AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷವೇ ರಚಿತಾ ರಾಮ್ ಮದುವೆ: ಅಪ್​ಡೇಟ್ ಕೊಟ್ಟ ರವಿಚಂದ್ರನ್

Rachita Ram: ನಟಿ ರಚಿತಾ ರಾಮ್ ಕನ್ನಡದ ಬಲು ಬೇಡಿಕೆಯ ನಟಿಯರಲ್ಲಿ ಒಬ್ಬರು. ಸಾಕಷ್ಟು ಸಂಖ್ಯೆಯ ಅಭಿಮಾನಿಗಳನ್ನು ರಚಿತಾ ರಾಮ್ ಹೊಂದಿದ್ದಾರೆ. ರಚಿತಾ ರಾಮ್ ಸಿನಿಮಾಗಳ ಜೊತೆಗೆ ಅವರ ಮದುವೆ ಬಗ್ಗೆಯೂ ಆಗಾಗ್ಗೆ ಸುದ್ದಿ ಆಗುತ್ತಲೇ ಇರುತ್ತದೆ. ಅಭಿಮಾನಿಗಳಂತೂ ಮದುವೆ ಯಾವಾಗ ಎಂದು ಕೇಳುತ್ತಲೇ ಇರುತ್ತಾರೆ. ಇದೀಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ.

ಈ ವರ್ಷವೇ ರಚಿತಾ ರಾಮ್ ಮದುವೆ: ಅಪ್​ಡೇಟ್ ಕೊಟ್ಟ ರವಿಚಂದ್ರನ್
Rachita Ram
 ಶ್ರೀಲಕ್ಷ್ಮೀ ಎಚ್
| Edited By: |

Updated on: Apr 13, 2025 | 9:52 AM

Share

ರಚಿತಾ ರಾಮ್ (Rachita Ram) ಅವರು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದಿದ್ದಾರೆ. ಅವರಿಗೆ ಈಗ 32 ವರ್ಷ. ಅವರು ಇನ್ನೂ ಮದುವೆ ಆಗಿಲ್ಲ ಏಕೆ ಎಂಬುದು ಅನೇಕರ ಪ್ರಶ್ನೆ. ಅವರು ಲವ್ ವಿಚಾರದಲ್ಲಿ ಯಾರ ಜೊತೆಯೂ ಸುದ್ದಿ ಆಗಿಲ್ಲ. ಅವರ ಮದುವೆ ಯಾವಾಗ ಎಂಬ ಪ್ರಶ್ನೆ ಎದುರಾಗುತ್ತಲೇ ಇರುತ್ತವೆ. ಆದರೆ, ಇದಕ್ಕೆ ಅವರು ಉತ್ತರ ಕೊಡುವ ಗೋಜಿಗೆ ಹೋಗಿಲ್ಲ. ಈಗ ಅವರ ಮದುವೆ ಬಗ್ಗೆ ರವಿಚಂದ್ರನ್ (Ravichandran) ಅವರು ಮಾಹಿತಿ ನೀಡಿದ್ದಾರೆ. ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ವೇದಿಕೆ ಮೇಲೆ ಈ ಬಗ್ಗೆ ಚರ್ಚೆ ಆಗಿದೆ.

ಡಾಲಿ ಧನಂಜಯ್ ನಿರ್ಮಾಣದ, ನಾಗಭೂಷಣ, ಧನಂಜಯ್, ಮಲೈಕಾ ವಸುಪಾಲ್ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಚಿತ್ರದ ಪ್ರಚಾರಕ್ಕಾಗಿ ಈ ತಂಡ ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ವೇದಿಕೆ ಮೇಲೆ ಆಗಮಿಸಿದೆ. ಈ ವೇಳೆ ಬ್ಯಾಚುಲರ್ಸ್ ಜೀವನ ಹಾಗೂ ಮದುವೆ ಬಳಿಕದ ಜೀವನದ ಬಗ್ಗೆ ಚರ್ಚೆ ನಡೆದಿದೆ. ಈ ವೇಳೆ ಒಂದು ಅಚ್ಚರಿಯ ವಿಚಾರ ರಿವೀಲ್ ಆಗಿದೆ.

‘ಮದುವೆ ಮೊದಲ ಜೀವನ, ಮದುವೆ ಬಳಿಕದ ಜೀವನ ಹೇಗಿದೆ’ ಎಂದು ಧನಂಜಯ್ ಅವರಿಗೆ ಕೇಳಲಾಯಿತು. ಇದಕ್ಕೆ ಉತ್ತರಿಸಿದ ಡಾಲಿ, ‘ಮದುವೆ ಮೊದಲು ನಾಗ ಸಿಕ್ಕರೆ ಅಲ್ಲೇ ಸೆಟಲ್, ನಿರಂಜನ್ ಸಿಕ್ಕರೆ ಅಲ್ಲೇ ಸೆಟಲ್. ಈಗ ಮನೆಗೆ ಹೋಗಬೇಕು’ ಎಂದರು ಧನಂಜಯ್.  ‘ಇಲ್ಲೇನೋ ಸಮಸ್ಯೆ ಇದೆ’ ಎಂದರು ಆ್ಯಂಕರ್ ನಿರಂಜನ್.

ಇದನ್ನೂ ಓದಿ
Image
ಚಿನ್ನ ಕಳ್ಳಸಾಗಣೆ: ಮಾರ್ಚ್ 18ರವರೆಗೆ ನಟಿ ರನ್ಯಾ ರಾವ್​ಗೆ ನ್ಯಾಯಾಂಗ ಬಂಧನ
Image
ಮಹೇಶ್ ಬಾಬು ಜೊತೆ ನಟಿಸಿದರೂ ಸಿಗದ ಅದೃಷ್ಟ; ಈಗ ಗೂಗಲ್​ನಲ್ಲಿ ಕೆಲಸ
Image
‘ಮಾಣಿಕ್ಯ’ ಚಿತ್ರದ ನಟಿ ರನ್ಯಾ ಬಳಿ ಸಿಕ್ಕಿದ್ದು ಬರೋಬ್ಬರಿ 15 ಕೆಜಿ ಚಿನ್ನ
Image
ಪುಡಿರೌಡಿ ತರ ಆಡೋದು ಬಿಡಿ, ಸಿಎಂ ಆದ್ರೆ ಕಷ್ಟ ಇದೆ’; ಡಿಕೆಶಿಗೆ ಕೌಂಟರ್

ಇದನ್ನೂ ಓದಿ: ರಚಿತಾ ರಾಮ್ ಹಾಡೋದನ್ನ ನೋಡಿದ್ದೀರಾ? ಇಲ್ಲಿದೆ ಅಪರೂಪದ ವಿಡಿಯೋ

‘ಬ್ಯಾಚುಲರ್ ಜೀವನ ಒಂದು ಚಾಪ್ಟರ್, ಮದುವೆ ಬಳಿಕದ ಜೀವನ ಒಂದು ಚಾಪ್ಟರ್. ಮಗು ಆದಮೇಲೆ ಒಂದು ಚಾಪ್ಟರ್’ ಎಂದಿದ್ದಾರೆ ರವಿಚಂದ್ರನ್. ‘ರಚಿತಾ ರಾಮ್ ಅವರು ಇನ್ನೂ ಬ್ಯಾಚುಲರ್​ ಆಗಿರೋದು ನೋಡಿ ಹೊಟ್ಟೆ ಉರಿಯುತ್ತಿದೆ’ ಎಂದು ಡಾಲಿ ಧನಂಜಯ್ ಹೇಳಿದರು. ‘ಈ ವರ್ಷ ಅವರು ಮದುವೆ ಆಗುತ್ತಿದ್ದಾರೆ’ ಎಂದು ರವಿಚಂದ್ರನ್ ಘೋಷಣೆ ಮಾಡಿಯೇ ಬಿಟ್ಟರು. ಇದನ್ನು ಕೇಳಿ ಎಲ್ಲರಿಗೂ ಶಾಕ್ ಆಯಿತು.

ಇದನ್ನು ರವಿಚಂದ್ರನ್ ಅವರು ಹಾಸ್ಯಕ್ಕೆ ಹೇಳಿದ್ದಾರೋ ಅಥವಾ ನಿಜವನ್ನು ಹಾಸ್ಯದ ರೂಪದಲ್ಲಿ ಹೇಳಿದ್ದಾರೋ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ