AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಕುಮಾರಸ್ವಾಮಿ ಮಗಳು ಶಮಿಕಾ ಈಗೇನು ಮಾಡುತ್ತಿದ್ದಾರೆ ಗೊತ್ತಾ?

ಶಮಿಕಾ ನನ್ನ ಜಗತ್ತು ಎಂದು ರಾಧಿಕಾ ಅನೇಕ ಕಡೆಗಳಲ್ಲಿ ಹೇಳಿಕೊಂಡಿದ್ದಾರೆ. ಹೀಗಾಗಿ, ರಾಧಿಕಾ ಮಗಳು ಶಮಿಕಾಳನ್ನು ಬಿಟ್ಟು ಎಂದು ದೂರ ಉಳಿದವರಲ್ಲ.

ರಾಧಿಕಾ ಕುಮಾರಸ್ವಾಮಿ ಮಗಳು ಶಮಿಕಾ ಈಗೇನು ಮಾಡುತ್ತಿದ್ದಾರೆ ಗೊತ್ತಾ?
ಮಗಳು ಶಮಿಕಾ ಜೊತೆಗೆ ರಾಧಿಕಾ ಕುಮಾರಸ್ವಾಮಿ
ರಾಜೇಶ್ ದುಗ್ಗುಮನೆ
| Edited By: |

Updated on: Feb 04, 2021 | 7:09 PM

Share

ನಟಿ ಹಾಗೂ ನಿರ್ಮಾಪಕಿ ರಾಧಿಕಾ ಕುಮಾರಸ್ವಾಮಿ 2002ರಲ್ಲಿ ನಿನಗಾಗಿ ಸಿನಿಮಾ ಮೂಲಕ ಸ್ಯಾಂಡಲ್​ವುಡ್​ಗೆ ಕಾಲಿಟ್ಟಿದ್ದರು. ಈ ಸಿನಿಮಾ ನಂತರ ಸಾಲು ಸಾಲು ಚಿತ್ರಗಳಲ್ಲಿ ನಟಿಸಿದ್ದರು ರಾಧಿಕಾ. ಸದ್ಯ, ನಿರ್ಮಾಣದಲ್ಲಿ ಬ್ಯುಸಿ ಇರುವ ಅವರು, ಮಗಳು ಶಮಿಕಾ ಜತೆ ಹಾಯಾಗಿ ಕಾಲ ಕಳೆಯುತ್ತಿದ್ದಾರೆ. ಹಾಗಾದರೆ, ಶಮಿಕಾ ಈಗ ಏನು ಮಾಡುತ್ತಿದ್ದಾರೆ? ಅವರಿಗೆ ಯಾವೆಲ್ಲ ಕಲೆಗಳು ಒಲಿದಿವೆ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

ಶಮಿಕಾ ನನ್ನ ಜಗತ್ತು ಎಂದು ರಾಧಿಕಾ ಅನೇಕ ಕಡೆಗಳಲ್ಲಿ ಹೇಳಿಕೊಂಡಿದ್ದಾರೆ. ಹೀಗಾಗಿ, ರಾಧಿಕಾ ಮಗಳು ಶಮಿಕಾಳನ್ನು ಬಿಟ್ಟು ಎಂದು ದೂರ ಉಳಿದವರಲ್ಲ. ಮಗಳು ಹುಟ್ಟಿದ ನಂತರ ರಾಧಿಕಾ ಸಿನಿಮಾದಿಂದ ಬ್ರೇಕ್​ ತೆಗೆದುಕೊಂಡಿದ್ದರು. ಈ ಮೂಲಕ ಮಗಳ ಆರೈಕೆಗೆ ವಿಶೇಷ ಒತ್ತು ನೀಡಿದ್ದರು.

ರಾಧಿಕಾ ಅವರಂತೆ ಶಮಿಕಾ ಕೂಡ ಉತ್ತಮ ಡ್ಯಾನ್ಸರ್​. ಶಮಿಕಾ ಈಗಾಗಲೇ ಡಾನ್ಸ್​ ಕ್ಲಾಸ್​ಗೆ ಕೂಡ ತೆರಳುತ್ತಿದ್ದಾರೆ. ಶಮಿಕಾ ಸದ್ಯ ಪ್ರೌಢಶಿಕ್ಷಣ ಪಡೆಯುತ್ತಿದ್ದಾರೆ. ಲಾಕ್​ಡೌನ್​ ಸಮಯದಲ್ಲಿ ಸಂಪೂರ್ಣ ಸಮಯವನ್ನು ರಾಧಿಕಾ ಮಗಳ ಜತೆಯಲ್ಲೇ ಕಳೆದಿದ್ದಾರೆ. ಇನ್ನು, ರಾಧಿಕಾ ಮಗಳ ಜತೆ ಲಾಂಗ್​ ರೈಡ್​ ಹೋದ ಉದಾಹರಣೆ ಕೂಡ ಇದೆ.

ಶಮಿಕಾ ಬಣ್ಣದ ಲೋಕಕ್ಕೆ ಕಾಲಿಡಲಿದ್ದಾರೆ ಎನ್ನುವ ಸುದ್ದಿಇತ್ತೀಚೆಗೆ ಹರಿದಾಡಿತ್ತು. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿದ್ದ ರಾಧಿಕಾ, ಶಮಿಕಾಳನ್ನು ಈಗಲೇ ಸಿನಿಮಾ ಲೋಕಕ್ಕೆ ಕರೆತರುವುದಿಲ್ಲ. ಅವಳ ವಿದ್ಯಾಭ್ಯಾಸಕ್ಕೆ ಮೊದಲ ಆದ್ಯತೆ ಎಂದಿದ್ದರು.

ಸಿನಿಮಾ ವಿಚಾರಕ್ಕೆ ಬರುವುದಾದರೆ, ರಾಧಿಕಾ ಕುಮಾರಸ್ವಾಮಿ 2019ರಲ್ಲಿ ತೆರೆಕಂಡಿದ್ದ ದಮಯಂತಿ ಸಿನಿಮಾದಲ್ಲಿ ನಟಿಸಿದ್ದರು. ಇದು ಅವರ ಕೊನೆಯ ಸಿನಿಮಾ. ಇದಲ್ಲದೆ, ಕೆಲ ಸಿನಿಮಾಗಳು ಅವರ ಕೈನಲ್ಲಿವೆ. ಕೆಲ ಚಿತ್ರಗಳನ್ನು ಅವರು ನಿರ್ಮಾಣ ಕೂಡ ಮಾಡುತ್ತಿದ್ದಾರೆ.

ರಾಧಿಕಾ ಕುಮಾರಸ್ವಾಮಿ ಯಾರು ಅಂತಾ ಗೊತ್ತಿಲ್ಲ: HD ಕುಮಾರಸ್ವಾಮಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು