AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rachita Ram: ನಾಮಧಾರಿಯಾಗಿರುವ ಚಿತ್ರ ಹಂಚಿಕೊಂಡ ರಚಿತಾ ರಾಮ್; ಏನು ವಿಶೇಷ?

ಚಂದನವನದ ಖ್ಯಾತ ನಟಿ ರಚಿತಾ ರಾಮ್ ಮೇಲುಕೋಟೆ ಚೆಲುವನಾರಾಯಣ ಸ್ವಾಮಿಯ ದರ್ಶನ ಪಡೆದಿದ್ದಾರೆ. ಅಲ್ಲಿಗೆ ತೆರಳಿರುವ ಸಂದರ್ಭದ ಚಿತ್ರಗಳನ್ನು ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

Rachita Ram: ನಾಮಧಾರಿಯಾಗಿರುವ ಚಿತ್ರ ಹಂಚಿಕೊಂಡ ರಚಿತಾ ರಾಮ್; ಏನು ವಿಶೇಷ?
ರಚಿತಾ ರಾಮ್ (ಕೃಪೆ: ರಚಿತಾ ರಾಮ್/ಇನ್ಸ್ಟಾಗ್ರಾಂ)
TV9 Web
| Edited By: |

Updated on:Sep 12, 2021 | 7:42 PM

Share

ಚಂದನವನದ ನಟ- ನಟಿಯರು ತಮ್ಮ ಮನೆತನದ ದೇವಸ್ಥಾನಗಳಿಗೆ ತೆರಳಿ ಪ್ರತಿ ವರ್ಷವೂ ಪೂಜೆ ಸಲ್ಲಿಸುತ್ತಾರೆ. ಎಷ್ಟೇ ಕಷ್ಟದ ಸಂದರ್ಭ ಬಂದರೂ ಆ ಸಂಪ್ರದಾಯವನ್ನು ತಪ್ಪಿಸುವುದಿಲ್ಲ. ಸ್ಯಾಂಡಲ್​ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಕೂಡ ಇದಕ್ಕೆ ಹೊರತಲ್ಲ. ಅವರು ಶನಿವಾರ, ತಮ್ಮ ಆರಾಧ್ಯ ದೈವ ಮೇಲುಕೋಟೆಗೆ ತೆರಳಿ ಚೆಲುವನಾರಾಯಣಸ್ವಾಮಿಯ ದರ್ಶನ ಪಡೆದಿದ್ದಾರೆ. ನಾಮಧರಿಸಿ ಸಾಂಪ್ರದಾಯಿಕ ಉಡುಗೆ ತೊಡುಗೆ ಧರಿಸಿ ದೇವರ ದರ್ಶನ ಮಾಡಿರುವ ರಚಿತಾ, ಚಿತ್ರಗಳನ್ನು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಪ್ರತೀ ವರ್ಷವೂ ಆಗಮಿಸಿ ದೇವರ ದರ್ಶನ ಪಡೆಯುವ ರಚಿತಾ, ಈ ವರ್ಷವೂ ತೆರಳಿ ಪೂಜೆ ಸಲ್ಲಿಸಿದ್ದಾರೆ. 

ಶ್ರೇಷ್ಠ ಗುರುಪರಂಪರೆಯ ಯತಿರಾಜದಾಸರ್ ಶ್ರೀನಿವಾಸನರಸಿಂಹನ್ ಗುರೂಜಿ ಮಾರ್ಗದರ್ಶನದಲ್ಲಿ, ಅವರ ಸಲಹೆಯಂತೆ ರಚಿತಾ  ಶ್ರೀ ದೇವರ ದರ್ಶನ ಮಾಡಿದ್ದಾರೆ. ಇದೇ ವೇಳೆ ರಚಿತಾ ದೇವರಿಗೆ ತಾವು ಸಮರ್ಪಿಸಲು ಬಯಸಿದ್ದ ಕಾಣಿಕೆಯನ್ನೂ ಅರ್ಪಿಸಿದ್ದಾರೆ ಎಂದು ತಿಳಿದುಬಂದಿದೆ. ಮೇಲುಕೋಟೆ ಪ್ರಯಾಣದ ಸಂದರ್ಭದ ಚಿತ್ರವೊಂದನ್ನು ರಚಿತಾ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Rachita Ram with Guru

ಗುರುಗಳೊಂದಿಗೆ ರಚಿತಾ ರಾಮ್

ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಚಿತ್ರಕ್ಕೆ ರಚಿತಾ, ‘ಮುಂಜಾನೆಯ ಒಂದು ಸಣ್ಣ ಧನಾತ್ಮಕ ಯೋಚನೆ ನಿಮ್ಮ ಇಡೀ ದಿನವನ್ನು ಬದಲಾಯಿಸುತ್ತದೆ. ಆದ್ದರಿಂದ ಧನಾತ್ಮಕ ಯೋಚನೆಗಳೊಂದಿಗೆ ದಿನವನ್ನು ಆರಂಭಿಸಿ’ ಎಂದು ಬರೆದುಕೊಂಡಿದ್ದಾರೆ. ಇತ್ತೀಚೆಗಷ್ಟೇ ರಚಿತಾ ಅವರು ನಟಿಸುತ್ತಿದ್ದ ಚಿತ್ರವೊಂದರಲ್ಲಿ ಘಟಿಸಿದ ಘಟನೆ ಕರ್ನಾಟಕದಲ್ಲಿ ಬಹಳಷ್ಟು ಚರ್ಚೆಯಾಗಿತ್ತು. ಈ ಎಲ್ಲದರ ನಡುವೆ ರಚಿತಾ ಧನಾತ್ಮಕವಾಗಿ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:

‘ಹಂಸಲೇಖ, ನಾನು ಗುಡ್ ಫ್ರೆಂಡ್ಸ್ ಅಲ್ಲವೇ ಅಲ್ಲ’ ಎಂದು ಹೇಳಿ ಅಚ್ಚರಿ ಮೂಡಿಸಿದ ರವಿಚಂದ್ರನ್

Sai Dharam Tej: ನಟ ಸಾಯಿ ಧರಮ್ ತೇಜ್​ಗೆ ಶಸ್ತ್ರಚಿಕಿತ್ಸೆ ಯಶಸ್ವಿ; ಆರೋಗ್ಯದ ಕುರಿತು ಆಸ್ಪತ್ರೆಯಿಂದ ಮಾಹಿತಿ ಬಿಡುಗಡೆ

(Rachita Ram shares new pic after she visited to Melukote Cheluva Narayana Swamy temple)

Published On - 7:33 pm, Sun, 12 September 21

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ