AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mallika Singh: ಕನ್ನಡ ಚಿತ್ರ ಒಪ್ಪಿಕೊಂಡ ‘ರಾಧಾ ಕೃಷ್ಣ’ ಧಾರಾವಾಹಿ​ ನಟಿ ಮಲ್ಲಿಕಾ ಸಿಂಗ್​; ವಿನಯ್​ ರಾಜ್​ಕುಮಾರ್​ಗೆ ಜೋಡಿ

Vinay Rajkumar | Simple Suni: ಸಿಂಪಲ್​ ಸುನಿ ಮತ್ತು ವಿನಯ್​ ರಾಜ್​ಕುಮಾರ್​ ಕಾಂಬಿನೇಷನ್​ನ ಚಿತ್ರದಲ್ಲಿ ಮಲ್ಲಿಕಾ ಸಿಂಗ್​ ನಟಿಸುತ್ತಾರೆ ಎಂದು ವರದಿ ಆಗಿದೆ. ಈ ಚಿತ್ರದ ಶೀರ್ಷಿಕೆ ಇನ್ನೂ ಬಹಿರಂಗ ಆಗಿಲ್ಲ.

Mallika Singh: ಕನ್ನಡ ಚಿತ್ರ ಒಪ್ಪಿಕೊಂಡ ‘ರಾಧಾ ಕೃಷ್ಣ’ ಧಾರಾವಾಹಿ​ ನಟಿ ಮಲ್ಲಿಕಾ ಸಿಂಗ್​; ವಿನಯ್​ ರಾಜ್​ಕುಮಾರ್​ಗೆ ಜೋಡಿ
ವಿನಯ್​ ರಾಜ್​ಕುಮಾರ್​, ಮಲ್ಲಿಕಾ ಸಿಂಗ್​
ಮದನ್​ ಕುಮಾರ್​
|

Updated on: Feb 27, 2023 | 8:43 PM

Share

ನಟಿ ಮಲ್ಲಿಕಾ ಸಿಂಗ್ (Mallika Singh)​ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಬರೀ ಮಲ್ಲಿಕಾ ಸಿಂಗ್​ ಎಂದರೆ ಕೆಲವರಿಗೆ ಗೊತ್ತಾಗದೇ ಇರಬಹುದು. ‘ರಾಧಾ ಕೃಷ್ಣ’ ಧಾರಾವಾಹಿಯ (Radha Krishna Serial) ರಾಧೆ ಎಂದರೆ ಎಲ್ಲರಿಗೂ ತಿಳಿಯುತ್ತದೆ. ರಾಧೆ ಪಾತ್ರದಿಂದಾಗಿ ಅವರು ಅಷ್ಟು ಫೇಮಸ್​ ಆಗಿದ್ದಾರೆ. ವಿಶೇಷ ಏನೆಂದರೆ, ಈ ನಟಿ ಈಗ ಕನ್ನಡದ ಸಿನಿಮಾವೊಂದಕ್ಕೆ ಸಹಿ ಮಾಡಿದ್ದಾರೆ. ಆ ಮೂಲಕ ಅವರು ಚಂದನವನಕ್ಕೆ ಎಂಟ್ರಿ ನೀಡುತ್ತಿದ್ದಾರೆ. ತಮ್ಮ ಮೊದಲ ಕನ್ನಡ ಸಿನಿಮಾದಲ್ಲಿ ಅವರು ವಿನಯ್​ ರಾಜ್​ಕುಮಾರ್​ (Vinay Rajkumar) ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ. ಈ ಚಿತ್ರಕ್ಕೆ ಸಿಂಪಲ್​ ಸುನಿ ನಿರ್ದೇಶನ ಮಾಡುತ್ತಿದ್ದಾರೆ. ಮಲ್ಲಿಕಾ ಸಿಂಗ್​ ಅವರು ಕನ್ನಡ ಸಿನಿಮಾ ಒಪ್ಪಿಕೊಂಡಿರುವ ಬಗ್ಗೆ ‘ಸಿನಿಮಾ ಎಕ್ಸ್​ಪ್ರೆಸ್​’ ವರದಿ ಮಾಡಿದೆ.

ನಿರ್ದೇಶಕ ಸಿಂಪಲ್​ ಸುನಿ ಮತ್ತು ನಟ ವಿನಯ್​ ರಾಜ್​ಕುಮಾರ್​ ಅವರ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ಈಗಾಗಲೇ ಮೊದಲ ಹಂತದ ಶೂಟಿಂಗ್​ ಮುಗಿದಿದೆ. ಪಾತ್ರವರ್ಗದ ಬಗ್ಗೆ ಈಗ ಅಪ್​ಡೇಟ್​ ಸಿಕ್ಕಿದೆ. ಮಲ್ಲಿಕಾ ಸಿಂಗ್​ ಅವರು ಈ ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡಿದ್ದು, ಆ ಬಗ್ಗೆ ಚಿತ್ರತಂಡದಿಂದ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.

ಇದನ್ನೂ ಓದಿ: ಸೀರಿಯಲ್​ ನೋಡಿ ಕಾಲ ಕಳೆಯುತ್ತಿರುವ ಯಡಿಯೂರಪ್ಪ; ಮಾಜಿ ಸಿಎಂ ಮೆಚ್ಚಿನ ಧಾರಾವಾಹಿಗಳು ಇವು

ಇದನ್ನೂ ಓದಿ
Image
ಈ ಬಾರಿಯ ಲಾಲ್​ಬಾಗ್ ಫ್ಲಾವರ್ ಶೋ ಮೂಲಕ ಡಾ ರಾಜ್ ಮತ್ತು ಪುನೀತ್ ರಾಜಕುಮಾರರಿಗೆ ಶ್ರದ್ಧಾಂಜಲಿ!
Image
Dr Rajkumar: ಡಾ. ರಾಜ್​ಕುಮಾರ್​​ ನಟನೆಯ ‘ಭಾಗ್ಯವಂತರು’ ಚಿತ್ರ ಜುಲೈ 8ಕ್ಕೆ ಮತ್ತೆ ರಿಲೀಸ್​; ಈ ಬಾರಿ ವಿಶೇಷ ಏನು?
Image
ತುಂಬಾ ಪುಣ್ಯ ಮಾಡಿದ್ರೇನೇ ಅಣ್ಣಾವ್ರ ಜತೆ ನಟಿಸೋಕೆ ಆಗೋದು; ನಟಿ ಲಕ್ಷ್ಮೀ
Image
‘ಬಂಗಾರದ ಮನುಷ್ಯ’ ಚಿತ್ರಕ್ಕೆ 50 ವರ್ಷ; ಅಣ್ಣಾವ್ರು ನಟಿಸಿದ ಈ ಸಿನಿಮಾ ಮಾಡಿದ ದಾಖಲೆಗಳು ಒಂದೆರಡಲ್ಲ

‘ಸ್ಟಾರ್​ ಭಾರತ್​’ ವಾಹಿನಿಯಲ್ಲಿ ‘ರಾಧಾ ಕೃಷ್ಣ’ ಹಿಂದಿ ಸೀರಿಯಲ್​ ಪ್ರಸಾರ ಆಯಿತು. ಈ ಧಾರಾವಾಹಿಯಲ್ಲಿ ರಾಧೆ ಆಗಿ ಮಿಂಚುವ ಅವಕಾಶ ಮಲ್ಲಿಕಾ ಸಿಂಗ್​ ಅವರಿಗೆ ಸಿಕ್ಕಿತು. ಆ ಪಾತ್ರದಿಂದಾಗಿ ಅವರು ಮನೆಮಾತಾದರು. ಮೊದಲ ಕೊವಿಡ್​ ಲಾಕ್​ಡೌನ್​ ಸಂದರ್ಭದಲ್ಲಿ ಈ ಧಾರಾವಾಹಿಯು ಕನ್ನಡಕ್ಕೆ ಡಬ್​ ಆಗಿ ಪ್ರಸಾರ ಕಂಡಿತು. ಆ ಮೂಲಕ ಕರುನಾಡಿನಲ್ಲಿಯೂ ಮಲ್ಲಿಕಾ ಸಿಂಗ್​ ಅವರು ಜನಪ್ರಿಯತೆ ಪಡೆದುಕೊಂಡರು. ಈಗ ಅವರು ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಪಡೆಯುತ್ತಿರುವುದು ಕರುನಾಡಿನಲ್ಲಿನ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

ಇದನ್ನೂ ಓದಿ: Radhika Madan: ಧಾರಾವಾಹಿಗಳಿಂದ ಫೇಮಸ್​ ಆದ ಬಳಿಕ ಕಿರುತೆರೆ ಬಗ್ಗೆಯೇ ಕಟು ಟೀಕೆ ಮಾಡಿದ ರಾಧಿಕಾ ಮದನ್​

‘ರಾಧಾ ಕೃಷ್ಣ’ ಸೀರಿಯಲ್​ ಮಾತ್ರವಲ್ಲದೇ ‘ಜೈ ಕನ್ಹಯ್ಯಾ ಲಾಲ್​ ಕಿ’ ಧಾರಾವಾಹಿಯಲ್ಲೂ ಮಲ್ಲಿಕಾ ಸಿಂಗ್​ ನಟಿಸಿದ್ದಾರೆ. ಅದರಲ್ಲಿ ಅವರು ಲಕ್ಷ್ಮೀ ದೇವಿಯ ಪಾತ್ರ ಮಾಡಿದ್ದಾರೆ. ಇನ್ನು, ಹಿಂದಿಯ ‘ಗಲ್ಲಿ ಬಾಯ್​’ ಸಿನಿಮಾ ಮೂಲಕ ಅವರು ಬಾಲಿವುಡ್​ಗೂ ಕಾಲಿಟ್ಟರು.

ಇದನ್ನೂ ಓದಿ: Kannadathi Serial: ಸುಖಾಂತ್ಯ ಕಂಡ ‘ಕನ್ನಡತಿ’ ಧಾರಾವಾಹಿ; 800ನೇ ಎಪಿಸೋಡ್​ಗೆ ಶುಭಂ ಕಾರ್ಡ್​

ವಿನಯ್​ ರಾಜ್​ಕುಮಾರ್​ ನಟನೆಯ ಸಿನಿಮಾದಲ್ಲಿ ಮಲ್ಲಿಕಾ ಸಿಂಗ್​ ಅವರು ಕಾಶ್ಮೀರಿ ಹುಡುಗಿಯ ಪಾತ್ರ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಸೋಶಿಯಲ್​ ಮೀಡಿಯಾದಲ್ಲಿ ಮಲ್ಲಿಕಾ ಸಿಂಗ್​ ಸಖತ್​ ಆ್ಯಕ್ಟೀವ್ ಆಗಿದ್ದಾರೆ. ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ 20 ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ