AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಲ್ಲಿ ಪ್ರೇಮಿಗಳ ದಿನ ಆಚರಿಸಿದ ಯಶ್​-ರಾಧಿಕಾ ಪಂಡಿತ್; ಪ್ರೈವೇಟ್​ ಜೆಟ್​ನಲ್ಲಿ ಪ್ರಯಾಣ

ಮದುವೆ ಆಗುವ ಮೂಲಕ ಇವರ ಮಧ್ಯೆ ಹುಟ್ಟಿದ್ದ ಪ್ರೀತಿಗೆ ಹೊಸ ಅರ್ಥ ಕೊಟ್ಟರು. ಯಶ್ ಹಾಗೂ ರಾಧಿಕಾ ಪಂಡಿತ್ ಹಾಯಾಗಿ ಸುತ್ತಾಟ ನಡೆಸುತ್ತಿದ್ದಾರೆ.

ರಾಜಸ್ಥಾನದಲ್ಲಿ ಪ್ರೇಮಿಗಳ ದಿನ ಆಚರಿಸಿದ ಯಶ್​-ರಾಧಿಕಾ ಪಂಡಿತ್; ಪ್ರೈವೇಟ್​ ಜೆಟ್​ನಲ್ಲಿ ಪ್ರಯಾಣ
ರಾಧಿಕಾ-ಯಶ್
ರಾಜೇಶ್ ದುಗ್ಗುಮನೆ
|

Updated on:Feb 15, 2023 | 8:46 AM

Share

ನಟ ಯಶ್ (Yash) ಹಾಗೂ ರಾಧಿಕಾ ಪಂಡಿತ್ ಸಮಯ ಸಿಕ್ಕಾಗಲೆಲ್ಲ ಸುತ್ತಾಟ ನಡೆಸುತ್ತಿದ್ದಾರೆ. ‘ಕೆಜಿಎಫ್ 2’ ರಿಲೀಸ್ ಆದ ಬಳಿಕ ವಿವಿಧ ಕಡೆಗಳಲ್ಲಿ ಈ ಜೋಡಿ ಪ್ರಯಾಣ ಬೆಳೆಸಿದೆ. ಇದರ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ. ಈಗ ಯಶ್ರಾಧಿಕಾ (Radhika Pandit) ದಂಪತಿ ವ್ಯಾಲೆಂಟೈನ್ಸ್ ಡೇ (ಫೆಬ್ರವರಿ 14) ಆಚರಿಸಿದ್ದಾರೆ. ರಾಜಸ್ಥಾನದ ಜೈಪುರ್​ನಲ್ಲಿ ಈ ವಿಶೇಷ ದಿನವನ್ನು ಆಚರಣೆ ಮಾಡಿದ್ದಾರೆ. ಈ ಫೋಟೋನ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಯಶ್​ ಹಾಗೂ ರಾಧಿಕಾ ಪಂಡಿತ್​ ಸ್ಯಾಂಡಲ್​ವುಡ್​ನಲ್ಲಿ ತುಂಬಾನೇ ಖ್ಯಾತಿ ಪಡೆದಿದ್ದಾರೆ. ಇಬ್ಬರೂ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸಿ ನಂತರ ಹಿರಿತೆರೆಗೆ ಕಾಲಿಟ್ಟರು. ಇಬ್ಬರೂ ಒಟ್ಟಾಗಿ ನಟಿಸಿದ ಮೊದಲ ಸಿನಿಮಾ ‘ಮೊಗ್ಗಿನ ಮನಸು’ ಸೂಪರ್ ಹಿಟ್ ಆಯಿತು. ಚಿತ್ರರಂಗಕ್ಕೆ ಕಾಲಿಟ್ಟಾಗಲೇ ಇಬ್ಬರೂ ಪ್ರೀತಿಸುತ್ತಿದ್ದರು. ಮದುವೆ ಆಗುವ ಮೂಲಕ ಇವರ ಮಧ್ಯೆ ಹುಟ್ಟಿದ್ದ ಪ್ರೀತಿಗೆ ಹೊಸ ಅರ್ಥ ಕೊಟ್ಟರು. ಯಶ್ ಹಾಗೂ ರಾಧಿಕಾ ಪಂಡಿತ್ ಹಾಯಾಗಿ ಸುತ್ತಾಟ ನಡೆಸುತ್ತಿದ್ದಾರೆ.

ಪ್ರತಿ ಬಾರಿಯೂ ಯಶ್​-ರಾಧಿಕಾ ವ್ಯಾಲೆಂಟೈನ್ಸ್​ ಡೇ ಆಚರಿಸುತ್ತಾರೆ. ಅಂತೆಯೇ ಈ ಬಾರಿ ದಂಪತಿ ರಾಜಸ್ಥಾನದ ಜೈಪುರಕ್ಕೆ ತೆರಳಿದ್ದಾರೆ. ಅಲ್ಲಿ ತೆಗೆದ ಫೋಟೋಗಳನ್ನು ರಾಧಿಕಾ ಹಂಚಿಕೊಂಡಿದ್ದಾರೆ. ಈ ಫೋಟೋಗೆ, ‘ಪ್ರೀತಿ ದೊಡ್ಡ ಪ್ರತಿಧ್ವನಿಯನ್ನು ಹೊಂದಿದೆ’ ಎಂದು ಕ್ಯಾಪ್ಷನ್ ನೀಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಯಶ್ ಹಾಗೂ ರಾಧಿಕಾ ಪಂಡಿತ್ ಜೈಪುರ್​ನಲ್ಲಿ ಇಳಿದ ಸಂದರ್ಭದಲ್ಲಿ ತೆಗೆದ ಫೋಟೋ ಕೂಡ ವೈರಲ್ ಆಗಿದೆ. ಪ್ರೈವೇಟ್ ಜೆಟ್​ನಲ್ಲಿ ಈ ದಂಪತಿ ಪ್ರಯಾಣ ಬೆಳೆಸಿದ್ದಾರೆ.

ಯಶ್ ಮುಂದಿನ ಸಿನಿಮಾ ಯಾವುದು?

ಯಶ್ ಮುಂದಿನ ಸಿನಿಮಾ ಯಾವುದು ಎನ್ನುವುದು ಸದ್ಯ ಯಕ್ಷ ಪ್ರಶ್ನೆಯಾಗಿದೆ. ಅವರು ಯಾವ ನಿರ್ದೇಶಕನ ಜತೆ ಸಿನಿಮಾ ಮಾಡುತ್ತಾರೆ ಅನ್ನೋ ಬಗ್ಗೆ ಸದ್ಯಕ್ಕಂತೂ ಸುಳಿವು ಸಿಕ್ಕಿಲ್ಲ. ಈ ವಿಚಾರದಲ್ಲಿ ನಿತ್ಯ ಒಂದಿಲ್ಲೊಂದು ವದಂತಿಗಳು ಹುಟ್ಟಿಕೊಳ್ಳುತ್ತಲೇ ಇದೆ. ಈ ಮೊದಲು ನರ್ತನ್ ಜತೆ ಯಶ್ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿತ್ತು. ಈ ವಿಚಾರ ಅಧಿಕೃತ ಆಗಿಲ್ಲ. ಅವರ ಸಿನಿಮಾ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:12 am, Wed, 15 February 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ