಯೋಗ್ಯ 2’ ಚಿತ್ರದ ಪಾತ್ರವರ್ಗದಲ್ಲಿ ಇರಲಿದ್ದಾರೆ. ಮಾಸ್ತಿ ಅವರು ಸಂಭಾಷಣೆ ಬರೆಯುತ್ತಿದ್ದಾರೆ. ವಿಶ್ವಜಿತ್ ರಾವ್ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​