AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರಾಮಾಣಿಕವಾಗಿ ಹೇಳ್ತೀನಿ.. ದರ್ಶನ್​ ನಮ್ಮ ಚಿತ್ರರಂಗಕ್ಕೆ ಬೇಕು’: ರಾಧಿಕಾ ಕುಮಾರಸ್ವಾಮಿ

‘ಮಂಡ್ಯ’ ಮತ್ತು ‘ಅನಾಥರು’ ಸಿನಿಮಾಗಳಲ್ಲಿ ದರ್ಶನ್​ ಜೊತೆ ನಟಿಸಿದ ರಾಧಿಕಾ ಕುಮಾರಸ್ವಾಮಿ ಅವರು ಆ ದಿನಗಳನ್ನು ಈಗ ಮೆಲುಕು ಹಾಕಿದ್ದಾರೆ. ಇಂದು ದರ್ಶನ್​ ಕಷ್ಟದ ಪರಿಸ್ಥಿತಿಯಲ್ಲಿ ಇರುವುದನ್ನು ಕಂಡು ರಾಧಿಕಾ ಬೇಸರ ವ್ಯಕ್ತಪಡಿಸಿದ್ದಾರೆ. ಆದಷ್ಟು ಬೇಗ ದರ್ಶನ್​ ಅವರು ಚಿತ್ರರಂಗಕ್ಕೆ ವಾಪಸ್​ ಬರಲಿ ಎಂದು ರಾಧಿಕಾ ಹಾರೈಸಿದ್ದಾರೆ.

‘ಪ್ರಾಮಾಣಿಕವಾಗಿ ಹೇಳ್ತೀನಿ.. ದರ್ಶನ್​ ನಮ್ಮ ಚಿತ್ರರಂಗಕ್ಕೆ ಬೇಕು’: ರಾಧಿಕಾ ಕುಮಾರಸ್ವಾಮಿ
ದರ್ಶನ್​, ರಾಧಿಕಾ ಕುಮಾರಸ್ವಾಮಿ
Malatesh Jaggin
| Edited By: |

Updated on: Sep 05, 2024 | 5:05 PM

Share

ನಟ ದರ್ಶನ್​ ಅವರು ಕೊಲೆ ಆರೋಪ ಹೊತ್ತು ಜೈಲು ಸೇರಿದ್ದಾರೆ. ಅವರ ಬಗ್ಗೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಈಗಾಗಲೇ ಮಾತನಾಡಿದ್ದಾರೆ. ದರ್ಶನ್​ ಜೊತೆ ‘ಮಂಡ್ಯ’, ‘ಅನಾಥರು’ ಸಿನಿಮಾಗಳಲ್ಲಿ ನಟಿಸಿದ್ದ ರಾಧಿಕಾ ಕುಮಾರಸ್ವಾಮಿ ಅವರು ಇದೇ ಮೊದಲ ಬಾರಿಗೆ ಈ ಕೇಸ್​ ಬಗ್ಗೆ ಮಾತನಾಡಿದ್ದಾರೆ. ತಾವು ನೋಡಿದ ದರ್ಶನ್​ ಅವರ ವ್ಯಕ್ತಿತ್ವ ಎಂಥದ್ದು ಎಂಬುದನ್ನು ರಾಧಿಕಾ ನೆನಪಿಸಿಕೊಂಡಿದ್ದಾರೆ. ಕನ್ನಡ ಚಿತ್ರರಂಗಕ್ಕೆ ದರ್ಶನ್​ ಅವರ ಅವಶ್ಯಕತೆ ತುಂಬ ಇದೆ ಎಂದು ಅವರು ಹೇಳಿದ್ದಾರೆ. ಜೊತೆಗೆ, ಹಲವು ವಿಷಯಗಳನ್ನು ಅವರು ಹಂಚಿಕೊಂಡಿದ್ದಾರೆ.

‘ದರ್ಶನ್​ ಅವರ ವಿಷಯ ಮಾತನಾಡುವಾಗ ಮನಸ್ಸಿಗೆ ತುಂಬ ನೋವಾಗುತ್ತದೆ. ನಾನು ‘ಮಂಡ್ಯ’ ಮತ್ತು ‘ಅನಾಥರು’ ಸಿನಿಮಾಗಳ ಶೂಟಿಂಗ್​ ಸಮಯದಲ್ಲಿ ಅವರನ್ನು ನೋಡಿದ್ದು. ಸೆಟ್​ನಲ್ಲಿ ಎಲ್ಲರ ಬಳಿಯೂ ಅಣ್ಣ.. ಬನ್ನಿ.. ಹೋಗಿ ಎಂದು ಗೌರವ ಕೊಟ್ಟು ಮಾತನಾಡುತ್ತಿದ್ದರು. ಅಷ್ಟು ದೊಡ್ಡ ನಟ ಎಂಬುದನ್ನು ಅವರು ಎಲ್ಲಿಯೂ ತೋರಿಸಿಕೊಳ್ಳುತ್ತಾ ಇರಲಿಲ್ಲ’ ಎಂದಿದ್ದಾರೆ ರಾಧಿಕಾ ಕುಮಾರಸ್ವಾಮಿ.

ಇದನ್ನೂ ಓದಿ: ದರ್ಶನ್​ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ; ರೇಣುಕಾ ಸ್ವಾಮಿ ತಂದೆ ಮೊದಲ ರಿಯಾಕ್ಷನ್

‘ಸಡನ್​ ಆಗಿ ಈ ಒಂದು ವಿಚಾರ ಕೇಳಿಸಿಕೊಂಡಾಗ ನನಗೆ ನಂಬೋಕೆ ಸಾಧ್ಯವಾಗಲಿಲ್ಲ. ಇದು ನಿಜಾನಾ ಎಂಬ ಪ್ರಶ್ನೆ ಮೂಡಿತು. ಅವರವರ ಜೀವನದಲ್ಲಿ ಏನು ಆಗಿರತ್ತೋ ಅದು ಅವರಿಗೆ ಮಾತ್ರ ಗೊತ್ತಿರಲು ಸಾಧ್ಯ. ಯಾರೋ ಹೇಳಿದ್ದು, ನ್ಯೂಸ್​ನಲ್ಲಿ ನೋಡಿದ್ದು ಮಾತ್ರ ನಮಗೆ ಗೊತ್ತಿರಲು ಸಾಧ್ಯ. ಅವರ ಲೈಫ್​ನಲ್ಲಿ ಏನಾಗಿರುತ್ತದೆ ಎಂಬುದು ನಮಗೆ ಗೊತ್ತಿರುವುದಿಲ್ಲ. ಯಾರ ಬಗ್ಗೆಯೂ ನಾವು ಕಮೆಂಟ್​ ಮಾಡುವುದು ತಪ್ಪು’ ಎಂದು ರಾಧಿಕಾ ಹೇಳಿದ್ದಾರೆ.

‘ಪ್ರಮಾಣಿಕವಾಗಿ ಒಂದು ಮಾತು ಹೇಳುತ್ತೇನೆ. ನಮ್ಮ ಚಿತ್ರರಂಗಕ್ಕೆ ದರ್ಶನ್​ ಅವರು ಬೇಕು. ಅವರಿಗೆ ಒಳ್ಳೆಯದಾಗಲಿ ಅಂತ ನಾನು ಹೇಳುತ್ತೇನೆ. ಜೀವನದಲ್ಲಿ ಕೆಲವು ಘಟನೆಗಳು ನಡೆದಾಗ ಮುಂಚಿತವಾಗಿ ಏನೂ ಗೊತ್ತಾಗುವುದಿಲ್ಲ. ಎಲ್ಲರ ಜೀವನದಲ್ಲಿ ಕೆಟ್ಟ ಘಟನೆಗಳು ನಡೆದಿವೆ. ಅದನ್ನೆಲ್ಲ ಎದುರಿಸಿ ನಾವು ಮುಂದೆ ಹೋಗಬೇಕು ಅಷ್ಟೇ. ದರ್ಶನ್​ ಅವರಿಗೂ ನಾನು ಅದನ್ನೇ ಹೇಳುವುದು. ಜೀವನದಲ್ಲಿ ಇರುವ ತೊಂದರೆಗಳನ್ನು ಆದಷ್ಟು ಬೇಗ ಪರಿಹರಿಸಿಕೊಂಡು ಆದಷ್ಟು ಬೇಗ ಅವರು ನಮ್ಮ ಚಿತ್ರರಂಗಕ್ಕೆ ಮರಳಿ ಬರಲಿ’ ಎಂದಿದ್ದಾರೆ ರಾಧಿಕಾ ಕುಮಾರಸ್ವಾಮಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ