AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಪಂಡಿತ್​-ಯಶ್​ ನಿಶ್ಚಿತಾರ್ಥಕ್ಕೆ ಐದು ವರ್ಷ; ವಿಶೇಷ ವಿಡಿಯೋ ಹಂಚಿಕೊಂಡ ನಟಿ

ರಾಧಿಕಾ ಪಂಡಿತ್​ ಹಾಗೂ ಯಶ್​ ಕಿರುತೆರೆಯಲ್ಲಿ ಒಟ್ಟಿಗೆ ಕೆಲಸ ಮಾಡಿದವರು. ‘ಮೊಗ್ಗಿನ ಮನಸು’ ಸಿನಿಮಾ ಮೂಲಕ ಹಿರಿತೆರೆಗೆ ಒಟ್ಟಿಗೆ ಕಾಲಿಟ್ಟರು. ಮೊದಲ ಸಿನಿಮಾದಲ್ಲೇ ಯಶಸ್ಸು  ಸಿಕ್ಕಿತು.

ರಾಧಿಕಾ ಪಂಡಿತ್​-ಯಶ್​ ನಿಶ್ಚಿತಾರ್ಥಕ್ಕೆ ಐದು ವರ್ಷ; ವಿಶೇಷ ವಿಡಿಯೋ ಹಂಚಿಕೊಂಡ ನಟಿ
ಯಶ್​-ರಾಧಿಕಾ
TV9 Web
| Edited By: |

Updated on:Aug 12, 2021 | 6:54 PM

Share

ನಟಿ ರಾಧಿಕಾ ಪಂಡಿತ್​ ಹಾಗೂ ಯಶ್​ ದಂಪತಿ ಸ್ಯಾಂಡಲ್​ವುಡ್​ನ ಖ್ಯಾತ ಸೆಲೆಬ್ರಿಟಿ ಜೋಡಿಗಳ ಪೈಕಿ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಇವರ ನಿಶ್ಚಿತಾರ್ಥ ನೆರವೇರಿ ಇಂದಿಗೆ (ಆಗಸ್ಟ್​ 12) ಐದು ವರ್ಷ ತುಂಬಿದೆ. ಈ ಮಧುರ ಕ್ಷಣವನ್ನು ರಾಧಿಕಾ ಪಂಡಿತ್​ ನೆನೆದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅವರು ವಿಶೇಷ ವಿಡಿಯೋ ಕೂಡ ಹಂಚಿಕೊಂಡಿದ್ದಾರೆ.

‘ಅದ್ಭುತ ವ್ಯಕ್ತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡು ಇಂದು 5 ವರ್ಷಗಳಾಗಿವೆ. ನನಗೆ ಆ ದಿನ ಇನ್ನೂ ನೆನಪಿದೆ. ಆ ಪರಿಪೂರ್ಣ ದಿನವನ್ನು ಮತ್ತೆ ಮೆಲುಕು ಹಾಕಲು ಈ ವಿಡಿಯೋವನ್ನು ಶೇರ್ ಮಾಡಿದ್ದೇನೆ’ ಎಂದು ರಾಧಿಕಾ ಪಂಡಿತ್​ ಬರೆದುಕೊಂಡಿದ್ದಾರೆ.

ರಾಧಿಕಾ ಪಂಡಿತ್​ ಹಾಗೂ ಯಶ್​ ಕಿರುತೆರೆಯಲ್ಲಿ ಒಟ್ಟಿಗೆ ಕೆಲಸ ಮಾಡಿದವರು. ‘ಮೊಗ್ಗಿನ ಮನಸು’ ಸಿನಿಮಾ ಮೂಲಕ ಹಿರಿತೆರೆಗೆ ಒಟ್ಟಿಗೆ ಕಾಲಿಟ್ಟರು. ಮೊದಲ ಸಿನಿಮಾದಲ್ಲೇ ಯಶಸ್ಸು  ಸಿಕ್ಕಿತು. ಇಬ್ಬರ ನಡುವೆ ಪ್ರೀತಿ ಮೊಳೆತಿತ್ತು. ಆದರೆ, ಎಲ್ಲಿಯೂ ಆ ಬಗ್ಗೆ ಹೇಳಿಕೊಂಡಿರಲಿಲ್ಲ. ನಂತರ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಅವರು ಈ ವಿಚಾರವನ್ನು ಅಧಿಕೃತ ಮಾಡಿದ್ದರು. ಇವರ ನಿಶ್ಚಿತಾರ್ಥ ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳು ಸಾಕ್ಷಿಯಾಗಿದ್ದರು.

ರಾಧಿಕಾ ಪಂಡಿತ್​ ನಟನೆಯಿಂದ ದೂರ ಉಳಿದಿದ್ದಾರೆ. ಆಗೊಂದು ಈಗೊಂದು ಪೋಸ್ಟ್​ ಹಾಕುವ ಮೂಲಕ ಅಭಿಮಾನಿಗಳ ಜತೆ ರಾಧಿಕಾ ಪಂಡಿತ್​ ಸಂಪರ್ಕದಲ್ಲಿದ್ದಾರೆ. ಇನ್ನು, ರಾಧಿಕಾ ಕೊನೆಯದಾಗಿ ಕಾಣಿಸಿಕೊಂಡಿದ್ದು 2019ರಲ್ಲಿ ತೆರೆಗೆ ಬಂದ ‘ಆದಿ ಲಕ್ಷ್ಮಿ ಪುರಾಣ’ ಚಿತ್ರದಲ್ಲಿ. ಈ ಸಿನಿಮಾ ತೆರೆಗೆ ಬಂದ ನಂತರದಲ್ಲಿ ಅವರು ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಇನ್ನು, ಯಶ್​ ‘ಕೆಜಿಎಫ್​ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ಸಂಜಯ್​ ದತ್​ ಅಧೀರನಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ  ರಿಲೀಸ್​ ದಿನಾಂಕ ಕೊವಿಡ್​ ಎರಡನೆ ಅಲೆ ಕಾರಣದಿಂದ ಮುಂದೂಡಲ್ಪಟ್ಟಿದೆ.

ಇದನ್ನೂ ಓದಿ: Radhika Pandit: ತುಂಟ ಮಗನ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್; ಅಭಿಮಾನಿಗಳಿಗೆ ಹೆಚ್ಚಾಯ್ತು ಕುತೂಹಲ

Published On - 5:56 pm, Thu, 12 August 21

Follow Us
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ
ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ
ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡು
ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡು
ಬಾಗಲಕೋಟೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂ. ಹಣ ಜಪ್ತಿ!
ಬಾಗಲಕೋಟೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂ. ಹಣ ಜಪ್ತಿ!