AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಸಿಗರೇಟ್​ ಸೇದಿದ್ದಕ್ಕೆ ಕಾರಣ ಇದೆ’; ಬೋಲ್ಡ್​ ದೃಶ್ಯಗಳ ಬಗ್ಗೆ ನೇರವಾಗಿ ಮಾತಾಡಿದ ರಚಿತಾ

Ek Love Ya Movie Songs: ‘ಸಿಗರೇಟ್​ ಸೇದುವ ದೃಶ್ಯದಲ್ಲಿ ನಟಿಸಿದಾಗ ಅದು ಕೃತಕವಾಗಿ ಕಾಣಿಸಿದರೆ ಚೆನ್ನಾಗಿ ಇರೋದಿಲ್ಲ. ಸಹಜವಾಗಿ ಮೂಡಿಬಂದರೆ ಮಾತ್ರ ಆ ಪಾತ್ರಕ್ಕೆ ಒಂದು ಕಳೆ’ ಎಂದು ರಚಿತಾ ರಾಮ್​ ಹೇಳಿದ್ದಾರೆ.

‘ನಾನು ಸಿಗರೇಟ್​ ಸೇದಿದ್ದಕ್ಕೆ ಕಾರಣ ಇದೆ’; ಬೋಲ್ಡ್​ ದೃಶ್ಯಗಳ ಬಗ್ಗೆ ನೇರವಾಗಿ ಮಾತಾಡಿದ ರಚಿತಾ
ರಚಿತಾ ರಾಮ್
TV9 Web
| Edited By: |

Updated on:Dec 27, 2021 | 10:04 AM

Share

ನಟಿ ರಚಿತಾ ರಾಮ್​ (Rachita Ram) ಅವರು ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರು ನಟಿಸಿರುವ ‘ಲವ್​ ಯೂ ರಚ್ಚು’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಅದೇ ರೀತಿ, ‘ಏಕ್​ ಲವ್​ ಯಾ’ (Ek Love Ya) ಸಿನಿಮಾ ಕೂಡ ಬಿಡುಗಡೆಗೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈಗ ಹಾಡುಗಳ ಮೂಲಕ ಈ ಸಿನಿಮಾ ಸದ್ದು ಮಾಡುತ್ತಿದೆ. ಅರ್ಜುನ್​ ಜನ್ಯ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ‘ಜೋಗಿ’ ಪ್ರೇಮ್​ (Jogi Prem) ಅವರ ಬತ್ತಳಿಕೆಯಿಂದ ‘ಏಕ್​ ಲವ್​ ಯಾ’ ಮೂಡಿಬರುತ್ತಿದೆ. ಈ ಚಿತ್ರದಲ್ಲಿ ರಚಿತಾ ರಾಮ್​ ಸಿಗರೇಟ್​ ಸೇದುವ ದೃಶ್ಯ ಇದೆ. ಕೊಂಚ ಬೋಲ್ಡ್​ ಆಗಿಯೇ ಅವರು ಕಾಣಿಸಿಕೊಂಡಿದ್ದಾರೆ. ಆ ಬಗ್ಗೆ ಎದುರಾದ ಪ್ರಶ್ನೆಗೆ ರಚಿತಾ ರಾಮ್​ ನೇರ ಉತ್ತರ ನೀಡಿದ್ದಾರೆ.

ತಾವು ಏನೇ ಮಾಡಿದ್ದರೂ ಅದನ್ನು ಪಾತ್ರಕ್ಕಾಗಿ ಮಾಡಿರುವುದಾಗಿ ರಚಿತಾ ಹೇಳಿದ್ದಾರೆ. ‘ನಾನು ಈ ರೀತಿಯ ಪಾತ್ರ ಮಾಡಿದ್ದೇನೆ ಎಂದರೆ ಅದಕ್ಕೊಂದು ಅರ್ಥ ಇದೆ. ಸುಮ್​ ಸುಮ್ಮನೇ ನಾನು ಸಿಗರೇಟ್​ ಸೇದಿಲ್ಲ. ಬೋಲ್ಡ್​ ದೃಶ್ಯಗಳಲ್ಲಿ ಯಾಕೆ ನಟಿಸಿದ್ದೇನೆ ಎಂಬುದು ಸಿನಿಮಾ ರಿಲೀಸ್​ ಆದಾಗ ಗೊತ್ತಾಗುತ್ತದೆ. ಚೆನ್ನಾಗಿ ಮಾಡಿದ್ದೇನೆ ಅಂತ ಅಂದುಕೊಂಡಿದ್ದೇನೆ’ ಎಂದಿದ್ದಾರೆ ರಚಿತಾ ರಾಮ್​.

‘ಸಿಗರೇಟ್​ ಸೇದುವ ದೃಶ್ಯದಲ್ಲಿ ನಟಿಸಿದಾಗ ಅದು ಕೃತಕವಾಗಿ ಕಾಣಿಸಿದರೆ ಚೆನ್ನಾಗಿ ಇರೋದಿಲ್ಲ. ಸಹಜವಾಗಿ ಮೂಡಿಬಂದರೆ ಮಾತ್ರ ಆ ಪಾತ್ರಕ್ಕೆ ಒಂದು ಕಳೆ. ಸಾಂಗ್​ ಬಿಡುಗಡೆ ಆದಾಗಲೇ ನಂಗೆ ಆ ದೃಶ್ಯಗಳನ್ನು ನೋಡುವ ಅವಕಾಶ ಸಿಕ್ಕಿದ್ದು. ಇವತ್ತಿನವರೆಗೂ ಪ್ರೇಮ್​ ಅವರು ಯಾವುದೇ ಹಾಡನ್ನು ನಮಗೆ ತೋರಿಸಿರಲಿಲ್ಲ. ಅವರು ಅಷ್ಟು ರಹಸ್ಯ ಕಾಪಾಡಿಕೊಂಡು, ನಂತರ ಜನರ ಮಡಿಲಿಗೆ ಹಾಕುತ್ತಾರೆ’ ಎಂದಿದ್ದಾರೆ ರಚಿತಾ ರಾಮ್​.

ಈ ಬಗ್ಗೆ ನಿರ್ದೇಶಕ ಪ್ರೇಮ್​ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ‘ಧೂಮಪಾನ, ಮದ್ಯಪಾನ ಮಾಡುವ ಹುಡುಗಿಯರು ಸಹ ಇದ್ದಾರೆ. ಆ ರೀತಿ ಮಾಡಲು ಅವರಿಗೆ ಅವರದ್ದೇ ಆದ ಕಾರಣಗಳಿವೆ. ಅಂಥವರ ಪಾತ್ರವನ್ನು ರಚಿತಾ ರಾಮ್​ ಮಾಡಿದ್ದಾರೆ. ಮೊದಲು ಈ ಪಾತ್ರ ಮಾಡಲು ಅಂಜಿಕೊಂಡಿದ್ದರು. ನಂತರ ಒಪ್ಪಿಕೊಂಡರು’ ಎಂದು ಪ್ರೇಮ್​ ಹೇಳಿದ್ದಾರೆ.

ಇದನ್ನೂ ಓದಿ:

‘ಪ್ರೀತಿ ತೋರಿಸೋ ನಮಗೆ ಬೆನ್ನಿಗೆ ಚೂರಿ ಹಾಕೋ ಕೆಲಸ ಮಾಡ್ದಾಗ ಬೇಜಾರಾಗತ್ತೆ’: ರಚಿತಾ ರಾಮ್​

ಚಂದನ್ ಶೆಟ್ಟಿ ಜತೆ ರಚಿತಾ ರಾಮ್​ ‘ಲಕ ಲಕ ಲ್ಯಾಂಬೋರ್ಗಿನಿ’; ಪೋಸ್ಟರ್​ ಮೂಲಕ ಹೆಚ್ಚಿತು ಕ್ರೇಜ್​

Published On - 9:52 am, Mon, 27 December 21

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್