AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇವರೇ ಎದುರು ಬಂದರೂ ನಾನು ಕ್ಷಮೇ ಕೇಳಲ್ಲ’; ರಚಿತಾ ರಾಮ್ ನೇರ ಮಾತು

ರಚಿತಾ ರಾಮ್ ಅವರು ‘ಸಂಜು ವೆಡ್ಸ್ ಗೀತಾ 2’ ಚಿತ್ರದ ಪ್ರಚಾರದಲ್ಲಿ ಭಾಗವಹಿಸದಿರುವುದಕ್ಕೆ ಸಂಬಂಧಿಸಿದಂತೆ ವಿವಾದ ಉಂಟಾಗಿದೆ. ನಿರ್ದೇಶಕ ನಾಗಶೇಖರ್ ಅವರು ಫಿಲ್ಮ್ ಚೇಂಬರ್‌ಗೆ ದೂರು ನೀಡಿದ್ದರು. ಈಗ ರಚಿತಾ ತಮ್ಮ ಮೌನ ಮುರಿದು, ಬೇರೆ ಚಿತ್ರದ ಕೆಲಸದಲ್ಲಿ ಬ್ಯುಸಿ ಇದ್ದ ಕಾರಣ ಪ್ರಚಾರಕ್ಕೆ ಬರಲು ಸಾಧ್ಯವಾಗಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

‘ದೇವರೇ ಎದುರು ಬಂದರೂ ನಾನು ಕ್ಷಮೇ ಕೇಳಲ್ಲ’; ರಚಿತಾ ರಾಮ್ ನೇರ ಮಾತು
ರಚಿತಾ
ರಾಜೇಶ್ ದುಗ್ಗುಮನೆ
|

Updated on: Jun 21, 2025 | 8:54 AM

Share

ರಚಿತಾ ರಾಮ್ (Rachita Ram) ಅವರು ಸದ್ಯ ಸುದ್ದಿಯಲ್ಲಿದ್ದಾರೆ. ‘ಸಂಜು ವೆಡ್ಸ್ ಗೀತಾ 2’ ಪ್ರಚಾರಕ್ಕೆ ಅವರು ಬಂದಿಲ್ಲ ಎನ್ನುವ ಆರೋಪವನ್ನು ತಂಡ ಮಾಡಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ದೇಶಕ ನಾಗಶೇಖರ್ ಅವರು ಫಿಲ್ಮ್ ಚೇಂಬರ್​ಗೆ ದೂರು ನೀಡಿದ್ದಾರೆ. ಈ ವಿಚಾರದಲ್ಲಿ ಇಷ್ಟು ದಿನ ಮೌನವಾಗಿದ್ದ ರಚಿತಾ ರಾಮ್ ಅವರು ಇದೇ ಮೊದಲ ಬಾರಿ ಮಾತನಾಡಿದ್ದಾರೆ. ಈ ಪ್ರಕರಣದ ಪ್ರತಿ ವಿಚಾರವನ್ನೂ ತೆರೆದಿಟ್ಟಿದ್ದಾರೆ.

‘ಸಂಜು ವೆಡ್ಸ್ ಗೀತಾ 2’ ಚಿತ್ರ ಜನವರಿಯಲ್ಲಿ ರಿಲೀಸ್ ಆಯಿತು. ಇದಾದ ಬಳಿಕ ಸಿನಿಮಾನ ಇತ್ತೀಚೆಗೆ ಮತ್ತೊಮ್ಮೆ ರೀ-ರೀಲಿಸ್ ಮಾಡಲಾಯಿತು. ಈ ವೇಳೆ ತಂಡದವರು ಪ್ರಚಾರ ಮಾಡಿದರು. ಆದರೆ, ರಚಿತಾ ಎಲ್ಲಿಯೂ ಕಾಣಿಸಿಕೊಂಡಿಲ್ಲ. ರಚಿತಾ ಕರೆಗಳಿಗೆ ಪ್ರತಿಕ್ರಿಯಿಸುತ್ತಿಲ್ಲ ಎಂದು ನಾಗೇಶಖರ್ ದೂರಿದರು. ಈ ಎಲ್ಲಾ ವಿಚಾರಗಳಿಗೆ ರಚಿತಾ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ
Image
ಯೋಗದ ಮಹತ್ವವನ್ನು ವಿಶ್ವಕ್ಕೆ ಪರಿಚಯಿಸಿದ ಖ್ಯಾತಿ ಮೋದಿಗೆ ಸಲ್ಲುತ್ತೆ; ಪವನ್
Image
ನಿಜವಾದ ವಿಷಕಾರಿ ಜಂತುಗಳ ಜೊತೆ ರಾಜ್​ಕುಮಾರ್ ಶೂಟ್; ಇದಕ್ಕೆ ಗುಂಡಿಗೆ ಬೇಕು
Image
ಸೆಲೆಬ್ರಿಟಿಗಳು ಎಷ್ಟು ಗಂಟೆಗೆ ಕೊನೆಯ ಊಟ ಮಾಡುತ್ತಾರೆ? ಇಲ್ಲಿದೆ ಮಾಹಿತಿ
Image
ರುಕ್ಮಿಣಿ ವಸಂತ್ ಶರ್ಟ್​ ಮೇಲೆ ಟೈಗರ್ ಚಿತ್ರ; ಇದರ ಹಿಂದಿದೆ ದೊಡ್ಡ ರಹಸ್ಯ
View this post on Instagram

A post shared by R R (@rachita_instaofficial)

ಈ ಮೊದಲು ‘ಸಂಜು ವೆಡ್ಸ್ ಗೀತಾ 2’ ಶೂಟ್ ವೇಳೆ ಮತ್ತೊಂದು ಚಿತ್ರದ ಪ್ರಚಾರವನ್ನು ಮಾಡಲು ನಿರ್ದೇಶಕ ನಾಗಶೇಖರ್ ಅವಕಾಶ ನೀಡಿರಲಿಲ್ಲವಂತೆ. ಈಗ ರಚಿತಾ ಅವರು ಬೇರೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದರು. ಹೀಗಾಗಿ, ಈ ಚಿತ್ರದ ಪ್ರಚಾರಕ್ಕೆ ಬರೋಕಾಗಿಲ್ಲ. ಅವರು ಮಾಡಿದ್ದನ್ನೇ ನಾನು ಮಾಡಿದ್ದೇನೆ ಎಂದು ರಚಿತಾ ಹೇಳಿದ್ದಾರೆ.

ಇದನ್ನೂ ಓದಿ: ‘ಸಂಜು ವೆಡ್ಸ್ ಗೀತಾ 2’ ತಂಡದ ಬಣ್ಣ ಬಯಲು ಮಾಡಿದ ರಚಿತಾ ರಾಮ್; ಆರೋಪಗಳಿಗೆ ತಿರುಗೇಟು

ಇನ್ನು ಸೋಶಿಯಲ್ ಮೀಡಿಯಾ ಮೂಲಕ ರಚಿತಾ ಅವರು ‘ಸಂಜು ವೆಡ್ಸ್ ಗೀತಾ 2’ ಚಿತ್ರವನ್ನು ಪ್ರಚಾರ ಮಾಡುತ್ತಲೇ ಇದ್ದರು. ಹೀಗಾಗಿ ರಚಿತಾಗೆ ತಾವು ತಪ್ಪು ಮಾಡಿದ್ದೇನೆ ಎಂದು ಅನಿಸಿಲ್ಲ. ‘ನಾನು ತಪ್ಪು ಮಾಡಿದ್ದೇನೆ ಎಂದು ಅನಿಸುತ್ತಿಲ್ಲ. ತಪ್ಪು ಮಾಡಿದ್ದೇನೆ ಎಂದರೆ ಚಿಕ್ಕ ಮಕ್ಕಳ ಕಾಲಿಗೆ ಬೇಕಿದ್ದರೂ ಬೀಳುತ್ತೇನೆ. ತಪ್ಪು ಮಾಡಿಲ್ಲ ಎಂದರೆ ದೇವರೇ ಎದುರು ಬಂದರೂ ಕ್ಷಮೆ ಕೇಳಲ್ಲ. ನನ್ನಿಂದ ನನ್ನ ಅಭಿಮಾನಿಗಳಿಗೆ ಬೇಸರ ಆಗಿದ್ದರೆ ನಾನು ಕ್ಷಮೆ ಕೇಳುತ್ತೇನೆ. ಬೇರೆ ಯಾರಿಗೂ ನಾನು ಕ್ಷಮೆ ಕೇಳಲ್ಲ. ಲವ್​ ಯೂ ಆಲ್’ ಎಂದಿದ್ದಾರೆ ಅವರು. ರಚಿತಾ ಪ್ರತಿಕ್ರಿಯೆಗೆ ತಂಡ ಯಾವ ರೀತಿಯಲ್ಲಿ ಉತ್ತರಿಸುತ್ತದೆ ಎಂಬುದನ್ನು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ