AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಪಂಡಿತ್​-ಯಶ್​ ನಿಶ್ಚಿತಾರ್ಥಕ್ಕೆ ಐದು ವರ್ಷ; ವಿಶೇಷ ವಿಡಿಯೋ ಹಂಚಿಕೊಂಡ ನಟಿ

ರಾಧಿಕಾ ಪಂಡಿತ್​ ಹಾಗೂ ಯಶ್​ ಕಿರುತೆರೆಯಲ್ಲಿ ಒಟ್ಟಿಗೆ ಕೆಲಸ ಮಾಡಿದವರು. ‘ಮೊಗ್ಗಿನ ಮನಸು’ ಸಿನಿಮಾ ಮೂಲಕ ಹಿರಿತೆರೆಗೆ ಒಟ್ಟಿಗೆ ಕಾಲಿಟ್ಟರು. ಮೊದಲ ಸಿನಿಮಾದಲ್ಲೇ ಯಶಸ್ಸು  ಸಿಕ್ಕಿತು.

ರಾಧಿಕಾ ಪಂಡಿತ್​-ಯಶ್​ ನಿಶ್ಚಿತಾರ್ಥಕ್ಕೆ ಐದು ವರ್ಷ; ವಿಶೇಷ ವಿಡಿಯೋ ಹಂಚಿಕೊಂಡ ನಟಿ
ಯಶ್​-ರಾಧಿಕಾ
TV9 Web
| Edited By: |

Updated on:Aug 12, 2021 | 6:54 PM

Share

ನಟಿ ರಾಧಿಕಾ ಪಂಡಿತ್​ ಹಾಗೂ ಯಶ್​ ದಂಪತಿ ಸ್ಯಾಂಡಲ್​ವುಡ್​ನ ಖ್ಯಾತ ಸೆಲೆಬ್ರಿಟಿ ಜೋಡಿಗಳ ಪೈಕಿ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಇವರ ನಿಶ್ಚಿತಾರ್ಥ ನೆರವೇರಿ ಇಂದಿಗೆ (ಆಗಸ್ಟ್​ 12) ಐದು ವರ್ಷ ತುಂಬಿದೆ. ಈ ಮಧುರ ಕ್ಷಣವನ್ನು ರಾಧಿಕಾ ಪಂಡಿತ್​ ನೆನೆದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅವರು ವಿಶೇಷ ವಿಡಿಯೋ ಕೂಡ ಹಂಚಿಕೊಂಡಿದ್ದಾರೆ.

‘ಅದ್ಭುತ ವ್ಯಕ್ತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡು ಇಂದು 5 ವರ್ಷಗಳಾಗಿವೆ. ನನಗೆ ಆ ದಿನ ಇನ್ನೂ ನೆನಪಿದೆ. ಆ ಪರಿಪೂರ್ಣ ದಿನವನ್ನು ಮತ್ತೆ ಮೆಲುಕು ಹಾಕಲು ಈ ವಿಡಿಯೋವನ್ನು ಶೇರ್ ಮಾಡಿದ್ದೇನೆ’ ಎಂದು ರಾಧಿಕಾ ಪಂಡಿತ್​ ಬರೆದುಕೊಂಡಿದ್ದಾರೆ.

ರಾಧಿಕಾ ಪಂಡಿತ್​ ಹಾಗೂ ಯಶ್​ ಕಿರುತೆರೆಯಲ್ಲಿ ಒಟ್ಟಿಗೆ ಕೆಲಸ ಮಾಡಿದವರು. ‘ಮೊಗ್ಗಿನ ಮನಸು’ ಸಿನಿಮಾ ಮೂಲಕ ಹಿರಿತೆರೆಗೆ ಒಟ್ಟಿಗೆ ಕಾಲಿಟ್ಟರು. ಮೊದಲ ಸಿನಿಮಾದಲ್ಲೇ ಯಶಸ್ಸು  ಸಿಕ್ಕಿತು. ಇಬ್ಬರ ನಡುವೆ ಪ್ರೀತಿ ಮೊಳೆತಿತ್ತು. ಆದರೆ, ಎಲ್ಲಿಯೂ ಆ ಬಗ್ಗೆ ಹೇಳಿಕೊಂಡಿರಲಿಲ್ಲ. ನಂತರ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಅವರು ಈ ವಿಚಾರವನ್ನು ಅಧಿಕೃತ ಮಾಡಿದ್ದರು. ಇವರ ನಿಶ್ಚಿತಾರ್ಥ ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳು ಸಾಕ್ಷಿಯಾಗಿದ್ದರು.

ರಾಧಿಕಾ ಪಂಡಿತ್​ ನಟನೆಯಿಂದ ದೂರ ಉಳಿದಿದ್ದಾರೆ. ಆಗೊಂದು ಈಗೊಂದು ಪೋಸ್ಟ್​ ಹಾಕುವ ಮೂಲಕ ಅಭಿಮಾನಿಗಳ ಜತೆ ರಾಧಿಕಾ ಪಂಡಿತ್​ ಸಂಪರ್ಕದಲ್ಲಿದ್ದಾರೆ. ಇನ್ನು, ರಾಧಿಕಾ ಕೊನೆಯದಾಗಿ ಕಾಣಿಸಿಕೊಂಡಿದ್ದು 2019ರಲ್ಲಿ ತೆರೆಗೆ ಬಂದ ‘ಆದಿ ಲಕ್ಷ್ಮಿ ಪುರಾಣ’ ಚಿತ್ರದಲ್ಲಿ. ಈ ಸಿನಿಮಾ ತೆರೆಗೆ ಬಂದ ನಂತರದಲ್ಲಿ ಅವರು ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಇನ್ನು, ಯಶ್​ ‘ಕೆಜಿಎಫ್​ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ಸಂಜಯ್​ ದತ್​ ಅಧೀರನಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ  ರಿಲೀಸ್​ ದಿನಾಂಕ ಕೊವಿಡ್​ ಎರಡನೆ ಅಲೆ ಕಾರಣದಿಂದ ಮುಂದೂಡಲ್ಪಟ್ಟಿದೆ.

ಇದನ್ನೂ ಓದಿ: Radhika Pandit: ತುಂಟ ಮಗನ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್; ಅಭಿಮಾನಿಗಳಿಗೆ ಹೆಚ್ಚಾಯ್ತು ಕುತೂಹಲ

Published On - 5:56 pm, Thu, 12 August 21

Follow Us
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ