ರಾಧಿಕಾ ಪಂಡಿತ್​-ಯಶ್​ ನಿಶ್ಚಿತಾರ್ಥಕ್ಕೆ ಐದು ವರ್ಷ; ವಿಶೇಷ ವಿಡಿಯೋ ಹಂಚಿಕೊಂಡ ನಟಿ

ರಾಧಿಕಾ ಪಂಡಿತ್​ ಹಾಗೂ ಯಶ್​ ಕಿರುತೆರೆಯಲ್ಲಿ ಒಟ್ಟಿಗೆ ಕೆಲಸ ಮಾಡಿದವರು. ‘ಮೊಗ್ಗಿನ ಮನಸು’ ಸಿನಿಮಾ ಮೂಲಕ ಹಿರಿತೆರೆಗೆ ಒಟ್ಟಿಗೆ ಕಾಲಿಟ್ಟರು. ಮೊದಲ ಸಿನಿಮಾದಲ್ಲೇ ಯಶಸ್ಸು  ಸಿಕ್ಕಿತು.

ರಾಧಿಕಾ ಪಂಡಿತ್​-ಯಶ್​ ನಿಶ್ಚಿತಾರ್ಥಕ್ಕೆ ಐದು ವರ್ಷ; ವಿಶೇಷ ವಿಡಿಯೋ ಹಂಚಿಕೊಂಡ ನಟಿ
ಯಶ್​-ರಾಧಿಕಾ
Follow us
| Updated By: ರಾಜೇಶ್ ದುಗ್ಗುಮನೆ

Updated on:Aug 12, 2021 | 6:54 PM

ನಟಿ ರಾಧಿಕಾ ಪಂಡಿತ್​ ಹಾಗೂ ಯಶ್​ ದಂಪತಿ ಸ್ಯಾಂಡಲ್​ವುಡ್​ನ ಖ್ಯಾತ ಸೆಲೆಬ್ರಿಟಿ ಜೋಡಿಗಳ ಪೈಕಿ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಇವರ ನಿಶ್ಚಿತಾರ್ಥ ನೆರವೇರಿ ಇಂದಿಗೆ (ಆಗಸ್ಟ್​ 12) ಐದು ವರ್ಷ ತುಂಬಿದೆ. ಈ ಮಧುರ ಕ್ಷಣವನ್ನು ರಾಧಿಕಾ ಪಂಡಿತ್​ ನೆನೆದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅವರು ವಿಶೇಷ ವಿಡಿಯೋ ಕೂಡ ಹಂಚಿಕೊಂಡಿದ್ದಾರೆ.

‘ಅದ್ಭುತ ವ್ಯಕ್ತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡು ಇಂದು 5 ವರ್ಷಗಳಾಗಿವೆ. ನನಗೆ ಆ ದಿನ ಇನ್ನೂ ನೆನಪಿದೆ. ಆ ಪರಿಪೂರ್ಣ ದಿನವನ್ನು ಮತ್ತೆ ಮೆಲುಕು ಹಾಕಲು ಈ ವಿಡಿಯೋವನ್ನು ಶೇರ್ ಮಾಡಿದ್ದೇನೆ’ ಎಂದು ರಾಧಿಕಾ ಪಂಡಿತ್​ ಬರೆದುಕೊಂಡಿದ್ದಾರೆ.

ರಾಧಿಕಾ ಪಂಡಿತ್​ ಹಾಗೂ ಯಶ್​ ಕಿರುತೆರೆಯಲ್ಲಿ ಒಟ್ಟಿಗೆ ಕೆಲಸ ಮಾಡಿದವರು. ‘ಮೊಗ್ಗಿನ ಮನಸು’ ಸಿನಿಮಾ ಮೂಲಕ ಹಿರಿತೆರೆಗೆ ಒಟ್ಟಿಗೆ ಕಾಲಿಟ್ಟರು. ಮೊದಲ ಸಿನಿಮಾದಲ್ಲೇ ಯಶಸ್ಸು  ಸಿಕ್ಕಿತು. ಇಬ್ಬರ ನಡುವೆ ಪ್ರೀತಿ ಮೊಳೆತಿತ್ತು. ಆದರೆ, ಎಲ್ಲಿಯೂ ಆ ಬಗ್ಗೆ ಹೇಳಿಕೊಂಡಿರಲಿಲ್ಲ. ನಂತರ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಅವರು ಈ ವಿಚಾರವನ್ನು ಅಧಿಕೃತ ಮಾಡಿದ್ದರು. ಇವರ ನಿಶ್ಚಿತಾರ್ಥ ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳು ಸಾಕ್ಷಿಯಾಗಿದ್ದರು.

ರಾಧಿಕಾ ಪಂಡಿತ್​ ನಟನೆಯಿಂದ ದೂರ ಉಳಿದಿದ್ದಾರೆ. ಆಗೊಂದು ಈಗೊಂದು ಪೋಸ್ಟ್​ ಹಾಕುವ ಮೂಲಕ ಅಭಿಮಾನಿಗಳ ಜತೆ ರಾಧಿಕಾ ಪಂಡಿತ್​ ಸಂಪರ್ಕದಲ್ಲಿದ್ದಾರೆ. ಇನ್ನು, ರಾಧಿಕಾ ಕೊನೆಯದಾಗಿ ಕಾಣಿಸಿಕೊಂಡಿದ್ದು 2019ರಲ್ಲಿ ತೆರೆಗೆ ಬಂದ ‘ಆದಿ ಲಕ್ಷ್ಮಿ ಪುರಾಣ’ ಚಿತ್ರದಲ್ಲಿ. ಈ ಸಿನಿಮಾ ತೆರೆಗೆ ಬಂದ ನಂತರದಲ್ಲಿ ಅವರು ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಇನ್ನು, ಯಶ್​ ‘ಕೆಜಿಎಫ್​ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ಸಂಜಯ್​ ದತ್​ ಅಧೀರನಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ  ರಿಲೀಸ್​ ದಿನಾಂಕ ಕೊವಿಡ್​ ಎರಡನೆ ಅಲೆ ಕಾರಣದಿಂದ ಮುಂದೂಡಲ್ಪಟ್ಟಿದೆ.

ಇದನ್ನೂ ಓದಿ: Radhika Pandit: ತುಂಟ ಮಗನ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್; ಅಭಿಮಾನಿಗಳಿಗೆ ಹೆಚ್ಚಾಯ್ತು ಕುತೂಹಲ

Published On - 5:56 pm, Thu, 12 August 21

ಕುಮಾರಸ್ವಾಮಿ ಬಿಜೆಪಿ ಜತೆ ಸೇರಿದ್ದು ಎರಡೂ ಪಕ್ಷಗಳಿಗೆ ಲಾಭವಾಗಿದೆ: ಯತ್ನಾಳ್
ಕುಮಾರಸ್ವಾಮಿ ಬಿಜೆಪಿ ಜತೆ ಸೇರಿದ್ದು ಎರಡೂ ಪಕ್ಷಗಳಿಗೆ ಲಾಭವಾಗಿದೆ: ಯತ್ನಾಳ್
ಮೆಟ್ರೊ ಪ್ಲಾಟ್‌ಫಾರ್ಮ್‌ನಲ್ಲಿ ನಿಂತು ಹಳಿ ಮೇಲೆ ಮೂತ್ರ ಮಾಡಿದ ವ್ಯಕ್ತಿ
ಮೆಟ್ರೊ ಪ್ಲಾಟ್‌ಫಾರ್ಮ್‌ನಲ್ಲಿ ನಿಂತು ಹಳಿ ಮೇಲೆ ಮೂತ್ರ ಮಾಡಿದ ವ್ಯಕ್ತಿ
ಚನ್ನಪಟ್ಟಣ ಕ್ಷೇತ್ರಕ್ಕೆ ತಾನು ಅಭ್ಯರ್ಥಿಯೆಂದು ಇವತ್ತು ಡಿಕೆಶಿ ಹೇಳಲಿಲ್ಲ
ಚನ್ನಪಟ್ಟಣ ಕ್ಷೇತ್ರಕ್ಕೆ ತಾನು ಅಭ್ಯರ್ಥಿಯೆಂದು ಇವತ್ತು ಡಿಕೆಶಿ ಹೇಳಲಿಲ್ಲ
ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿರುವ ವ್ಯಾಪಾರಸ್ಥರು!
ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿರುವ ವ್ಯಾಪಾರಸ್ಥರು!
ಆನೆಗಳ ದಾಳಿಯಿಂದ ಬೈಕ್ ಸವಾರ ಜಸ್ಟ್ ಮಿಸ್, ವಿಡಿಯೋ ನೋಡಿ
ಆನೆಗಳ ದಾಳಿಯಿಂದ ಬೈಕ್ ಸವಾರ ಜಸ್ಟ್ ಮಿಸ್, ವಿಡಿಯೋ ನೋಡಿ
ಇಡಿ ದಾಳಿ: ಮೈಸೂರು ಮುಡಾ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್
ಇಡಿ ದಾಳಿ: ಮೈಸೂರು ಮುಡಾ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್
ವಿರಾಟ್ ಕೊಹ್ಲಿ ಔಟಾದಾಗ ರೋಹಿತ್ ಶರ್ಮಾ ರಿಯಾಕ್ಷನ್ ಹೇಗಿತ್ತು ನೋಡಿ
ವಿರಾಟ್ ಕೊಹ್ಲಿ ಔಟಾದಾಗ ರೋಹಿತ್ ಶರ್ಮಾ ರಿಯಾಕ್ಷನ್ ಹೇಗಿತ್ತು ನೋಡಿ
ಬೆಳಗಾವಿ: ಗೃಹಲಕ್ಷ್ಮೀ ಯೋಜನೆ ಹಣದಿಂದ ಎತ್ತು ಖರೀದಿಸಿದ ರೈತ ಮಹಿಳೆ
ಬೆಳಗಾವಿ: ಗೃಹಲಕ್ಷ್ಮೀ ಯೋಜನೆ ಹಣದಿಂದ ಎತ್ತು ಖರೀದಿಸಿದ ರೈತ ಮಹಿಳೆ
‘ಸುದೀಪ್ ಸರಿಯಾದ ನಿರ್ಧಾರವೇ ತೆಗೆದುಕೊಂಡಿರ್ತಾರೆ’; ಮಿತ್ರ
‘ಸುದೀಪ್ ಸರಿಯಾದ ನಿರ್ಧಾರವೇ ತೆಗೆದುಕೊಂಡಿರ್ತಾರೆ’; ಮಿತ್ರ
Daily Devotional: ಮಹಿಳೆಯರು ರಾತ್ರಿ ಕನ್ನಡಿ ನೋಡಬಾರದು ಏಕೆ?
Daily Devotional: ಮಹಿಳೆಯರು ರಾತ್ರಿ ಕನ್ನಡಿ ನೋಡಬಾರದು ಏಕೆ?